Skip to main content

3443. ಮುಪ್ಪಾನೆ

#ಮುಪ್ಪಾನೆ

#ಕೈ_ಬೀಸಿ_ಕರೆಯುತ್ತಿದೆ_ಅಭಯಾರಣ್ಯದ_ಮಧ್ಯದ_ಶರಾವತಿ_ಹಿನ್ನೀರ_ಲಾಂಚ್_ಪ್ರಯಾಣಕ್ಕೆ 

#ಸಿಗಂದೂರು_ಸೇತುವೆ_ನಂತರ_ನಿಂತ_ಲಾಂಚ್_ಅನುಭವ

#ಆದರೆ_ಶರಾವತಿ_ನದಿಯ_ಇನ್ನೊಂದು_ಭಾಗವಾದ_ಮುಪ್ಪಾನೆಗೆ_ಬನ್ನಿ

#ಅಲ್ಲಿ_ಅಭಯಾರಣ್ಯದ_ಮಧ್ಯ_ಲಾಂಚ್_ಪ್ರಯಾಣ_ಮಾಡಬಹುದು

#ಇಲ್ಲಿ_ಅರಣ್ಯ_ಇಲಾಖೆ_ವಿಶ್ರಾಂತಿಗೃಹ_ಡೇರೆ_ವ್ಯವಸ್ಥೆ_ಇದೆ

#ಸಮೀಪದಲ್ಲೇ_ಗುಬ್ಬಿಕಂಠ_ಹೋಮ್_ಸ್ಟೇ_ಇದೆ.


#Sharavathiriver #Backwater #Boating #Homestay #Ecotourism #Wildlife #Jogfalls #Sagar #Shivamogga.

   ಸಿಗಂದೂರು ದೇವಾಲಯಕ್ಕೆ ಬರುವ ಭಕ್ತರು ಮತ್ತು ಪ್ರವಾಸಿಗರಿಗೆ ಈಗ ಅಲ್ಲಿಗೆ ಸೇತುವೆ ನಿರ್ಮಾಣ ಆಗಿ ವಾಹನ ಸಂಚಾರ ಸುಗಮವಾಗಿದೆ.

    ಸ್ಥಳೀಯರ ಬಹು ದಶಕದ ಕನಸು ನನಸಾಗಿದೆ ಇದರಿಂದ ಇಲ್ಲಿನ ಲಾಂಚ್ ಸೇವೆ ಸ್ಥಗಿತವಾಗಿದೆ.

    ಆದರೆ ಬಹುತೇಕ ಪ್ರವಾಸಿಗರು ಶರಾವತಿ ನದಿ ಲಾಂಚ್ ಮೂಲಕ ದಾಟುವ ನೆನಪುಗಳನ್ನು ಮರೆತಿಲ್ಲ.

   ಲಾಂಚ್ ಮೂಲಕ ನದಿ ದಾಟುವ ಅನುಭವ ಪ್ರವಾಸಿಗಳಿಗೆ ಅವರ ಕುಟುಂಬಗಳಿಗೆ ಥ್ರಿಲ್ ನೀಡುತ್ತಿತ್ತು.

    ಈಗ ತುಮರಿ ಸೇತುವೆ ನಿರ್ಮಾಣವಾಗಿ ಲಾಂಚ್ ಪ್ರಯಾಣ ನಿಂತಿದೆ ಎಂದು ಚಿಂತಿಸಬೇಕಾಗಿಲ್ಲ ಇದೇ ಶರಾವತಿ ನದಿಯ ಇನ್ನೊಂದು ಭಾಗವಾದ #ಮುಪ್ಪಾನೆ ಎಂಬಲ್ಲಿ ಇದೇ ರೀತಿಯ ಲಾಂಚ್ ಸಂಚರಿಸುತ್ತಿದೆ.

   ಜೋಗ್ ಫಾಲ್ಸ್ ನಿಂದ ಕಾರ್ಗಲ್ ಮತ್ತು ಭಟ್ಕಳ ಮಾಗ೯ದಲ್ಲಿ 14 ಕಿಲೋ ಮೀಟರ್ ಸಾಗಿ ಎಡಕ್ಕೆ ತಿರುಗಿ 3 ಕಿಲೋ ಮೀಟರ್ ದೂರದಲ್ಲಿದೆ ಮುಪ್ಪಾನೆ.

    ಇಲ್ಲಿಂದ ಲಾಂಚ್ ನಲ್ಲಿ ಶರಾವತಿ ಹಿನ್ನೀರು ದಾಟಿ ಅಲ್ಲಿಂದ ರಸ್ತೆ ಮಾರ್ಗವಾಗಿ ಸಿಗಂದೂರು ದೇವಾಲಯಕ್ಕೆ ತಲುಪಬಹುದು.

    ಈ ಪ್ರದೇಶ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗಕ್ಕೆ ಸೇರುತ್ತದೆ ಆದ್ದರಿಂದ ಸದರಿ ಇಲಾಖೆಯ ವಿಶ್ರಾಂತಿ ಗೃಹ ಮತ್ತು ಡೇರೆ ವ್ಯವಸ್ಥೆ ಪ್ರವಾಸಿಗಳಿಗಾಗಿ ವ್ಯವಸ್ಥೆ ಮಾಡಿದ್ದಾರೆ.

    ಇಲ್ಲಿಗೆ 7 ಕಿಲೋ ಮೀಟರ್ ಸಮೀಪದಲ್ಲೇ ಅತ್ಯುತ್ತಮವಾದ ಊಟ-ವಸತಿಗೆ ಹೆಸರಾದ ಹೊಸ ಹೋಮ್ ಸ್ಟೇ #ಗುಬ್ಬಿಕಂಠ_ಹೋಮ್ ಸ್ಟೇ ಇದೆ ಅಲ್ಲಿ ಜೈನರ ಊಟ ಉಪಹಾರ ವ್ಯವಸ್ಥೆ ಇದೆ ಅಲ್ಲಿನ ಸಂಪರ್ಕದ ಲಿಂಕ್ ಕಾಮೆಂಟಲ್ಲಿದೆ ನೋಡಿ.

    ಇಲ್ಲಿಂದ ಭಟ್ಕಳ ಕೇವಲ 66 ಕಿಲೋ ಮೀಟರ್.

   ಈ ಪ್ರದೇಶ ವೈಲ್ಡ್ ಲೈಫ್ ಪಾರೆಸ್ಟ್ ವ್ಯಾಪ್ತಿಯಲ್ಲಿದೆ, ಮುಪ್ಪಾನೆ ವನ್ಯಜೀವಿ ಅಭಯಾರಣ್ಯದ ವ್ಯಾಪ್ತಿ 431 ಚದರ ಕಿಲೋಮೀಟರ್ ಆಗಿದೆ.

    ಇಲ್ಲಿನ ಈ ಪರಿಸರದಲ್ಲಿನ ಬೋಟ್ ಪ್ರಯಾಣ ವಿಶೇಷ ಆಗಿದೆ.

    ಇಲ್ಲಿಗೆ ಬರುವ ಪ್ರವಾಸಿಗರು ಪರಿಸರ ಕಾಳಜಿವಹಿಸಬೇಕು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...