Skip to main content

3438. ಕಸ್ತೂರಿ ಶಂಕರ್

#ಪ್ರಖ್ಯಾತ_ಗಾಯಕಿ_ಕಸ್ತೂರಿಶಂಕರ್.

#ಹನ್ನೊಂದು_ವರ್ಷದ_ಹಿಂದೆ_ನಮ್ಮ_ಅತಿಥಿ

#ಇವರು_ಹಾಡಿದ_ಬಿಳಿಹೆಂಡ್ತಿ_ಸಿನಿಮಾದ_ರಂಗೇನ_ಹಳ್ಳಿಯಾಗೆ_ನನಗೆ_ಇಷ್ಟದ_ಹಾಡು.



#Kannadacinema #Singer #Kasturishankar #DrRajkunar #Hombujalodge #Anandapuram

   ದಿನಾಂಕ 1 - ಸೆಪ್ಟೆಂಬರ್-2014 ರಂದು ಅಂದರೆ 11 ವರ್ಷದ ಹಿಂದೆ ಅವರ ಪತಿ ಶಂಕರ್ ಜೊತೆ ನಮ್ಮ ಅತಿಥಿಗಳಾಗಿದ್ದರು.

   ನಮ್ಮೂರಿನ ಪಟೇಲರಾಗಿದ್ದ ಶಿವಗಂಗೆ ಶಾಂತಪ್ಪ ಗೌಡರ ಸಂಬಂಧಿಗಳು ಇವರು, ಶಿವಗಂಗೆ ಕುಟುಂಬಕ್ಕೆ ಸಂಬಂಧ ಪಟ್ಟ ಧಾರ್ಮಿಕ ಕಾರ್ಯಕ್ರಮಕ್ಕೆ ಭಾಗವಹಿಸಲು ಬಂದಿದ್ದರು.

   ಕಸ್ತೂರಿ ಶಂಕರ್ ಕನ್ನಡದ ಪ್ರಮುಖ ಗಾಯಕಿಯರಲ್ಲಿ ಒಬ್ಬರು, ಕನ್ನಡ ನೆಲದ ಪ್ರತಿಭೆಗಳಾದ ಬಿ.ಕೆ.ಸುಮಿತ್ರ, ಬೆಂಗಳೂರು ಲತಾ ನಂತರ ಬಂದ ಕನ್ನಡದ ಗಾಯಕಿ ಕಸ್ತೂರಿ ಶಂಕರ್.

   ಬೆಟ್ಟದ ಗೌರಿ ಚಿತ್ರದಿಂದ ಪರಿಚಯವಾದರು. ಭಾಗ್ಯಜ್ಯೋತಿ ಚಿತ್ರದ "ಗುಡಿ ಸೇರದ ಮುಡೆಯೇರದ" ಹಾಡು ಇವರಿಗೆ ಜನಪ್ರಿಯತೆಯನ್ನು ತಂದಿತು.

  ಶಾಸ್ತ್ರೀಯ ಸಂಗೀತ, ವಚನ ಸಂಗೀತ ಮತ್ತು ಸುಗಮ ಸಂಗೀತ ಕ್ಷೇತ್ರದಲ್ಲಿ ಇವರು ಕೆಲಸ ಮಾಡಿದ್ದಾರೆ ಇವರು ಬೆಂಗಳೂರಿನಲ್ಲಿ "ನಮನ"ದಲ್ಲಿ ವಾಸವಾಗಿದ್ದಾರೆ.

  ಕನ್ನಡದ ಜನಪ್ರಿಯ ಗಾಯಕಿ ಕಸ್ತೂರಿ ಶಂಕರ್, 1950 -ನವೆಂಬರ್ -1ರಂದು ಮೈಸೂರಿನಲ್ಲಿ ಜಿ.ಸಿ. ಶಂಕರಪ್ಪ, ತಾಯಿ ಗಿರಿಜದಂಪತಿಗಳ ಪ್ರೀತಿಯ ಪುತ್ರಿಯಾಗಿ ಜನಿಸಿದರು.

    ತಂದೆ ಸ್ವಾತಂತ್ರ್ಯ ಹೋರಾಟಗಾರ ಉತ್ತಮ ಬರಹಗಾರರೂ ಅಪ್ಪಟ ಗಾಂಧಿವಾದಿಯೂ ಆಗಿದ್ದರು.

