Skip to main content

3474. ವಿಶ್ವ ಕ್ಷೌರಿಕರ ದಿನ

#ಸೆಪ್ಟೆಂಬರ್_16_ವಿಶ್ವ_ಕ್ಷೌರಿಕರ_ದಿನ

#ನಾಡಿನ_ಸಮಸ್ತ_ಕ್ಷೌರಿಕ_ಬಾಂದವರಿಗೆ_ಶುಭ_ಹಾರೈಕೆಗಳು

#ಕ್ರಿಸ್ತ_ಪೂರ್ವ_5000_ವರ್ಷಗಳ_ಕ್ಷಾರಿಕ_ವೃತ್ತಿ_ಇತಿಹಾಸ

#ರೋಮ್_ಇತಿಹಾಸದಲ್ಲಿ_ಕ್ಷೌರಿಕರದ್ದು_ವೈದ್ಯ_ವೃತ್ತಿ_ಕೂಡ

#ಭಾರತೀಯ_ಕ್ಷೌರಿಕರು_ಆಯುವೆೇ೯ದ_ಗಿಡಮೂಲಿಕೆಗಳ_ಜ್ಞಾನ_ಹೊಂದಿದ್ದರು.

#Worldbarbersday #saloon #Beautyparlor #Medicine #MahatmaGhandi 

  ಇವತ್ತು 16 - ಸೆಪ್ಟೆಂಬರ್ ಈ ದಿನ ವಿಶ್ವದಾದ್ಯಂತ #ವಿಶ್ವ_ಕ್ಷೌರಿಕರ_ದಿನ ಆಚರಿಸುತ್ತಾರೆ.

    ಕ್ಷೌರಿಕ ವೃತ್ತಿ ಭಾಂದವರಿಗೆ ಶುಭ ಹಾರೈಕೆಗಳು ಹೇಳೋಣ.

   ಕ್ಷೌರಿಕರ ಇತಿಹಾಸಕ್ಕೆ 5000 ವರ್ಷಗಳ ಇತಿಹಾಸ ಇದೆ ಇವರು ತಮ್ಮ ವೃತ್ತಿ ಜೊತೆ ವೈದ್ಯಕೀಯ ಚಿಕಿತ್ಸಕರೂ ಆಗಿದ್ದವರು.

    ಕ್ಷೌರಿಕರಿಲ್ಲದ ಸಮಾಜ ಊಹಿಸಲೂ ಸಾಧ್ಯವಿಲ್ಲ.

   ಭಾರತೀಯ ಬಹು ಜಾತಿ ಪದ್ಧತಿ ವ್ಯವಸ್ಥೆಯಲ್ಲಿ ಅಸ್ಪ್ಪಶ್ಯರಿಗೆ ಕ್ಷೌರ ಮಾಡುವುದು ನಿಶೇಧ ಇತ್ತು.

   ಗಾಂಧೀಜಿ ಆತ್ಮಕಥೆ #ಸತ್ಯಾನ್ವೇಷಣೆ ಬಾಲ್ಯದಲ್ಲಿ ಪ್ರಬಾವ ಬೀರಿತ್ತು ಅವರ ಸ್ವಯಂ ಮಾಡಿಕೊಳ್ಳುತ್ತಿದ್ದ ಕ್ಷೌರದ ಪ್ರಯೋಗ 2020 ರ ಕೊರಾನಾ ಲಾಕ್ ಡೌನ್ ನಿಂದ ನನಗೆ ಅಭ್ಯಾಸವಾಯಿತು.

 ಇದು ಅಷ್ಟು ಸುಲಭವಲ್ಲ...

    5 ನೇ ತರಗತಿಯಲ್ಲಿಯೇ ಗೊರೂರು ರಾಮಸ್ವಾಮಿ ಅಯ್ಯಂಗಾರರು ಅನುವಾದಿಸಿದ ಗಾಂಧೀಜಿ ಆತ್ಮಚರಿತ್ರೆಯಲ್ಲಿ ಹೆಚ್ಚು ನೆನಪು ಉಳಿದಿದ್ದು ಗಾಂಧೀಜೀ ಅವರೇ ಅವರ ಕ್ಷೌರ ಮಾಡಿಕೊಳ್ಳುವುದು ಮತ್ತು ತಂದೆಯ ಜೇಬಿನಿಂದ ಹಣ ಕದ್ದ ಘಟನೆ ನನಗೂ ಬಾಲ್ಯದಲ್ಲಿ ತಂದೆ ಜೇಬಿಗೆ ಕೈಹಾಕಿದ್ದು ತಪ್ಪು ಎಂಬ ಅರಿವು ಮೂಡಿಸಿತ್ತು ಗಾಂಧಿಜೀ ಸತ್ಯಾನ್ವೇಷಣೆ.

  ನನಗೆ ನನ್ನ ಬಾಲ್ಯದ ಕೆಟ್ಟ ಅನುಭವ ಆನಂದಪುರಂನ ಆ ಕಾಲದ ಆಧುನಿಕ ಕ್ಷೌರಿಕ ರಾಮಣ್ಣ ತಲೆ ಕೂದಲು ತೆಗೆಯಲು ಬಳಸುತ್ತಿದ್ದ ಇಂಗ್ಲೇಂಡ್ ಮೇಡ್ ಕಟಿಂಗ್ ಮೆಷಿನ್ (ಕ್ಲಿಪ್ಪರ್). 

