Skip to main content

3477. ಘತ್ತರಗಿ ಬಾಗಮ್ಮ ತಾಯಿ

#ಘತ್ತರಗಿಯ_ಭಾಗಮ್ಮ_ದೇವಿ.

#ಒಂದು_ಹಾಡು_ಸಾವಿರ_ಕಿಲೋಮೀಟರ್_ಪ್ರಯಾಣಕ್ಕೆ_ಕಾರಣವಾಯಿತು.

#ಆ_ಹಾಡು_ಕೇಳಿದ_ನಂತರ_ಅಲ್ಲಿಗೆ_ಹೋಗಲೇ_ಬೇಕೆಂದು_ನಿರ್ದರಿಸಿದ್ದೆ.

#ಕಲಬುರ್ಗಿ_ಜಿಲ್ಲೆಯ_ಅಪ್ಜಲ್ಪುರ_ತಾಲ್ಲೂಕಿನ_ಘತ್ತರಗಿಯಲ್ಲಿದೆ_ಬಾಗಮ್ಮ_ದೇವಾಲಯ.

#ವಿಜಯನಗರ_ಪತನದ_ನಂತರ_ಕೃಷ್ಣದೇವರಾಯರ_ಕುಲದೇವತೆ_ಇಲ್ಲಿಗೆ_ಬಂದು_ನೆಲೆಸಿದಳೆಂಬ_ಸ್ಥಳಪುರಾಣ_ಇದೆ

#ಇಲ್ಲಿಗೆ_ಬಂದು_ಪ್ರಾರ್ಥಿಸಿದರೆ_ಇಷ್ಟಾರ್ಥ_ನೂರಕ್ಕೆ_ನೂರು_ಸಿದ್ಧಿ_ಎಂಬ_ನಂಬಿಕೆ.

#ನಿತ್ಯ_ಕನಿಷ್ಟ_ಎರೆಡು_ಸಾವಿರ_ಭಕ್ತರಿಗೆ_ದಾಸೋಹ

#ಇಲ್ಲಿ_ದೇವರ_ಅರ್ಚಕರು_ಹಿಂದುಳಿದ_ವರ್ಗದ_ಮಹಿಳೆಯರು.


#ganagapura #gattaragi #vijayapurakarnataka 
#bagamma #afjalpura 

   ನಾನು ಈ ಚೌಡಿಕೆಯ ಪ್ರಕಾರದ ಸ್ಥಳ ಪುರಾಣದ ಹಾಡು ಒಂದು ಸಾವಿರಕ್ಕೂ ಹೆಚ್ಚು ಸಾರಿ ಕೇಳಿದ್ದೇನೆ.
 
     ಉತ್ತರ ಕರ್ನಾಟಕದ ಸೊಗಡಿನ ಕನ್ನಡದಲ್ಲಿ ತಮ್ಮದೇ ಸಂಪ್ರದಾಯಿಕ ವಾದ್ಯದೊಂದಿಗೆ ಕಲಬುರ್ಗಿ ಜಿಲ್ಲೆಯ ಅಪ್ಜಲ್ಪುರ ತಾಲ್ಲೂಕಿನ ಘತ್ತರಗ ಎಂಬ ಊರಿನ ಬಾಗಮ್ಮ ತಾಯಿಯ (ಭಾಗ್ಯವಂತೆ ದೇವಿಯ) ಸ್ಥಳ ಪುರಾಣದ ಕಥೆ ಹೇಳುವು ಹಾಡು ಇದು.

   ಕಾಮೆಂಟ್ ನಲ್ಲಿರುವ  ಲಿಂಕ್ ಕ್ಲಿಕ್ ಮಾಡಿ ಈ ಹಾಡು ಕೇಳ ಬಹುದು.

     ವಿಜಯನಗರದ ಅರಸರ ಕುಲದೇವತೆ ಭಾಗ್ಯವತಿ ವಿಜಯನಗರದ ಸಿರಿ ಸಮೃದ್ಧಿಗೆ ಕಾರಣಳಾದ ದೇವತೆ.

