Skip to main content

3442. ಜೋಗ್ ಫಾಲ್ಸ್ ಹೋಮ್ ಸ್ಟೇ ಯೋಜನೆ 4.

#ಭಾಗ_4.

#ಜೋಗ್_ಪಾಲ್ಸ್_ಹೊಮ್_ಸ್ಟೇ_ಅವಕಾಶಗಳು

#ಸ್ಥಳೀಯರ_ಸಹಭಾಗಿತ್ವದ_ಪ್ರವಾಸೋಧ್ಯಮ

#ವರ್ಷ_ಪೂರ್ತಿ_ಪ್ರವಾಸಿಗಳ_ಸೆಳೆಯುವ_ಸರ್ವಋತು_ಪ್ರವಾಸಿ_ತಾಣ.


#Homestay #Jogfalls #Westernghats #Malenadu #Gerusoppe #Siganduru #Balepadmavathi #Jainabasadhi 

    ಜೋಗ್ ಫಾಲ್ಸ್ ಪರಿಸರದಲ್ಲಿ ಪ್ರವಾಸೋಧ್ಯಮ ಅಭಿವೃದ್ಧಿಗಾಗಿ ಸರ್ಕಾರ ನೂರಾರು ಕೋಟಿ ವಿನಿಯೋಗಿಸುತ್ತಿದೆ.

    ಇದರಿಂದ ಮುಂದಿನ ದಿನಗಳಲ್ಲಿ ಜೋಗ್ ಫಾಲ್ಸ್ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸುವ ಸಾಧ್ಯತೆ ಇದೆ.

   ಇದೆಲ್ಲದರಿಂದ ದೊಡ್ಡ ದೊಡ್ಡ ಹೋಟೆಲ್ ರೆಸಾರ್ಟ್ ಗಳನ್ನು ಹೊರಗಿನ ಸಂಸ್ಥೆಗಳು ನಿರ್ಮಿಸಲಿದೆ.

    ಸ್ಥಳೀಯರು ಪ್ರವಾಸಿಗಳಿಗೆ ಆತಿಥ್ಯ ನೀಡುವ ಹೋಮ್ ಸ್ಟೇಗಳನ್ನು ಕಡಿಮೆ ಬಂಡವಾಳದಲ್ಲಿ ಪ್ರಾರಂಭಿಸ ಬಹುದಾಗಿದೆ.

   ಆಸಕ್ತರಿಗೆ ಸಾಲ ರೂಪದಲ್ಲಿ ಆರ್ಥಿಕ ನೆರವು, ಇಲಾಖಾ ಅನುಮತಿಗಳು ಮತ್ತು ಬುಕಿಂಗ್ ಸೌಲಭ್ಯಗಳು ಅವಶ್ಯವಿದೆ.

    ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮತ್ತು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಮತ್ತು ಹೊನ್ನಾವರ ತಾಲ್ಲೂಕಿನ ಅಂಚಿನಲ್ಲಿ ದುಮುಕುವ ಜೋಗ್ ಜಲಪಾತದಿಂದ ಈ ಪ್ರದೇಶದಲ್ಲಿ 200 ಕ್ಕೂ ಹೆಚ್ಚು ಹೋಮ್ ಸ್ಟೇಗಳು ಲಾಭದಾಯಕವಾಗಿ ನಡೆಸಲು ಸಾಧ್ಯವಿದೆ ಎಂಬ ಸಮೀಕ್ಷಾ ವರದಿಯಿಂದ ದೃಢಪಟ್ಟಿದೆ.

   ಬರುವ ಪ್ರವಾಸಿಗಳಿಗೆ ಅತಿಥಿ ಸತ್ಕಾರಕ್ಕಾಗಿ ಮತ್ತು ಹೋಮ್ ಸ್ಟೇ ಸುವ್ಯವಸ್ಥಿತವಾಗಿ ನಿರ್ವಹಿಸಲು ತರಬೇತಿ ಬೇಕು.

