Skip to main content

3462. ಅನ್ನಭಾಗ್ಯ ಅಕ್ಕಿ ವರ್ಸೆಸ್ ಸೋನಾಮಸೂರಿ ಅಕ್ಕಿ

#ಅನ್ನಬಾಗ್ಯ_ಅಕ್ಕಿ_ವರ್ಸಸ್_ಸೋನಾಮಸೂರಿ_ಅಕ್ಕಿ

#ವಿಬಿನ್ನ_ಮನಸ್ಥಿತಿಯ_ಅಂತಸ್ಥಿನ_ಸ್ಥಾನಮಾನ

#ಅನ್ನಭಾಗ್ಯದ_ಅಕ್ಕಿಯಿಂದ_ಜನ_ಸೋಮಾರಿಗಳಾಗುತ್ತಾರೆ_ಎನ್ನುವವರೂ_ಇದ್ದಾರೆ

#ಸೊಸೈಟಿ_ಅಕ್ಕಿ_ತಿನ್ನುವುದಿಲ್ಲ_ಎನ್ನುವುದು_ದೊಡ್ಡಸ್ಥಿಕೆ.


#Rice #Sonamasoori #Annabhagya 

   ನುಚ್ಚಕ್ಕಿ - ನೆಲ್ಲಕ್ಕಿ - ಮುಗ್ಗುಲಕ್ಕಿಗಳಿಗೆಲ್ಲ ಒಂದು ಕಾಲದಲ್ಲಿ ಬೇದವಿರಲಿಲ್ಲ ಅಂತಹ ಎಲ್ಲಾ ಅನ್ನ ತಿಂದೇ  ದೊಡ್ಡವರಾಗಿದ್ದು ನಾನು ಮರೆತಿಲ್ಲ.

#ಅನ್ನ_ದೇವರ_ಮುಂದೆ_ಅನ್ಯ_ದೇವರಿಲ್ಲ ಎಂಬ ಸರ್ವಜ್ಞ ವಚನ ಜನ ಮನದಲ್ಲಿತ್ತು.

   ಈಗ ಮೇಲಿನ ಅಕ್ಕಿ ಬಿಡಿ, ಸೊಸೈಟಿ ಅಕ್ಕಿ ಎಂಬ ಅನ್ವರ್ಥ ನಾಮದ ಅನ್ನ ಭಾಗ್ಯದ ಅಕ್ಕಿ ಅಂದರೆ ಮೂಗು ಮುರಿಯುವ ಜನರ ಕಾಲ ಇದಾಗಿದೆ.

   ಅನ್ನಭಾಗ್ಯದಿಂದ ಸೋಮಾರಿಗಳು ಸೃಷ್ಟಿ ಆಗುತ್ತಾರೆ ಅಂತ ಒಬ್ಬ ಮಠದ ಸ್ವಾಮಿಯ ಹೇಳಿಕೆ ನೋಡಿದೆ ಆತ ಸರ್ಕಾರದಿಂದ ನೂರಾರು ಕೋಟಿ ರೂಪಾಯಿ ಪಡೆಯುವ  ಹೈಟೆಕ್ ಬಿಪಿಎಲ್ ಕಾರ್ಡ್ ದಾರ.

  ದಿನಕ್ಕೆ 150 ರೂಪಾಯಿಗಿಂತ ಕಡಿಮೆ ಆದಾಯದವರು ಬಡತನ ರೇಖೆಗಿಂತ ಕೆಳಗಿನವರೆಂಬ ಮಾನದಂಡದಲ್ಲಿ ಭಾರತದಲ್ಲಿ ಶೇಕಡಾ 12.4% ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಪಡಿತರ ನೀಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳಿದೆ ಇದಕ್ಕಾಗಿ ಆ ಕುಟುಂಬಗಳಿಗೆ ಬಿ.ಪಿ.ಎಲ್ ಕಾರ್ಡ್ ಗಳನ್ನು ವಿತರಿಸುತ್ತಾರೆ.

