Skip to main content

3500. ದರ್ಬೆ ಹುಲ್ಲು

#ದರ್ಬೆ_ಹುಲ್ಲು

#ಧಾರ್ಮಿಕ_ಆಚರಣೆಯಲ್ಲಿ_ಬಳಕೆ

#ಹಿಂದೂ_ಬೌದ್ದ_ಜೈನ_ಧರ್ಮಿಯರಲ್ಲಿ_ಪವಿತ್ರವೆಂದು_ಪರಿಗಣಿಸಿದ್ದಾರೆ.

#ವೇದ_ಕಾಲದಿಂದಲೂ_ಶ್ರೀಕೃಷ್ಣ_ಭಗವದ್ಗೀತೆಯಲ್ಲಿ_ದರ್ಬೆ_ಉಲ್ಲೇಖವಿದೆ.

#ದ್ಯಾನಕ್ಕೆ_ಆಸನವಾಗಿ_ಪೂಜಾಕಾರ್ಯಗಳಲ್ಲಿ_ಆಯುರ್ವೇದದಲ್ಲಿಯೂ_ದರ್ಬೆ_ಬಳಕೆ.


#Dharbe #Hindu #Buddist #Jainism #Bhagavadgeetha #Religion Yaga #Homa

   ಪೂಜಾ ಕಾರ್ಯಕ್ರಮಗಳಲ್ಲಿ ಪುರೋಹಿತರು ಬರೆಸುವ ಪೂಜಾ ಸಾಮಾಗ್ರಿ ಪಟ್ಟಿಯಲ್ಲಿ ಹಣ್ಣು-ಕಾಯಿ - ಅರಿಶಿಣ-ಕುಂಕುಮಗಳ ಜೊತೆ ಈ #ದರ್ಬೆ_ಹುಲ್ಲು ಕಡ್ಡಾಯವಾಗಿ ಬರೆದಿರುತ್ತಾರೆ.

  ದರ್ಬೆಯ ಉಂಗುರವನ್ನು ಸಾಮಾನ್ಯವಾಗಿ ಕುಶದ ಉಂಗುರ ಅಥವಾ ದರ್ಬೆಯ ಉಂಗುರ ಎಂದೇ ಕರೆಯುತ್ತಾರೆ.

 ಇದು ವಾತಾವರಣದ ದುಷ್ಟ ಶಕ್ತಿಗಳನ್ನು ನಿಯಂತ್ರಿಸುವ ಪವಿತ್ರ ಶಕ್ತಿಯನ್ನು ಹೊಂದಿರುವುದರಿಂದ ಪೂಜೆಗಳು ಮತ್ತು ಯಜ್ಞಗಳಲ್ಲಿ ಬಳಸಲ್ಪಡುತ್ತದೆ.

     ದರ್ಭೆ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯೋಣ ಬನ್ನಿ....

    ದರ್ಬೆ ಹುಲ್ಲು, ವೈಜ್ಞಾನಿಕವಾಗಿ ಡೆಸ್ಮೊಸ್ಟ್ಯಾಕಿಯ ಬೈಪಿನೇಟ (Desmostachya bipinnata) ಎಂದು ಕರೆಯಲ್ಪಡುತ್ತದೆ, ಇದು ಭಾರತದಾದ್ಯಂತ ಬೆಳೆಯುವ ಒಂದು ಬಹುವಾರ್ಷಿಕ ಹುಲ್ಲು. 

  ಇದು ಧಾರ್ಮಿಕ, ಆಧ್ಯಾತ್ಮಿಕ ಮತ್ತು ಔಷಧೀಯ ಮಹತ್ವವನ್ನು ಹೊಂದಿದೆ. ಹಿಂದೂ, ಬೌದ್ಧ ಮತ್ತು ಜೈನ ಸಂಪ್ರದಾಯಗಳಲ್ಲಿ ಪವಿತ್ರವೆಂದು ಪರಿಗಣಿಸಲಾಗುತ್ತದೆ.