   ಸ್ಥಳೀಯರು ತಮ್ಮ ವಾಸದ ಮನೆಯಲ್ಲೇ ಹೋಮ್ ಸ್ಟೇ ಮಾಡುವುದರಿಂದ ಅದರಲ್ಲಿ ಅವರೂ ವಾಸ ಆಗಿರುವುದರಿಂದ ಅವರೇ ಈ ಹೋಮ್ ಸ್ಟೇಗಳನ್ನ ಸುಲಭವಾಗಿ ನಡೆಸ ಬಹುದು.

   ಈ ಭಾಗದ ಸ್ಥಳೀಯರು ಹಾಲಿ ಆ ಭಾಗದ ಹೋಮ್ ಸ್ಟೇಗಳ ಬಗ್ಗೆ ಕೆಲ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಅದೇನೆಂದರೆ ಅಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಸಲು ಅವಕಾಶ ನೀಡುತ್ತಾರೆ ಎಂದು ಇದು ಸತ್ಯವಿರಬಹುದು ಆದರೆ ಹೋಮ್ ಸ್ಟೇ ಪರಿಕಲ್ಪನೆ ಮತ್ತು ಅದಕ್ಕೆ ಪಡೆಯುವ ಅನುಮತಿಗಳಲ್ಲಿ ಇಂತಹ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ಇರುವುದಿಲ್ಲ.

   ಹಣಕ್ಕಾಗಿ ಏನೇನೋ ಮಾಡಲು ಅವಕಾಶ ನೀಡುವುದು ಪ್ರವಾಸೋದ್ಯಮಕ್ಕೆ ಉತ್ತೇಜನ ಆಗುವುದಿಲ್ಲ ಕಂಟಕ ಆಗುತ್ತದೆ.

    ಜುಗಾರಿ - ವೆಶ್ಯಾವಾಟಿಕೆ - ಮಧ್ಯ- ಡ್ರಗ್ಸ್ ಗಳ ಮೋಜು ಮಸ್ತಿಯಿಂದ ಇಂತಹ ಪ್ರಾಪರ್ಟಿಗಳು ತಕ್ಷಣ ಹಣ ಕಾಣುತ್ತಾರೆ ಆದರೆ ಅದು ತಾತ್ಕಾಲಿಕ ಅಂತಹ ಜಾಗದಲ್ಲಿ ಪ್ರವಾಸಿ ಕುಟುಂಬಗಳು ಬಂದು ತಂಗಲು ಇಷ್ಟ ಪಡುವುದಿಲ್ಲ ಅಷ್ಟೇ ಅಲ್ಲ ಅಂತವರು ಕಾನೂನಿನ ಸಂಕೋಲೆಯಲ್ಲಿ ಸಿಕ್ಕಿ ಬೀಳುತ್ತಾರೆ.

   ನಾನು ಇಲ್ಲಿ ಬೆಂಬಲಿಸಿ ಬರೆಯುತ್ತಿರುವ #ಜೋಗ್_ಪಾಲ್ಸ್_ಹೋಮ್_ಸ್ಟೇ ಯೋಜನೆಯ ಸರಣಿ ಲೇಖನಗಳು ಕಾನೂನುಬದ್ದವಾಗಿ,ಪರಿಸರ ಸ್ನೇಹಿ ಮತ್ತು ಸ್ಥಳೀಯರ ಸಹಕಾರ ನೆರವಿನಿಂದ ನಡೆಯುವ ಅದರಿಂದ ಪ್ರವಾಸೋಧ್ಯಮಕ್ಕೆ ಉತ್ತೇಜನ ನೀಡುವ ಮೂಲಕ ಸ್ಥಳೀಯರೂ ಸ್ವಯಂ ಉದ್ಯೋಗ ಪಡೆದುಕೊಳ್ಳುವ ಯೋಜನೆ ಆಗಿರುತ್ತದೆ.

   ಈ ಬಗ್ಗೆ ಆಸಕ್ತರು, ಮುಂದಿನ ದಿನಗಳಲ್ಲಿ ಈ ಯೋಜನೆ ರೀತಿ ಹೋಮ್ ಸ್ಟೇ ನಿರ್ಮಿಸುವವರು ಕಾಮೆಂಟ್ ನಲ್ಲಿರುವ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ವಿನಂತಿ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...