Skip to main content

Blog number 3421. ಮರಕಿಣಿ ನಾರಾಯಣ ಮೂರ್ತಿ

#ಮರಕಿಣಿ_ನಾರಾಯಣಮೂರ್ತಿಗಳು

#ನಮ್ಮಿಬ್ಬರ_ಮುಖತಃ_ಬೇಟಿಗೆ_ಮಹೂರ್ತ_ಯಾವಾಗ ?


#marakininarayanamurthy #facebookpost #tkrameshshetty #ninasam #kannada #drama #yakshgana #tvserial

   ಸದಾ ನಗುಮೊಗದ ಕನ್ನಡದ ಸಾಹಿತಿಗಳಿಗೆ, ಯಕ್ಷಗಾನ - ನಾಟಕ - ದಾರಾವಾಹಿಗಳ ಲೋಕದವರಿಗೆ ಚಿರಪರಿಚಿತರು ಮರಕಿಣಿ ನಾರಾಯಣ ಮೂರ್ತಿಯವರು.

 ಪ್ರತಿ ವರ್ಷ ನಮ್ಮ ಸಾಗರ ತಾಲ್ಲೂಕಿನ ಹೆಗ್ಗೋಡಿನ ನಿನಾಸಂ - ತುಮರಿಯ ಶಾಂತವೇರಿ ಗೋಪಾಲಗೌಡ ರಂಗಮಂದಿರದ ಕಾರ್ಯಕ್ರಮಕ್ಕೆ ತಪ್ಪದೆ ಬಂದು ಹೋಗುತ್ತಾರೆ.

    ಆದರೂ ನಮ್ಮಿಬ್ಬರ ಬೇಟಿಗೆ ಮಹೂರ್ತ ಮೂಡಿಬಂದಿಲ್ಲ ಆದ್ದರಿಂದ ನಾನು ಅವರಿಗೆ ನನ್ನ ಸಂದೇಶ ಕಳಿಸಿದ್ದೇನೆ ...

"ಸರ್ ನಾನು ನಿಮ್ಮ ಅಭಿಮಾನಿ ನನಗೂ ನಿಮ್ಮ ಅನಿರೀಕ್ಷಿತ ಬೇಟಿಯಲ್ಲಿ ಮುಖಾಮುಖಿ ಆಗಲಾಗದ್ದು ಬೇಸರ ಅನ್ನಿಸಿತು, ಅನೇಕ ವರ್ಷದಿಂದ ಬೇಟಿಯ ನಿರೀಕ್ಷೆ ಮುಂದು ಮುಂದು ಹೋಗುತ್ತಿದೆ ಆದ್ದರಿಂದ ಮುಂದಿನ ಬಾರಿ ಹೀಗೆ ದಿಡೀರ್ ಬರಬೇಡಿ,ಒಂದು ದಿನ ನನ್ನ ಅತಿಥಿ ಆಗಿ ಉಳಿದು ಹೋಗುವಂತೆ ಬಿಡುವು ಮಾಡಿಕೊಂಡು ಬನ್ನಿ ಮತ್ತುಬರಲೇ ಬೇಕು" ಅಂತ.

    ನನ್ನ ಅಣ್ಣನಂತೆ ಇರುವ ಇವರು ನನ್ನಂತೆ ಪಂಚೆದಾರಿಗಳು ಆದರೆ ಬಾಯಿ ತುಂಬಾ ನನಗೆ "ಅರುಣಣ್ಣ" ಅನ್ನುತ್ತಾರೆ ಅದೊಂದು ತರ ಅಪ್ಯಾಯವಾಗಿ ನನಗೆ ಕೇಳುತ್ತದೆ ಮತ್ತು ಇಷ್ಟ ಆಗಿದೆ, ನಮ್ಮಿಬ್ಬರನ್ನ ಗೆಳೆಯರನ್ನಾಗಿ ಮಾಡಿದ ಪೇಸ್ ಬುಕ್ ಗೆ ಎಷ್ಟು ಧನ್ಯವಾದ ಹೇಳಿದರೂ ಕಡಿಮೆ.