   ಧ್ಯಾನಕ್ಕೆ ಆಸನವಾಗಿ, ಪೂಜಾ ಕಾರ್ಯಗಳಲ್ಲಿ, ಮತ್ತು ಉಂಗುರವಾಗಿ ಧರಿಸಲು ಬಳಸಲಾಗುತ್ತದೆ. ಔಷಧೀಯವಾಗಿ, ಇದು ಜ್ವರ, ಮೂತ್ರ ಸಮಸ್ಯೆಗಳು, ಮತ್ತು ಉರಿಗಳಿಗೆ ಪರಿಹಾರ ನೀಡುತ್ತದೆ ಎಂದು ನಂಬಲಾಗಿದೆ.  
ಧಾರ್ಮಿಕ ಮತ್ತು ಆಧ್ಯಾತ್ಮಿಕ ಮಹತ್ವ ಪಡೆದಿದೆ.

  ಬೌದ್ಧರು ಮತ್ತು ಹಿಂದೂಗಳು ಧ್ಯಾನಕ್ಕಾಗಿ ದರ್ಬೆ ಚಾಪೆಗಳನ್ನು ಬಳಸುತ್ತಾರೆ.

    ಇದು ದೇಹದ ಶಕ್ತಿಯನ್ನು ಹೊರಹೋಗದಂತೆ ತಡೆದು, ಶಕ್ತಿಯನ್ನು ದೇಹದಲ್ಲಿ ಕೇಂದ್ರೀಕರಿಸಲು ಸಹಾಯ ಮಾಡುತ್ತದೆ ಎಂಬ ನಂಬಿಕೆ ಇದೆ.

   ಯಜ್ಞ, ಹವನ, ಮತ್ತು ಪೂಜೆಗಳ ಸಮಯದಲ್ಲಿ ಪುರೋಹಿತರು ದರ್ಬೆಯನ್ನು #ಉಂಗುರ ಮಾಡಿ ಬಲಗೈಯ ಉಂಗುರದ ಬೆರಳಿಗೆ ಧರಿಸುತ್ತಾರೆ. 

   ದರ್ಬೆ ಹುಲ್ಲಿನ ಸುತ್ತಲೂ ದುಷ್ಟ ಶಕ್ತಿಗಳು ಬರುವುದಿಲ್ಲ ಎಂದು ನಂಬಲಾಗುತ್ತದೆ, ಹಾಗಾಗಿ ಹೋಮಕುಂಡದ ಸುತ್ತಲೂ ದರ್ಬೆಯನ್ನು ಇಡಲಾಗುತ್ತದೆ.

   ಪೂಜಾ ಸ್ಥಳಗಳನ್ನು ಮತ್ತು ಮನೆಗಳನ್ನು ಶುದ್ಧೀಕರಿಸಲು ದರ್ಬೆಯನ್ನು ನೀರಿನಲ್ಲಿ ಅದ್ದಿ ಸಿಂಪಡಿಸುತ್ತಾರೆ. 

   ದರ್ಬೆಯ ಕಷಾಯ ಸೇವಿಸುವುದರಿಂದ ದೇಹದ ಉಷ್ಣತೆ ಕಡಿಮೆಯಾಗಿ, ಜ್ವರ ಮತ್ತು ಮೂತ್ರದ ಉರಿ ಕಡಿಮೆಯಾಗುತ್ತದೆ.
 
   ಬೇರನ್ನು ಜಜ್ಜಿ ಗಾಯದ ಮೇಲೆ ಇಟ್ಟರೆ ರಕ್ತಸ್ರಾವ ನಿಂತು, ಗಾಯ ಬೇಗನೆ ಗುಣವಾಗುತ್ತದೆ. 

  ಎಳ್ಳೆಣ್ಣೆಯಲ್ಲಿ ದರ್ಭೆಯನ್ನು ಕುದಿಸಿ ಚರ್ಮರೋಗಗಳಾದ ತೊನ್ನು, ಕಜ್ಜಿ, ಮತ್ತು ಹುಳುಕಡ್ಡಿಗಳಿಗೆ ಹಚ್ಚುತ್ತಾರೆ.

