Skip to main content

BN 3432. ಡಾಕ್ಟರ್ ಡಿ.ಸುರೇಶ್ ರಾವ್ ಕ್ಯಾನ್ಸರ್ ತಜ್ಞರು

#ನನ್ನ_ಇವತ್ತಿನ_ಅತಿಥಿ

#ಡಾಕ್ಟರ್_ಡಿ_ಸುರೇಶ್

#ತೀರ್ಥಹಳ್ಳಿ_ಆಗುಂಬೆ_ಮೂಲದವರು

#ಇವರ_ಶಿವಮೊಗ್ಗ_ಜಿಲ್ಲೆಯ_ತೀರ್ಥಹಳ್ಳಿಯಲ್ಲಿ_ಸುಸಜ್ಜಿತ

#ಕ್ಯಾನ್ಸರ್_ಆಸ್ಪತ್ರೆ_ಶೀಘ್ರದಲ್ಲೇ_ಕಾರ್ಯಾರಂಭ_ಮಾಡಲಿದೆ

#ಈಗಾಗಲೇ_ಮಂಗಳೂರಿನಲ್ಲಿ_ಇವರ_ಆಸ್ಪತ್ರೆ_MIO_HOSPITAL_ಪ್ರಸಿದ್ದಿ_ಪಡೆದಿದೆ

#ಮಂಗಳೂರು_ಇನ್ಸ್ಟಿಟ್ಯೂಟ್_ಆಫ್_ಆಂಕಾಲಜಿ_ಉಡುಪಿಯಲ್ಲೂ_ಡೇ_ಕೇರ್_ಸೆಂಟರ್_ಇದೆ.


   ಡಾಕ್ಟರ್ ಡಿ.ಸುರೇಶ್ ಮಂಗಳೂರಿನ ಕಂಕನಾಡಿಯ ಪಂಪ್ ವೆಲ್ ನಲ್ಲಿ ಸುಸಜ್ಜಿತವಾದ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಆಂಕಾಲಾಜಿ ಸ್ಪೆಷಾಲಿಟಿ ಕ್ಯಾನ್ಸರ್ ಆಸ್ಪತ್ರೆ (MIO) ಪ್ರಸಿದ್ಧಿ ಮತ್ತು ಪ್ರಖ್ಯಾತಿ ಪಡೆದಿದೆ ಇವರ ಸಂಸ್ಥೆಯ ಬ್ರಾಂಚ್ ಉಡುಪಿಯಲ್ಲೂ ಇದೆ.
  ಡಾಕ್ಟರ್ ಡಿ.ಸುರೇಶ್ ತೀರ್ಥಹಳ್ಳಿ ಮೂಲದವರು ಇವರಿಗೆ ಮಲೆನಾಡಿನ ಶಿವಮೊಗ್ಗ, ಉತ್ತರ ಕನ್ನಡ,ದಾವಣಗೆರೆ, ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಜನರಿಗೆ ಅನುಕೂಲವಾಗುವಂತೆ ತೀರ್ಥಹಳ್ಳಿಯಲ್ಲಿ 80 ಹಾಸಿಗೆಯ ಕ್ಯಾನ್ಸರ್ ಆಸ್ಪತ್ರೆ ಮಾಡಿದ್ದಾರೆ.
   ಕಳೆದ ವರ್ಷ 15 ಮೇ 2023 ರಂದು ತೀಥ೯ಹಳ್ಳಿಯ ನೆರಟೂರು ಗ್ರಾಮ ಪಂಚಾಯಿತಿಯಲ್ಲಿ MIO HOSPITAL ತೀರ್ಥಹಳ್ಳಿಯ ಭೂಮಿ ಪೂಜೆ ಇವರು ನೆರವೇರಿಸಿದ್ದರು.
   ಶಿವಮೊಗ್ಗ ಭದ್ರಾವತಿ ಮಧ್ಯದ #ಮಲ್ನಾಡ್_ಕ್ಯಾನ್ಸರ್_ಆಸ್ಪತ್ರೆ ಮತ್ತು ಸಧ್ಯದಲ್ಲೇ ಪ್ರಾರಂಭ ಆಗಲಿರುವ ಯಡ್ಯೂರಪ್ಪರ ನಾರಾಯಣ ಹೃದಯಾಲಯದ ಕ್ಯಾನ್ಸರ್ ಆಸ್ಪತ್ರೆ ಜೊತೆ ತೀರ್ಥಹಳ್ಳಿಯ ಡಾ. ಡಿ.ಸುರೇಶರ ಕ್ಯಾನ್ಸರ್ ಆಸ್ಪತ್ರೆ ಮೂರನೆಯದು.

