Skip to main content

3495. ವರದಾ ನದಿ

#ವರದಾ_ನದಿ

#ಶಿವಮೊಗ್ಗ_ಜಿಲ್ಲೆಯ_ಸಾಗರ_ತಾಲ್ಲೂಕಿನ_ವರದಾಮೂಲದಲ್ಲಿ_ಉಗಮ.

#ಬನವಾಸಿ_ಮೂಲಕ_ಹರಿದು_ಹಾವೇರಿ_ಜಿಲ್ಲೆಯ_ಗಳಗನಾಥದಲ್ಲಿ
#ತುಂಗಭದ್ರ_ನದಿಗೆ_ಸಂಗಮ_ಅಗುತ್ತದೆ.


#Varadariver #Shivamogga #Sagar #Uttarakannadadistrict #Banavasi #Galaganatha #Haveridistrict #Tungabadra

  ವರದಾ ನದಿ ತುಂಗಭದ್ರಾ ನದಿಯ ಪ್ರಮುಖ ಉಪನದಿ ಇದರ ಉದ್ಭವ ಸ್ಥಳ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ವರದಾ ಮೂಲ.

   ಪುರಾಣದಲ್ಲಿ ವರದಾ ನದಿ ಉಗಮದ ಬಗ್ಗೆ ಎರೆಡು ಕಥೆಗಳಿದೆ...
    ಮೊದಲನೆಯದು ಶೃಂಗಋಷಿ ಒಮ್ಮೆ ತೀವ್ರ ತಪಸ್ಸಿನಲ್ಲಿದ್ದು, ಬ್ರಹ್ಮಹತ್ಯಾದೋಷ ಮಾಡಿದ್ದಕ್ಕಾಗಿ ವಿಷ್ಣುವಿನಿಂದ ಕ್ಷಮೆ ಕೇಳುತ್ತಿದ್ದನು. ಶ್ರೀಮನ್ನಾರಾಯಣನು ಅವನ ಮುಂದೆ ಪ್ರತ್ಯಕ್ಷನಾಗಿ ಋಷಿಯ ತಲೆಯ ಮೇಲೆ ಗಂಗಾಜಲವನ್ನು ಸುರಿದನು. ಈ ಗಂಗಾಜಲವು ವರದಾ ನದಿಯನ್ನು ರೂಪಿಸಿತು.

  ಇನ್ನೊಂದು ಪುರಾಣ ಕಥೆ ಶಿವ ರೌದ್ರವತಾರ ತಾಳಿದಾಗ ಅವನ ತಾಪವಿಳಿಸಲು ವಿಷ್ಣು ಶಂಖದಲ್ಲಿ ಭಾಗಿರಥಿ ಜಲ ಶಿವನಿಗೆ ಅಭಿಷೇಕ ಮಾಡಿದ ನೀರೆ ವರದಾ ನದಿ ಆಯಿತೆಂದು.
 
    ಸಾಗರ ಪಟ್ಟಣದಿಂದ ಆವಿನಹಳ್ಳಿ ರಸ್ತೆಯ ಇಕ್ಕೇರಿ ಅಘೋರೇಶ್ವರ ದೇವಾಲಯದ ವೃತ್ತದಲ್ಲಿ ಎಡಕ್ಕೆ ಸಾಗಿದರೆ ವರದಾ ನದಿ ಉಗಮ ಸ್ಥಳ ವರದಾ ಮೂಲ ಇದೆ.

    ಈ ನದಿಗೆ ಸಾಗರ ಪಟ್ಟಣದಲ್ಲಿ ಆಣೆಕಟ್ಟು ನಿರ್ಮಿಸಿ ಕೆಲ ದಶಕಗಳ ಕಾಲ ಸಾಗರದ ಪಟ್ಟಣ ವಾಸಿಗಳಿಗೆ ಕುಡಿಯುವ ನೀರಿನ ಪ್ರಮುಖ ಮೂಲವಾಗಿತ್ತು.

