Skip to main content

3506. ಡಾಕ್ಟರ್ ಎಂ.ಸಿ.ಮೋದಿ ಅವರ 109ನೇ ಹುಟ್ಟು ಹಬ್ಬ

#ಡಾಕ್ಟರ್_ಎಂ_ಸಿ_ಮೋದಿ_ಅವರ_106ನೆ_ಹುಟ್ಟು_ಹಬ್ಬ.

#ಮುರಿಗೆಪ್ಪ_ಚೆನ್ನಬಸಪ್ಪ_ಮೋದಿ

#ಹಳ್ಳಿ_ಹಳ್ಳಿಗಳಲ್ಲಿ_ಉಚಿತ_ನೇತ್ರ_ಚಿಕಿತ್ಸಾ_ಶಿಭಿರ_ಏರ್ಪಡಿಸಿ_ಚಿಕಿತ್ಸೆ_ನೀಡಿದವರು.  

#ನಮ್ಮೂರಲ್ಲಿ_ಅವರ_ಎರೆಡು_ನೇತ್ರ_ಚಿಕಿತ್ಸಾ_ಶಿಬಿರ

#ಸ್ಥಳಿಯ_ಕನ್ನಡ_ಸಂಘ_ಏರ್ಪಡಿಸಿತ್ತು.


  #DrMCModi #eyesurgeon #mahatmaghandi #birthanniversery #modihospital 

   ಇವತ್ತು ದಿನಾಂಕ 4-ಅಕ್ಟೋಬರ್ ಉಚಿತ ಕಣ್ಣಿನ ತಪಾಸಣಾ ಮತ್ತು ಶಸ್ತ್ರಚಿಕಿತ್ಸಾ ಶಿಭಿರ ಏರ್ಪಡಿಸಿ ಸುಮಾರು 40 ವರ್ಷ ಕಣ್ಣಿನ ಪೊರೆಯಿಂದ ದೃಷ್ಟಿ ಕಳೆದುಕೊಂಡವರಿಗೆ ಪುನಃ ದೃಷ್ಟಿ ಬರುವಂತೆ ಮಾಡುತ್ತಿದ್ದ ಡಾಕ್ಟರ್ ಎಂ.ಸಿ. ಮೋದಿ ಅವರ 109ನೇ ಹುಟ್ಟುಹಬ್ಬ.

   ಡಾಕ್ಟರ್ ಎಂ.ಸಿ. ಮೋದಿ ಮಹಾತ್ಮಾ ಗಾಂದೀಜಿಯಿಂದ ಪ್ರೇರಿತರಾಗಿ ಕುಗ್ರಾಮಗಳಲ್ಲಿ ಉಚಿತವಾಗಿ ಮಾಡಿರುವ ಕಣ್ಣಿನ ಆಪರೇಷನ್ ಗಳು ಯಾರೂ ಅಳಿಸಲಾರದ ವಿಶ್ವ ದಾಖಲೆ.

  ಡಾ.ಎಂ.ಸಿ. ಮೋದಿಯವರ ಕಣ್ಣಿನ ಶಸ್ತ್ರ ಚಿಕಿತ್ಸೆಯ ದಾಖಲೆ ಯಾರೂ ಮುರಿಯಲು ಸಾಧ್ಯವಿಲ್ಲ ಅದು ಸರ್ವಕಾಲಿಕ ವಿಶ್ವ ದಾಖಲೆ.

   1968 ರಲ್ಲಿ ತಿರುಪತಿಯಲ್ಲಿ ಸತತ 14 ಗಂಟೆ ಕಣ್ಣಿನ ಚಿಕಿತ್ಸೆ ಮಾಡಿದ್ದರು.

  ಒಂದೇ ದಿನ 833 ಜನರ ನೇತೃ ಶಸ್ತ್ರಚಿಕಿತ್ಸೆಗಾಗಿ1986 ರಲ್ಲಿ ಇವರ ಹೆಸರು ಗಿನ್ನೆಸ್ ದಾಖಲೆಯಲ್ಲಿದೆ.

