Skip to main content

3457. ಜಯದೇವಪ್ಪ ಜಿನಕೇರಿ

#ಜಯದೇವಪ್ಪ_ಜಿನಕೇರಿ

#ಐದನೇ_ವರ್ಷದ_ಸ್ಮರಣೆಯಲ್ಲಿ

#ನನ್ನ_ಇತಿಹಾಸದ_ಆಸಕ್ತಿಗೆ_ಪ್ರೇರಕರು.

#ಅವರ_ಒತ್ತಾಯ_ಮತ್ತು_ಮಾರ್ಗದರ್ಶನವೇ

#ನನಗೆ_ಆನಂದಪುರಂ_ಚಂಪಕಸರಸ್ಸು_ಮತ್ತು_ಹೊಸಗುಂದದ_ಬಗ್ಗೆ_ಆಸಕ್ತಿ_ತಾಳಲು_ಕಾರಣವಾಯಿತು.

#ಇದೇ_ಪ್ರೇರಣೆ_ಚಂಪಕರಾಣಿ_ಕಾದಂಬರಿ_ಬರೆಯಲು_ಚಂಪಕಸರಸ್ಸು_ಅಭಿವೃದ್ದಿ_ಕೆಲಸಕ್ಕೆ_ಮತ್ತು

#ಹೊಸಗುಂದದ_ಕಲ್ಲಿನಾಥೇಶ್ವರ_ದೇವಾಲಯಕ್ಕೆ_ಅಂಟಿಕೊಂಡು_ಬೆಳೆದ_ಬೃಹತ್_ಮರ_ತೆಗೆಯಲು_ಕಾರಣ_ಆಯಿತು.


#Historian #Hosagunda #Champakasarassu #Anandapuram #Jayadevappajinakeri

  ಜಯದೇವಪ್ಪ ಜೈನಕೇರಿ (82) ಅವರು ಲೇಖಕ, ಇತಿಹಾಸ ಸಂಶೋಧಕರಾಗಿ ಚಾಪು ಮೂಡಿಸಿದ್ದರು.

ವೈಚಾರಿಕ ಪ್ರಬಂಧ ಮಂಡನೆ, ದೇಗುಲಗಳ ಕುರಿತು ಬರಹ, ಉಪನ್ಯಾಸ, ಶರಣರು ಮತ್ತು ಶರಣ ಸಾಹಿತ್ಯದ ಕುರಿತು ಬರಹಗಳು, ಕೃತಿ ಪ್ರಕಟಿಣೆಯಲ್ಲಿ ತೊಡಗಿಸಿಕೊಂಡಿದ್ದರು.

   8- ಸೆಪ್ಟೆಂಬರ್-2020 ರಲ್ಲಿ ಇಹಲೋಕ ತ್ಯಜಿಸಿದರು ಇವರು ನನ್ನ ಜೀವನದಲ್ಲಿ ಬಹು ಮುಖ್ಯವಾಗಿ ಇತಿಹಾಸದ ಬಗ್ಗೆ ಆಸಕ್ತಿ ಮಾಡಲು ಕಾರಣರಾದವರು.

    ಇವರನ್ನ ಬೇಟಿ ಮಾಡಬೇಕು ಅಂದುಕೊಂಡಿದ್ದು ಲಾಕ್ ಡೌನ್ ಕಾರಣದಿಂದ ಸಾಧ್ಯವಾಗಲಿಲ್ಲ.

   1995-2000 ಇಸವಿ ಅವಧಿಯಲ್ಲಿ ನಾನು ಜಿಲ್ಲಾ ಪಂಚಾಯತ್ ಸದಸ್ಯನಾಗಿದ್ದಾಗ ಇವರ ಒಡನಾಟ ಹೆಚ್ಚು.

   ಕಾರಣ ಇವರು ಮತ್ತು ಇವರ ಜೊತೆ ಶಾಸ್ತ್ರೀಗಳು ನನಗೆ ಆನಂದಪುರದ ಇತಿಹಾಸದ ಬಗ್ಗೆ ಹೆಚ್ಚು ಮಾಹಿತಿ ನೀಡಿದವರು.

   ಶ್ರೀ ನಿರಂಜನ ಮುರುಘ ರಾಜೇಂದ್ರ ಸ್ವಾಮಿಗಳು ಪ್ರಕಟಿಸಿದ ಕೆಳದಿ ಸಮಗ್ರ ಅಧ್ಯಯನ ಗ್ರಂಥ ಮತ್ತು ಆನಂದಪುರದ ಮುರುಘಾ ಮಠದಲ್ಲಿ ಸ್ಥಾಪಿಸಿರುವ ಕೆಳದಿ ವಸ್ತುಸಂಗ್ರಹಾಲಯಕ್ಕೆ ಇವರ ವಿಶೇಷ ಶ್ರಮವಿದೆ.

  ಇವರು ನನಗೆ ವಹಿಸಿದ ಮಹತ್ವದ ಕೆಲಸ ಆನಂದಪುರ ಸಮೀಪದ ಹೊಸಗುಂದದ ಕಲ್ಲೇಶ್ವರ ದೇವಸ್ಥಾನಕ್ಕೆ ಅಂಟಿಕೊಂಡು ಆಕಾಶದೆತ್ತರಕ್ಕೆ ಬೆಳೆದ ನೀರೊಟ್ಟೆ ಮರ ತೆಗೆಸಿ ಈ ದೇವಸ್ಥಾನ ಉಳಿಸುವುದು.

   ಇದನ್ನು 1998ರಲ್ಲಿ ಅವರ ಅಭಿಲಾಷೆಯ೦ತೆ ಎಲ್ಲರ ಸಹಕಾರದಲ್ಲಿ ನಾನು ನೇತೃತ್ವ ವಹಿಸಿ ಪೂರೈಸಿದ್ದೆ ಇದೊಂದು ದಾಖಲೆ ಕೆಲಸ ಅಂತ ಅವರು ನನಗೆ ಅನೇಕ ಬಾರಿ ಪ್ರಶಂಸಿದ್ದರು.

 ಅವರ  ಇನ್ನೊಂದು ಅಭಿಲಾಷೆ ಆನಂದಪುರಂನಲ್ಲಿ ಕೆಳದಿ ರಾಜ ವೆಂಕಟಪ್ಪ ನಾಯಕ  ರಾಣಿ ಚಂಪಕಳ ಸ್ಮರಣಾಥ೯ ನಿರ್ಮಿಸಿರುವ ಚಂಪಕ ಸರಸ್ಸು ಪ್ರವಾಸಿ ಕೇಂದ್ರವಾಗಿಸುವುದು.

     2020ರ ಸೆಪ್ಟೆಂಬರ್ ನಲ್ಲಿ ಬಿಡುಗಡೆ ಆದ ನನ್ನ ಕಾದಂಬರಿ "ಬೆಸ್ತರ ರಾಣಿ ಚಂಪಕಾ" ಅವರಿಗೆ ತಲುಪಿಸುವ ಮೊದಲೇ ಅವರು ಇಹ ಲೋಕ ತ್ಯಜಿಸಿದ್ದರು.

Comments

Popular posts from this blog

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...