Skip to main content

3517. ಆನಂದಪುರಂ ಶಿಲಾ ಶಾಸನ

#ಆನಂದಪುರಂನ_ಈ_ಶಿಲಾಶಾಸನ_ಸ್ಥಳಾಂತರಿಸಿ_ಸಂರಕ್ಷಿಸಬೇಕು

#ಅಂದಾಸುರದ_ಗೋನೇಶ್ವರ_ಸೂರ್ಯಮಾರ್ತಾಂಡೇಶ್ವರ_ದೇವಾಲಯ

#ನಿರ್ಮಿಸಿದ_ವಿಶ್ವಕರ್ಮಿ_ಚಿಕ್ಕನಿಗೆ_ಸಾಮಂತ_ಗೋರರಸ

#ನೀಡಿದ_ಬೂದಾನದ_ಶಿಲಾಶಾಸನ

#ಈಗ_ಅಂದಾಸುರದಲ್ಲಿ_ಈ_ದೇವಾಲಯ_ನಶಿಸಿ_ಹೋಗಿದೆ.


 #Anandapuram #shivamoga #ShivamoggaNews #NationalHighway69 #NationalNews #shivamoggadistrictadminisration #karnataka #archeologicalsurveyofindia

    983  ವರ್ಷದ ಹಿಂದೆ ಈ ಶಿಲಾ ಶಾಸನ ನಿರ್ಮಿಸಲಾಗಿದೆ ಈ ಶಿಲಾ ಶಾಸನ ಇರುವ ರಸ್ತೆ ಶಿವಮೊಗ್ಗ ಸಾಗರ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ನಮ್ಮೂರು ಆನಂದಪುರಂ ಸಮೀಪವಿದೆ.

   ಈ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ಮತ್ತು ಫ್ಲೈ ಓವರ್ DPR ಆಗಿದ್ದು ಕೆಲವೇ ತಿಂಗಳಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ.

   ಈ ಕಾಮಗಾರಿ ಪ್ರಾರಂಭವಾದರೆ ಈ ಶಿಲಾ ಶಾಸನ ರಾಷ್ಟ್ರೀಯ ಹೆದ್ದಾರಿ 69 ರ ಮಧ್ಯ ಭಾಗಕ್ಕೆ ಬರುತ್ತದೆ.

   ಕ್ರಿ.ಶ. 25- ಏಪ್ರಿಲ್ -1042 ರಲ್ಲಿ ಬನವಾಸಿ ನಾಡಿನ ರಾಜ್ಯಪಾಲ ಬಿಜ್ಜಳನ ಸಾಮಂತ ಗೋರರಸನು ಅಂದಾಸುರದಲ್ಲಿ ನಿರ್ಮಿಸಿದ ಗೋನೇಶ್ವರ ಮತ್ತು ಸೂಯ೯ ಮಾತಾ೯೦ಡೇಶ್ವರ ದೇವಾಲಯ ನಿರ್ಮಾಣದಲ್ಲಿ ಇಟ್ಟಿಗೆ ಶಿಲೆಯ ಕಾಮಗಾರಿ ನಿರ್ವಹಿಸಿದ ಚಿಕ್ಕ ಎಂಬ ವಿಶ್ವಕರ್ಮಿಗೆ ಭೂದಾನ ಮಾಡಿದ ಶಾಸನ ಇದು.

   ಈಗ ಅಂದಾಸುರದಲ್ಲಿ ಈ ಶಾಸನದಲ್ಲಿ ತಿಳಿಸಿದ ದೇವಾಲಯಗಳು ಯಾವುದೂ ಇಲ್ಲ.

     ಗೋನೇಶ್ವರ ಮತ್ತು ಸೂರ್ಯಮಾರ್ತಾಂಡೇಶ್ವರ ಎಂಬ ದೇವಾಲಯಗಳು ಈ ಒಂದು ಸಾವಿರ ವಷ೯ದಲ್ಲಿ ನಶಿಸಿ ಹೋಗಿರಬೇಕು.

  ಈ ಶಾಸನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇದ್ದು ವಾಹನ ಸಂಚಾರ ದಟ್ಟಣೆಯಿಂದ ಯಾವುದೇ ಅವಘಡ ಸಂಭವಿಸಿದರೆ ಈ ಪ್ರಾಚಿನ ಶಾಸನ ಕಳೆದುಕೊಳ್ಳುವ ಅಪಾಯ ಇದೆ.

  ಆನಂದಪುರಂನಿಂದ ಶಿವಮೊಗ್ಗ ಮಾರ್ಗದ ರಾಷ್ಟ್ರೀಯ ಹೆದ್ದಾರಿ 69 ಆಚಾಪುರ ಸಮೀಪದಲ್ಲಿ ಎಡಭಾಗದಲ್ಲಿ ರಸ್ತೆ ಪಕ್ಕದಲ್ಲಿದೆ.

