Skip to main content

3497. ತಾಳಗುಂದ ಶಾಸನ ಸಂಶೋದಕರು

#ಡಾ_ತಿರುಮಲೈ_ಮದುರನಾಥ_ಕೇಶವ

#ಇವರ_71ನೇ_ಹುಟ್ಟು_ಹಬ್ಬದ_ಶುಭಹಾರೈಕೆಗಳು

#ತಾಳಗುಂದ_ಶಾಸನ_ಸಂಶೋಧನೆ_ಮಾಡಿದವರು

#ಹಲ್ಮಿಡಿ_ಶಾಸನಕ್ಕಿಂತ_80_ವರ್ಷ_ಹಳೆಯ_ಶಾಸನ.

#ಶಿವಮೊಗ್ಗ_ಜಿಲ್ಲೆಯ_ಶಿಕಾರಿಪುರ_ತಾಲ್ಲೂಕಿನ_ಶಿರಾಳಕೊಪ್ಪದಿಂದ_11_ಕಿಲೋಮೀಟರ್_ದೂರದಲ್ಲಿದೆ


#Kannadasculpture #Talagunda #Halmidi #Researcher #DrTMKeshava
#Shivamogga #Shikaripura

    ಡಾಕ್ಟರ್ ತಿರುಮಲೈ ಮದುರನಾಥ ಕೇಶವರವರ 71 ನೇ ಹುಟ್ಟು ಹಬ್ಬದ ಶುಭಾಶಯಗಳು.

    ಅವರ ಜನ್ಮ ದಿನಾಂಕ 19 -ಸೆಪ್ಟೆಂಬರ್-1954.

  ಬೆಂಗಳೂರು ವಲಯದ ಭಾರತೀಯ ಪುರಾತತ್ವ ಸರ್ವೇಕ್ಷಣಾಲಯದ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞರಾಗಿದ್ದವರು.

   ಈಗ ನಿವೃತ್ತರಾಗಿ ಬೆಂಗಳೂರಿನಲ್ಲಿ ವಿಶ್ರಾಂತ ಜೀವನ ನಡೆಸಿದ್ದಾರೆ.

  ಇವರೇ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ತಾಳಗುಂದದ ಸಿಂಹ ಕಟಾಂಜನದ ಕನ್ನಡ ಶಾಸನ ಉತ್ಕನದಲ್ಲಿ ಸಂಶೋಧನೆ ಮಾಡಿದವರು.

   ಈ ಶಾಸನ ಹಲ್ಮಿಡಿಯ ಶಾಸನಕ್ಕಿಂತ 80 ವರ್ಷ ಹಿಂದಿನದ್ದು.

    ಅಂದರೆ ಕನ್ನಡದ ಮೊದಲ ಶಾಸನ ಎನ್ನಿಸಿಕೊಂಡ ಹಲ್ಮಿಡಿ ಶಾಸನಕ್ಕಿಂತ ಹಿಂದಿನದ್ದು.

   ತಾಳಗುಂದ ಶಾಸನ ಕುವೆಂಪು ವಿಶ್ವ ವಿದ್ಯಾಲಯದಲ್ಲಿ ಪಠ್ಯವಾಗಿದೆ.

   ಇತಿಹಾಸ ದರ್ಪಣ ಪುಸ್ತಕದಲ್ಲಿ ತಾಳಗುಂದ ಶಾಸನದ ವಿವರವಾದ ಲೇಖನ ಪ್ರಕಟವಾಗಿದೆ.

  ಕೇಂದ್ರ ಪುರಾತತ್ವ ಇಲಾಖೆ "Early kannada inscription found" ಎಂದು ಉಲ್ಲೇಖಿಸಿದ್ದಾರೆ.

    ಕದಂಬರ ರಾಜ ಮಯೂರ ವರ್ಮನ ಕುಲದೇವರು ತಾಳಗುಂದದ ಪ್ರಣವೇಶ್ವರ.

  ಪ್ರಣವೇಶ್ವರ ದೇವಾಲಯದ ದ್ವಾರ ಪುನರ್ ನಿರ್ಮಾಣ ಮಾಡಿದ ಕದಂಭ ರಾಜ ಕಾಕುಸ್ತ ವರ್ಮ ನೆಡಿಸಿದ ಸ್ತಂಭ ಶಾಸನ ಕಾಲದಲ್ಲಿ ಈ ಕಟಾಂಜನ ಶಾಸನಗಳು ಈ ದೇವಾಲಯ ನವೀಕರಣ ಮಾಡುವಾಗ ಮಣ್ಣಿನಲ್ಲಿ ಹೂತು ಹೋದವುಗಳು.

  ಈ ಕನ್ನಡದ ಕ್ರಿ.ಶ. 380 ರ ಕಾಲಮಾನದ ಕಟಾಂಜನ ಶಾಸನ ಬಳ್ಳಿಗಾವಿಯ ವಸ್ತು ಸಂಗ್ರಹಾಲಯಕ್ಕೆ ತೆಗೆದು ಕೊಂಡು ಹೋಗಿ ಸಂರಕ್ಷಣೆ ಮಾಡುವ ಕೆಲಸ ಅನೇಕ ಕಾರಣದಿಂದ ವಿಳಂಬವಾಗಿದೆ ಮತ್ತು ಸ್ಥಳೀಯರು ಅದು ಇಲ್ಲೇ ಇರಬೇಕೆಂದು ಕೂಡ ಬಯಸಿದ್ದಾರೆ.

   ಆ ಕಾರಣದಿಂದ ಮತ್ತು ಈ ಅಪೂರ್ವ ಶಾಸನ ಹಾಳಾಗಬಾರದೆಂದು ತಾಳಗುಂದದ ಪ್ರಣವೇಶ್ವರ ದೇವಾಲಯದ ಸ್ಥಂಭ ಶಾಸನದ ಎದರು ಅದು ಉತ್ಕನನ ಮಾಡಿದ ಸ್ಥಳದಲ್ಲೇ ಪುನಃ ಮಣ್ಣಿನಲ್ಲಿಯೇ ಮುಚ್ಚಿಟ್ಟಿದ್ದಾರೆ.

    ಈ ವರ್ಷದ 2005ರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಗೌರವವನ್ನು ಈ ಕನ್ನಡದ ಅಮೋಘ ಸಂಶೋಧನೆ ಮಾಡಿದ ಡಾ. ಟಿ.ಎಂ. ಕೇಶವರಿಗೆ ನೀಡ ಬೇಕೆಂದು ಸಮಸ್ತ ಕನ್ನಡಿಗರ ಪರವಾಗಿ ಕರ್ನಾಟಕ ಸರ್ಕಾರಕ್ಕೆ ಒತ್ತಾಯಿಸೋಣ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...