Skip to main content

BN 3425.NEET 2025.

#ಕನ್ನಡ_ಮಾಧ್ಯಮದಲ್ಲಿ_ವಿದ್ಯಾಬ್ಯಾಸ_ಮಾಡಿದವರಿಗೆ...

#NEET_ಪರೀಕ್ಷೆ_ಪಾಸು_ಮಾಡಲು_ಸಾಧ್ಯವಿಲ್ಲ

#ಡಾಕ್ಟರ್_ಆಗಲು_ಸಾಧ್ಯವಿಲ್ಲ

#ಎಂಬುದು_ತಪ್ಪು_ಗ್ರಹಿಕೆ


#NEET #medical #enginearing #kannadamediam 

    ಕನ್ನಡ ಮೀಡಿಯಂ ಮಕ್ಕಳು NEET ಪರೀಕ್ಷೆ ಉತ್ತೀರ್ಣರಾಗುತ್ತಿಲ್ಲ ಅವರಿಗೆ ಮೆಡಿಕಲ್ ಕಾಲೇಜಿನಲ್ಲಿ ಸೀಟ್ ಸಿಗುವುದಿಲ್ಲ ಅವರ ವೈದ್ಯರಾಗುವ ಕನಸು ನನಸಾಗುತ್ತಿಲ್ಲ ಎಂಬ ಲೇಖನ ಓದಿದವರಿಗೆ ತಕ್ಷಣ ಹೌದು ಅನ್ನಿಸಿ ಬಿಡುತ್ತದೆ ತಮ್ಮ ಮಕ್ಕಳನ್ನು ಇಂಗ್ಲೀಷ್ ಮೀಡಿಯಂನಲ್ಲೇ ಓದಿಸಬೇಕು ಅನ್ನಿಸುತ್ತದೆ.

    ಆದರೆ ಇದು ತಪ್ಪು ಗ್ರಹಿಕೆ ಎನ್ನುವುದನ್ನು ಈ ಕೆಳಗಿನ ಲೇಖನ ಓದಿ...

ಕರ್ನಾಟಕ ರಾಜ್ಯದಲ್ಲಿ 2025 ರಲ್ಲಿ ಸುಮಾರು 12,395 ಎಂಬಿಬಿಎಸ್ ಸೀಟುಗಳು ಲಭ್ಯವಿವೆ ಇವುಗಳಲ್ಲಿ, 3,800 ಸೀಟುಗಳು ಸರ್ಕಾರಿ ಕಾಲೇಜುಗಳಲ್ಲಿ ಮತ್ತು 6,000 ಕ್ಕಿಂತ ಹೆಚ್ಚು ಸೀಟುಗಳು ಖಾಸಗಿ ಕಾಲೇಜುಗಳಲ್ಲಿ ಲಭ್ಯವಿವೆ.

  ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಎಂಬಿಬಿಎಸ್/ಬಿಡಿಎಸ್ ಸೀಟುಗಳ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ನೋಡಿಕೊಳ್ಳುತ್ತದೆ. 

ಕರ್ನಾಟಕದ ಒಟ್ಟು 1,47,782 ಅಭ್ಯರ್ಥಿಗಳು ರೆ ಈ ವರ್ಷ (2025)  NEET ಪರೀಕ್ಷೆಗೆ ನೊಂದಾಯಿಸಿದ್ದರು ಆದರೆ 1,42,369 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇದರಲ್ಲಿ 83,582 ಅರ್ಹತೆ ಪಡೆದುಕೊಂಡರು.

   ಅಂದರೆ 83 ಸಾವಿರದ 582 ಕರ್ನಾಟಕದ NEET ಪರೀಕ್ಷೆ ಪಾಸು ಮಾಡಿದವರಲ್ಲಿ ಅವಕಾಶ ಇರುವ MBBS ಸೀಟುಗಳು 12,395 ಮಾತ್ರ ಎಂಬುದು ನೆನಪಿರಲಿ.

   ಟಾಪ್ 100ರಲ್ಲಿ ಸ್ಥಾನ ಪಡೆದ ಕರ್ನಾಟಕದ ವಿದ್ಯಾರ್ಥಿಗಳ ಪಟ್ಟಿ
ನೀಖಿಲ್ ಸೋನದ್ ದೇಶದಕ್ಕೆ 17ನೇ  ರ್ಯಾಂಕ್​,
ರುಚಿರ್ ಗುಪ್ತಾ ದೇಶದಕ್ಕೆ 22ನೇ ರ್ಯಾಂಕ್
ತೇಜಸ್ ಸೈಲೇಶ್ 38ನೇ  ರ್ಯಾಂಕ್.
ಪಿ ಜಾಗಿರ್ದಾರ್ 42 ನೇ ನೀಟ್ ರ್ಯಾಂಕ್
ಹರಿಣಿ ಶರ್ಮಾ 72 ನೇ ನೀಟ್ ರ್ಯಾಂಕ್
ದಿಗಂತ್ 80 ನೇ ನೀಟ್ ರ್ಯಾಂಕ್
ನಿಧಿ ಕೆ ಜಿ 84 ನೇ ನೀಟ್ ರ್ಯಾಂಕ್.

