Skip to main content

Blog number 3321. ಮರಕಿಣಿ ನಾರಾಯಣ ಮೂರ್ತಿ

#ಮರಕಿಣಿ_ನಾರಾಯಣಮೂರ್ತಿಗಳು

#ನಮ್ಮಿಬ್ಬರ_ಮುಖತಃ_ಬೇಟಿಗೆ_ಮಹೂರ್ತ_ಯಾವಾಗ ?


#marakininarayanamurthy #facebookpost #tkrameshshetty #ninasam #kannada #drama #yakshgana #tvserial

   ಸದಾ ನಗುಮೊಗದ ಕನ್ನಡದ ಸಾಹಿತಿಗಳಿಗೆ, ಯಕ್ಷಗಾನ - ನಾಟಕ - ದಾರಾವಾಹಿಗಳ ಲೋಕದವರಿಗೆ ಚಿರಪರಿಚಿತರು ಮರಕಿಣಿ ನಾರಾಯಣ ಮೂರ್ತಿಯವರು.

 ಪ್ರತಿ ವರ್ಷ ನಮ್ಮ ಸಾಗರ ತಾಲ್ಲೂಕಿನ ಹೆಗ್ಗೋಡಿನ ನಿನಾಸಂ - ತುಮರಿಯ ಶಾಂತವೇರಿ ಗೋಪಾಲಗೌಡ ರಂಗಮಂದಿರದ ಕಾರ್ಯಕ್ರಮಕ್ಕೆ ತಪ್ಪದೆ ಬಂದು ಹೋಗುತ್ತಾರೆ.

    ಆದರೂ ನಮ್ಮಿಬ್ಬರ ಬೇಟಿಗೆ ಮಹೂರ್ತ ಮೂಡಿಬಂದಿಲ್ಲ ಆದ್ದರಿಂದ ನಾನು ಅವರಿಗೆ ನನ್ನ ಸಂದೇಶ ಕಳಿಸಿದ್ದೇನೆ ...

"ಸರ್ ನಾನು ನಿಮ್ಮ ಅಭಿಮಾನಿ ನನಗೂ ನಿಮ್ಮ ಅನಿರೀಕ್ಷಿತ ಬೇಟಿಯಲ್ಲಿ ಮುಖಾಮುಖಿ ಆಗಲಾಗದ್ದು ಬೇಸರ ಅನ್ನಿಸಿತು, ಅನೇಕ ವರ್ಷದಿಂದ ಬೇಟಿಯ ನಿರೀಕ್ಷೆ ಮುಂದು ಮುಂದು ಹೋಗುತ್ತಿದೆ ಆದ್ದರಿಂದ ಮುಂದಿನ ಬಾರಿ ಹೀಗೆ ದಿಡೀರ್ ಬರಬೇಡಿ,ಒಂದು ದಿನ ನನ್ನ ಅತಿಥಿ ಆಗಿ ಉಳಿದು ಹೋಗುವಂತೆ ಬಿಡುವು ಮಾಡಿಕೊಂಡು ಬನ್ನಿ ಮತ್ತುಬರಲೇ ಬೇಕು" ಅಂತ.

    ನನ್ನ ಅಣ್ಣನಂತೆ ಇರುವ ಇವರು ನನ್ನಂತೆ ಪಂಚೆದಾರಿಗಳು ಆದರೆ ಬಾಯಿ ತುಂಬಾ ನನಗೆ "ಅರುಣಣ್ಣ" ಅನ್ನುತ್ತಾರೆ ಅದೊಂದು ತರ ಅಪ್ಯಾಯವಾಗಿ ನನಗೆ ಕೇಳುತ್ತದೆ ಮತ್ತು ಇಷ್ಟ ಆಗಿದೆ, ನಮ್ಮಿಬ್ಬರನ್ನ ಗೆಳೆಯರನ್ನಾಗಿ ಮಾಡಿದ ಪೇಸ್ ಬುಕ್ ಗೆ ಎಷ್ಟು ಧನ್ಯವಾದ ಹೇಳಿದರೂ ಕಡಿಮೆ.