    ನನ್ನ ರೋಲ್ ಮಾಡೆಲ್ ಸಿನಿಮಾ ಟಾಕೀಸಿನ ಗೇಟ್ ಕೀಪರ್ ಆಗಿದ್ದ ಡುಮಿ೦ಗಣ್ಣ ಗಟ್ಟಿಯಾಗಿ ನನ್ನ ತಲೆ ಹಿಡಿದುಕೊಳ್ಳುತ್ತಿದ್ದರು ಇಂತಹ ಅನುಭವ ಆ ಕಾಲದ ಎಲ್ಲಾ ಮಕ್ಕಳಿಗೂ ಆಗಿರುತ್ತದೆ.

  ಒಮ್ಮೆ ನಾನು ಗಾಂಧೀಜಿ ಆತ್ಮಕಥೆಯಿಂದ ಪ್ರೇರಪಿತನಾಗಿ ಗುಟ್ಟಾಗಿ ತಂದೆಯವರ ಸರ್ಜರಿ ಕತ್ತರಿಯಲ್ಲಿ ಕನ್ನಡಿ ನೋಡುತ್ತಾ ತಲೆ ಕ್ಷೌರ ಮಾಡಿಕೊಂಡಿದ್ದೆ ಪರಿಣಾಮ ಇಡೀ ತಲೆ ಇಲಿ ಕೊದಲು ಕತ್ತರಿಸಿ ತಿಂದಂತೆ ಆಗಿತ್ತು ಅದನ್ನು ಸರಿ ಮಾಡಲು ಪುನಃ ಆನಂದಪುರಂನ ಆ ಕಾಲದ ಮಾಡರ್ನ್ ಸೆಲೂನ್ ರಾಮಣ್ಣ ತನ್ನ ಕ್ಲಿಪ್ಪರ್ ಜೋರಾಗಿಯೆ ಬಳಸಿದ್ದು ಕಣ್ಣೀರು ತರಸಿತ್ತು.

  2020 ಮಾರ್ಚ್ ನಲ್ಲಿ ಬಂದ ಕೊರಾನಾ ನಂತರ ಲಾಕ್ ಡೌನ್ ಅನಿವಾಯ೯ವಾಗಿ ನಮ್ಮ ಕ್ಷೌರ ನಾವೇ ಮಾಡಿಕೊಂಡು ಪರಿಣಿತಿ ಪಡೆಯುವಂತಾಯಿತು.

  ಇದರಿಂದ ಸಮಯ ಉಳಿಯಿತಾದರೂ ಕ್ಷೌರಿಕ ಕುಟುಂಬಗಳ ಸಂಬಂದ ಕಳೆದು ಹೋಯಿತು.

   ಕ್ಷೌರದ ಸಮಯದಲ್ಲಿ ಊರಿನ ಅನೇಕ ಘಟನೆಗಳ ಬಾತ್ಮಿದಾರರಾಗಿ ಅವರು ನೀಡುತ್ತಿದ್ದ ಸುದ್ದಿಯ ಸರಕು ಸವಿಯದಂತಾಯಿತು.

 ನಮ್ಮ ತಲೆ ಕೊದಲೂ ನಿವಾರಿಸುವ ಕೆಲಸ ಅಷ್ಟು ಸುಲಭವಲ್ಲ ಅದರ ಪರಿಣಿತಿಗೆ ತುಂಬಾ ಶ್ರಮ ಬೇಕು ಈಗ ಇದಕ್ಕೆ ಅನೇಕ ಸುಲಭ ಉಪಕರಣ ಲಭ್ಯಇದೆ ಆದರೆ ಗಾಂಧೀಜಿ ಕಾಲದಲ್ಲಿ ಅದೆಲ್ಲ ಇಲ್ಲದಿದ್ದ ಕಾಲದಲ್ಲಿ ಗಾಂಧೀಜಿ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಪ್ರವಾಸ -ಭಾಷಣ - ಬರವಣಿಗೆಗಳ ಮಧ್ಯೆ ಅವರು ತಮ್ಮ ಕ್ಷೌರ ತಾವೇ ಮಾಡಿಕೊಳ್ಳುವ ಕಲೆ ಕರತಲಾಮಲಕ ಮಾಡಿಕೊಂಡಿದ್ದು ಸುಲಭವಲ್ಲ.

   ಈ ಮೂಲಕ ತಾನು ಪರಾವಲಂಭಿ ಅಲ್ಲ ಎಂಬ ಸಂದೇಶ ನೀಡಿದ್ದು ಇತಿಹಾಸ.

   ಒಂದು ಕಾಲದಲ್ಲಿ ಗ್ರಾಮೀಣ ಭಾಗದ ಈ ವೃತ್ತಿಯವರದು ಬಲು ಕಷ್ಟದ ಜೀವನ, ಗ್ರಾಮೀಣ ಪ್ರದೇಶದಲ್ಲಿ ಪ್ರತಿ ಮನೆಗೂ ಹೋಗಿ ಎಲ್ಲರ ಕ್ಷೌರ ಮಾಡಿ ಸುಗ್ಗಿ ಕಾಲದಲ್ಲಿ ಅದಕ್ಕೆ ಪ್ರತಿಫಲವಾಗಿ ಅವರು ನೀಡುವ ಭತ್ತ, ರಾಗಿ ಕಾಳು ಕಡಿ ಪಡೆಯುವ ವತ೯ನೆ ಹೆಸರಿನ ಪದ್ದತಿ ಇತ್ತು.

    ಈಗ ಕಾಲ ಬದಲಾಗಿದೆ.

Comments

Popular posts from this blog

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...