   ಕೃಷ್ಣದೇವರಾಯರ ನಂತರ ಕೊನೆಯ ಅರಸ  ರಾಮರಾಯನು ಈ ದೇವಿಯ ವಚನ ಮಾನ್ಯ ಮಾಡದಾದನು.

   ಇದರ ಪರಿಣಾಮ ವಿಜಯ ನಗರದ ಮಹಾ ಸಂಪತ್ತು ಕ್ಷೀಣಿಸ ತೊಡಗಿತ್ತು.

  ಆ ಕಾಲದಲ್ಲಿ ದೇವಿಯ ಕಡೆಗಾಣಿಸಿದ್ದರಿಂದ ದೇವಿ ತುಂಗಾ ಭದ್ರಾ ನದಿಗೆ ಸರ್ಪದ ರೂಪದಲ್ಲಿ ಹಾರಿ ನಂತರ ಪ್ರವಾಹದಲ್ಲಿ ಸಾಗಿ ಕಲಬುರ್ಗಿ ಜಿಲ್ಲೆಯಲ್ಲಿ ಪ್ರವಹಿಸುವ  ಬೀಮಾ ನದಿ ಮಾರ್ಗವಾಗಿ ಘತ್ತರಗಿ ಎಂಬ ಊರಿನಲ್ಲಿ ಬಂದು ನೆಲೆಸುತ್ತಾಳೆ ಎಂಬ ಸ್ಥಳ ಪುರಾಣ ಜನರ ನಂಬಿಕೆ ಆಗಿದೆ.

   ಅಲ್ಲಿ ದ್ಯಾವಣ್ಣ ಎಂಬ ದೈವಭಕ್ತ ಕಡು ಬಡವನಿಗೆ ಕಾಜಿನ ಒಂದು ಕಂಬದ ರೂಪದಲ್ಲಿ ಗೋಚರಿಸುತ್ತದೆ.

   ಅದರಲ್ಲಿ ಬೇರೆ ನೀರು ಮತ್ತು ಘಟ ಸರ್ಪ ನೋಡುತ್ತಾನೆ ಆ ಕಂಬದಿಂದ ವಿಚಿತ್ರವಾದ ಧ್ವನಿ ಕೇಳಿ ಬರುತ್ತದೆ ಅವನಿಗೆ.

   ಅವನು ಅದನ್ನು ಊರಲ್ಲಿ ಬಂದು ಎಲ್ಲರಿಗೂ ತಿಳಿಸುತ್ತಾನೆ ಆದರೆ ಊರವರು ಯಾರೂ ಇದನ್ನು ನಂಬುವುದಿಲ್ಲ.

  ಬಡ ಕುರುಬನ ಈ ಮಾತು ಹುಚ್ಚರಾಡುವ ಮಾತು ಎಂದು ಊರ ಜನ ಹೀಯಾಳಿಸುತ್ತಾರೆ.

    ನಂತರ ನಡೆದ ಕೆಲ ಪವಾಡಗಳಿಂದ ಊರವರಿಗೆ ಸತ್ಯ ದರ್ಶನ ಆಗಿ ಭಾಗಮ್ಮದೇವಿಗೆ ಗುಡಿ ನಿರ್ಮಿಸುತ್ತಾರೆ.

   ಈ ದೇವಾಲಯದಲ್ಲಿ ಸಿಡಿ ಆಡುವ ಹರಕೆ ಪದ್ಧತಿ ಪ್ರಸಿದ್ಧಿ ಪಡೆದಿತ್ತು ನಂತರ ಮಾನವ ಹಕ್ಕುಗಳ ಆಯೋಗದ ತೀರ್ಮಾನವನ್ನು ಮನ್ನಿಸಿ ರಾಜ್ಯ ಸರ್ಕಾರ ಇಲ್ಲಿ ಸಿಡಿ ಪದ್ಧತಿ ರದ್ದು ಮಾಡಿದೆ.

    ಆದ್ದರಿಂದ ದೇವಾಲಯದ ಒಳಗೆ ಶತಮಾನಗಳಿಂದ ಆಚರಣೆಯಲ್ಲಿದ್ದ ಸಿಡಿ ಕಂಬಗಳನ್ನು ಸಂರಕ್ಷಿಸಿಟ್ಟಿದ್ದಾರೆ.

