Skip to main content

3457. ಜಯದೇವಪ್ಪ ಜಿನಕೇರಿ

#ಜಯದೇವಪ್ಪ_ಜಿನಕೇರಿ

#ಐದನೇ_ವರ್ಷದ_ಸ್ಮರಣೆಯಲ್ಲಿ

#ನನ್ನ_ಇತಿಹಾಸದ_ಆಸಕ್ತಿಗೆ_ಪ್ರೇರಕರು.

#ಅವರ_ಒತ್ತಾಯ_ಮತ್ತು_ಮಾರ್ಗದರ್ಶನವೇ

#ನನಗೆ_ಆನಂದಪುರಂ_ಚಂಪಕಸರಸ್ಸು_ಮತ್ತು_ಹೊಸಗುಂದದ_ಬಗ್ಗೆ_ಆಸಕ್ತಿ_ತಾಳಲು_ಕಾರಣವಾಯಿತು.

#ಇದೇ_ಪ್ರೇರಣೆ_ಚಂಪಕರಾಣಿ_ಕಾದಂಬರಿ_ಬರೆಯಲು_ಚಂಪಕಸರಸ್ಸು_ಅಭಿವೃದ್ದಿ_ಕೆಲಸಕ್ಕೆ_ಮತ್ತು

#ಹೊಸಗುಂದದ_ಕಲ್ಲಿನಾಥೇಶ್ವರ_ದೇವಾಲಯಕ್ಕೆ_ಅಂಟಿಕೊಂಡು_ಬೆಳೆದ_ಬೃಹತ್_ಮರ_ತೆಗೆಯಲು_ಕಾರಣ_ಆಯಿತು.


#Historian #Hosagunda #Champakasarassu #Anandapuram #Jayadevappajinakeri

  ಜಯದೇವಪ್ಪ ಜೈನಕೇರಿ (82) ಅವರು ಲೇಖಕ, ಇತಿಹಾಸ ಸಂಶೋಧಕರಾಗಿ ಚಾಪು ಮೂಡಿಸಿದ್ದರು.

ವೈಚಾರಿಕ ಪ್ರಬಂಧ ಮಂಡನೆ, ದೇಗುಲಗಳ ಕುರಿತು ಬರಹ, ಉಪನ್ಯಾಸ, ಶರಣರು ಮತ್ತು ಶರಣ ಸಾಹಿತ್ಯದ ಕುರಿತು ಬರಹಗಳು, ಕೃತಿ ಪ್ರಕಟಿಣೆಯಲ್ಲಿ ತೊಡಗಿಸಿಕೊಂಡಿದ್ದರು.

   8- ಸೆಪ್ಟೆಂಬರ್-2020 ರಲ್ಲಿ ಇಹಲೋಕ ತ್ಯಜಿಸಿದರು ಇವರು ನನ್ನ ಜೀವನದಲ್ಲಿ ಬಹು ಮುಖ್ಯವಾಗಿ ಇತಿಹಾಸದ ಬಗ್ಗೆ ಆಸಕ್ತಿ ಮಾಡಲು ಕಾರಣರಾದವರು.

    ಇವರನ್ನ ಬೇಟಿ ಮಾಡಬೇಕು ಅಂದುಕೊಂಡಿದ್ದು ಲಾಕ್ ಡೌನ್ ಕಾರಣದಿಂದ ಸಾಧ್ಯವಾಗಲಿಲ್ಲ.

   1995-2000 ಇಸವಿ ಅವಧಿಯಲ್ಲಿ ನಾನು ಜಿಲ್ಲಾ ಪಂಚಾಯತ್ ಸದಸ್ಯನಾಗಿದ್ದಾಗ ಇವರ ಒಡನಾಟ ಹೆಚ್ಚು.

   ಕಾರಣ ಇವರು ಮತ್ತು ಇವರ ಜೊತೆ ಶಾಸ್ತ್ರೀಗಳು ನನಗೆ ಆನಂದಪುರದ ಇತಿಹಾಸದ ಬಗ್ಗೆ ಹೆಚ್ಚು ಮಾಹಿತಿ ನೀಡಿದವರು.

   ಶ್ರೀ ನಿರಂಜನ ಮುರುಘ ರಾಜೇಂದ್ರ ಸ್ವಾಮಿಗಳು ಪ್ರಕಟಿಸಿದ ಕೆಳದಿ ಸಮಗ್ರ ಅಧ್ಯಯನ ಗ್ರಂಥ ಮತ್ತು ಆನಂದಪುರದ ಮುರುಘಾ ಮಠದಲ್ಲಿ ಸ್ಥಾಪಿಸಿರುವ ಕೆಳದಿ ವಸ್ತುಸಂಗ್ರಹಾಲಯಕ್ಕೆ ಇವರ ವಿಶೇಷ ಶ್ರಮವಿದೆ.

  ಇವರು ನನಗೆ ವಹಿಸಿದ ಮಹತ್ವದ ಕೆಲಸ ಆನಂದಪುರ ಸಮೀಪದ ಹೊಸಗುಂದದ ಕಲ್ಲೇಶ್ವರ ದೇವಸ್ಥಾನಕ್ಕೆ ಅಂಟಿಕೊಂಡು ಆಕಾಶದೆತ್ತರಕ್ಕೆ ಬೆಳೆದ ನೀರೊಟ್ಟೆ ಮರ ತೆಗೆಸಿ ಈ ದೇವಸ್ಥಾನ ಉಳಿಸುವುದು.

   ಇದನ್ನು 1998ರಲ್ಲಿ ಅವರ ಅಭಿಲಾಷೆಯ೦ತೆ ಎಲ್ಲರ ಸಹಕಾರದಲ್ಲಿ ನಾನು ನೇತೃತ್ವ ವಹಿಸಿ ಪೂರೈಸಿದ್ದೆ ಇದೊಂದು ದಾಖಲೆ ಕೆಲಸ ಅಂತ ಅವರು ನನಗೆ ಅನೇಕ ಬಾರಿ ಪ್ರಶಂಸಿದ್ದರು.

 ಅವರ  ಇನ್ನೊಂದು ಅಭಿಲಾಷೆ ಆನಂದಪುರಂನಲ್ಲಿ ಕೆಳದಿ ರಾಜ ವೆಂಕಟಪ್ಪ ನಾಯಕ  ರಾಣಿ ಚಂಪಕಳ ಸ್ಮರಣಾಥ೯ ನಿರ್ಮಿಸಿರುವ ಚಂಪಕ ಸರಸ್ಸು ಪ್ರವಾಸಿ ಕೇಂದ್ರವಾಗಿಸುವುದು.

     2020ರ ಸೆಪ್ಟೆಂಬರ್ ನಲ್ಲಿ ಬಿಡುಗಡೆ ಆದ ನನ್ನ ಕಾದಂಬರಿ "ಬೆಸ್ತರ ರಾಣಿ ಚಂಪಕಾ" ಅವರಿಗೆ ತಲುಪಿಸುವ ಮೊದಲೇ ಅವರು ಇಹ ಲೋಕ ತ್ಯಜಿಸಿದ್ದರು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...