Skip to main content

3496. ಯಡೇಹಳ್ಳಿ ಗ್ರಾಮ ಪಂಚಾಯತ್

#ಯಡೇಹಳ್ಳಿ_ಗ್ರಾಮ_ಪಂಚಾಯಿತಿ

#ಸ್ವಚ್ಚ_ಸಂಕೀರ್ಣ_ಘಟಕದ_ಉದ್ಘಾಟನೆ.

#ಆಹ್ವಾನ_ಪತ್ರಿಕೆ_ನೀಡಿದ್ದಾರೆ.

#ಅಧ್ಯಕ್ಷೆ_ಉಪಾದ್ಯಕ್ಷ_ಪಂಚಾಯತ್_ಅಭಿವೃದ್ದಿ_ಅಧಿಕಾರಿ_ಮಾಜಿ_ಉಪಾಧ್ಯಕ್ಷರು.


#Gramapanchayath #Yadehalli #Anandapuram #Sagar #Shivamogga.#Anandapuram

    ದಿನಾಂಕ 20 - ಸೆಪ್ಟಂಬರ್ - 2025 ಶನಿವಾರ ನಮ್ಮ ಊರಿನ ಯಡೇಹಳ್ಳಿ ಗ್ರಾಮ ಪಂಚಾಯತ್ ನ  ಕಸವಿಲೇವಾರಿ ಘಟಕದ ನೂತನ ಸ್ವಚ್ಚ ಸಂಕೀರ್ಣ ಭವನದ ಉದ್ಘಾಟನಾ ಸಮಾರಂಭ ನೆರವೇರಲಿದೆ.

   ಉದ್ಘಾಟನಾ ಸಮಾರಂಭದ ಆಹ್ವಾನ ಪತ್ರಿಕೆ ನೀಡಲು ಬಂದವರು ಅಧ್ಯಕ್ಷೆ #ಶ್ರೀಮತಿ_ರತ್ನಮ್ಮ ಇವರು ನಮ್ಮ ಯಡೇಹಳ್ಳಿ ಗ್ರಾಮ ಪಂಚಾಯಿತಿಯ ಕೊರಲಿಕೊಪ್ಪದ ದಿವಂಗತ ಕೆಂಚಣ್ಣರ ಪುತ್ರಿ ಕೆಂಚಣ್ಣ ನನ್ನ ಹಿರಿಯ ಗೆಳೆಯರು ಕೊರಲಿಕೊಪ್ಪದಿಂದ ಗೇರುಬೀಸಿಗೆ ಖಾತೆ ಜಮೀನಿನಲ್ಲಿ ರಸ್ತೆ ಮಾಡಿಸಲು ನಾನು ಜಿಲ್ಲಾ ಪಂಚಾಯತ್ ಸದಸ್ಯನಾಗಿದ್ದಾಗ ಸಹಕರಿಸಿದವರು.

   ಉಪಾಧ್ಯಕ್ಷರು #ಇರುವಕ್ಕಿ_ಗಣಪತಿ 1993ರಲ್ಲಿ ನಾವೆಲ್ಲ ಒಟ್ಟಿಗೆ ಚುನಾವಣೆ ಮಾಡಿ ಯಡೇಹಳ್ಳಿ ಗ್ರಾಮ ಪಂಚಾಯಿತಿ ಮೊದಲ ಸದಸ್ಯರಾದವರು.

     ಕಳೆದ 32 ವರ್ಷದಿಂದ ಮೂರು ಬಾರಿ ಅಧ್ಯಕ್ಷ ಮತ್ತು ಮೂರು ಬಾರಿ ಉಪಾಧ್ಯಕ್ಷರಾಗಿರುವ ಗಣಪತಿ ರಾಜ್ಯದಲ್ಲಿೇ ಮೊದಲ #ಬಗರ್_ಹುಕುಂ_ಹಕ್ಕುಪತ್ರ ನೀಡಿದ ಗ್ರಾಮ ಪಂಚಾಯಿತಿ ಎಂಬ ದಾಖಲೆ ಮಾಡಲು ನನ್ನ ಜೊತೆ ಕೈಜೋಡಿಸಿದವರು ಅಷ್ಟೇ ಅಲ್ಲ ಇವರು ನಮ್ಮ ಊರು ಯಡೇಹಳ್ಳಿ ವೃತ್ತದ ಶಾಶ್ವತ ದ್ವಜಸ್ಥಂಭ ಮತ್ತು ಅಂಬೇಡ್ಕರ್ ನಾಮಕರಣಕ್ಕೆ ಕಾರಣರಾದವರು.

   ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ #ಗೇರುಬೀಸು_ಶಿವಾನಂದ ನನ್ನ ಶಿಷ್ಯ ನನ್ನ ಸಾಗರ ತಾಲೂಕಿನ ಅಭಿವೃದ್ದಿಗಾಗಿ ಪಾದಯಾತ್ರೆ ಮತ್ತು ಎತ್ತಿನಗಾಡಿ ಯಾತ್ರೆಯಲ್ಲಿ ಮುಂಚೂಣಿಯಲ್ಲಿದ್ದ ಶರಾವತಿ ಮುಳುಗಡೆ ಸಂತ್ರಸ್ಥ ಕುಟುಂಬದ ದಿವಂಗತ ಜಟ್ಟಣ್ಣರ ಪುತ್ರ.

   ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ #ಸುರೇಶ್_S_K. ಉತ್ಸಾಹಿ ಯುವ ಅಧಿಕಾರಿ ಇವರು ನನ್ನ ಮಿತ್ರ ಕೆಳದಿಯ ಆರ್.ಸಿ. ಮಂಜಪ್ಪರ ಗೆಳೆಯ-ಸಂಬಂದಿ ಸತ್ಯನಾರಾಯಣರ ಪುತ್ರ.

    ನಮ್ಮ ಊರಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಕಸ ವಿಲೇವಾರಿ ಘಟಕ ಸ್ಥಾಪನೆ ಆಗಿರುವುದರಿಂದ ನಮ್ಮ ಊರು ಸಾಕಷ್ಟು ಸ್ವಚ್ಚವಾಗಿದೆ.

   ಅಲ್ಲಿ ಕಸಗಳ ವಿಂಗಡನೆಗೆ ನೂತನ ಕಟ್ಟಡ ನಿರ್ಮಾಣ ಆಗಿದೆ ಅಲ್ಲಿ ಸಿಬ್ಬಂದಿ ವರ್ಗಕ್ಕೆ ಕಛೇರಿ ಮತ್ತು ಶೌಚಾಲಯ ನಿರ್ಮಾಣ ಆಗಿದೆ.

   ನಮ್ಮ ಊರಲ್ಲಿ ನಾಲ್ಕು ನೂರು ಮನೆ ಇದೆ ಆದರೆ ಕಸ ವಿಲೇವಾರಿ ಘಟಕಕ್ಕೆ ಪ್ರತಿ ತಿಂಗಳ ಶುಲ್ಕ ಮುವ್ವತ್ತು ರೂಪಾಯಿ ಪಾವತಿ ಮಾಡುವವರು ಕೇವಲ ನೂರು ಮನೆ ಅಂತೆ!!.

    ಊರಿನ ಕಸ ವಿಲೇವಾರಿ ಮಾಡುವ ವ್ಯವಸ್ಥೆಗೆ ಊರವರೆಲ್ಲ ಕೈ ಜೋಡಿಸಬೇಕು ದಿನಕ್ಕೆ ಕೇವಲ ಒಂದು ರೂಪಾಯಿ ಶುಲ್ಕ ಮಾತ್ರ ಇದೆ ಅದನ್ನು ಪಾವತಿಸಿ ಎಲ್ಲಾ ಮನೆಯವರೂ ಸಹಕರಿಸಬೇಕು ಈ ಬಗ್ಗೆ ಊರಿನ ಪ್ರಗತಿಪರರು ಕೂಡ  ಸಾರ್ವಜನಿಕರಿಗೆ ಈ ಬಗ್ಗೆ ತಿಳಿಹೇಳಿ ಪ್ರೋತ್ಸಾಹಿಸ ಬೇಕು.

   ಅಪರೂಪಕ್ಕೆ ಬಂದಿದ್ದ ಇವರೆಲ್ಲರಿಗೂ ನಮ್ಮ ಸಂಸ್ಥೆ ಪರವಾಗಿ ಗೌರವಿಸಿ ನಮ್ಮ #ಮಲ್ಲಿಕಾ_ವೆಜ್ ನಿಂದ ಕಾಫಿ ನೀಡಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...