Skip to main content

3535. ಹಾರ್ನಳ್ಳಿ ಬುಡನ್ ಸಾಬ್ 70 ದಶಕದಲ್ಲಿ

#ವೀರಪ್ಪನ್_ಕನಾ೯ಟಕ_ತಮಿಳುನಾಡಿಗೆ_ತಲೆನೋವಾದಂತೆ.

#70ರ_ದಶಕದಲ್ಲಿ_ಶಿಕಾರಿಪುರ_ಕುಂಸಿ_ಅಯನೂರು_ಬಾಗದಲ್ಲಿ_ಬುಡೆನ್_ಸಾಬ್ 

#ಜನರಿಗೆ_ಪೋಲಿಸರಿಗೆ_ದೊಡ್ಡ_ಸಮಸ್ಯೆ_ಆಗಿದ್ದ.

#ಕೊನೆತನಕ_ಬಡತನದ_ಜೀವನ_ಮಾಡಿದ_ಬುಡನ್_ಸಾಬ್_ಹೇಳುತ್ತಿದ್ದದ್ದು

#ಬುಡನ್_ಸಾಬ್_ಹೆಸರಲ್ಲಿ_ಬೇರೆ_ಕಳ್ಳರು_ದರೋಡೆ_ಮಾಡುತ್ತಿದ್ದರಂತೆ


#Harnallibudan #veerappan #shivamogga #ayanuru #kumsi #shikaripura #robbery 

  #ಹಾರನಳ್ಳಿಯ_ಬುಡನ್ ಸಾಬ್ ಕುಂಸಿ, ಅಯನೂರು ಮತ್ತು ಶಿಕಾರಿಪುರದ ಜನ ಸಾಮಾನ್ಯರನ್ನ ಸುಮಾರು 10 ವಷ೯ ಕಾಲ ಬೀತಿಯಿ೦ದ ಇರುವಂತೆ ಮಾಡಿದ್ದ.

 ಆತ ಕಳ್ಳತನ ಮಾಡುತ್ತೇನೆ ಅಂದ ಮನೆ ಕಳ್ಳತನ ಮಾಡಿಯೇ ಸಿದ್ದ ಎಂಬ ಪ್ರತೀತಿ ಇತ್ತು ಆ ಕಾಲದಲ್ಲಿ.

   ಹಗಲಿನಲ್ಲಿ ಬುಡನ್ ಸಾಬ್ ಈ ಕಾಡಿನಲ್ಲಿ ಕ೦ಡಿದ್ದ ಎಂದರೆ ವಾರಗಟ್ಟಲೆ ಆ ಕಾಡಿಗೆ ಕಟ್ಟಿಗೆ ತರಲು ಹೋಗುವ ದೈಯ೯ ಯಾರೂ ಮಾಡುತ್ತಿರಲಿಲ್ಲ.

   ಕಟ್ಟುಮಸ್ತು ದೇಹದ ಬುಡನ್ ಸಾಬ್ ಕಳ್ಳ ಬುಡನ್ ಅಂತಲೇ ಕುಖ್ಯಾತಿ ಪಡೆದಿದ್ದ.

   ಏನೇ ಮಾಡಿದರು ಪೋಲಿಸರಿಗೆ ಅವನನ್ನ ಬಂದಿಸಲಾಗದಿದ್ದದ್ದು ಮತ್ತು ಅವನ ತಡೆ ರಹಿತ ಕಳ್ಳತನ ದರೋಡೆಗಳಿOದ ಶಿಕಾರಿಪುರ, ಕುಂಸಿ ಮತ್ತು ಅಯನೂರಿನ ಸುತ್ತ ಮುತ್ತ ನೂರಾರು ಹಳ್ಳಿಗಳು ಭಯದಿಂದ ಜೀವನ ಸಾಗಿಸುತ್ತಿದ್ದ೦ತು ಸತ್ಯ.

   ನಂತರ ಪೋಲಿಸರು ಈತನನ್ನ ಬಂದಿಸಿ ಜೈಲಿಗೆ ಕಳಿಸಿದ ನಂತರ ಇದೆಲ್ಲ ಕಳ್ಳತನ ನಿಂತಿತು.

