Skip to main content

3510. ಡಾಕ್ಟರ್ ಶಂಕರ್ ಲಾಲ್ ಗಾರ್ಗ್ ಇಂದೋರ್

#ಶಿವಮೊಗ್ಗ_ಜಿಲ್ಲೆಯ_ಈ_ರಾಷ್ಟ್ರೀಯ_ಪ್ರಶಸ್ತಿ

#ಪ್ರತಿ_ವರ್ಷ_ನವರಾತ್ರಿಯಲ್ಲಿ

#ಒಂದು_ಲಕ್ಷ_ನಗದು_ಮತ್ತು_ಪಾರಿತೋಷಕ

#ಶಿವಮೊಗ್ಗದ_ಪತ್ರಕರ್ತ_ಸಿದ್ದಪ್ಪರ_ದೊಡ್ಡಮ್ಮ_ದೇವಿ_ಚಾರಿಟೇಬಲ್_ಟ್ರಸ್ಟ್_ನಿಂದ.

#ಮೂರನೇ_ವರ್ಷದ_ಪ್ರಶಸ್ತಿ_ಮಧ್ಯಪ್ರದೇಶದ_ಡಾಕ್ಟರ್_ಶಂಕರ್_ಲಾಲ್_ಗರ್ಗ್_ಅವರಿಗೆ.

#ಈ_ಪ್ರಶಸ್ತಿ_ಆಯ್ಕೆ_ಸಮಿತಿ_ಅಧ್ಯಕ್ಷರು_ಸುಂದರ್_ರಾಜ್

#ಇವರಿಬ್ಬರೂ_ನನ್ನ_ಅತಿಥಿಗಳು


#shivamogga #siddappa #press #doddammacharitabletrust #nationalaward #sunderraj #karnatakasanga #Drshankarlalgarge #idore #MP

    ಪ್ರತಿ ವರ್ಷ ಶಿವಮೊಗ್ಗದ #ದೊಡ್ಡಮ್ಮ_ದೇವಿ_ಚಾರಿಟೇಬಲ್_ಟ್ರಸ್ಟ್ ರಾಷ್ಟ್ರೀಯ ಪುರಸ್ಕಾರ ಪ್ರಶಸ್ತಿ ಕಳೆದ ಮೂರು ವರ್ಷದಿಂದ ನೀಡುತ್ತಿದೆ.

    ಈ ಪ್ರಶಸ್ತಿ ಒಂದು ಲಕ್ಷ ರೂಪಾಯಿ ನಗದು ಮತ್ತು ಪಾರಿತೋಷಕ ಇರುತ್ತದೆ.

    ಈ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ಪ್ರತಿಭಾವಂತರ ಸಮಿತಿ ಇದೆ ಈ ಆಯ್ಕೆ ಸಮಿತಿ ಅಧ್ಯಕ್ಷರು #ಎಂ_ಎನ್_ಸುಂದರ್_ರಾಜ್ ಇವರು ಶಿವಮೊಗ್ಗದ ಪ್ರತಿಷ್ಠಿತ #ಕರ್ನಾಟಕ_ಸಂಘದ ಮಾಜಿ ಅಧ್ಯಕ್ಷರು ಮತ್ತು ಸಾಹಿತಿಗಳು.

    ಈ ವರ್ಷದ ರಾಷ್ಟ್ರೀಯ ಪ್ರಶಸ್ತಿ ಮಧ್ಯಪ್ರದೇಶದ ಇಂದೋರಿನ ಡಾಕ್ಟರ್ #ಶಂಕರ್_ಲಾಲ್_ಗರ್ಗೆ ಅವರನ್ನ ಪ್ರಶಸ್ತಿ ಸಮಿತಿ ಆಯ್ಕೆ ಮಾಡಿದೆ.

   ಇವರು ಇಂದೋರ್ ಸಮೀಪದ #ಕೇಶರ್_ಪರ್ವತ ಪ್ರದೇಶದಲ್ಲಿ 22 ಎಕರೆ ಬಂಜರು ಭೂಮಿಯಲ್ಲಿ ಕಳೆದ ಒಂಬತು ವರ್ಷದಲ್ಲಿ 5000 ಸಸ್ಯಗಳನ್ನ ಬೆಳೆಸಿ ಅರಣ್ಯ ಮಾಡಿದ್ದಾರೆ.

