Skip to main content

3470. ಚಂದ್ರನ ಮೇಲೆ ಇಳಿದ ಮೊದಲ ಮಾನವ

#ಚಂದ್ರನ_ಮೇಲೆ_ಮಾನವ_ಇಳಿದ_ಕ್ಷಣಗಳ

#ಚಂದ್ರಯಾನದ_ರೇಡಿಯೋ_ವೀಕ್ಷಕ_ವಿವರಣೆ_ಕೇಳಿದ_ನೆನಪು.

#ಬಿದನೂರು_ನಗರದ_ದೇವಗಂಗೆಯ_ದೊಡ್ಡಮ್ಮನ_ಮನೆಯಲ್ಲಿ.

#ಅವಾಗ_ಮಾನವ_ಚಂದ್ರನ_ಮೇಲೆ_ಇಳಿದ_ಸುದ್ದಿ_ನಂಬಲಾರದ_ದಿನಗಳು.

#ಚಂದ್ರನ_ಮೇಲೆ_ಅಮೇರಿಕಾ_ದ್ವಜ_ಸ್ಪಷ್ಟವಾಗಿ_ಕಾಣುವಂತೆ_ಪೋಟೋ_ಎಡಿಟ್_ಮಾಡಿದ್ದರು.


#Neelarmstrong #Moon #BBC #Aldrin #Appolo11 #NASA 

    ಮೊನ್ನೆ ಪೂರ್ಣ ಚಂದ್ರಗ್ರಹಣ ಸಂಭವಿಸಿದಾಗ ಚಂದ್ರನನ್ನು ದಿಟ್ಟಿಸಿ ನೋಡುವಾಗ ನೆನಪಾಗಿದ್ದು... ಚಂದ್ರಲೋಕಕ್ಕೆ ಮೊದಲ ಮಾನವ ಹೆಜ್ಜೆ ಊರಿದ ಕ್ಷಣಗಳನ್ನ ಬಿಬಿಸಿ ರೇಡಿಯೋ ಕಾಮೆಂಟರಿ ನನ್ನ ಬಾಲ್ಯದಲ್ಲಿ ಕೇಳಿದ್ದು.

 #ಅವತ್ತು_20_ಜುಲೈ_1969
  ಭಾರತೀಯ ಕಾಲಮಾನ ರಾತ್ರಿ 1.47 ಕ್ಕೆ ನೀಲ್ ಆಮ್೯ ಸ್ಟ್ರಾ೦ಗ್ ಚಂದ್ರನ ಮೇಲೆ ಮೊದಲ ಹೆಜ್ಜೆ ಊರಿದ ಮೊದಲ ಮಾನವ.

    ಇವರನ್ನ ಚಂದ್ರಲೋಕಕ್ಕೆ ಕರೆದೊಯ್ದ ಅಂತರಿಕ್ಷ ನೌಕೆ ಅಪೋಲೋ 11 ಆದರೆ ಅವತ್ತು ನನ್ನ ವಯಸ್ಸು 4  ವಷ೯ 5 ತಿಂಗಳು 14 ದಿನ ನನಗೆ ಇದೆಲ್ಲ ಮಾಹಿತಿ ಅವತ್ತು ಇರಲಿಲ್ಲ.

  ಬಿದನೂರು ನಗರದ ದೇವಗಂಗೆ ನನ್ನ ತಾಯಿ ತವರೂರೂ, ನನ್ನ ದೊಡ್ಡಮ್ಮನ ಮನೆ. 

   ಅವತ್ತು ನಾವೆಲ್ಲ ನಮ್ಮ ತಾಯಿಯೊ೦ದಿಗೆ ಅಲ್ಲಿದ್ದೆವು, ಈ ಮೊದಲ ಮಾನವ ಚಂದ್ರಯಾನದ ಬಗ್ಗೆ ತಿಳಿಯಲೆಂದೆ ನಮ್ಮಣ್ಣ ನಾಗರಾಜ್ ನಮ್ಮ ಆನಂದಪುರದ ಯಡೇಹಳ್ಳಿಯ ಮನೆಯಿಂದ ರೇಡಿಯೋ ತಂದಿದ್ದ.

  ದೇವಗಂಗೆಯ ದೊಡ್ಡಮ್ಮನ ಮನೆಯ ಎತ್ತರದ ಕಟಾ೦ಜನದಲ್ಲಿ ( ವಿದ್ಯುತ್ ಸಂಪಕ೯ ಇಲ್ಲದ ಆ ದಿನಗಳಲ್ಲಿ) ನಡು ರಾತ್ರಿ ನಮಗೆ ಅಥ೯ ಆಗದ ಇಂಗ್ಲೀಷ್ ಭಾಷೆಯ BBC ವೀಕ್ಷಕ ವಿವರಣೆ ಕೇಳುತ್ತಾ ನಮ್ಮಣ್ಣ ವಿಜಯೋತ್ಸವದ ಕೇಕೆ ಹಾಕಿ ನಮಗೆಲ್ಲ ಚಂದ್ರನ ಮೇಲೆ ಮನುಷ್ಯ ಇಳಿದ ಅಂದಾಗ ನಂಬಲು ಸಾಧ್ಯವೇ ಆಗಲಿಲ್ಲ.