   ಜೈಲು ಶಿಕ್ಷೆಯ ನಂತರ ಬುಡನ್ ಸಾಬ್ ಮನ ಪರಿವತ೯ನೆಗೊಂಡು ರೈತರ ಜಮೀನಿನಲ್ಲಿ ನಾಟಿ -ಕೊಯ್ಲು - ಗುತ್ತಿಗೆ ಕೆಲಸ ಮಾಡುತ್ತಿದ್ದರು.

      ಬುಡನ್ ಸಾಬ್ ಇವರ ಈ ಕುಖ್ಯಾತಿಗೆ ನೊಂದಿದ್ದ ಇವರ ಹೆಂಡತಿ ಮತ್ತು ಮಕ್ಕಳ ಕುಟುಂಬ ಇವರನ್ನ ತೊರೆದು ಬೇರೆ ಕಡೆ ವಲಸೆ ಹೋದರು ಅಂತ ಸುದ್ದಿ ಇತ್ತು.

    ಹಾರನಳ್ಳಿಯ ಮುಕ್ತಿಯಾರ್ ಎಂಬ ಗೆಳೆಯರು ನಮ್ಮ ಮಲ್ಲಿಕಾ ವೆಜ್ ಗೆ ತರಕಾರಿ, ತೆಂಗಿನಕಾಯಿ ಸರಬರಾಜು ಮಾಡುತ್ತಾರೆ.

   ಅವರ ಹತ್ತಿರ ಬುಡನ್ ಸಾಬ್ ರ ಬಗ್ಗೆ ವಿಚಾರಿಸಿದಾಗ ಅವರು ಹೇಳಿದ್ದು ಪೋಲಿಸರು ಇವರ ಉಪಟಳ ಖಾಯಂ ತಡೆಯಲು ಕಾಲಿನ ನರ ಒಂದನ್ನ ಜಖಂ ಮಾಡಿದ್ದರಿಂದ ಬುಡನ್ ಸಾಬ್ ತನ್ನ ದರೋಡೆ ಕಳ್ಳತನ ಅನಿವಾಯ೯ವಾಗಿ ಬಿಡಬೇಕಾಯಿತು ಅಂತೆ.

   ಆತನ ಕುಖ್ಯಾತಿ ದರೋಡೆ ಪ್ರಮಾಣಕ್ಕೂ ಅವನ ಜೀವನ ಕ್ರಮಕ್ಕೂ ಅಜಗಜಾoತರ ಇತ್ತು.

  ಕೊನೆ ತನಕ ಬಡತನ ಇತ್ತು, ಆಸ್ತಿ ಇರಲಿಲ್ಲ, ಆಗೆಲ್ಲ ಕೃಷಿ ಗುತ್ತಿಗೆ ಮಾಡಿಸಲು ಬರುತ್ತಿದ್ದ ಬುಡನ್ ಸಾಬ್ ಗೆ ಅಷ್ಟೆಲ್ಲ ದರೋಡೆ ಮಾಡಿದ್ದು ಏನು ಮಾಡಿದಿಯಾ? ಅಂದರೆ "ನನ್ನ ಹೆಸರಲ್ಲಿ ಬೇರೆ ಕಳ್ಳರ ಗುಂಪು ದರೋಡೆ ಕಳ್ಳತನ ಮಾಡಿ ಹಣ ಬಂಗಾರ ಮಾಡಿಕೊಂಡು ನನ್ನನ್ನ ಬಲಿಪಶು ಮಾಡಿದರು" ಅಂತಿದ್ದನಂತೆ.

  ಏನೇ ಇರಲಿ 70 ರ ದಶಕದಲ್ಲಿ ಈ ಭಾಗದಲ್ಲಿ ಜನರ ನೆಮ್ಮದಿ ಕೆಡಿಸಿದ್ದ ಕಳ್ಳ ಬುಡನ್ ಕುಖ್ಯಾತಿ ಅಂತಿOತದ್ದಲ್ಲ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...