Skip to main content

3538. ಸಜ್ಜನರಿಗೆ ಜೈಲಿಗೆ ಹಾಕಿದ ಪ್ರಕರಣ

#ಸಾತ್ವಿಕರನ್ನ_ಜೈಲಿಗೆ_ಕಳಿಸಿದ_ಈ_ಘಟನೆಗೆ_ಎಂಟು_ವರ್ಷ.

#ಸುದ್ದಿಯನ್ನ_ಸುದ್ದಿ_ಮಾಡದ_ಈ_ಸುದ್ದಿ.

#ಸಾತ್ವಿಕರನ್ನ_ಜೈಲಿಗೆ_ಕಳಿಸಿದವರು_ಯಾರು?.

 #ಇವರಿಬ್ಬರ_ಹೆಸರು_ಗಣಪತಿ_ಭಟ್ಟರು_ಜಿಗಳೆಮನೆ_ಮತ್ತು_ನಿರಂಜನ_ಕುಗ್ವೆ.


#satyashoda #mitramandali #havyaka #ramachandramutt #sringerimutt #swarnavallimutt #sagar #sirsi #shivamogga #vishwahavyakasammelana

  ಬಲಾಡ್ಯರು ಮಾಡುವ ಅನ್ಯಾಯದ ವಿರುದ್ದ ಧ್ವನಿ ಎತ್ತಿದರೆ ಜೈಲು ಎಂಬ ಈ ಘಟನೆ ನಡೆದು ಈ ಡಿಸೆಂಬರ್ ತಿಂಗಳಿಗೆ ಎಂಟು ವರ್ಷ ಆಯಿತು.

   ಆದರೆ ಈ ಹೋರಾಟಗಾರರ ಧ್ವನಿ ಅಡಗಿಸಲು ಸಾಧ್ಯವಾಗಲೇ ಇಲ್ಲ ಆದರೆ ಬಲಾಡ್ಯರ ಅನ್ಯಾಯದ ಪ್ರಕರಣವನ್ನ ತಾಂತ್ರಿಕವಾಗಿ ತಡೆ ಆಜ್ಞೆಗಳ ಮೂಲಕ ಮುಂದೂಡುತ್ತಾ ಬಂದ ಐದು ಪ್ರಕರಣಗಳಿಗೆ ಸರ್ವೋಚ್ಛ ನ್ಯಾಯಾಲಯದಲ್ಲಿ ಅಂತಿಮ ತೀರ್ಪಿನ ಕ್ಷಣಗಣನೆ ಆರಂಭವಾಗಿದೆ.

  ಇವರಿಬ್ಬರು ಸಾತ್ವಿಕರು ಇವರು ಮಾಡಿದ ಅಪರಾದ ಏನೆಂದರೆ...ಇವರ ಜಾತಿ ಸಮುದಾಯಕ್ಕೆ ಸಂಬಂದಪಟ್ಟ ಸ್ವಾಮಿ ಒಬ್ಬರ ಎರೆಡು ಅತ್ಯಾಚಾರ ಪ್ರಕರಣ ಮತ್ತು ಆ ಮಠದಲ್ಲಿ ಆ ಜಾತಿ ಸಮಾಜದ ಹೆಣ್ಣು ಮಕ್ಕಳಿಗೆ ದೇವರ ಹೆಸರಲ್ಲಿ ಭಯ ಬಿತ್ತಿ ಕನ್ಯಾಸಂಸ್ಕಾರ ಎಂಬ ಸ್ವಾಮಿಗಳ ಏಕಾಂತಕ್ಕೆ ಅಪ್ರಾಪ್ತ ಹೆಣ್ಣು ಮಕ್ಕಳನ್ನ ಕಳಿಸುವ ಕಾಯ೯ಕ್ರಮ ವಿರೋದಿಸಿ ಸಾಮಾಜಿಕ ಜಾಲತಾಣದಲ್ಲಿ ಇವರು ತಮ್ಮ ಸಮುದಾಯದ ಜನರಿಗೆ ಜನ ಜಾಗೃತಿ ಅಭಿಯಾನ ಪ್ರಾರಂಭಿಸಿದ್ದು.

   ಜಿಗಳೆಮನೆ ಗಣಪತಿ ಭಟ್ಟರು ಮತ್ತು ಕುಗ್ವೆ ನಿರಂಜನ....ಹಳೆ ಬೇರು ಹೊಸ ಚಿಗುರಿನಂತ ಇವರಿಬ್ಬರ ಜುಗಲ್ ಬಂದಿ.

   ಇವರಿಬ್ಬರನ್ನ ಪೇಸ್ ಬುಕ್ನಲ್ಲಿ ಮಾನಹಾನಿ ಮಾಡಿದ್ದಾರಂತ ದೂರು ನೀಡಿಸಿ, ಎಂಟು ವರ್ಷದ ಹಿಂದೆ 2017 ಡಿಸೆಂಬರ್ ತಿಂಗಳ ಒಂದು ಶನಿವಾರ ಬಂದಿಸಿ ಕೋಟ್೯ ರಜಾದಿನದ ಲಾಭ ಪಡೆದು ಜೈಲಿಗೆ ಕಳಿಸಿದ್ದರು.

   ತಮ್ಮ ದುರುದ್ದೇಶ ಈಡೇರಿಸಿಕೊಂಡ ಈ ಪ್ರಕರಣದ ಹಿಂದೆ ಇವರ ಸಮಾಜದ ಮಠ ಒಂದರ ಕಾಣದ ಕೈಗಳು ಇತ್ತು ಎನ್ನುವುದು ಬಹಿರಂಗ ಸತ್ಯ.