   BPL ಕಾರ್ಡ್ ಇದ್ದವರಿಗೆ ಉಚಿತ ಕ್ಯಾನ್ಸರ್ ಚಿಕಿತ್ಸೆ, ಶಸ್ತ್ರಚಿಕಿತ್ಸೆ ಇವರ ಆಸ್ಪತ್ರೆಯಲ್ಲಿ ಲಭಿಸಲಿದೆ, ಎಲ್ಲಾ ಆರೋಗ್ಯ ವಿಮೆ ಸೌಲಭ್ಯ ಇದ್ದವರಿಗೂ ಇಲ್ಲಿ ಚಿಕಿತ್ಸೆ ಪಡೆಯ ಬಹುದು.
  ಅನಾವಶ್ಯಕ ಪರೀಕ್ಷೆಗಳು ದುಭಾರಿ ವೆಚ್ಚದ ಔಷದಗಳನ್ನ ಈಗಿನ ಹೆಚ್ಚಿನ ಕ್ಯಾನ್ಸರ್ ಆಸ್ಪತ್ರೆಗಳಲ್ಲಿ ರೋಗಿಗಳು ಭರಿಸಬೇಕಾದ ಇಂತಹ ದಿನಗಳಲ್ಲಿ ಈ ಕ್ಷೇತ್ರದಲ್ಲಿ ತಜ್ಞ ವೈದ್ಯರಾಗಿ ಮಂಗಳೂರಿನಲ್ಲಿ ಯಶಸ್ವಿ ಕ್ಯಾನ್ಸರ್ ಆಸ್ಪತ್ರೆ ನಡೆಸುತ್ತಿರುವ ಡಾ.ಸುರೇಶ್ ಕೇವಲ ಲಾಭದ ದೃಷ್ಟಿ ಇಟ್ಟುಕೊಂಡಿದ್ದರೆ ಅವರು ತೀರ್ಥಹಳ್ಳಿಯಲ್ಲಿ ಯಾಕೆ ಕ್ಯಾನ್ಸ್ ರ್ ಆಸ್ಪತ್ರೆ ತೆರೆಯುತ್ತಿದ್ದರು! ಅಗ ಅವರಿಗೆ ಸೂಕ್ತವಾದ ಸ್ಥಳ ಶಿವಮೊಗ್ಗ ಪೇಟೆ ಆಗಿರುತ್ತಿತ್ತು.
  ಇವರ ಜೊತೆ ಇವರ ಆಸ್ಪತ್ರೆ ಸಿಬ್ಬಂದಿಗಳು ಮತ್ತು ಶಿವಮೊಗ್ಗದ ಸಾಹಸಿ ಯೌವತ್ ಹಾಸ್ಟೆಲ್, ಸಂಸ್ಕೃತ ಭವನದ ಇತ್ತೀಚಿಗೆ ತಮ್ಮ 61ನೇ ವಯಸ್ಸಲ್ಲಿ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ BA ಪದವಿ ವ್ಯಾಸಂಗ ಮಾಡಿದ ಆ. ನಾ. ವಿಜೇಂದ್ರ ಆಗಮಿಸಿದ್ದರು.
   ಕಾಫಿ ಸತ್ಕಾರದ ಜೊತೆ ನಮ್ಮ ಪುರ ದೈವ ವರಸಿದ್ಧಿ ವಿನಾಯಕ ದೇವರ 3D ವಿಗ್ರಹ ನೀಡಿ ತೀರ್ಥಹಳ್ಳಿಯಲ್ಲಿ ಪ್ರಾರಂಭವಾಗಲಿರುವ ಕ್ಯಾನ್ಸರ್ ಆಸ್ಪತ್ರೆ ಉದ್ಯಮ ಯಶಸ್ಸಿಗೆ ಶುಭಹಾರೈಸಿ ಬಿಳ್ಕೊಟ್ಟೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...