Skip to main content

3442. ಜೋಗ್ ಫಾಲ್ಸ್ ಹೋಮ್ ಸ್ಟೇ ಯೋಜನೆ 4.

#ಭಾಗ_4.

#ಜೋಗ್_ಪಾಲ್ಸ್_ಹೊಮ್_ಸ್ಟೇ_ಅವಕಾಶಗಳು

#ಸ್ಥಳೀಯರ_ಸಹಭಾಗಿತ್ವದ_ಪ್ರವಾಸೋಧ್ಯಮ

#ವರ್ಷ_ಪೂರ್ತಿ_ಪ್ರವಾಸಿಗಳ_ಸೆಳೆಯುವ_ಸರ್ವಋತು_ಪ್ರವಾಸಿ_ತಾಣ.


#Homestay #Jogfalls #Westernghats #Malenadu #Gerusoppe #Siganduru #Balepadmavathi #Jainabasadhi 

    ಜೋಗ್ ಫಾಲ್ಸ್ ಪರಿಸರದಲ್ಲಿ ಪ್ರವಾಸೋಧ್ಯಮ ಅಭಿವೃದ್ಧಿಗಾಗಿ ಸರ್ಕಾರ ನೂರಾರು ಕೋಟಿ ವಿನಿಯೋಗಿಸುತ್ತಿದೆ.

    ಇದರಿಂದ ಮುಂದಿನ ದಿನಗಳಲ್ಲಿ ಜೋಗ್ ಫಾಲ್ಸ್ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸುವ ಸಾಧ್ಯತೆ ಇದೆ.

   ಇದೆಲ್ಲದರಿಂದ ದೊಡ್ಡ ದೊಡ್ಡ ಹೋಟೆಲ್ ರೆಸಾರ್ಟ್ ಗಳನ್ನು ಹೊರಗಿನ ಸಂಸ್ಥೆಗಳು ನಿರ್ಮಿಸಲಿದೆ.

    ಸ್ಥಳೀಯರು ಪ್ರವಾಸಿಗಳಿಗೆ ಆತಿಥ್ಯ ನೀಡುವ ಹೋಮ್ ಸ್ಟೇಗಳನ್ನು ಕಡಿಮೆ ಬಂಡವಾಳದಲ್ಲಿ ಪ್ರಾರಂಭಿಸ ಬಹುದಾಗಿದೆ.

   ಆಸಕ್ತರಿಗೆ ಸಾಲ ರೂಪದಲ್ಲಿ ಆರ್ಥಿಕ ನೆರವು, ಇಲಾಖಾ ಅನುಮತಿಗಳು ಮತ್ತು ಬುಕಿಂಗ್ ಸೌಲಭ್ಯಗಳು ಅವಶ್ಯವಿದೆ.

    ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮತ್ತು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಮತ್ತು ಹೊನ್ನಾವರ ತಾಲ್ಲೂಕಿನ ಅಂಚಿನಲ್ಲಿ ದುಮುಕುವ ಜೋಗ್ ಜಲಪಾತದಿಂದ ಈ ಪ್ರದೇಶದಲ್ಲಿ 200 ಕ್ಕೂ ಹೆಚ್ಚು ಹೋಮ್ ಸ್ಟೇಗಳು ಲಾಭದಾಯಕವಾಗಿ ನಡೆಸಲು ಸಾಧ್ಯವಿದೆ ಎಂಬ ಸಮೀಕ್ಷಾ ವರದಿಯಿಂದ ದೃಢಪಟ್ಟಿದೆ.

   ಬರುವ ಪ್ರವಾಸಿಗಳಿಗೆ ಅತಿಥಿ ಸತ್ಕಾರಕ್ಕಾಗಿ ಮತ್ತು ಹೋಮ್ ಸ್ಟೇ ಸುವ್ಯವಸ್ಥಿತವಾಗಿ ನಿರ್ವಹಿಸಲು ತರಬೇತಿ ಬೇಕು.

