Skip to main content

BN 3423 Part 1. Holebagilu story

#ಭಾಗ_ಒಂದು.

#ಅಂಬಾರಗೋಡ್ಲು_ಕಳಸವಳ್ಳಿ_ಸೇತುವೆ_ಉದ್ಘಾಟನೆಯ_ಕ್ಷಣಗಣನೆಯಲ್ಲಿ

#ನಾನು_ಮೊದಲ_ಬಾರಿಗೆ_ಹೊಳೆಬಾಗಿಲು_ಲಾಂಚ್_ನೋಡಿದ್ದು_ದಾಟಿದ್ದು.


#sharavathiriver #linganamakkidam #ambargodlu #kalasavalli #cablebridge #prasannakereki #byraghavendra #kagoduthimmappa

  1989 ಅಥವ 1990 ರಲ್ಲಿ ನಾನು ಕಾಗೋಡು ತಿಮ್ಮಪ್ಪನವರ ಕಪ್ಪುಅಂಬಾಸಡರ್ ಕಾರಿನಲ್ಲಿ ಮೊದಲ ಬಾರಿಗೆ ಹೊಳೆಬಾಗಿಲು ನೋಡಿದ್ದು ಮತ್ತು ಮೊದಲ ಬಾರಿಗೆ ಲಾಂಚಿನಲ್ಲಿ ದಾಟಿದ್ದು ನೆನಪುಗಳು.

    ಗುಂಡೂರಾವ್ ಮತ್ತು ಬಂಗಾರಪ್ಪನವರ ರಾಜಕೀಯ ಸಂಘರ್ಷದಲ್ಲಿ ಜನತಾ ಪಕ್ಷದ ಕಾಗೋಡು ತಿಮ್ಮಪ್ಪನವರನ್ನು ಕಾಂಗ್ರೆಸ್ಸಿಗೆ ಸೇರಿಸಿ ವಿಧಾನ ಪರಿಷತ್ ಸದಸ್ಯರನ್ನಾಗಿಸಿ ಮಂತ್ರಿನ್ನಾಗಿಸಿದ್ದು ಇತಿಹಾಸ.

    ನಂತರ ಸುಮಾರು  ವರ್ಷಗಳ ಕಾಲ ಸಾಗರದ ರಾಜಕೀಯ ರಂಗದಲ್ಲಿ ಕಾಗೋಡು ತಿಮ್ಮಪ್ಪನವರು ಇಲ್ಲದ್ದರಿಂದ ಆಗಿನ ಕಾಂಗ್ರೆಸ್ ಪಕ್ಷದ ಕಟ್ಟಾ ಮುಖಂಡರಾದ ಅಹ್ಮದ್ ಅಲಿಖಾನ್ ಸಾಬ್ ಹೇಗಾದರೂ ಮಾಡಿ ಕಾಗೋಡು ತಿಮ್ಮಪ್ಪನವರನ್ನು ಸಾಗರ ತಾಲ್ಲೂಕಿನ ರಾಜಕಾರಣಕ್ಕೆ ಕರೆತರಬೇಕು ಎಂಬ ಪ್ರಯತ್ನ ಪ್ರಾರಂಬಿಸಿದ್ದರು.

   1989 ರ ವಿಧಾನಸಭಾ ಚುನಾವಣೆಗೆ ಕಾಗೋಡು ತಿಮ್ಮಪ್ಪನವರನ್ನು ಕರೆ ತರುವ ಪ್ರಸ್ತಾವನೆಯನ್ನು ಮಾಡಿದರು ಇದಕ್ಕೆ ಅವರಿಗೆ ಸಾತ್ ಕೊಟ್ಟವರು ಪುತ್ತೂರಾಯರು ಮತ್ತು ಕುರುಬರ ಲಿಂಗಪ್ಪನವರು.

  ಆಗ ಅವರು ಆಯ್ಕೆ ಮಾಡಿದ ಯಂಗ್ ಬ್ರಿಗೇಡ್ ಅಂದರೆ ನಾನು - ತೀನಾ ಶ್ರೀನಿವಾಸ್ ಮತ್ತು ಭೀಮನೇರಿ ಶಿವಪ್ಪನವರು.

   ನಂತರ ಚುನಾವಣೆಯಲ್ಲಿ ಕಾಗೋಡು ಗೆದ್ದರು ಆಗ ಶಾಸಕರ ಪ್ರವಾಸದಲ್ಲಿ ನಾವು ಮೂವರು ಅವರ ಕಾರಿನಲ್ಲಿ ಹೊಳೆಬಾಗಿಲು ದಾಟಿ ಕರೂರು ಮತ್ತು ಬಾರಂಗಿ ಹೋಬಳಿಗೆ ಹೋಗಿದ್ದಾಗಲೆ  ನಾನು ಶರಾವತಿ ನದಿಯ ಅಗಾಧ ಪ್ರಮಾಣದ ಹಿನ್ನೀರು ಮತ್ತು ಅಲ್ಲಿ ಇರುವ ಲಾಂಚ್ ಮೊದಲ ಬಾರಿ ನೋಡಿದ್ದು.