  ಈ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ಮತ್ತು ಫ್ಲೈ ಓವರ್ DPR ಆಗಿದ್ದು ಕೆಲವೇ ತಿಂಗಳಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ ಈ ಕಾಮಗಾರಿ ಪ್ರಾರಂಭವಾದರೆ ಈ ಶಿಲಾ ಶಾಸನ ರಾಷ್ಟ್ರೀಯ ಹೆದ್ದಾರಿ 69 ರ ಮಧ್ಯ ಭಾಗಕ್ಕೆ ಬರುತ್ತದೆ.

 ಆದ್ದರಿಂದ ಈ ಶಿಲಾ ಶಾಸನ ಯಾವ ಕಾರಣಕ್ಕೂ ಹಾಳಾಗದಂತೆ ಸಂರಕ್ಷಿಸಿ ಇದೇ ರಸ್ತೆ ಅಂಚಿನಲ್ಲೇ ಸೂಕ್ತ ಜಾಗದಲ್ಲಿ ಅಳವಡಿಸಬೇಕಾಗಿದೆ.

   ಈ ಬಗ್ಗೆ ಇತಿಹಾಸ ಆಸಕ್ತರು ಆಸಕ್ತಿ ವಹಿಸದಿದ್ದರೆ ರಾಷ್ಟ್ರೀಯ ಹೆದ್ದಾರಿ ಪ್ಲೈಒವರ್ ಕಾಮಗಾರಿ ಸಂದರ್ಭದಲ್ಲಿ ಈ ಶಿಲಾ ಶಾಸನ ಮಣ್ಣಿನಲ್ಲಿ ಮುಚ್ಚಿ ಹೋಗುವ ಸಂಭವ ಹೆಚ್ಚಾಗಿದೆ.

   ಈ ಶಿಲಾ ಶಾಸನ ಆನಂದಪುರಂ ಇತಿಹಾಸಕ್ಕೆ ಒಂದು ಮಹತ್ವದ ಮೈಲಿಗಲ್ಲಿನ ಶಾಸನವಾಗಿದೆ.

   ಇದು ನಿರ್ಮಿಸಿದ ಕಾಲ, ದಾನ ಪಡೆದವರು ಎಲ್ಲರೂ ಮುಖ್ಯವಾಗುತ್ತಾರೆ.

    ಆನಂದಪುರಂ ಸುತ್ತಮುತ್ತಲಿನ ಶಿಲಾಶಾಸನ ಮತ್ತು ತಾಮ್ರಪತ್ರಗಳ ದಾಖಲೆಯಲ್ಲಿ ಈ ರೀತಿ ದಾಖಲಿಸಿದ್ದಾರೆ.

  4) ಎಪಿಗ್ರಾಫಿಯ ಕ್ರ.ಸಂ. 109. ಕ್ರಿಶ 1042 AD.
ಆಚಾಪುರ ರಾ.ಹೆ. 69ರಲ್ಲಿ  8 ಅಡಿ ಎತ್ತರ X 4 ಅಡಿ ಅಗಲದ ಬೃಹತ್ ಶಿಲಾ ಶಾಸನ ಇದಾಗಿದೆ.

    ಆನಂದಪುರಂನಿಂದ ಶಿವಮೊಗ್ಗ ಮಾರ್ಗದ ರಾಷ್ಟ್ರೀಯ ಹೆದ್ದಾರಿ 69 ಆಚಾಪುರ ಸಮೀಪದಲ್ಲಿ ಎಡಭಾಗದಲ್ಲಿ ರಸ್ತೆ ಪಕ್ಕದಲ್ಲಿ ಕ್ರಿಶ. 1042 ರಲ್ಲಿ ಸಮೀಪದ ಅಂದಾಸುರದಲ್ಲಿ ಗೋನೇಶ್ವರ ಮತ್ತು ಸೂರ್ಯಮಾರ್ತಾಂಡ ದೇವಾಲಯ ನಿಮಿ೯ಸಿದ ಬನವಾಸಿ ನಾಡಿನ ರಾಜ್ಯಪಾಲ ಬಿಜ್ಜಳನ ಸಾಮಂತ ಗೋರರಸ ಅಂದಾಸುರದ ಎರೆಡು ದೇವಾಲಯ ನಿರ್ಮಿಸಿದ ಕಮ್ಮಾರ ಚಿಕ್ಕನಿಗೆ ಭೂದಾನ ನೀಡಿದ ಶಿಲಾ ಶಾಸನ ಇದಾಗಿದೆ.

Comments

Popular posts from this blog

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...