    #ಅನ್ನ_ಬಾಗ್ಯ ಯೋಜನೆ 15-6-2013ರಲ್ಲಿ ಜಾರಿಗೆ ತಂದಿದ್ದು ಸಿದ್ದರಾಮಯ್ಯನವರು,3 ಕ್ಕಿಂತ ಹೆಚ್ಚಿನ ಸದಸ್ಯರಿರುವ ಬಿಪಿಎಲ್ ಕುಟುಂಬಕ್ಕೆ ಮಾಸಿಕ 30 kg ಅಕ್ಕಿ ವಿತರಣೆ,ಅದು ಒಂದು ಕಿಲೋ ಅಕ್ಕಿಗೆ ಒಂದು ರೂಪಾಯಿಯಂತೆ.

   ಅದಕ್ಕೂ ಮೊದಲು ಒಂದು BPL ಕುಟುಂಬಕ್ಕೆ 4 kg ಅಕ್ಕಿ ಮತ್ತು 1ಕೆಜಿ ಗೋದಿ ಮಾತ್ರ ವಿತರಣೆ ಆಗುತ್ತಿತ್ತು.

  ನಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ಹೆಣ್ಣು ಮಕ್ಕಳು ಪ್ರತಿ ತಿಂಗಳು ಅವರಿಗೆ ಸಿಗುವ ರೇಷನ್ ಅಕ್ಕಿ ಮಾರಾಟ ಮಾಡಿ ಸೋನಾ ಮಸೂರಿ ಸ್ಟೀಮ್ ಅಕ್ಕಿ ಖರೀದಿಸುತ್ತಾರೆ.

   ಅದೂ ಕಿಲೋಗೆ 10 ರೂ ನಂತೆ ಮಾರಾಟ ಮಾಡಿ 40 ರೂ ನ ಸೋನಾ ಮಸ್ಸೂರಿ ಅಕ್ಕಿ ಖರೀದಿಸುತ್ತಾರಂತೆ !?. . .

  ಸಕಾ೯ರ ಪಡಿತರ ಅಕ್ಕಿಯಾಗಿ ನೀಡಲು ಅಕ್ಕಿಯನ್ನು 30 ರೂ ನಂತೆ ಖರೀದಿಸಿ ಅದನ್ನು ಈ ಯೋಜನೆಗೆ ಹೆಚ್ಚು ಕಡಿಮೆ ಉಚಿತವಾಗಿ, ಸಹಾಯ ಧನದಿಂದ ನೀಡುವ ಈ ಯೋಜನೆ ದಾರಿ ತಪ್ಪಿತಾ? ಅಥವ ಅಕ್ಕಿ ಗುಣಮಟ್ಟ ಇಲ್ಲವಾ? ಎಂಬ ಪ್ರಶ್ನೆ ಮೂಡುತ್ತದೆ.

     ಪಡಿತರ ಅಕ್ಕಿ ಗುಣ ಮಟ್ಟ ಸರಿ ಇದೆ ಆದರೆ ಎಲ್ಲರಿಗೂ ಈಗ ಅಂತಸ್ತಿನ ಘನತೆ ಎಂಬ ಭ್ರಮೆಯಲ್ಲಿದ್ದಾರೆ.

   ನಾನು ಈ ಅಕ್ಕಿ ಅವರಿಂದ ತರಿಸಿ ನೋಡಿದೆ ಅಕ್ಕಿ ಸ್ವಚ್ಚವಾಗಿತ್ತು, ಅನ್ನ ಮಾಡಿ ಊಟ ಮಾಡಿದೆ ನಂಬರ್ ಒನ್ - ಸ್ವಲ್ಪ ಗಾತ್ರ ದೊಡ್ಡದು ಅಷ್ಟೆ.