  ಸುಮಾರು ನಾಲ್ಕು ನೂರು ವರ್ಷಗಳಿಂದ ಇಲ್ಲಿ ಪ್ರಾರ್ಥನೆ ಮಾಡಿದರೆ ಭಕ್ತರ ಇಷ್ಟಾರ್ಥ ಸಿದ್ದಿ ನೂರಕ್ಕೆ ನೂರು ಶತಸಿದ್ಧ ಎಂಬ ನಂಬಿಕೆ ಭಕ್ತರಲ್ಲಿದೆ.
 
   ಘತ್ತರಗದ ಬಾಗಮ್ಮ ಸಿರಿ ಸಂಪತ್ತುಗಳನ್ನು ನೀಡುವ ಏಕೈಕ ದೇವತೆ ಎಂದು ಮಹಾರಾಷ್ಟ್ರ ಆಂಧ್ರಪ್ರದೇಶ ಮತ್ತು ತಮಿಳುನಾಡಿನಿಂದ ಹೆಚ್ಚು ಹೆಚ್ಚು ಭಕ್ತರು ಬರಲು ಪ್ರಾರಂಬಿಸಿದ ಮೇಲೆ ಈ ಕ್ಷೇತ್ರ ಇನ್ನೂ ಹೆಚ್ಚು ಪ್ರಸಿದ್ದಿ ಪಡೆಯಿತು.

   ಪ್ರತಿನಿತ್ಯ ಇಲ್ಲಿನ ಅನ್ನ ದಾಸೋಹಕ್ಕೆ ಕನಿಷ್ಟ 2000 ಭಕ್ತರು ಪ್ರಸಾದ ಸ್ವೀಕರಿಸುತ್ತಾರೆ ವಿಶೇಷ ದಿನದಲ್ಲಿ ಇದರ 5- 6 ಪಟ್ಟು ಹೆಚ್ಚು ಭಕ್ತರು ಬರುತ್ತಾರೆ.

  ಇಲ್ಲಿಂದ ದೇವರ ಗಾಣಗಾಪುರದ ದತ್ತ ಮಂದಿರ ಕೇವಲ 28 ಕಿ.ಮಿ.ದೂರದಲ್ಲಿದೆ.

   440 ಕಿ.ಮಿ.ದೂರದ ಇಲ್ಲಿಗೆ ಹುಬ್ಬಳ್ಳಿ- ನರಗುಂದ - ಕೊಲ್ಹಾರ - ಬಸವನ ಬಾಗೇವಾಡಿ ಮಾರ್ಗದಲ್ಲಿ ಈ ದೇವಾಲಯ ಮಧ್ಯಾಹ್ನ 2ಕ್ಕೆ ತಲುಪಿದಾಗ ದೇವರ ದರ್ಶನಕ್ಕೆ ಸಾವಿರಾರು ಜನ ಸರತಿ ಸಾಲಿನಲ್ಲಿದ್ದರು.

   ಇಲ್ಲಿಂದ ದೇವರ ಗಾಣಿಗಾಪುರದ ದತ್ತಾತ್ರೇಯ ಮಂದಿರಕ್ಕೆ ನಮ್ಮ ಮುಂದಿನ ಪ್ರಯಾಣ ಪ್ರಾರಂಬಿಸಿದೆವು.

    ಒಂದು ಹಾಡು ಸುಮಾರು ಒಂದು ಸಾವಿರ ಕಿಲೋ ಮೀಟರ್ ಪ್ರಯಾಣ ಮಾಡಿ ಈ ಸ್ಥಳದ ದರ್ಶನ ಮಾಡಿಸಿತು ಎಂಬುದೇ ವಿಶೇಷ.

    ಕಾಮೆಂಟ್ ಲಿಂಕ್ ನಲ್ಲಿ ಒಮ್ಮೆ ನೀವೂ ಆ ಹಾಡು ಕೇಳಿ ನೋಡಿ.. ನಿಮಗೂ ಮನಸ್ಸಾದರೆ ಅಲ್ಲಿಗೆ ಹೋಗಿ ಬನ್ನಿ.

Comments

Popular posts from this blog

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...