    ದರ್ಬೆಯನ್ನು ಅನಾದಿ ಕಾಲದಿಂದಲೂ ಪೂಜಾ ಕೈಂಕರ್ಯಗಳಲ್ಲಿ ಉಪಯೋಗಿಸಿಕೊಂಡು ಬರಲಾಗಿದೆ.
 
   ವೇದಗಳ ಕಾಲದಿಂದಲೂ ದೇವರ ಆಸನದ ಜಾಗದಲ್ಲಿ ಗ್ರಹಣಕ್ಕೆ ಮುನ್ನ ದರ್ಬೆಯನ್ನು ಇರಿಸುವ ಪದ್ಧತಿ ಆಚರಣೆಯಲ್ಲಿದೆ.

   ಸ್ವತಃ ಶ್ರೀ ಕೃಷ್ಣ ಪರಮಾತ್ಮ ಭಗವದ್ಗೀತೆಯಲ್ಲಿ ದರ್ಬೆಯನ್ನು ಧ್ಯಾನಾಸನಗಳ ಭಾಗ ಎಂದು ಉಪದೇಶಿಸಿದ್ದಾನೆ. 

 ದರ್ಬೆಯು ಇಂದ್ರನ ವಜ್ರಾಯುಧವಿದ್ದಂತೆ,ದರ್ಬೆಯನ್ನು ದೇವಲೋಕದಿಂದ ಯಜ್ಞ ಯಾಗಾದಿಗಳಿಗೆಂದೇ ಭೂ ಲೋಕಕ್ಕೆ ಭಗವಂತನು ಕಳಿಸಿದ್ದಾನೆ ಅಂತಾ ನಮ್ಮ ಶಾಸ್ತ್ರಗಳಲ್ಲಿ ಉಲ್ಲೇಖವಿದೆ.

   ಧ್ಯಾನದ ಸಮಯದಲ್ಲಿ ನಮ್ಮ ಶರೀರದಿಂದ ಮುಖ್ಯವಾಗಿ ಕಾಲು ಹಾಗೂ ಕಾಲಿನ ಬೆರಳಿನಿಂದ ಹೊರಹೋಗುವ ಶಕ್ತಿಯನ್ನು ತಡೆಗಟ್ಟುವುದರಲ್ಲಿ ಇದು ಮುಖ್ಯ ಪಾತ್ರ ವಹಿಸುತ್ತೆ ಎನ್ನಲಾಗುತ್ತೆ.

   ಹೋಮ ಹವನಾದಿಗಳಲ್ಲಿ ದರ್ಬೆಯನ್ನು ಹೋಮಕುಂಡದ ಸುತ್ತ 4 ಬದಿಯಲ್ಲೂ ಇರಿಸಲಾಗುತ್ತೆ.

    ಈ ಕ್ರಮವನ್ನು ಪರಿಸ್ಥರಣ ಎನ್ನುತ್ತಾರೆ ಅಂದ್ರೆ ಇದು ದೇವರ ಆಸನ ಎಂದರ್ಥ.

  ದರ್ಭೆಯಿಂದ ಮಾಡುವ ಪವಿತ್ರವನ್ನು ಪುರುಷನು ತನ್ನ ಬಲಕೈ ಯ ಉಂಗುರದ ಬೆರಳಿಗೆ ಧರಿಸುತ್ತಾನೆ.

   ಅಶುಭ ಸಂದರ್ಭಗಳಾದ ಸಾವು ಮೊದಲಾದ ಸಂದರ್ಭಗಳಲ್ಲಿ ಒಂದೇ ಎಳೆಯ ದರ್ಭೆಯನ್ನೂ,ನಿತ್ಯ ಪೂಜೆ ಹಾಗೂ ಶುಭ ಸಂದರ್ಭಗಳಲ್ಲಿ ಎರಡು ಎಳೆಯ ದರ್ಭೆಯನ್ನೂ ಅಮಾವಾಸ್ಯೆ ಹಾಗೂ ಶ್ರಾದ್ಧ ಕರ್ಮಾದಿಗಳಲ್ಲಿ, 3 ಎಳೆಯ ದರ್ಭೆಯನ್ನ ದೇವಸ್ಥಾನಗಳಲ್ಲಿ ಮಾಡಲಾಗುವ ಪೂಜೆಗಳಲ್ಲಿ, 4 ಎಳೆಯ ದರ್ಭೆಯನ್ನೂ ಪವಿತ್ರವಾಗಿ ನಮ್ಮ ಬಲಗೈ ಉಂಗುರದ ಬೆರಳಲ್ಲಿ ಧರಿಸಲಾಗುತ್ತದೆ.

