Skip to main content

3443. ಮುಪ್ಪಾನೆ

#ಮುಪ್ಪಾನೆ

#ಕೈ_ಬೀಸಿ_ಕರೆಯುತ್ತಿದೆ_ಅಭಯಾರಣ್ಯದ_ಮಧ್ಯದ_ಶರಾವತಿ_ಹಿನ್ನೀರ_ಲಾಂಚ್_ಪ್ರಯಾಣಕ್ಕೆ 

#ಸಿಗಂದೂರು_ಸೇತುವೆ_ನಂತರ_ನಿಂತ_ಲಾಂಚ್_ಅನುಭವ

#ಆದರೆ_ಶರಾವತಿ_ನದಿಯ_ಇನ್ನೊಂದು_ಭಾಗವಾದ_ಮುಪ್ಪಾನೆಗೆ_ಬನ್ನಿ

#ಅಲ್ಲಿ_ಅಭಯಾರಣ್ಯದ_ಮಧ್ಯ_ಲಾಂಚ್_ಪ್ರಯಾಣ_ಮಾಡಬಹುದು

#ಇಲ್ಲಿ_ಅರಣ್ಯ_ಇಲಾಖೆ_ವಿಶ್ರಾಂತಿಗೃಹ_ಡೇರೆ_ವ್ಯವಸ್ಥೆ_ಇದೆ

#ಸಮೀಪದಲ್ಲೇ_ಗುಬ್ಬಿಕಂಠ_ಹೋಮ್_ಸ್ಟೇ_ಇದೆ.


#Sharavathiriver #Backwater #Boating #Homestay #Ecotourism #Wildlife #Jogfalls #Sagar #Shivamogga.

   ಸಿಗಂದೂರು ದೇವಾಲಯಕ್ಕೆ ಬರುವ ಭಕ್ತರು ಮತ್ತು ಪ್ರವಾಸಿಗರಿಗೆ ಈಗ ಅಲ್ಲಿಗೆ ಸೇತುವೆ ನಿರ್ಮಾಣ ಆಗಿ ವಾಹನ ಸಂಚಾರ ಸುಗಮವಾಗಿದೆ.

    ಸ್ಥಳೀಯರ ಬಹು ದಶಕದ ಕನಸು ನನಸಾಗಿದೆ ಇದರಿಂದ ಇಲ್ಲಿನ ಲಾಂಚ್ ಸೇವೆ ಸ್ಥಗಿತವಾಗಿದೆ.

    ಆದರೆ ಬಹುತೇಕ ಪ್ರವಾಸಿಗರು ಶರಾವತಿ ನದಿ ಲಾಂಚ್ ಮೂಲಕ ದಾಟುವ ನೆನಪುಗಳನ್ನು ಮರೆತಿಲ್ಲ.

   ಲಾಂಚ್ ಮೂಲಕ ನದಿ ದಾಟುವ ಅನುಭವ ಪ್ರವಾಸಿಗಳಿಗೆ ಅವರ ಕುಟುಂಬಗಳಿಗೆ ಥ್ರಿಲ್ ನೀಡುತ್ತಿತ್ತು.

    ಈಗ ತುಮರಿ ಸೇತುವೆ ನಿರ್ಮಾಣವಾಗಿ ಲಾಂಚ್ ಪ್ರಯಾಣ ನಿಂತಿದೆ ಎಂದು ಚಿಂತಿಸಬೇಕಾಗಿಲ್ಲ ಇದೇ ಶರಾವತಿ ನದಿಯ ಇನ್ನೊಂದು ಭಾಗವಾದ #ಮುಪ್ಪಾನೆ ಎಂಬಲ್ಲಿ ಇದೇ ರೀತಿಯ ಲಾಂಚ್ ಸಂಚರಿಸುತ್ತಿದೆ.

   ಜೋಗ್ ಫಾಲ್ಸ್ ನಿಂದ ಕಾರ್ಗಲ್ ಮತ್ತು ಭಟ್ಕಳ ಮಾಗ೯ದಲ್ಲಿ 14 ಕಿಲೋ ಮೀಟರ್ ಸಾಗಿ ಎಡಕ್ಕೆ ತಿರುಗಿ 3 ಕಿಲೋ ಮೀಟರ್ ದೂರದಲ್ಲಿದೆ ಮುಪ್ಪಾನೆ.

    ಇಲ್ಲಿಂದ ಲಾಂಚ್ ನಲ್ಲಿ ಶರಾವತಿ ಹಿನ್ನೀರು ದಾಟಿ ಅಲ್ಲಿಂದ ರಸ್ತೆ ಮಾರ್ಗವಾಗಿ ಸಿಗಂದೂರು ದೇವಾಲಯಕ್ಕೆ ತಲುಪಬಹುದು.

    ಈ ಪ್ರದೇಶ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗಕ್ಕೆ ಸೇರುತ್ತದೆ ಆದ್ದರಿಂದ ಸದರಿ ಇಲಾಖೆಯ ವಿಶ್ರಾಂತಿ ಗೃಹ ಮತ್ತು ಡೇರೆ ವ್ಯವಸ್ಥೆ ಪ್ರವಾಸಿಗಳಿಗಾಗಿ ವ್ಯವಸ್ಥೆ ಮಾಡಿದ್ದಾರೆ.

    ಇಲ್ಲಿಗೆ 7 ಕಿಲೋ ಮೀಟರ್ ಸಮೀಪದಲ್ಲೇ ಅತ್ಯುತ್ತಮವಾದ ಊಟ-ವಸತಿಗೆ ಹೆಸರಾದ ಹೊಸ ಹೋಮ್ ಸ್ಟೇ #ಗುಬ್ಬಿಕಂಠ_ಹೋಮ್ ಸ್ಟೇ ಇದೆ ಅಲ್ಲಿ ಜೈನರ ಊಟ ಉಪಹಾರ ವ್ಯವಸ್ಥೆ ಇದೆ ಅಲ್ಲಿನ ಸಂಪರ್ಕದ ಲಿಂಕ್ ಕಾಮೆಂಟಲ್ಲಿದೆ ನೋಡಿ.

    ಇಲ್ಲಿಂದ ಭಟ್ಕಳ ಕೇವಲ 66 ಕಿಲೋ ಮೀಟರ್.

   ಈ ಪ್ರದೇಶ ವೈಲ್ಡ್ ಲೈಫ್ ಪಾರೆಸ್ಟ್ ವ್ಯಾಪ್ತಿಯಲ್ಲಿದೆ, ಮುಪ್ಪಾನೆ ವನ್ಯಜೀವಿ ಅಭಯಾರಣ್ಯದ ವ್ಯಾಪ್ತಿ 431 ಚದರ ಕಿಲೋಮೀಟರ್ ಆಗಿದೆ.

    ಇಲ್ಲಿನ ಈ ಪರಿಸರದಲ್ಲಿನ ಬೋಟ್ ಪ್ರಯಾಣ ವಿಶೇಷ ಆಗಿದೆ.

    ಇಲ್ಲಿಗೆ ಬರುವ ಪ್ರವಾಸಿಗರು ಪರಿಸರ ಕಾಳಜಿವಹಿಸಬೇಕು.

Comments

Popular posts from this blog

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...