   ಯಾಕೆ ಸೊಸೈಟಿ ಅಕ್ಕಿ ನೀವು ಬಳಸುವುದಿಲ್ಲ? ಅಂತ ಕೇಳಿದರೆ ಅವರ ಉತ್ತರ.....
 "ನಾವು ಸೊಸೈಟಿ ಅಕ್ಕಿ ಇಡ್ಲಿ, ದೋಸೆಗೆ ಮಾತ್ರ ಬಳಸುತ್ತೇವೆ", "ಸೊಸೈಟಿ ಅಕ್ಕಿ ಊಟ ಮಾಡಿದರೆ ಹೊಟ್ಟೆ ನೋವು ಬರುತ್ತೆ", 
"ನನ್ನ ಮಗ ಸೊಸೈಟಿ ಅಕ್ಕಿ ಅನ್ನ ತಿನ್ನುವುದಿಲ್ಲ" 
ಹೀಗೆ ನೂರಾರು ಕಾರಣಗಳು.

   ಇದರ ಜೊತೆ ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಇದೆ ಎಂಬ ಸುದ್ದಿ ಪ್ರಚಾರದ ಅಪವಾದ ಬೇರೆ ಆದರೆ ಇದು ಪೌಷ್ಟಿಕಾಂಶದ ಮಿಶ್ರಣದ (Fortified Rice) ಅಕ್ಕಿ ಎಂಬುದು ವಾಸ್ತವ.

    ಈ ರೀತಿಯ ಅಪಪ್ರಚಾರಗಳು ಇತ್ಯಾದಿಗಳು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಸರ್ಕಾರ ನೀಡುವ ಉಚಿತ ಪಡಿತರ ವಿರೋಧಿಸುವ ಹೊಟ್ಟೆ ತುಂಬಿದವರ ಮನಸ್ಥಿತಿ ಆಗಿದೆ.

        ಅಂತವರು ಸರ್ಕಾರದ ಸಹಾಯ ಧನ ಇತ್ಯಾದಿಗೆ ವಿರೋಧಿಸದೆ ಪಡೆಯುತ್ತಾರೆ ಆದರೆ ಬಡವರ ಅನ್ನದ ತಟ್ಟಿಗೆ ಕಣ್ಣು ಹಾಕುತ್ತಿದ್ದಾರೆ.

    ಇವರ ತಾಳಕ್ಕೆ ತಕ್ಕಂತೆ ಅರ್ಹ ಫಲಾನುಭವಿಗಳಾದ ಬಿಪಿಲ್ ಕುಟುಂಬಗಳು ಕೂಡ ಪಡಿತರ  ಅಕ್ಕಿ ತಿನ್ನುವುದು ತಮ್ಮ ಅಂತಸ್ತಿಗೆ ತಕ್ಕದಲ್ಲ ಎಂಬಂತೆ ಮಾತಾಡುತ್ತಿರುವುದು ವಿಪರ್ಯಾಸ.

  ಇದು ಪಾಲ್ಸ್ ಪ್ರಿಸ್ಟೇಜ್ ನ ಒಂದು ರೂಪವೇ ಆಗಿದೆ, ಹಸಿದ ಹಸಿವಿನ ಹೊಟ್ಟೆಯ,ಬಡತನ ರೇಖೆ ಕೆಳಗಿನ (BPL) ಕುಟುಂಬಕ್ಕೆ ಈ ಅನ್ನ ಭಾಗ್ಯ ಯೋಜನೆ ಅಕ್ಕಿ ವರದಾನ ಆಗಿದೆ.

     ಎಲ್ಲಾ ಸರ್ಕಾರಗಳು ಬಡವರ ಕಲ್ಯಾಣದ ಕೆಲಸ ಮಾಡಲೇ ಬೇಕು ಅದನ್ನು ವಿರೋಧಿಸುವುದು ಕೆಟ್ಟ ಮನಸ್ಥಿತಿಯ ಪ್ರದಶ೯ನ ಆಗಿದೆ.

Comments

Popular posts from this blog

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...