  ಮನೆಯಲ್ಲಿ ನಾವು ಮಾಡುವ ಯಾವುದೇ ಕಾರ್ಯಕ್ರಮದ ಮೊದಲಿಗೆ “ಪುಣ್ಯಾಹವಾಚನ”ಎಂಬುದಾಗಿ ಮಾಡುತ್ತಾರೆ ಅಂದರೆ ಕಾರ್ಯಕ್ರಮ ನಡೆಯುವ ಜಾಗದ ಶುದ್ದೀಕರಣ ಇಲ್ಲಿ ದರ್ಭೆಯ ಒಂದು ಗೊಂಚಲನ್ನು ಹಿಡಿದು ಅದರ ತುದಿಯಿಂದ ಎಲ್ಲ ಪೂಜಾ ಸಾಮಗ್ರಿಗಳ ಮೇಲೂ ಆ ಜಾಗದ ಪ್ರತೀ ಮೂಲೆಗಳಲ್ಲೂ ಹಾಗೂ ಅಲ್ಲಿರುವವರ ಮೇಲೂ ನೀರನ್ನು ಪ್ರೋಕ್ಷಣೆ ಮಾಡಲಾಗುತ್ತದೆ.

   ಶ್ರಾವಣ ಮಾಸದ ಅಮಾವಾಸ್ಯೆಯಂದು ಕತ್ತರಿಸಿ ತಂದ ದರ್ಭೆಯು ಯಾತಯಾಮವಾಗದೇ ಯಾವತ್ತೂ ಕಾರ್ಯಗಳಿಗೆ ಬಳಸಬಹುದು.

   ಬೇರೆ ಅಮಾವಾಸ್ಯೆಯಂದು ತಂದ ದರ್ಭೆಯನ್ನು ಒಂದು ತಿಂಗಳು ಮಾತ್ರ ಬಳಸಬೇಕು.

   ಹುಣ್ಣಿಮೆಯಂದು ತಂದ ದರ್ಭೆಯು 15 ದಿನಗಳ ಕಾಲ ಶುದ್ಧ.

   ಮಹಾಲಯ ಅಮಾವಾಸ್ಯೆಯಂದು ತಂದ ದರ್ಭೆಯು 6 ತಿಂಗಳು ಶುದ್ಧ.

 ಭಾನುವಾರ ತಂದರೆ 1 ವಾರ. 

  ಆಯಾಯ ದಿನ ತಂದರೆ ಆಯಾಯ ದಿನ ಮಾತ್ರ ಶುದ್ಧ. ‌

  ಶ್ರಾವಣ ಅಮಾವಾಸ್ಯೆಯಂದು ಕತ್ತರಿಸಿ ತಂದ ದರ್ಭೆಯ ಜೊತೆಗೆ ಉಳಿದದ್ದನ್ನು ಸೇರಿಸಿದರೆ ಎಲ್ಲವೂ ಶುದ್ಧವಾಗಿ ಯಾವಾಗಲೂ ಬಳಸಬಹುದು.

    ಈ ರೀತಿ ಭಾರತೀಯ ಮೂಲದ ಬಹುವಾರ್ಷಿಕ ದರ್ಭೆ ಹುಲ್ಲು ಧಾರ್ಮಿಕ, ಆಧ್ಯಾತ್ಮಿಕ ಮತ್ತು ಆಯುರ್ವೇದ ಶಾಸ್ತ್ರದಲ್ಲಿ ಬಳಕೆಯಲ್ಲಿದೆ.

Comments

Popular posts from this blog

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...