    ತಮ್ಮ ಉದ್ಯೋಗದಲ್ಲಿ ಗಳಿಸಿದ ಪೂರ್ಣ ಹಣ ಇದಕ್ಕಾಗಿ ವಿನಿಯೋಗಿಸಿದ್ದಾರೆ.

   ಅಲ್ಲಿ ನೀಲ್ ಗಾಯಿ ಸೇರಿದಂತೆ ಅನೇಕ ವನ್ಯಜೀವಿಗಳು, ಪಕ್ಷಿಗಳು ಇವರ ಅರಣ್ಯದಲ್ಲಿ ಓಡಾಡುತ್ತದೆ ಇದೇ ಇವರಿಗೆ ಸಂತೋಷದ ವಿಷಯ.

     ಶಿವಮೊಗ್ಗದ #ದೊಡ್ಡಮ್ಮ_ದೇವಿ_ಚಾರಿಟೇಬಲ್_ಟ್ರಸ್ಟ್_ಸ್ಥಾಪಿಸಿದವರು ಶಿವಮೊಗ್ಗದ ಪತ್ರಕರ್ತರಾದ #ಸಿದ್ದಪ್ಪನವರು ಇವರು ಶಿವಮೊಗ್ಗದ ಪ್ರೆಸ್ ಕಾಲೋನಿ ನಿವಾಸಿಗಳು, ವಿಜಯಕರ್ನಾಟಕ ಪತ್ರಿಕೆಯ ಸಬ್ ಎಡಿಟರ್ ಆಗಿದ್ದವರು.

     ಇವರು ನೀಡುವ ಈ ರಾಷ್ಟ್ರೀಯ ಮೊದಲ ಪ್ರಶಸ್ತಿ 2023ರಲ್ಲಿ ಪಡೆದವರು #ಹನುಮಂತ_ದೇವನೂರು ನಮ್ಮ ರಾಜ್ಯದ ಕಲ್ಬುರ್ಗಿಯವರು, ಇವರು ಕುಷ್ಟರೋಗಿಗಳ ಸೇವೆಗಾಗಿ ಜೀವನ ಮುಡುಪಾಗಿಟ್ಟ ರಿಕ್ಷಾ ಚಾಲಕ ವೃತ್ತಿಯವರು.

    2024 ರಲ್ಲಿ ಎರಡನೆ ರಾಷ್ಟ್ರೀಯ ಪ್ರಶಸ್ತಿ ಪಡೆದವರು ಮದುರೈನ #ನಾರಾಯಣ್_ಕೃಷ್ಣನ್ ಇವರು ಐನೂರಕ್ಕೂ ಹೆಚ್ಚು ಅನಾಥರ ಸೇವೆ ಮಾಡುತ್ತಿದ್ದಾರೆ.

    ನಿಜವಾದ ಸಮಾಜ ಸೇವಕರನ್ನ ಇವರೇ ಹುಡುಕಿ ಅವರ ಹಿನ್ನೆಲೆ ಪರೀಕ್ಷಿಸಿ ನಂತರ ಪ್ರತಿ ವರ್ಷದ ನವರಾತ್ರಿಯಲ್ಲಿ ಅವರನ್ನ ಟ್ರಸ್ಟ್ ಹಣದಲ್ಲೇ ಶಿವಮೊಗ್ಗಕ್ಕೆ ಕರೆತಂದು ಅವರಿಗೆ ಗೌರವ ಸಮರ್ಪಣೆ ಮಾಡಿ ಒಂದು ಲಕ್ಷ ರೂಪಾಯಿ ನಗದು ಮತ್ತು ಪಾರಿತೋಷಕ ಅರ್ಪಿಸುತ್ತಾರೆ.

        ದೊಡ್ಡಮ್ಮ ಚಾರಿಟೇಬಲ್ ಟ್ರಸ್ಟನ ಪತ್ರಕರ್ತ ಸಿದ್ದಪ್ಪರ ಈ ಕಾರ್ಯಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ.

     ಈ ವರ್ಷದ ಪ್ರಶಸ್ತಿ ವಿಜೇತ ಡಾ.ಶಂಕರ್ ಲಾಲ್ ಗಾರ್ಗೆ ಅವರ ಸಾದನೆ ಲಿಂಕ್ ಕಾಮೆಂಟ್ ಲ್ಲಿದೆ ನೋಡಿ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...