  ಒಮ್ಮೆಗೆ 4 ಜನರ೦ತೆ ಗ೦ಟೆಗೆ 40 ಶಸ್ತ್ರಚಿಕಿತ್ಸೆ ಮಾಡುತ್ತಿದ್ದರು.

   ಇವರು ಮಾಡಿರುವ ಒಟ್ಟು ಕಣ್ಣಿನ ಶಸ್ತ್ರಚಿಕಿತ್ಸೆ 5 ಲಕ್ಷದ 79 ಸಾವಿರ, ತಪಾಸಣೆ ಮಾಡಿದ ಸಂಖ್ಯೆ 50 ಲಕ್ಷ, 45 ಸಾವಿರಕ್ಕೂ ಹೆಚ್ಚು ಹಳ್ಳಿಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

   ಇವರ ಕಣ್ಣಿನ ಶಸ್ತ್ರಚಿಕಿತ್ಸೆ ಯಶಸ್ಸಿನ ಶೇಕಡವಾರು 99.5%.

   ಇದಕ್ಕಾಗಿ ಇವರಿಗೆ ಬಂದ ದೇಶ ವಿದೇಶಗಳ ಪ್ರಶಸ್ತಿ ಅಸಂಖ್ಯ, ಪದ್ಮಶ್ರೀ, ಪದ್ಮಭೂಷಣ, ಹೆಲೆನ್ ಕೆಲರ್ ಹೀಗೆ ಆ ಪಟ್ಟಿ ದೊಡ್ಡದಿದೆ.

  ಆದರೆ ಡಾ.ಎಂ.ಸಿ.ಮೋದಿ ಗ್ರಾಮೀಣ ಪ್ರದೇಶದ ಬಡ ಜನರ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಅವರು ಮುಂದಾಗಲು ಕಾರಣ ಮಹಾತ್ಮಾ ಗಾಂದೀಜಿ.

  1942 ರಲ್ಲಿ ಮುಂಬೈನಲ್ಲಿ ನಡೆದ ಕ್ರಿಟ್ ಇಂಡಿಯಾ ಚಳವಳಿಯ ಸಮಾವೇಶದಲ್ಲಿ ಗಾಂದೀಜಿ ಪ್ರೇರಣೆಯಿಂದ ಡಾ.ಮೋದಿ ಕನಾ೯ಟಕದ ಹಳ್ಳಿಗಳ ಬಡ ಜನರ ನೇತೃ ಚಿಕಿತ್ಸೆಗೆ ತೀಮಾ೯ನ ಮಾಡುತ್ತಾರೆ.

 ಪ್ರಾರಂಭದ ದಿನದಲ್ಲಿ ತಮ್ಮ ಚಿಕಿತ್ಸೆಯ ಬ್ಯಾಗ್ ನೊಂದಿಗೆ ಬಸ್ಸು, ಎತ್ತಿನಗಾಡಿ ಮತ್ತು ಸೈಕಲ್ ನಲ್ಲಿ ಹಳ್ಳಿ ತಲುಪಿ ತಮ್ಮ ಚಿಕಿತ್ಸೆ ನೀಡುತ್ತಿದ್ದರು.

   ವರ್ಷಕೊಮ್ಮೆ ಕೂಡ ಇವರಿಗೆ ಇವರ ಸ್ವಂತ ಊರಿಗೆ ಹೋಗಲು ಸಾಧ್ಯವಾಗುತ್ತಿರಲಿಲ್ಲ.

 ರೋಗಿ ದೇವತೆ -ವೈದ್ಯ ಪೂಜಾರಿ ಅನ್ನುತ್ತಿದ್ದ ಡಾ.ಮುರುಘಪ್ಪ ಚನ್ನವೀರಪ್ಪ ಮೋದಿ ಬಾಗಲಕೋಟೆ ಜಿಲ್ಲೆಯ ಬಿಳಗಿಯಲ್ಲಿ ದಿನಾಂಕ 4 - ಅಕ್ಟೋಬರ್ -1916 ರಲ್ಲಿ ಜನಿಸಿ ದಿನಾ೦ಕ 11- ನವೆಂಬರ್ -2005 ರಲ್ಲಿ ಬೆಂಗಳೂರಲ್ಲಿ ಮರಣಿಸಿದರು.