   ಸ್ಥಳೀಯರು ತಮ್ಮ ವಾಸದ ಮನೆಯಲ್ಲೇ ಹೋಮ್ ಸ್ಟೇ ಮಾಡುವುದರಿಂದ ಅದರಲ್ಲಿ ಅವರೂ ವಾಸ ಆಗಿರುವುದರಿಂದ ಅವರೇ ಈ ಹೋಮ್ ಸ್ಟೇಗಳನ್ನ ಸುಲಭವಾಗಿ ನಡೆಸ ಬಹುದು.

   ಈ ಭಾಗದ ಸ್ಥಳೀಯರು ಹಾಲಿ ಆ ಭಾಗದ ಹೋಮ್ ಸ್ಟೇಗಳ ಬಗ್ಗೆ ಕೆಲ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಅದೇನೆಂದರೆ ಅಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಸಲು ಅವಕಾಶ ನೀಡುತ್ತಾರೆ ಎಂದು ಇದು ಸತ್ಯವಿರಬಹುದು ಆದರೆ ಹೋಮ್ ಸ್ಟೇ ಪರಿಕಲ್ಪನೆ ಮತ್ತು ಅದಕ್ಕೆ ಪಡೆಯುವ ಅನುಮತಿಗಳಲ್ಲಿ ಇಂತಹ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ಇರುವುದಿಲ್ಲ.

   ಹಣಕ್ಕಾಗಿ ಏನೇನೋ ಮಾಡಲು ಅವಕಾಶ ನೀಡುವುದು ಪ್ರವಾಸೋದ್ಯಮಕ್ಕೆ ಉತ್ತೇಜನ ಆಗುವುದಿಲ್ಲ ಕಂಟಕ ಆಗುತ್ತದೆ.

    ಜುಗಾರಿ - ವೆಶ್ಯಾವಾಟಿಕೆ - ಮಧ್ಯ- ಡ್ರಗ್ಸ್ ಗಳ ಮೋಜು ಮಸ್ತಿಯಿಂದ ಇಂತಹ ಪ್ರಾಪರ್ಟಿಗಳು ತಕ್ಷಣ ಹಣ ಕಾಣುತ್ತಾರೆ ಆದರೆ ಅದು ತಾತ್ಕಾಲಿಕ ಅಂತಹ ಜಾಗದಲ್ಲಿ ಪ್ರವಾಸಿ ಕುಟುಂಬಗಳು ಬಂದು ತಂಗಲು ಇಷ್ಟ ಪಡುವುದಿಲ್ಲ ಅಷ್ಟೇ ಅಲ್ಲ ಅಂತವರು ಕಾನೂನಿನ ಸಂಕೋಲೆಯಲ್ಲಿ ಸಿಕ್ಕಿ ಬೀಳುತ್ತಾರೆ.

   ನಾನು ಇಲ್ಲಿ ಬೆಂಬಲಿಸಿ ಬರೆಯುತ್ತಿರುವ #ಜೋಗ್_ಪಾಲ್ಸ್_ಹೋಮ್_ಸ್ಟೇ ಯೋಜನೆಯ ಸರಣಿ ಲೇಖನಗಳು ಕಾನೂನುಬದ್ದವಾಗಿ,ಪರಿಸರ ಸ್ನೇಹಿ ಮತ್ತು ಸ್ಥಳೀಯರ ಸಹಕಾರ ನೆರವಿನಿಂದ ನಡೆಯುವ ಅದರಿಂದ ಪ್ರವಾಸೋಧ್ಯಮಕ್ಕೆ ಉತ್ತೇಜನ ನೀಡುವ ಮೂಲಕ ಸ್ಥಳೀಯರೂ ಸ್ವಯಂ ಉದ್ಯೋಗ ಪಡೆದುಕೊಳ್ಳುವ ಯೋಜನೆ ಆಗಿರುತ್ತದೆ.

   ಈ ಬಗ್ಗೆ ಆಸಕ್ತರು, ಮುಂದಿನ ದಿನಗಳಲ್ಲಿ ಈ ಯೋಜನೆ ರೀತಿ ಹೋಮ್ ಸ್ಟೇ ನಿರ್ಮಿಸುವವರು ಕಾಮೆಂಟ್ ನಲ್ಲಿರುವ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ವಿನಂತಿ.

Comments

Popular posts from this blog

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...