 ಆ ಲಾಂಚಿಗೆ (ಪೆರಿಗೆ) ಕಾಗೋಡು ತಿಮ್ಮಪ್ಪನವರ ಕಪ್ಪು ಬಣ್ಣದ ಅಂಬಾಸಡರ್ ಕಾರನ್ನ ಹತ್ತಿಸಲಾಯಿತು ಅಲ್ಲಿಂದ ವಾಪಾಸು ಕಾರ್ಗಲ್ ಮೇಲೆ ಸಾಗರಕ್ಕೆ ಬಂದದ್ದು ಒಂದು ನೆನಪು.

   ನಂತರ ಇನ್ನೊಂದು ಅವಧಿಯಲ್ಲಿ ಕಾಗೋಡು ತಿಮ್ಮಪ್ಪನವರು ಮಂತ್ರಿಗಳಾಗಿದ್ದಾಗ ಅವರ ಜೊತೆ ಹೋದಾಗಿದ್ದು ಮರೆಯಲಾರದ ನೆನಪು.

    ಕಾಗೋಡು ಹಿಂದಿನ ದಿನವೇ ಎಲ್ಲಾ ಇಂಜಿನಿಯರ್ ಗಳು ತಪ್ಪದೇ ಜೊತೆಯಲ್ಲಿ ಬರಬೇಕು ಆ ಭಾಗದ ಕಾಮಗಾರಿ ವೀಕ್ಷಣೆ ಮಾಡಬೇಕು ಎಂದು ಕಟ್ಟಪ್ಪಣೆ ಮಾಡಿದ್ದರು.

  ಆಗ PWD ಮತ್ತು ಜಿಲ್ಲಾ ಪಂಚಾಯತಿ ಇಂಜಿನಿಯರಿಂಗ್ ಘಟಕದ ಜೀಪುಗಳಲ್ಲಿ ಇಂಜಿನಿಯರ್ ಗಳೆಲ್ಲ ಹೊಳೆಬಾಗಿಲಿಗೆ ಭಾವಿಸಿದ್ದರು.

   ಕಾಗೋಡು ತಿಮ್ಮಪ್ಪನವರು ಲಾಂಚ್ ನಲ್ಲಿ ಶರಾವತಿ ನದಿ ದಾಟುವಾಗ ಎಲ್ಲಾ ಇಂಜಿನಿಯರ್ ಗಳು ಬಂದಿದ್ದಾರ ಅಂತ ಅಲ್ಲಿದ್ದವರನ್ನ  ನೋಡಿ ಖಾತ್ರಿ ಮಾಡಿಕೊಂಡು ಹೊಳೆಬಾಗಿಲು ಲಾಂಚ್ ನಲ್ಲಿ ಶರಾವತಿ ನದಿ ದಾಟಿ ತುಮರಿ ಸಮೀಪದ ಬ್ರಾಹ್ಮಣ ಕೆಪ್ಪಿಗೆ ಸಮೀಪದ ರಸ್ತೆ ಕಾಮಗಾರಿ ಪರಿಶೀಲಿಸಲು ಆ ಭಾಗದ ಇಂಜಿನಿಯರ್ ಕರೆದರೆ ಇಂಜಿನಿಯರೇ ನಾಪತ್ತೆ... ಹೊಳೆಬಾಗಿಲು ಲಾಂಚ್ ಒಟ್ಟಾಗಿಯೇ ದಾಟಿದ ಇಂಜಿನಿಯರ್ ಮಾಯ!?.

  ಆಗ ಮತ್ತೆ ಅವರನ್ನು ಹುಡುಕಿ ತರುವ ಅವಕಾಶಗಳಾದ ಫೋನ್ ಅಥವ ವಾಹನ ಸೌಕರ್ಯ ಇರಲಿಲ್ಲ ಹೀಗೆ ಹೊಳೆ ಆಚಿನ ಭಾಗದಲ್ಲಿ ಅಧಿಕಾರಿಗಳು ಜನಪ್ರತಿನಿಧಿಗಳಿಗೇ ಚಳ್ಳೆಹಣ್ಣು ತಿನಿಸುತ್ತಿದ್ದರು.

Comments

Popular posts from this blog

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...