Skip to main content

3466.ಉಪ್ಪಾಗೆ ತುಪ್ಪ ಸಸ್ಯ ಮೂಲದ ತುಪ್ಪ

#ಉಪ್ಪಾಗೆ_ತುಪ್ಪಾ

#ಯಾರಿಗೆಲ್ಲ_ಗೊತ್ತು.

#ಸಸ್ಯದಿಂದಲೂ_ತುಪ್ಪ

#ಇದು_ಪಶ್ಚಿಮಘಟ್ಟದಲ್ಲಿ_ಮಾತ್ರ

#ಪ್ರಾಣಿಜನ್ಯ_ತುಪ್ಪ_ಸಸ್ಯಜನ್ಯ_ತುಪ್ಪ_ಬೇರೆ

#ಉಪ್ಪಾಗೆ_ಹಣ್ಣಿನ_ಸಿಪ್ಪೆ_ಸಂಸ್ಕರಿಸಿ_ಮಂದಸಾರ_ಹುಳಿ_ಕೂಡ_ತಯಾರಿಸುತ್ತಾರೆ.
#Vegans #Uppagetuppa #Westernghat #Malenadu 

    ದೇಶಿ ವಸ್ತುಗಳನ್ನ ಮಾರಾಟ ಮಾಡುವ ಒಂದು ಗುಂಪಿನಲ್ಲಿ ನನ್ನ ಪೋಸ್ಟ್ ಹಾಕಿದ್ದೆ "ಉಪ್ಪಾಗೆ ತುಪ್ಪ ಸಿಗುತ್ತಾ"?... ಅಂತ.

 ಇದಕ್ಕೆ ಬಂದ ಕಾಮೆಂಟ್ ನೂರಾರು ಅದರಲ್ಲಿ ಬಂದ ಪ್ರಶ್ನೆಗಳು "ಇದೆಂತ ತುಪ್ಪಾ ? ಎಮ್ಮೆ ತುಪ್ಪಾನಾ? ದನದ ತುಪ್ಪಾನಾ?" ಅಂತ.

    ದೇಶಿ ತುಪ್ಪಾ ಮತ್ತು ಮಲೆನಾಡು ಗಿಡ್ದ ತುಪ್ಪಾ ಕೇಳಿದ್ದೇವೆ ಆದರೆ ಇದಾವುದು ಉಪ್ಪಾಗೆ ತುಪ್ಪ ಅಂತೆಲ್ಲ.
 
   ಪಶ್ಚಿಮ ಘಟ್ಟದಲ್ಲಿನ ಉಪ್ಪಾಗೆ ಮರದಲ್ಲಿನ ಹಣ್ಣಿನಲ್ಲಿರುವ ಬೀಜ ತೊಳೆದು ಒಣಸಿ ನಂತರ ಕಲ್ಲಿನಲ್ಲಿ ಕಡೆದು ನೀರಿನ ಜೊತೆ ಕುದಿಸಿದಾಗ ಬರುವ ಕೊಬ್ಬು ಶೇಖರಿಸಿ ಪುನಃ ಕುದಿಸಿ ಅವರಲ್ಲಿನ ನೀರಿನಂಶ ತೆಗೆದ ಮೇಲೆ ಉಳಿಯುವುದೇ ಉಪ್ಪಾಗೆ ತುಪ್ಪ.

  ಇದನ್ನು ಕಾಯಿ ಹೊಳಿಗೆ ಜೊತೆ ತಿಂದರೆ ಅದರ ಸ್ವಾದವೇ ಬೇರೆ.

   ಇದು ಶುದ್ಧ ಸಸ್ಯ ಮೂಲದ ತುಪ್ಪಾ  ಪ್ರಾಣಿ ಜನ್ಯದ ತುಪ್ಪಾ ಮಾತ್ರ ಸಾಮಾನ್ಯವಾಗಿ ಎಲ್ಲರಿಗೂ ಗೊತ್ತಿರುತ್ತದೆ ಆದರೆ ಸಸ್ಯ ಜನ್ಮದ ತುಪ್ಪ ಇದೆ ಅನ್ನುವುದು ಬಹುತೇಕರಿಗೆ ಗೊತ್ತೇ ಇಲ್ಲ.

   ಇದು ಮಾರುಕಟ್ಟೆಯಲ್ಲಿ ಸಿಗುವ ಮಾಹಿತಿ ಇಲ್ಲ ಆದರೆ ಪಾರಂಪರಿಕವಾಗಿ ಗೋವಾದಿಂದ ಕೇರಳದವರೆಗಿನ ಪಶ್ಚಿಮ ಘಟ್ಟ ವಾಸಿಗಳು ಸ್ವಂತಕ್ಕಾಗಿ ತಯಾರಿಸಿ ಬಳಸುವ ಅಭ್ಯಾಸವಿದೆ.

    ಇದು ಪ್ರಾಣಿಜನ್ಯ ಉತ್ಪನ್ನ ತಿನ್ನದ #Vegans ಗಳಿಗೆ ವರದಾನ ಆಗಿದೆ.

   ಉಪ್ಪಾಗೆ ಭಾರತದ ಮೂಲದ ಸಸ್ಯ ಇದು  ತಮಿಳುನಾಡಿನ ನೀಲಗಿರಿ, ಕೇರಳದ ತಿರುವಾಂಕೂರು, ಕರ್ನಾಟಕದ ಮಲೆನಾಡು ಪ್ರದೇಶಗಳಲ್ಲಿ ಹೇರಳವಾಗಿ ಬೆಳೆಯುತ್ತದೆ. 