ನೀಟ್ (NEET) ಪರೀಕ್ಷೆ ಎಂದರೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಇದು ವೈದ್ಯಕೀಯ ಮತ್ತು ದಂತವೈದ್ಯಕೀಯ ಪದವಿ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಭಾರತದಲ್ಲಿ ನಡೆಸಲಾಗುವ ಪ್ರಮುಖ ಪರೀಕ್ಷೆಯಾಗಿದೆ ಈ ಪರೀಕ್ಷೆಯನ್ನು #ಕನ್ನಡ_ಸೇರಿದಂತೆ_ವಿವಿಧ_ಭಾಷೆಗಳಲ್ಲಿ_ಬರೆಯಬಹುದುದು. 

ನೀಟ್ ಪರೀಕ್ಷೆಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ
ನೀಟ್ ಪರೀಕ್ಷೆಯು ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯಗಳನ್ನು ಒಳಗೊಂಡಿರುತ್ತದೆ.
ಪರೀಕ್ಷೆಯ ಅವಧಿ ಸಾಮಾನ್ಯವಾಗಿ ಅಭ್ಯರ್ಥಿಗಳಿಗೆ 3 ಗಂಟೆಗಳ ಕಾಲಾವಕಾಶ ನೀಡಲಾಗುತ್ತದೆ.

ನೀಟ್ ಪರೀಕ್ಷೆಯನ್ನು ಕನ್ನಡ, ಇಂಗ್ಲಿಷ್, ಹಿಂದಿ ಮತ್ತು ಇತರ ಪ್ರಾದೇಶಿಕ ಭಾಷೆಗಳಲ್ಲಿ ಬರೆಯಬಹುದು 
ನೀಟ್ ಪರೀಕ್ಷೆಯನ್ನು ದೇಶದಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ.

  ಪ್ರತಿ ಸರ್ಕಾರಿ ಕಾಲೇಜಿನಲ್ಲಿ ಶೇ. 85 ರಷ್ಟು ಸೀಟುಗಳು ರಾಜ್ಯ ಕೋಟಾ ಸೀಟುಗಳಿಗೆ ಮೀಸಲಾಗಿವೆ ಈ MBBS ಸೀಟುಗಳನ್ನು ರಾಜ್ಯದಲ್ಲಿ ನೆಲೆಸಿರುವ ಮತ್ತು ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳಿಗೆ ಹಂಚಲಾಗುತ್ತದೆ.

 ಪ್ರತ್ಯೇಕ ರಾಜ್ಯ ಸಮಾಲೋಚನಾ ಸಮಿತಿಗಳು ರಾಜ್ಯ ಕೋಟಾ ರ‍್ಯಾಂಕ್ ಪಟ್ಟಿಯನ್ನು ನಿರ್ವಹಿಸುತ್ತವೆ.

ಇಡೀ ದೇಶದಲ್ಲಿ ಅನೇಕ ವಿದ್ಯಾರ್ಥಿಗಳು NEET (UG) ಗೆ ಅರ್ಹತೆ ಪಡೆದಿದ್ದರೂ ಲಭ್ಯವಿರುವ MBBS ಸೀಟುಗಳ ಸಂಖ್ಯೆ ಗಮನಾರ್ಹವಾಗಿ ಕಡಿಮೆಯಾಗಿದೆ.

 ಇಡೀ ದೇಶದಲ್ಲಿ 2025 ರಲ್ಲಿ 12 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು NEET ಅನ್ನು ತೇರ್ಗಡೆ ಹೊಂದಿದರು, ಆದರೆ ಕೇವಲ1.18 ಲಕ್ಷ ಎಂಬಿಬಿಎಸ್ ಸೀಟುಗಳು ಲಭ್ಯವಿದೆ ಇದರರ್ಥ ಹೆಚ್ಚಿನ ಸಂಖ್ಯೆಯ ಅರ್ಹ ವಿದ್ಯಾರ್ಥಿಗಳು ಭಾರತೀಯ ವೈದ್ಯಕೀಯ ಕಾಲೇಜಿನಲ್ಲಿ ಸೀಟು ಪಡೆಯಲು ಸಾಧ್ಯವಾಗುವುದಿಲ್ಲ.

   ದೇಶದಾದ್ಯಂತ NEET UG 2025 ಪರೀಕ್ಷೆಗೆ ಒಟ್ಟು22,76,069ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದು ಇದರಲ್ಲಿ 22,09,318 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಪರೀಕ್ಷೆಗೆ ಹಾಜರಾದವರಲ್ಲಿ 12,36,531 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ.

     ಈ ಅಂಕಿ ಅಂಶಗಳನ್ನು ಗಮನಿಸಿದರೆ ಅರ್ಥವಾದೀತು ಕನ್ನಡ ಮೀಡಿಯಂನಲ್ಲಿ ಓದಿದವರಿಗೆ ಡಾಕ್ಟರ್ ಆಗಲು ಸಾಧ್ಯವಿಲ್ಲ ಎಂಬುದು ತಪ್ಪು ಮಾಹಿತಿ ಆಗಿದೆ ಅನ್ನುವುದು.

   ಅಷ್ಟೇ ಅಲ್ಲ ಇಂಗ್ಲೀಷ್ ಮೀಡಿಯಂನಲ್ಲಿ ಓದಿದ ಎಲ್ಲರಿಗೂ ಡಾಕ್ಟರ್ ಆಗಲು ಸಾಧ್ಯವಿಲ್ಲ ಎಂಬುದು.

Comments

Popular posts from this blog

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...