   ಡಾ.ಎಂ.ಸಿ.ಮೋದಿ 89 ವಷ೯ದ ತಮ್ಮ ಸಾಥ೯ಕ ಜೀವನದಲ್ಲಿ ಸಿಂಗಲ್ ಮ್ಯಾನ್ ಆಮಿ೯ಯಾಗಿ ಸತತ 45 ವರ್ಷ ಗ್ರಾಮೀಣ ಭಾರತದ ಕಣ್ಣು ಕಾಣದ ಬಡ ಜನರಿಗೆ ದೃಷ್ಟಿ ನೀಡಿದ ಸೇವೆ ಅನನ್ಯ.

   ಇಂತಹ ಮೋದಿಯವರನ್ನ ಎರೆಡು ಸಾರಿ ಆನಂದಪುರಂಗೆ ಕರೆ ತಂದು ಉಚಿತ ಕಣ್ಣಿನ ಚಿಕಿತ್ಸೆ ಮಾಡಿಸಿದ ಹಿರಿಮೆ ಆನಂದಪುರಂನ ಕನ್ನಡ ಸಂಘದ್ದು.

   ಆನಂದಪುರಂನಲ್ಲಿ ನಡೆದ ಡಾಕ್ಟರ್ ಎಂ.ಸಿ. ಮೋದಿ ಅವರ ಉಚಿತ ಕಣ್ಣಿನ ಚಿಕಿತ್ಸಾ ಶಿಬಿರದ ಸಮಿತಿಯ ಉಪಾದ್ಯಕ್ಷನಾಗಿ ಸೇವೆ ಮಾಡಿದ ಹೆಮ್ಮೆ ನನಗಿದೆ.

  ಡಾ. ಮೋದಿಯವರ ಕೈ ಚಳಕದ ನೇತೃ ಚಿಕಿತ್ಸೆ ಕಣ್ಣಾರೆ ನೋಡುವ ಸದವಕಾಶ ಕೂಡ ನನಗೆ ಸಿಕ್ಕಿದ್ದು ನನ್ನ ಪುಣ್ಯ.

   ಅವರ ಬಲಕೈ ಹಸ್ತ ಮತ್ತು ಬೆರಳು ಸ್ಪಶಿ೯ಸಿ ಇದು ಅಸಾಧ್ಯ ಕೈಗುಣದ ಹಸ್ತ ಅಂದಾಗ ಡಾ.ಮೋದಿ ನಗುತ್ತಾ ತಮ್ಮ ಎಡ ಗೈ ಎತ್ತಿ ಹಿಡಿದು " ನಾನು ಎಡಚ, ನನ್ನ ಎಡಗೈಯಲ್ಲೇ ನಾನು ಆಪರೇಷನ್ ಮಾಡುವುದು " ಎಂದಾಗ ನಾವೆಲ್ಲ ದಿಗ್ಬ್ರಾಂತರಾಗಿದ್ದೆವು.

     ಇವತ್ತು 4 - ಅಕ್ಟೋಬರ್ -2025 ಡಾಕ್ಟರ್ ಎಂ.ಸಿ. ಮೋದಿ ಅವರ 109ನೇ ಹುಟ್ಟು ಹಬ್ಬದಲ್ಲಿ ಇದೆಲ್ಲ ನೆನಪುಗಳಾಯಿತು.

   ಅವತ್ತು ನಮ್ಮ ಊರಲ್ಲಿ ನಡೆದ ಎಂ.ಸಿ.ಮೋದಿ ಸನ್ಮಾನ ಸಮಾರಂಭದಲ್ಲಿ ನನ್ನದು ಸ್ವಾಗತ ಭಾಷಣ ವೇದಿಕೆಯಲ್ಲಿ ಎಂ.ಸಿ.ಮೋದಿ, ಕಾಗೋಡು ತಿಮ್ಮಪ್ಪನವರು ಮತ್ತು ಪಾದರ್ ಜೋಸೆಫ್ ಉಪಸ್ಥಿತರಿದ್ದರು.

Comments

Popular posts from this blog

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...