Skip to main content

3523.ಬಂಗಾರಪ್ಪ

#ಎಸ್_ಬಂಗಾರಪ್ಪನವರು

#ಆನಂದಪುರಂ_ಶ್ರೀಮತಿ_ಕನಕಮ್ಮಾಳ್_ಆಸ್ಪತ್ರೆ_ಕಾಯ೯ಕ್ರಮದಲ್ಲಿ

#ಶಿವಮೊಗ್ಗ_ಜಿಲ್ಲಾ_ಪಂಚಾಯತ್_ನಿಂದ_ಎಕ್ಸ್_ರೇ_ಯ೦ತ್ರ_ಮಂಜೂರು_ಮಾಡಿಸಿದ್ದೆ

#ಉದ್ಘಾಟನೆ_ಆಗ_ಶಿವಮೊಗ್ಗದಿಂದ_ಸಂಸದರಾಗಿದ್ದ_ಬಂಗಾರಪ್ಪರಿಂದ

#ಆಗ_ಶಾಸಕರಾಗಿದ್ದ_ಕಾಗೋಡು_ತಿಮ್ಮಪ್ಪ_ಜಿಲ್ಲಾ_ಪಂಚಾಯತ್_ಉಪಾಧ್ಯಕ್ಷ_ತಿಪ್ಪಾನಾಯಕರ_ಉಪಸ್ಥಿತಿ

#ಸ್ಥಳಿಯ_ಜಿಲ್ಲಾ_ಪಂಚಾಯತ್_ಸದಸ್ಯನಾಗಿ_ನನ್ನ_ಅಧ್ಯಕ್ಷತೆ


#ShivamoggaNews #govtofkarnataka #KarnatakaCongress 
#SBangarappa #parilment #exchiefminister #kagoduthimmappa 

     ಅದು 1996 ನೆ ಇಸವಿ ಆಗಸ್ಟ್ 19 ಅವತ್ತು ನಮ್ಮ ಊರು ಆನಂದಪುರಂನ ಶ್ರೀಮತಿ ಕನಕಮ್ಮಾಳ್ ಸರ್ಕಾರಿ ಆಸ್ಪತ್ರೆಯ ಎಕ್ಸ್ ರೇ ಯಂತ್ರದ ಉದ್ಘಾಟನಾ ಸಮಾರಂಭದ ದಿನ.

     ಈ ಎಕ್ಸ್ ರೇ ಯಂತ್ರ ಆನಂದಪುರಂ ಆಸ್ಪತ್ರೆಗೆ ಬಂದ ಮೊದಲ ಯಂತ್ರ,

    ಆಗಷ್ಟೆ ಲೋಕ ಸಭಾ ಸದಸ್ಯರಾಗಿ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರು ಕಾಂಗ್ರೇಸ್ ಪಕ್ಷದ ಅವರ ಷಡ್ಡಕ ಕೆ.ಜಿ. ಶಿವಪ್ಪರ ಎದರು ಸ್ವರ್ಧಿಸಿ ಆಯ್ಕೆ ಆಗಿದ್ದರು.

   ಸಾಗರದ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿದ್ದ ಕಾಗೋಡು ತಿಮ್ಮಪ್ಪ ಬಂಗಾರಪ್ಪರ ವಿರುದ್ಧವಾಗಿ ಚುನಾವಣೆ ಮಾಡಿದ್ದರು.

    ನಾವೆಲ್ಲ ಬಂಗಾರಪ್ಪರ ಅಭಿಮಾನಿಗಳಾಗಿ ತನು-ಮನ-ಧನದೊಂದಿಗೆ ಅವರ ಗೆಲುವಿಗಾಗಿ ಶ್ರಮಿಸಿದ್ದೆವು.

    ಆನಂದಪುರ0ನ ಆಸ್ಪತ್ರೆಯ ಈ ಸರ್ಕಾರಿ ಕಾರ್ಯಕ್ರಮದಲ್ಲಿ ಕಾಗೋಡು ಮತ್ತು ಬಂಗಾರಪ್ಪ ಒಂದೇ ವೇದಿಕೆಯಲ್ಲಿ ಹೇಗೆ ಮಾತಾಡುತ್ತಾರೆ ಎಂಬ ಕುತೂಹಲ ತಾಲ್ಲೂಕಿನಾದ್ಯಂತ ಇತ್ತು.

    ಇದು 1996ರಲ್ಲಿ ಬಂಗಾರಪ್ಪರಿಂದ ಆನಂದಪುರಂ ಕನಕಮ್ಮಾಳ್ ಸ್ಮಾರಕ ಸರ್ಕಾರಿ ಆಸ್ಪತ್ರೆಗೆ ಶಿವಮೊಗ್ಗ ಜಿಲ್ಲಾ ಪಂಚಾಯತ್ ನಿಂದ ನೀಡಿದ ಎಕ್ಸರೇ ಯಂತ್ರ ಉದ್ಘಾಟನಾ ಕಾರ್ಯಕ್ರಮದ ನೆನಪಿನ ಚಿತ್ರ.

