Skip to main content

3483. ಕಾಡಾನೆಗಳು

#ಮಲೆನಾಡಿನಲ್ಲಿ_ಕಾಡಾನೆಗಳು_ಲಗ್ಗೆ_ಹಾಕುತ್ತಿರುವುದೇಕೆ?

#ಶತಮಾನಗಳ_ನಂತರ_ಕಾಡಾನೆಗಳು.

#ಕೊಪ್ಪ_ಶೃಂಗೇರಿಯಲ್ಲಿ_ಪ್ರತ್ಯಕ್ಷವಾದ_ಜೋಡಿ_ಕಾಡಾನೆ.

#ಪ್ರತಿ_ವರ್ಷ_ಆಗುಂಬೆಗೆ_ಬರುವ_ಒಂಟೆ_ಕಾಡಾನೆ.

#ಆನಂದಪುರಂ_ಭಾಗಕ್ಕೆ_ಪ್ರತಿ_ವರ್ಷ_ಬರುತ್ತಿರುವ_ಕಾಡಾನೆಗಳು

#ವಿಜಯನಗರ_ಸಾಮ್ರಾಜ್ಯದ_ಅರಸು_ಪ್ರೌಡ_ಪ್ರತಾಪರಾಯನಿಗೆ

#ಗಜಬೇಂಟೆಗಾರ_ಎಂಬ_ಬಿರುದು_ಬರಲು_ಕಾರಣ

#ಹದಿನಾಲ್ಕನೇ_ಶತಮಾನದಲ್ಲಿ_ಅವರು_ಆರಗದ_ದಟ್ಟ_ಅರಣ್ಯದಲ್ಲಿ

#ಕಾಡಾನೆ_ಹಿಡಿದು_ಪಳಗಿಸಿ_ತಮ್ಮ_ಸೇನೆಗೆ_ಸೇರಿಸುತ್ತಿದ್ದರು.


#wildlifeplanet #agumbe #thirthahalli #ShivamoggaNews #wildelephants

 ಶಿವಮೊಗ್ಗ ಜಿಲ್ಲೆಯ ಭದ್ರಾ ಅಭಯಾರಣ್ಯದಲ್ಲಿ ಇವತ್ತಿಗೂ ಕಾಡಾನೆಗಳು ಮತ್ತು ಅವುಗಳ ಕಾರಿಡಾರ್ ಇದೆ.
 
   ಶರಾವತಿ ಅಭಯಾರಣ್ಯದಲ್ಲಿ ಶರಾವತಿ ನದಿಗೆ ಆಣೆಕಟ್ಟು ಕಟ್ಟಿದ ನಂತರ ಕಾಡಾನೆಗಳು ಈ ಭಾಗದಲ್ಲಿ ಇರಲಿಲ್ಲ.

   ಆದರೆ ಒಂದು ಒಂಟಿ ಸಲಗ ತೀರ್ಥಹಳ್ಳಿಯ ಆಗು೦ಬೆ ಭಾಗದಲ್ಲಿ ಪ್ರತಿ ವರ್ಷ ನಿಗದಿತ ಸಮಯದಲ್ಲಿ ಜನವಸತಿ ಕೇಂದ್ರಗಳಲ್ಲಿ ಕಾಣಿಸುಕೊಳ್ಳುತ್ತಾ ಆ ಭಾಗದಲ್ಲಿನ ಜನರಲ್ಲಿ ಭಯ - ಆತಂಕ ಸೃಷ್ಟಿಸಿದೆ.

   ಇದೇ ಆನೆ ಕೆಲವು ವರ್ಷದ ಹಿಂದೆ ಸಾಗರ ತಾಲ್ಲೂಕಿನ ಆವಿನಳ್ಳಿ ಸಮೀಪದ #ಗಿಣಿವಾರ ಎಂಬ ಗ್ರಾಮದಲ್ಲಿ ಈ ಆನೆ ಕಾಣಿಸಿಕೊಂಡಾಗ ಗ್ರಾಮಸ್ಥರೆಲ್ಲ ಒಂದು ರಾತ್ರಿ  ಕಾಡಾನೆಯ ಉಪಟಳ ನಿವಾರಿಸಲು ಸಭೆ ಆಯೋಜಿಸಿದ್ದರು.

   ಕಾಡಾನೆ ಉಪಟಳ ಪರಿಹಾರದ ಸಭೆಗೆ ಭಾಗವಹಿಸಲು ಕೃಷಿ ಕಾರ್ಮಿಕ ಮಹಿಳೆಯೋರ್ವರು ರಾತ್ರಿಯ ಅಡುಗೆ ಮಾಡಿ ಇಟ್ಟು ಮನೆಯಿಂದ ಹೊರಬಂದಾಗ ಈ ಕಾಡಾನೆ ಆ ಮಹಿಳೆಯನ್ನು ಹತ್ಯೆ ಮಾಡಿತ್ತು.

  ಸಾಗರ ಹೊಸನಗರ ತಾಲ್ಲೂಕಿನ ಜನರಿಗೆ ಇದು ಅಘಾತಕಾರಿ ಸುದ್ದಿ ಏಕೆಂದರೆ ಕಳೆದ ನೂರು ವರ್ಷದಲ್ಲಿ ಈ ಭಾಗದಲ್ಲಿ ಕಾಡಾನೆ  ಸಂಚಾರ ಅಥವ ಹಾವಳಿ ಅವರಾರಿಗೂ ಗೊತ್ತಿಲ್ಲದವರು.