   ಈಗ ಶರಾವತಿ ನದಿ ನೀರು ಸಾಗರ ಪಟ್ಟಣದ ನಿವಾಸಿಗಳಿಗೆ ಸರಬರಾಜು ಆಗುವುದರಿಂದ ವರದಾ ನದಿ ನೀರು ಬಳಸುತ್ತಿಲ್ಲ.

    ಶಿವಮೊಗ್ಗ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆ ಮತ್ತು ಹಾವೇರಿ ಜಿಲ್ಲೆಯಲ್ಲಿ ಅನೇಕ ಹೊಳೆ ನದಿಗಳನ್ನು ಕೂಡಿಕೊಂಡು ಸುಮಾರು 200 ಕಿಲೋ ಮೀಟರ್ ವರದಾ ನದಿ ಹರಿಯುತ್ತದೆ.

     ಸೊರಬ ತಾಲ್ಲೂಕಿನ ಬಂಕಸಾಣದಲ್ಲಿ ದಂಡಾವತಿ ನದಿ ವರದಾ ನದಿಯಲ್ಲಿ ವಿಲೀನವಾಗುತ್ತದೆ.

    ಕದಂಬರ ಬನವಾಸಿಯು ವರದಾ ನದಿ ತಟದಲ್ಲಿದೆ ಕದಂಬರ ಶೌರ್ಯ ಸಾಹಸಕ್ಕೆ ವರದಾ ನದಿ ಸಾಕ್ಷಿ ಆಗಿದೆ.

     ಹತ್ತನೆ ಶತಮಾನದ ಆದಿಕವಿ ಪಂಪಾ ಬನವಾಸಿ ಮತ್ತು ವರದಾ ನದಿ ಬಗ್ಗೆ ತಮ್ಮ ಮಹಾ ಕಾವ್ಯ #ವಿಕ್ರಮಾರ್ಜುನ_ವಿಜಯದಲ್ಲಿ ಉಲ್ಲೇಖಿಸಿದ್ದಾರೆ....
ಪಂಪನ ಮಹಾಕಾವ್ಯ ವಿಕ್ರಮಾರ್ಜುನ ವಿಜಯದಲ್ಲಿ ಅರ್ಜುನನ ಪಟ್ಟಾಭಿಷೇಕದ ಸಂದರ್ಭದಲ್ಲಿ ಬನವಾಸಿ ಪ್ರದೇಶದ (ಆಧುನಿಕ ಉತ್ತರ ಕನ್ನಡ ಜಿಲ್ಲೆಯಲ್ಲಿ ) ಸೌಂದರ್ಯದ ಆಗಾಗ್ಗೆ ವಿವರಣೆಗಳು ಮತ್ತು #ವರದಾ_ನದಿಯ ನೀರನ್ನು ಅರ್ಜುನನ ತಲೆಯ ಮೇಲೆ ಚಿಮುಕಿಸುವುದು ( ಅಭಿಷೇಕ ) ಕವಿಯ ಬನವಾಸಿ ಪ್ರದೇಶದ ಬಾಂಧವ್ಯವನ್ನು ಸೂಚಿಸುತ್ತದೆ.  "ಆರಂಕುಸಮಿತ್ತೊಡಂ ನೆನೆವುದೆನ್ನ ಮನಂ ಬನವಾಸಿ ದೇಶಮಂ ಮತ್ತು ಪುಟ್ಟದಿರ್ದೊಡೆ ಮರಿದುಂಬಿಯಾಗಿ ಗಂಡು ಕೋಗಿಲೆಯಾಗಿ ನಂದನವನದೊಳ್ ಬನವಾಸಿ ದೇಶದೊಳ್ "  ಎಂಬ ಸಾಲುಗಳ ಮೂಲಕ ಬನವಾಸಿಯ ಬಗೆಗಿನ ಗಾಢವಾದ ಬಾಂಧವ್ಯವನ್ನು ವ್ಯಕ್ತಪಡಿಸಿದ್ದಾರೆ.

   ಹಾವೇರಿ ಜಿಲ್ಲೆಯ ಗಳಗನಾಥದಲ್ಲಿ  ವರದಾ ನದಿ ಮತ್ತು ತುಂಗಾಭದ್ರ ನದಿ ಸಂಗಮ ಆಗುತ್ತದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...