   ಈ ಮರದ ೩೫ ಪ್ರಬೇಧಗಳು ಭಾರತದಲ್ಲಿದೆ,ಕರ್ನಾಟಕ ಮತ್ತು ಕೇರಳದ ಪಶ್ಚಿಮಘಟ್ಟದ ಕಾಡುಗಳಲ್ಲದೇ ಇಂಡೋನೇಷ್ಯಾ ಮತ್ತು ಆಫ್ರಿಕಾದಲ್ಲೂ ಇವು ಬೆಳೆಯುತ್ತವೆ.

   ಕರ್ನಾಟಕದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಯಥೇಚ್ಛವಾಗಿ ಬೆಳೆಯುತ್ತದೆ, ಪಶ್ಚಿಮಘಟ್ಟದ ಪ್ರದೇಶದಲ್ಲಿ 10 ಪ್ರಬೇಧಗಳು ಕಾಣಸಿಗುತ್ತದೆ.

   ಉತ್ತರ ಕನ್ನಡ ಜಿಲ್ಲೆಯ ಅರಣ್ಯಗಳಲ್ಲಿ ಉಪ್ಪಾಗೆ, ಮುರಗಲು, ಅರಿಸಿಣಗುರಗಿ, ಜಾಣಗೆ, ಕಾಡುಮುರಗಲು ಪ್ರಬೇಧಗಳು ಕಾಣಸಿಗುತ್ತವೆ.

   ನಿತ್ಯಹರಿದ್ವರ್ಣ ಮತ್ತು ಸೋಲಾ ಕಾಡುಗಳ ತಂಪು ಹಾಗೂ ತೇವಾಂಶಗಳಿರುವಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದು, ತಂಪಗಿನ ವಾತಾವರಣದಲ್ಲಿ ನೆಟ್ಟು ಬೆಳೆಸಬಹುದು.

  ಹಣ್ಣಿನ ಬೀಜವು ಕೊಬ್ಬಿನಂಶ ಹೊಂದಿದ್ದು ಇದರಿಂದ ತುಪ್ಪವನ್ನು ತೆಗೆಯಲಾಗುತ್ತದೆ. 

  ಇದರ ಬೀಜಗಳನ್ನು ಒಣಗಿಸಿ ಕುಟ್ಟಿ ಬೇಯಿಸಿದರೆ ಇದರ ಕೊಬ್ಬು ಖಾದ್ಯ ತೈಲವಾಗಿ ಲಭ್ಯ. 

  ಇದು ಹಳದಿ ಬಣ್ಣದಿಂದ ತುಪ್ಪದಂತೆ ಗಟ್ಟಿಯಾಗುವ ಗುಣವನ್ನು ಹೊಂದಿದ್ದು ತಿಂಡಿತಿನಿಸುಗಳ ತಯಾರಿಗೆ ಯೋಗ್ಯವಾಗಿದೆ. 

  ಮಲೆನಾಡಿನಲ್ಲಿ ಇದು ಉಪ್ಪಾಗೆ ತುಪ್ಪ ಎಂದು ಬಳಸಲ್ಪಡುತ್ತದೆ.

  ಈ ಹಣ್ಣಿನ ಒಣಸಿಪ್ಪೆ ಸಂಸ್ಕರಿಸಿ ಮಂದಸಾರ ತಯಾರಿಸುತ್ತಾರೆ ಇದು ಕೊಡಗು ಹಾಗೂ ಕೇರಳದಲ್ಲಿ ಹಂದಿಮಾಂಸದ ಮತ್ತು ಮೀನಿನ ಅಡುಗೆಗಳಿಗೆ ಹೆಚ್ಚು ಬಳಸುತ್ತಾರೆ ಇದಕ್ಕೆ #ಕಾಚುಪುಳಿ ಎಂದು ಹೆಸರಿದೆ

    ಕೊಡಗಿನಲ್ಲಿ ಕೃಷಿಕರು ಮಳೆಗಾಲದಲ್ಲಿ ಉಪ್ಪಾಗೆ ಹಣ್ಣನ್ನು ಸಂಗ್ರಹಿಸಿ ಒಣಗಿಸಿಡುತ್ತಾರೆ ಇದನ್ನು ಮಾಂಸಹಾರಕ್ಕೆ ಹುಳಿ ಪದಾರ್ಥವಾಗಿ ಬಳಸುತ್ತಾರೆ. ಕೆಲವು ಪದಾರ್ಥಗಳಿಗೆ ಉಪ್ಪಾಗೆಯ ಒಣಗಿಸಿದ ಸಿಪ್ಪೆಯನ್ನು ಉಪಯೋಗಿಸಿದರೆ ಹಣ್ಣಿನ ನೀರನ್ನು ಇಂಗಿಸಿ ತಯಾರಿಸಿದ ಹುಳಿನೀರು ಕೂಡ ಹೆಚ್ಚಾಗಿ ಬಳಸುತ್ತಾರೆ. 

  ಒಂದು ಕಿಲೋ ಒಣಸಿಪ್ಪೆ ಆಗಲು ಸುಮಾರು ಮೂರು ಕಿಲೋ ಹಣ್ಣುಗಳು ಬೇಕಾಗುತ್ತವೆ.

    ಸರಿಯಾಗಿ ಒಣಗಿದ ಸಿಪ್ಪೆಯನ್ನು ಎರಡು ವರ್ಷಗಳ ಕಾಲ ಕೆಡದೇ ಇಡಬಹುದು. 

   ಉಪ್ಪು ಸೇರಿಸಿ ಗಾಳಿಯಾಡದಂತೆ ಕಟ್ಟಿಟ್ಟರೆ ಇನ್ನೂ ಹೆಚ್ಚಿನ ಕಾಲ ಇಡಬಹುದು.

Comments

Popular posts from this blog

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...