  1970 ರಲ್ಲಿ ಅರಸಾಳು ಭಾಗದಲ್ಲಿ ಉಪಟಳ ನೀಡುತ್ತಿದ್ದ ಕಾಡಿನ ಆನೆ ಒಂದನ್ನು ಹಿಡಿಯಲು ಸರ್ಕಾರ ಆ ಕಾಲದ #ಆನೆ_ಖೆಡ್ಡಾ ನಿಮಿ೯ಸಿ ಕಾಡಾನೆ ಹಿಡಿಯಲು ಯಶಸ್ವಿ ಆದರೂ ಕಾಡಾನೆ ಬದುಕುಳಿಯಲಿಲ್ಲ.

  ಈಗೆಲ್ಲ ಈ ರೀತಿ ಜನರಿಗೆ ಉಪಟಳ ನೀಡುವ ಕಾಡಾನೆ ಹಿಡಿಯಲು ವ್ಯೆಜ್ಞಾನಿಕವಾದ ದಾರಿಗಳಿದೆ.

  ಗಿಣಿವಾರದ ನರಹಂತಕ ಮಾತ್ರ ಸರ್ಕಾರದ ಅರಣ್ಯ ಇಲಾಖೆಗೆ ಚಳ್ಳೆಹಣ್ಣು ತಿನ್ನಿಸಿ ವೀರಪ್ಪನಂತೆ ಒಂಟಿಯಾಗಿ ಮಲೆನಾಡಿನಲ್ಲಿ ಆತಂಕ ಸೃಷ್ಟಿಸುತ್ತಿದೆ.

   ಕೊಡಚಾದ್ರಿಯ ಮೂಲ ಮೂಕಾಂಬಿಕ ದೇವಾಲಯದ ಅವರಣಕ್ಕೂ ಒಮ್ಮೆ ದಿಡೀರನೆ ನುಗ್ಗಿತ್ತು ಈ ಕಾಡಾನೆ.

  ಮೊದಲೆಲ್ಲ ಜನರ ಕಣ್ಣಿಗೆ ಅಪರೂಪವಾಗಿ ಕಾಣಿಸುತ್ತಿದ್ದ ಈ ಗಿಣಿವಾರದ ನರ ಹಂತಕ ಈಗ ಪ್ರತಿ ವರ್ಷ ಆಗುಂಬೆಯ ಸಮೀಪದಲ್ಲಿ ರಸ್ತೆಗಳಲ್ಲಿ ಸಂಚರಿಸಿ ಆಭಾಗದ ಜನರಲ್ಲಿ ಆತಂಕ ಉಂಟು ಮಾಡುತ್ತಿದೆ 

   ಅದನ್ನು ಸರ್ಕಾರಗಳು ಸೆರೆ ಹಿಡಿಯಲಾಗದಿದ್ದರು ಅದು ಜನರ ಸೆಲ್ ಫೋನ್ ನಲ್ಲಿ ಸೆರೆ ಆಗಿದ್ದಾನೆ.

 ದಶಕಗಳಿಂದ ಈ ಕಾಡಾನೆ ಯಾಕೆ ಒಂಟಿ ಆಗಿ ಸಂಚರಿಸುತ್ತಿದೆ? ಈ ನಿಗೂಡ ಆನೆಯ ಮೂಲ ಎಲ್ಲಿ? ಈ ಪ್ರಶ್ನೆಗೆ  ಉತ್ತರ ಇನ್ನೂ ಸಿಕ್ಕಿಲ್ಲ.

    ಕಳೆದ 15 ದಿನದ ಹಿಂದೆ ಜೋಡಿ ಕಾಡಾನೆಗಳು ಕೊಪ್ಪ ಮತ್ತು ಶೃಂಗೇರಿ ಭಾಗದಲ್ಲಿ ಸಂಚರಿಸುತ್ತಿದೆ.

   ಪ್ರತಿ ವರ್ಷ ಡಿಸೆಂಬರ್ ಜನವರಿ ತಿಂಗಳಲ್ಲಿ ಐದಾರು ಕಾಡಾನೆಗಳಿರುವ ಆನೆ ತಂಡ ಸಾಗರ ತಾಲೂಕಿನ ಆನಂದಪುರ0 ಭಾಗದಲ್ಲಿ ಸಂಚರಿಸುತ್ತದೆ.

   14ನೇ ಶತಮಾನದಲ್ಲಿ ಈ ಪ್ರದೇಶ ದಟ್ಟಾರಣ್ಯವಾಗಿದ್ದು ಇಲ್ಲಿ ಕಾಡಾನೆಗಳು ಹೇರಳವಾಗಿತ್ತು ಎನ್ನುವುದಕ್ಕೆ ಶಾಸನ ಒಂದು ಇಲ್ಲಿ ಉದಾಹರಿಸ ಬಹುದಾಗಿದೆ.

   ವಿಜಯನಗರದ ಅರಸ ಪ್ರೌಡ ಪ್ರತಾಪರಾಯ ಆರಗದ ದಟ್ಟಾರಣ್ಯದಲ್ಲಿ ಕಾಡಾನೆಗಳನ್ನು ಹಿಡಿದು ಪಳಗಿಸಿ ತನ್ನ ಸೇನೆಗೆ ಸೇರಿಸುತ್ತಿದ್ದರಿಂದ ಅವನಿಗೆ #ಗಜಬೇಂಟೆಗಾರ ಎಂಬ ಬಿರುದು ಬಂದಿತ್ತು.

   ವಿಜಯನಗರ ಸಾಮ್ರಾಜ್ಯದ ಅರಸು ಪ್ರೌಡ ಪ್ರತಾಪರಾಯ ಆಡಳಿತ ಅವಧಿ 1422-1446.

    ಬಹುಶಃ ಆನೆಗಳು ಆ ಕಾರಣದಿಂದ ಈಗ ಈ ಪ್ರದೇಶಗಳಿಗೆ ಬರುತ್ತಿದೆಯಾ?

Comments

Popular posts from this blog

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...