Skip to main content

3496. ಯಡೇಹಳ್ಳಿ ಗ್ರಾಮ ಪಂಚಾಯತ್

#ಯಡೇಹಳ್ಳಿ_ಗ್ರಾಮ_ಪಂಚಾಯಿತಿ

#ಸ್ವಚ್ಚ_ಸಂಕೀರ್ಣ_ಘಟಕದ_ಉದ್ಘಾಟನೆ.

#ಆಹ್ವಾನ_ಪತ್ರಿಕೆ_ನೀಡಿದ್ದಾರೆ.

#ಅಧ್ಯಕ್ಷೆ_ಉಪಾದ್ಯಕ್ಷ_ಪಂಚಾಯತ್_ಅಭಿವೃದ್ದಿ_ಅಧಿಕಾರಿ_ಮಾಜಿ_ಉಪಾಧ್ಯಕ್ಷರು.


#Gramapanchayath #Yadehalli #Anandapuram #Sagar #Shivamogga.#Anandapuram

    ದಿನಾಂಕ 20 - ಸೆಪ್ಟಂಬರ್ - 2025 ಶನಿವಾರ ನಮ್ಮ ಊರಿನ ಯಡೇಹಳ್ಳಿ ಗ್ರಾಮ ಪಂಚಾಯತ್ ನ  ಕಸವಿಲೇವಾರಿ ಘಟಕದ ನೂತನ ಸ್ವಚ್ಚ ಸಂಕೀರ್ಣ ಭವನದ ಉದ್ಘಾಟನಾ ಸಮಾರಂಭ ನೆರವೇರಲಿದೆ.

   ಉದ್ಘಾಟನಾ ಸಮಾರಂಭದ ಆಹ್ವಾನ ಪತ್ರಿಕೆ ನೀಡಲು ಬಂದವರು ಅಧ್ಯಕ್ಷೆ #ಶ್ರೀಮತಿ_ರತ್ನಮ್ಮ ಇವರು ನಮ್ಮ ಯಡೇಹಳ್ಳಿ ಗ್ರಾಮ ಪಂಚಾಯಿತಿಯ ಕೊರಲಿಕೊಪ್ಪದ ದಿವಂಗತ ಕೆಂಚಣ್ಣರ ಪುತ್ರಿ ಕೆಂಚಣ್ಣ ನನ್ನ ಹಿರಿಯ ಗೆಳೆಯರು ಕೊರಲಿಕೊಪ್ಪದಿಂದ ಗೇರುಬೀಸಿಗೆ ಖಾತೆ ಜಮೀನಿನಲ್ಲಿ ರಸ್ತೆ ಮಾಡಿಸಲು ನಾನು ಜಿಲ್ಲಾ ಪಂಚಾಯತ್ ಸದಸ್ಯನಾಗಿದ್ದಾಗ ಸಹಕರಿಸಿದವರು.

   ಉಪಾಧ್ಯಕ್ಷರು #ಇರುವಕ್ಕಿ_ಗಣಪತಿ 1993ರಲ್ಲಿ ನಾವೆಲ್ಲ ಒಟ್ಟಿಗೆ ಚುನಾವಣೆ ಮಾಡಿ ಯಡೇಹಳ್ಳಿ ಗ್ರಾಮ ಪಂಚಾಯಿತಿ ಮೊದಲ ಸದಸ್ಯರಾದವರು.

     ಕಳೆದ 32 ವರ್ಷದಿಂದ ಮೂರು ಬಾರಿ ಅಧ್ಯಕ್ಷ ಮತ್ತು ಮೂರು ಬಾರಿ ಉಪಾಧ್ಯಕ್ಷರಾಗಿರುವ ಗಣಪತಿ ರಾಜ್ಯದಲ್ಲಿೇ ಮೊದಲ #ಬಗರ್_ಹುಕುಂ_ಹಕ್ಕುಪತ್ರ ನೀಡಿದ ಗ್ರಾಮ ಪಂಚಾಯಿತಿ ಎಂಬ ದಾಖಲೆ ಮಾಡಲು ನನ್ನ ಜೊತೆ ಕೈಜೋಡಿಸಿದವರು ಅಷ್ಟೇ ಅಲ್ಲ ಇವರು ನಮ್ಮ ಊರು ಯಡೇಹಳ್ಳಿ ವೃತ್ತದ ಶಾಶ್ವತ ದ್ವಜಸ್ಥಂಭ ಮತ್ತು ಅಂಬೇಡ್ಕರ್ ನಾಮಕರಣಕ್ಕೆ ಕಾರಣರಾದವರು.

   ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ #ಗೇರುಬೀಸು_ಶಿವಾನಂದ ನನ್ನ ಶಿಷ್ಯ ನನ್ನ ಸಾಗರ ತಾಲೂಕಿನ ಅಭಿವೃದ್ದಿಗಾಗಿ ಪಾದಯಾತ್ರೆ ಮತ್ತು ಎತ್ತಿನಗಾಡಿ ಯಾತ್ರೆಯಲ್ಲಿ ಮುಂಚೂಣಿಯಲ್ಲಿದ್ದ ಶರಾವತಿ ಮುಳುಗಡೆ ಸಂತ್ರಸ್ಥ ಕುಟುಂಬದ ದಿವಂಗತ ಜಟ್ಟಣ್ಣರ ಪುತ್ರ.

   ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ #ಸುರೇಶ್_S_K. ಉತ್ಸಾಹಿ ಯುವ ಅಧಿಕಾರಿ ಇವರು ನನ್ನ ಮಿತ್ರ ಕೆಳದಿಯ ಆರ್.ಸಿ. ಮಂಜಪ್ಪರ ಗೆಳೆಯ-ಸಂಬಂದಿ ಸತ್ಯನಾರಾಯಣರ ಪುತ್ರ.

    ನಮ್ಮ ಊರಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಕಸ ವಿಲೇವಾರಿ ಘಟಕ ಸ್ಥಾಪನೆ ಆಗಿರುವುದರಿಂದ ನಮ್ಮ ಊರು ಸಾಕಷ್ಟು ಸ್ವಚ್ಚವಾಗಿದೆ.

   ಅಲ್ಲಿ ಕಸಗಳ ವಿಂಗಡನೆಗೆ ನೂತನ ಕಟ್ಟಡ ನಿರ್ಮಾಣ ಆಗಿದೆ ಅಲ್ಲಿ ಸಿಬ್ಬಂದಿ ವರ್ಗಕ್ಕೆ ಕಛೇರಿ ಮತ್ತು ಶೌಚಾಲಯ ನಿರ್ಮಾಣ ಆಗಿದೆ.

   ನಮ್ಮ ಊರಲ್ಲಿ ನಾಲ್ಕು ನೂರು ಮನೆ ಇದೆ ಆದರೆ ಕಸ ವಿಲೇವಾರಿ ಘಟಕಕ್ಕೆ ಪ್ರತಿ ತಿಂಗಳ ಶುಲ್ಕ ಮುವ್ವತ್ತು ರೂಪಾಯಿ ಪಾವತಿ ಮಾಡುವವರು ಕೇವಲ ನೂರು ಮನೆ ಅಂತೆ!!.

    ಊರಿನ ಕಸ ವಿಲೇವಾರಿ ಮಾಡುವ ವ್ಯವಸ್ಥೆಗೆ ಊರವರೆಲ್ಲ ಕೈ ಜೋಡಿಸಬೇಕು ದಿನಕ್ಕೆ ಕೇವಲ ಒಂದು ರೂಪಾಯಿ ಶುಲ್ಕ ಮಾತ್ರ ಇದೆ ಅದನ್ನು ಪಾವತಿಸಿ ಎಲ್ಲಾ ಮನೆಯವರೂ ಸಹಕರಿಸಬೇಕು ಈ ಬಗ್ಗೆ ಊರಿನ ಪ್ರಗತಿಪರರು ಕೂಡ  ಸಾರ್ವಜನಿಕರಿಗೆ ಈ ಬಗ್ಗೆ ತಿಳಿಹೇಳಿ ಪ್ರೋತ್ಸಾಹಿಸ ಬೇಕು.

   ಅಪರೂಪಕ್ಕೆ ಬಂದಿದ್ದ ಇವರೆಲ್ಲರಿಗೂ ನಮ್ಮ ಸಂಸ್ಥೆ ಪರವಾಗಿ ಗೌರವಿಸಿ ನಮ್ಮ #ಮಲ್ಲಿಕಾ_ವೆಜ್ ನಿಂದ ಕಾಫಿ ನೀಡಿದೆ.

Comments

Popular posts from this blog

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...