 'ಕಸ್ತುರ್ ಬಾ ಗಾಂಧಿ 'ಯವರ ನೆನಪಿನಲ್ಲಿ ಮಗಳಿಗೆ ಕಸ್ತೂರಿ ಎಂದು ಹೆಸರಿಟ್ಟರು.

     ಕಸ್ತೂರಿಯವರು ಬಾಲ್ಯದಲ್ಲೇ ತಂದೆಯವರು ರಚಿಸಿದ ಭಕ್ತಿಗೀತೆಗಳು, ದಾಸರ ಕೀರ್ತನೆಗಳನ್ನು ಸ್ಪಷ್ಟವಾಗಿ ಬಾಯ್ತುಂಬಾ ಮಧುರವಾಗಿ ಹಾಡುತ್ತಿದ್ದರು. 

    ರಾಷ್ಟ್ರಕವಿ ಡಾ. ಜಿ.ಎಸ್.ಎಸ್. ರಚಿತ ಕವಿತೆಯ ಸಾಲುಗಳು ಕಸ್ತೂರಿ ಶಂಕರ್ ರವರ ಮಧುರ ಧ್ವನಿಯಲ್ಲಿ ಬಾನಿನಿಂದ ಉದುರುವ ಹನಿಗಳಂತೆ ಭಾಸವಾಗುತ್ತವೆ.

   'ಆವಾಹನೆ' ಎಂಬ ಸುಂದರ ಕವಿತೆಯ ಸಾಲುಗಳನ್ನು ಕಸ್ತೂರಿ ಶಂಕರ್ ಹಾಡುವಾಗ ತಮ್ಮ ಭಾವನೆಗಳನ್ನು ಪದಪುಂಜದಲ್ಲಿ ತುಂಬಿ ರಸವನ್ನು ಹರಿಸುತ್ತಾ ಸಾಗುತ್ತಾರೆ.

ನವೋದಯದ ಕಿರಣ ಲೀಲೆ ಕನ್ನಡದೀ ನೆಲದ ಮೇಲೆ ಶುಭೋದಯವ ತೆರೆದಿದೆ - ಚಿಲುಮೆ ಚಿಮ್ಮುವುವೆದೆಗಳಲ್ಲಿ -ಶೃತಿ ಸುಖ ನಿನದೆ ಈ ಕಂಗಳೇನೋ ನನ್ನವು, ಗೀತೆಗಳು, ಕಸ್ತೂರಿ ಶಂಕರ್ ರವರ ಮರೆಯಲಾರದ ಹಾಡುಗಳು.

 ಅವರಿಗೆ ಕನ್ನಡ ಸುಗಮ ಸಂಗೀತದ ಬಗ್ಗೆ ಒಲವು ಮೂಡಿದ್ದು, ಕಾಳಿಂಗರಾಯರ ಗೀತೆಗಳಿಂದ ಆದರೆ ಅನಂತ ಸ್ವಾಮಿಯವರು ಕನ್ನಡದಲ್ಲಿ 'ಸುಗಮ ಸಂಗೀತ' ಹಾಡಲು ಪ್ರೇರಣೆಯಾದರು.

 ಕೆಳಗಿನ ಹಾಡುಗಳು ಕಸ್ತೂರಿ ಶಂಕರ್ ರವರ ಚಿತ್ರಗೀತೆಗಳ ಹಾಡುಗಾರಿಕೆಯ ಜೀವನದ ಯಶಸ್ಸಿನ ಹಾದಿಯನ್ನು ಸುಗಮಗೊಳಿಸಿದವು.

ರಂಗೇನ ಹಳ್ಳಿ'ಯಾಗೆ
ಬಿಳಿ ಹೆಂಡ್ತಿ ಚಿತ್ರದ ಯಾವ ತಾಯಿಯು ಹಡೆದ ಮಗಳಾದರೇನು,
ಓ ದ್ಯಾವ್ರೆ
ಡಾ. ರಾಜ್ ಕುಮಾರ್ ಜೊತೆ ಹಾಡಿದ ಸೂರ್ಯನ ಕಾಂತಿಗೆ ಸೂರ್ಯನೇ ಸಾಟಿ,
ಇದು ರಾಮ ಮಂದಿರ ನೀ ರಾಮ ಚಂದಿರ,
ಭಾಗ್ಯ ಜ್ಯೋತಿ ಚಿತ್ರದ 'ಗುಡಿಯೇರದ ಮುಡಿ ಸೇರದ ಹೂವು', ಗೀತೆಗಳು ಅವಿಸ್ಮರಣೀಯ.

Comments

Popular posts from this blog

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...