  ಆಗಿನ ಶಾಸಕರಾಗಿದ್ದ ಕಾಗೋಡು ತಿಮ್ಮಪ್ಪನವರು ಮತ್ತು ಸ್ಥಳೀಯ ಜಿಲ್ಲಾ ಪಂಚಾಯತ್ ಸದಸ್ಯನಾಗಿದ್ದ ನಾನು ಅಧ್ಯಕ್ಷತೆ ವಹಿಸಿದ್ದೆ.
   
     ಇಡೀ ಆನಂದಪುರಂ ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಈ ಆಸ್ಪತ್ರೆ ದೊಡ್ಡ ಆಸ್ಪತ್ರೆ ಇದನ್ನು ನಿರ್ಮಿಸಿ ಊರಿಗೆ ದಾನ ಮಾಡಿದವರು ಆನಂದಪುರಂನ ಕೊಡುಗೈ ದಾನಿ- ಭೂ ಮಾಲಿಕರಾದ ಆನಂದಪುರಂ ರಾಮಕೃಷ್ಣ ಅಯ್ಯಂಗಾರರು.

  ಸ್ವಾತಂತ್ರ್ಯ ಪೂರ್ವದಲ್ಲಿ ಇವರ ಪತ್ನಿ ಶ್ರೀಮತಿ ಕನಕಮ್ಮಾಳ್ ಮೃತರಾದಾಗ ಅವರ ಆಭರಣಗಳನ್ನು ಮಾರಿ ಪತ್ನಿ ಸ್ಮರಣಾರ್ಥ ಈ ಆಸ್ಪತ್ರೆ ನಿರ್ಮಿಸುತ್ತಾರೆ ಮತ್ತು ಔಷದಿ ಖರೀದಿಗಾಗಿ ಆ ಕಾಲದಲ್ಲಿ ಒಂದು ಲಕ್ಷ ರೂಪಾಯಿ ಎಪ್.ಡಿ. ಇಟ್ಟಿದ್ದಾರೆ.

   ಇವರ ಪುತ್ರರೇ ವಿದ್ಯಾ ಮಂತ್ರಿ - ಶಿವಮೊಗ್ಗ ಲೋಕಸಭಾ ಸದಸ್ಯರೂ ಶಿವಮೊಗ್ಗ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರೂ ಆಗಿದ್ದ ಎ.ಆರ್.ಬದರಿನಾರಾಯಣ ಅಯ್ಯಂಗಾರರು.

    ಆಗ ಸ್ಥಳೀಯರು ಬಿದ್ದು ಮೂಳೆ ಮುರಿದುಕೊಂಡರೆ ಈ ಆಸ್ಪತ್ರೆಯಲ್ಲಿ ಎಕ್ಸ್ ರೇ ಯಂತ್ರ ಇಲ್ಲದಿದ್ದರಿಂದ ಸಾಗರ ಅಥವ ಶಿವಮೊಗ್ಗಕ್ಕೆ ಹೋಗಬೇಕಾಗಿತ್ತು ಆದ್ದರಿಂದ ನಾನು ಶಿವಮೊಗ್ಗ ಜಿಲ್ಲಾ ಪಂಚಾಯತ್ ನಲ್ಲಿ ಹಠ ಹಿಡಿದು 15 ಲಕ್ಷ ಮಂಜೂರು ಮಾಡಿಸಿ ಈ ಯಂತ್ರ ತರಿಸಿದ್ದೆ.

   ಅವತ್ತು ಬಂಗಾರಪ್ಪ -ಕಾಗೋಡು ಎದುರಾ ಬದುರಾ ಆದರೂ ಪರಸ್ಪರ ಮುಗುಳು ನಗಲಿಲ್ಲ ಮಾತಾಡಲಿಲ್ಲ.

     ಕಾರ್ಯಕ್ರಮದ ನಂತರ ಬಂಗಾರಪ್ಪ ಆಪ್ತರ ಎದರು dont care ಎಂಬ ಮಾತಾಡಿದ್ದರು.

    ನಿನ್ನೆ 26 ಅಕ್ಟೋಬರ್ ಬಂಗಾರಪ್ಪರ ಹುಟ್ಟು ಹಬ್ಬದಲ್ಲಿ ಈ ಚಿತ್ರ ಅನೇಕ ನೆನಪು ತಂದಿತು.

Comments

Popular posts from this blog

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...