   ಅವರ Facebook post ಈ ರೀತಿ ಬರೆದಿದ್ದಾರೆ ನೋಡಿ...
https://www.facebook.com/share/14osjqq227/

#ಆನಂದಪುರದ_ಮಲ್ಲಿಕಾ_ವೆಜ್_ಮತ್ತು_ಹೊಂಬುಜ_ರೆಸಿಡೆನ್ಸಿಯ_Arun_Prasad.
ಪ್ರಕೃತಿ, ಪರಿಸರ, ಇತಿಹಾಸ, ಸಾಮಾಜಿಕ, ರಾಜಕೀಯ, ಸಾಹಿತ್ಯ.... ಹೀಗೆ ಎಲ್ಲದರ ಬಗ್ಗೆಯೂ  ಅಧ್ಯಯನಪೂರ್ಣವಾಗಿಯೂ ಆಕರ್ಷಣೀಯವಾಗಿಯೂ ಬರೆಯಬಲ್ಲವರು. ಕಾದಂಬರಿ ಮತ್ತು ಕಥಾ ಸಂಕಲನವನ್ನು ತಂದಿರುವ ಅರುಣಣ್ಣ ಅವರ ಚಂಪಕರಾಣಿ ಕಾದಂಬರಿ ತುಂಬಾ ಇಷ್ಟವಾಯಿತು. ವರಂಗದಲ್ಲಿರುವಂತೆ ಕೆರೆ ಮಧ್ಯದಲ್ಲಿರುವ ಬಸದಿ, ದೇವಸ್ಥಾನಗಳು, ಕೋಟೆ, ಇಕ್ಕೇರಿ...ಆನಂದಪುರ ಆಸುಪಾಸಿನಲ್ಲಿ ಕನಿಷ್ಠ ಎರಡು ದಿನಗಳಾದರೂ ಬೇಕು. ಆ ದಾರಿಯಾಗಿ ಸಿದ್ಧಾಪುರಕ್ಕೆ ಮದುವೆಯೊಂದಕ್ಕೆ ಹೋಗುವಾಗ ಅವರ 'ಮಲ್ಲಿಕಾ ವೆಜ್' ಗೆ ಹೋಗಿ ಕಾಣದಿದ್ದರೆ ಹೇಗೆ. (ತೀರ್ಥಹಳ್ಳಿಯಲ್ಲಿ Tk Ramesh Shettyಯವರು ಅವರಿಗೆ ಫೋನ್ ಮಾಡ್ತೇನೆಂದಾಗ ಖಡಾಖಂಡಿತವಾಗಿ ಬೇಡವೆಂದೆ)
ಅವರಿಲ್ಲದ ಕಾರಣ ನಿರಾಸೆಯಾದರೂ ಫೋನಲ್ಲಿ ಮಾತಾಡಿ ಸಮಾಧಾನ ಪಟ್ಟುಕೊಂಡೆ. ಯಾವ ತಿಂಡಿ ಅಂತ ಹೇಳಲು ಅವಕಾಶ ಮಾಡಿ ಕೊಡದೆ ಮೂಡೆ ಕೊಟ್ಟಿಗೆ(ಕಡುಬು)ಯನ್ನು ಇಳಿಸಲು, ಅವರ ಸೌಜನ್ಯ ಭರಿತ ಸಿಬ್ಬಂದಿಯವರಿಗೆ ಹೇಳಿ ವ್ಯವಸ್ಥೆ ಮಾಡಿದರು. ಸೋಮೇಶ್ವರದಲ್ಲಿ ತಿಂಡಿ ತಿಂದ ಕಾರಣದಿಂದ ಮತ್ತು ಮದುವೆಯೂಟ ಹೊಡೆಯಲಿರುವುದರಿಂದಲೂ ಬೇರೇನನ್ನೂ ತಿನ್ನಲಾಗಲಿಲ್ಲ😩😁. ಬಿಲ್ಲು ಎತ್ತೋಣವೆಂದರೆ ಕೌಂಟರಿನಲ್ಲಿದ್ದವರು ಕೊಡದೆ ಪ್ರೀತಿಯ ಋಣಭಾರವನ್ನು ಹೊರಿಸಿದವರು ಅರುಣಣ್ಣ. ರೆಸಿಡೆನ್ಸಿಯ ಗೋಡೆಯನ್ನು ಹಸೆಚಿತ್ರದಿಂದ ಎಷ್ಟು ಚೆಂದಕ್ಕೆ ಸಿಂಗರಿಸಿದ್ದಾರೆ👌. ಅವರ ಲೇಖನಗಳನ್ನು ರೆಗ್ಯುಲರಾಗಿ ಓದುವ ನಾನು ಅವರ ಫ್ಯಾನ್. ಇನ್ನು ಯಾವಾಗಲೋ ಏನೋ ಭೇಟಿ. (ವಾಪಾಸಾಗುವಾಗ ಬೇರೆ ದಾರಿಯಾಗಿ ಬಂದ ಕಾರಣ ಕಾಣಲಾಗಲಿಲ್ಲ)
🙏💕❤️🌿.

Comments

Popular posts from this blog

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...