   ಅವರ Facebook post ಈ ರೀತಿ ಬರೆದಿದ್ದಾರೆ ನೋಡಿ...
https://www.facebook.com/share/14osjqq227/

#ಆನಂದಪುರದ_ಮಲ್ಲಿಕಾ_ವೆಜ್_ಮತ್ತು_ಹೊಂಬುಜ_ರೆಸಿಡೆನ್ಸಿಯ_Arun_Prasad.
ಪ್ರಕೃತಿ, ಪರಿಸರ, ಇತಿಹಾಸ, ಸಾಮಾಜಿಕ, ರಾಜಕೀಯ, ಸಾಹಿತ್ಯ.... ಹೀಗೆ ಎಲ್ಲದರ ಬಗ್ಗೆಯೂ  ಅಧ್ಯಯನಪೂರ್ಣವಾಗಿಯೂ ಆಕರ್ಷಣೀಯವಾಗಿಯೂ ಬರೆಯಬಲ್ಲವರು. ಕಾದಂಬರಿ ಮತ್ತು ಕಥಾ ಸಂಕಲನವನ್ನು ತಂದಿರುವ ಅರುಣಣ್ಣ ಅವರ ಚಂಪಕರಾಣಿ ಕಾದಂಬರಿ ತುಂಬಾ ಇಷ್ಟವಾಯಿತು. ವರಂಗದಲ್ಲಿರುವಂತೆ ಕೆರೆ ಮಧ್ಯದಲ್ಲಿರುವ ಬಸದಿ, ದೇವಸ್ಥಾನಗಳು, ಕೋಟೆ, ಇಕ್ಕೇರಿ...ಆನಂದಪುರ ಆಸುಪಾಸಿನಲ್ಲಿ ಕನಿಷ್ಠ ಎರಡು ದಿನಗಳಾದರೂ ಬೇಕು. ಆ ದಾರಿಯಾಗಿ ಸಿದ್ಧಾಪುರಕ್ಕೆ ಮದುವೆಯೊಂದಕ್ಕೆ ಹೋಗುವಾಗ ಅವರ 'ಮಲ್ಲಿಕಾ ವೆಜ್' ಗೆ ಹೋಗಿ ಕಾಣದಿದ್ದರೆ ಹೇಗೆ. (ತೀರ್ಥಹಳ್ಳಿಯಲ್ಲಿ Tk Ramesh Shettyಯವರು ಅವರಿಗೆ ಫೋನ್ ಮಾಡ್ತೇನೆಂದಾಗ ಖಡಾಖಂಡಿತವಾಗಿ ಬೇಡವೆಂದೆ)
ಅವರಿಲ್ಲದ ಕಾರಣ ನಿರಾಸೆಯಾದರೂ ಫೋನಲ್ಲಿ ಮಾತಾಡಿ ಸಮಾಧಾನ ಪಟ್ಟುಕೊಂಡೆ. ಯಾವ ತಿಂಡಿ ಅಂತ ಹೇಳಲು ಅವಕಾಶ ಮಾಡಿ ಕೊಡದೆ ಮೂಡೆ ಕೊಟ್ಟಿಗೆ(ಕಡುಬು)ಯನ್ನು ಇಳಿಸಲು, ಅವರ ಸೌಜನ್ಯ ಭರಿತ ಸಿಬ್ಬಂದಿಯವರಿಗೆ ಹೇಳಿ ವ್ಯವಸ್ಥೆ ಮಾಡಿದರು. ಸೋಮೇಶ್ವರದಲ್ಲಿ ತಿಂಡಿ ತಿಂದ ಕಾರಣದಿಂದ ಮತ್ತು ಮದುವೆಯೂಟ ಹೊಡೆಯಲಿರುವುದರಿಂದಲೂ ಬೇರೇನನ್ನೂ ತಿನ್ನಲಾಗಲಿಲ್ಲ😩😁. ಬಿಲ್ಲು ಎತ್ತೋಣವೆಂದರೆ ಕೌಂಟರಿನಲ್ಲಿದ್ದವರು ಕೊಡದೆ ಪ್ರೀತಿಯ ಋಣಭಾರವನ್ನು ಹೊರಿಸಿದವರು ಅರುಣಣ್ಣ. ರೆಸಿಡೆನ್ಸಿಯ ಗೋಡೆಯನ್ನು ಹಸೆಚಿತ್ರದಿಂದ ಎಷ್ಟು ಚೆಂದಕ್ಕೆ ಸಿಂಗರಿಸಿದ್ದಾರೆ👌. ಅವರ ಲೇಖನಗಳನ್ನು ರೆಗ್ಯುಲರಾಗಿ ಓದುವ ನಾನು ಅವರ ಫ್ಯಾನ್. ಇನ್ನು ಯಾವಾಗಲೋ ಏನೋ ಭೇಟಿ. (ವಾಪಾಸಾಗುವಾಗ ಬೇರೆ ದಾರಿಯಾಗಿ ಬಂದ ಕಾರಣ ಕಾಣಲಾಗಲಿಲ್ಲ)
🙏💕❤️🌿.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...