      ಹಿರಿಯರಾದ ಗಣಪತಿ ಭಟ್ಟರು RSS ಪ್ರಚಾರಕರಾಗಿದ್ದವರು, ತುತು೯ ಪರಿಸ್ಥಿತಿ ವಿರೋದಿಸಿ ಜೈಲಿಗೆ ಹೋದವರು ಇವತ್ತಿನವರೆಗೂ ರಾಜಕಾರಣಕ್ಕೆ ಬಾರದ ಸಾತ್ವಿಕರು, ವರದಳ್ಳಿಯ ಪವಾಡ ಪುರುಷ ಶ್ರೀಧರ ಸ್ವಾಮಿಯವರ ಶಿಷ್ಯರು.

   ನಿರಂಜನ ಕುಗ್ವೆ ಕಲಾ ಶಿಕ್ಷಕರು, ಉದಯೋನ್ಮುಖ ವ್ಯಂಗ್ಯಚಿತ್ರಗಾರರು ಇವರ ವ್ಯಂಗ್ಯಚಿತ್ರಗಳನ್ನ ಖ್ಯಾತ ಚಿತ್ರಕಾರ  ಪಂಜು ಗಂಗೋಲೀಯವರು ಕೂಡ ಅಭಿನಂದಿಸಿದ್ದಾರೆ.

    ಇವರಿಗೆ ಸುಮಾರು 10 ಸಾವಿರಕ್ಕೂ ಹೆಚ್ಚು ಜನ ಪೇಸ್ ಬುಕ್ ನಲ್ಲಿ ಬೆಂಬಲಿಸಿದ್ದಾರೆ.

    ಆದರೆ ಪ್ರತ್ಯಕ್ಷವಾಗಿ ಬೆಂಬಲಿಸಲು ಇವರ ಸಮುದಾಯವರಿಗೆಲ್ಲ ಮಠದ ಕರಾಳ ಹಸ್ತದ ಭಯ.

   ನಿರಪರಾಧಿಗಳನ್ನ, ಸಮಾಜ ಸುದಾಕರನ್ನ ಈ ರೀತಿ ಅವಮಾನಿಸುವ ಮತ್ತು ಶಿಕ್ಷಿಸುವ ಈ ಪ್ರಕರಣ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪತ್ರಿಕೆಗಳು ಸುದ್ದಿ ಮಾಡಬೇಕಾಗಿತ್ತು ಮತ್ತು ಈ ಘಟನೆ ವಿರೋದಿಸಬೇಕಾಗಿತ್ತು.

     ಆದರೆ ಈ ಸುದ್ದಿ ಅವತ್ತಿನ ಯಾವುದೇ ಪತ್ರಿಕೆ ಅಥವ ಮಾಧ್ಯಮದಲ್ಲೂ ಪ್ರಕಟವಾಗಲಿಲ್ಲ.

    ಇದರ ಬಗ್ಗೆ ಆಶ್ಚಯ೯ ಮತ್ತು ಅನುಮಾನ ಸಾವ೯ಜನಿಕ ವಲಯದಲ್ಲಿ ವ್ಯಕ್ತವಾಗಿತ್ತು.

  ಅತ್ಯಾಚಾರ, ಮೂಡನಂಬಿಕೆಯ ಕನ್ಯಾ ಸಂಸ್ಕಾರ ನಡೆಸುತ್ತಿರುವವರ ಹಣ ಮತ್ತು ಅಧಿಕಾರಗಳು ಅವರನ್ನ ವಿರೋಧ ಮಾಡುವವರ ಧ್ವನಿಯನ್ನು ಈ ರೀತಿ ವಾಮ ಮಾರ್ಗದಲ್ಲಿ ಅಡಗಿಸುವಲ್ಲಿ ಯಶಸ್ವಿಯಾಗುತ್ತಿರುವುದು ಮಾತ್ರ ವಿಷಾದನೀಯ.

   ಆದರೆ ಇದರಿಂದ ಇವರಿಬ್ಬರು ಹೋರಾಟಗಾರರ ಧ್ವನಿ ಮಾತ್ರ ಅಡಗಿಸಲು ಸಾಧ್ಯವಾಗಲೇ ಇಲ್ಲ ಇವರಿಬ್ಬರೂ ಅದನ್ನು ನೂರು ಪಟ್ಟು ಹೆಚ್ಚು ಮಾಡಿದರು.

  ಬಲಾಡ್ಯರ ಅನ್ಯಾಯದ ಪ್ರಕರಣಗಳನ್ನು ಕೆಳ ನ್ಯಾಯಾಲಯಗಳಲ್ಲಿ ತಾಂತ್ರಿಕವಾಗಿ ತಡೆ ಆಜ್ಞೆಗಳ ಮೂಲಕ ಮುಂದೂಡುತ್ತಾ ತೀರ್ಪು ನೀಡದಂತೆ ಅನೇಕ ವರ್ಷಗಳಿಂದ ಎಳೆದುಕೊಂಡು ಬಂದ ಐದು ಪ್ರಕರಣಗಳಿಗೆ ಸರ್ವೋಚ್ಛ ನ್ಯಾಯಾಲಯದಲ್ಲಿ ಈಗ ಅಂತಿಮ ತೀರ್ಪಿನ ಕ್ಷಣಗಣನೆ ಆರಂಭವಾಗಿದೆ.

   ಈ ಪ್ರಕರಣ ನಡೆದು ಇವತ್ತಿಗೆ ಎಂಟು ವರ್ಷ ಆಯಿತು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...