    ಸ್ವಲ್ಪ ಹೊತ್ತಲ್ಲಿ ಬಿದನೂರು ನಗರ ಅಂದರೆ ಅಲ್ಲಿನ ಪೇಟೆಗೆ ಹೋಗಿದ್ದ #ದೇವಗಂಗೆಯ_ಯುವ_ಪಡೆ ಮಾರ್ಗ ಮಧ್ಯೆನಮ್ಮ ದೊಡ್ಡಣ್ಣ ಮಂಜುನಾಥಣ್ಣನ ಮನೆಗೆ ತಲುಪಿಸಿ ಹೋಗಲು ಬಂದಿತ್ತು.

 ಅವರಲ್ಲಿ ದೇವಗಂಗೆಯ #ಪಕೀರಣ್ಣ, #ಜಗ್ಗಣ್ಣ ಮತ್ತು #ಚಂದ್ರಶೆಟ್ಟರ ನೆನಪಿದೆ, ಅವರೆಲ್ಲ ಆಗಿನ ದೇವಗಂಗೆಯ ಯುವ ಪಡೆ ಅವರಿಗೆ ನಾವೆಲ್ಲ ಸರಿ ರಾತ್ರಿಯಲ್ಲೂ ಮಲಗದೆ ರೇಡಿಯೋ ಆಲಿಸುವುದು ನೋಡಿ ಅಚ್ಚರಿ ಆಯಿತು.

 ನಮ್ಮಣ್ಣ ಅವರಿಗೆ ಚಂದ್ರನ ಮೇಲೆ #ನೀಲ್_ಆರ್ಮಸ್ಟ್ರಾ೦ಗ್ ಇಳಿದ ಸುದ್ದಿ ಹೇಳಿದಾಗ ನನಗೆ ಇವತ್ತೂ ನೆನಪಿದೆ, ಆ ಯುವ ಪಡೆ ಇದನ್ನ ನಂಬಲೇ ಇಲ್ಲ.

  "ಇದೆಲ್ಲಾ ಸುಳ್ಳು..... ಚಂದ್ರಲೋಕ ಅಂದರೆ ದೇವರ ಲೋಕ...ಅಲ್ಲಿ ಮನುಷ್ಯ ಹೋಗಲು ಸಾಧ್ಯವೇ ಇಲ್ಲ..  ಅಂತ ಅವರೆಲ್ಲ ವಾದಿಸಿದ್ದು!?...

    ಆ ಕಾಲದಲ್ಲಿ ನಮ್ಮಲ್ಲಿ ಮಾತ್ರ ಅಲ್ಲ ಇಡೀ ವಿಶ್ವದಲ್ಲೇ ಮನುಷ್ಯ ಚಂದ್ರನಲ್ಲಿ ಇಳಿದದ್ದು ನಂಬದ ಕಾಲ ಅದು. 

    ಅವರೆಲ್ಲ ಅವರವರ ಮನೆಗೆ ಹೋದ ನಂತರ ಬೆಳಗಾದಾಗ 2ನೇ ವ್ಯಕ್ತಿ #ಆಲ್ಡ್ರೀನ್ ಚ೦ದ್ರನ ಮೇಲೆ ಇಳಿದರೆಂದು ನಮಗೆ ಬುದ್ಧಿ ಬಂದ ಮೇಲೆ ಎಷ್ಟೋ ವರ್ಷದ ನಂತರ ಗೊತ್ತಾಯಿತು.

     ಇವತ್ತಿಗೂ ಅನೇಕರು ಚಂದ್ರನ ಮೇಲೆ ಗಾಳಿ ಇಲ್ಲ ಅಮೇರಿಕಾ ಧ್ವಜ ಹೇಗೆ ಹಾರುತ್ತಿದೆ ಅದರಲ್ಲಿ ಎಂದು ಚಂದ್ರಯಾನದ ಬಗ್ಗೆ ನಾಸಾ ಸಂಸ್ಥೆಯನ್ನೇ ಪ್ರಶ್ನೆ ಮಾಡುವವರೂ ಇದ್ದಾರೆ!.

  ಧ್ವಜ ಹಾರುವುದಿಲ್ಲ ಅಲ್ಲಿ ನಿವಾ೯ತ ಪ್ರದೇಶ ಎಂದು ಪ್ರಾಥಮಿಕ ಜ್ಞಾನ ಇರುವ ವಿಜ್ನಾನಿಗಳು ಧ್ವಜ ಸ್ಪಷ್ಟವಾಗಿ ಕಾಣಲು ಬೇರೆ ಫೋಟೋ ವ್ಯವಸ್ಥೆ ಮಾಡಿದ್ದಾರೆಂದು ಹೇಳುತ್ತಾರೆ.

    ಮೊದಲ ಚಂದ್ರಯಾನ ಆಗಿ 56 ವರ್ಷಗಳು ಆದರೂ ಈ ಬಗ್ಗೆ ಚರ್ಚೆಗಳು ಗೂಗಲ್ ನಲ್ಲಿ ನೋಡ ಬಹುದು.

Comments

Popular posts from this blog

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...