Skip to main content

3347. ಆನೆ ಪಾರ್ಕ್

#ಕಾಡಾನೆಗಳ_ಕಾರಿಡಾರ್_ಬಗ್ಗೆ_ಸರ್ಕಾರದ_ಕ್ರಮ_ಏನು?.

#ಕಾಡಾನೆಗಳ_ಬಗ್ಗೆ_ಅರಣ್ಯ_ಸಚಿವರ_ಉತ್ತರ

#ಕಳೆದ_ವರ್ಷದ_ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ.

#ಹಾಸನ_ಜಿಲ್ಲೆಯ_ಬೇಲೂರು_ವಿಧಾನಸಭಾ_ಕ್ಷೇತ್ರದ_ಶಾಸಕರಾದ_H_K_ಸುರೇಶರ_ಪ್ರಶ್ನೆ.

#ಹಾಸನ_ಮತ್ತು_ಕೊಡಗು_ಜಿಲ್ಲೆಗಳಲ್ಲಿ_ಕಾಡಾನೆ_ನಿಯಂತ್ರಿಸಲು_ಸರ್ಕಾರ_ತೆಗೆದುಕೊಂಡ_ಕ್ರಮ_ಏನು?

#ಅದಕ್ಕೆ_ಅರಣ್ಯ_ಸಚಿವರ_ಉತ್ತರ

#ಎರಡು_ಸಾವಿರ_ಹೆಕ್ಟರ್_ನಲ್ಲಿ_ಆನೆಗಳ_ವಿಹಾರಧಾಮ_ನಿರ್ಮಿಸಲಾಗುವುದು.


#wildlifeconservation #malenadu #westernghatsofindia #Belagavi #kodagu #Hassan #shivamogga #Anandapuram #kollibachalu

   #ಆನೆ_ಪಾರ್ಕ್ ಇರಲಿ ಮಲೆನಾಡಿನಲ್ಲಿ #ಮಂಕಿ_ಪಾರ್ಕ್ ಕಥೆ ಏನಾಯಿತು? ಎನ್ನುವ ಪ್ರಶ್ನೆ ಕೇಳ ಬೇಡಿ ಇದು ಕಾಡಾನೆ ಪಾರ್ಕ್ ವಿಷಯ.

   ಆನೆ ಪಾರ್ಕ್ ಸಾಧ್ಯನಾ? ಸಾದುವಾ? ಗೊತ್ತಿಲ್ಲ ಈ ಬಗ್ಗೆ ಅರಣ್ಯ ಸಚಿವರು ವಿಧಾನ ಮಂಡಳದಲ್ಲಿ ನೀಡಿದ ಉತ್ತರಕ್ಕೆ ಒಂದು ವರ್ಷ ಆಯಿತು.

  ಈ ಬಗ್ಗೆ ಅವರ ಇಲಾಖೆ ತೆಗೆದುಕೊಂಡ ಕ್ರಮ ಏನು? ಅಂತ ಶಾಸಕರು ಈ ಚಳಿಗಾಲದಲ್ಲಿ ಪ್ರಶ್ನಿಸ ಬಹುದು.

 ವಿಧಾನಸಭೆಯಲ್ಲಿ ಬೇಲೂರು ಶಾಸಕರ ಪ್ರಶ್ನೆಗೆ ಸಚಿವ ಈಶ್ವರ ಖಂಡ್ರೆ ಉತ್ತರ ದಿನಾಂಕ
12/12/2024.

   ಕೊಡಗು ಮತ್ತು ಹಾಸನದಲ್ಲಿ ಕಾಡಾನೆಗಳ ಕಾಟ ನಿಯಂತ್ರಿಸಲು ಕೊಡಗು ಮತ್ತು ಹಾಸನ ಬಳಿ 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆಗಳ ವಿಹಾರಧಾಮ (ಎಲಿಫೆಂಟ್ ಸಾಫ್ಟ್ ರಿಲೀಸ್ ಸೆಂಟರ್) ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ವಿಧಾನಸಭೆಯಲ್ಲಿ ತಿಳಿಸಿದ್ದರು.

   ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬೇಲೂರು ಶಾಸಕ ಎಚ್.ಕೆ. ಸುರೇಶ್ ಅವರ ಪ್ರಶ್ನೆಗೆ ಉತ್ತರ ನೀಡಿದ ಅವರು, ಬೇಲೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಡಾನೆಗಳ ದಾಳಿಯಿಂದ ಹಾನಿಗೊಳಗಾದ ಮಾನವ ಪ್ರಾಣಹಾನಿ ಮತ್ತು ಮಾನವ ಗಾಯ ಪ್ರಕರಣಗಳಿಗೆ ದಯಾತ್ಮಕ ಪರಿಹಾರ ಧನ ನೀಡಲಾಗುತ್ತಿದೆ ಎಂದರು.

ಹಾಸನ ಜಿಲ್ಲಾ ವ್ಯಾಪ್ತಿಯ ಬೇಲೂರು ತಾಲ್ಲೂಕಿನ ಬಿಕ್ಕೋಡು ಹೋಬಳಿ ಗ್ರಾಮಗಳಲ್ಲಿ ಕಳೆದ 3 ತಿಂಗಳಿನಿಂದ ಕಾಡಾನೆಗಳು ಹಿಂಡು ಹಿಂಡಾಗಿ ಬಂದು ರೈತರ ಬೆಳೆಗಳನ್ನು ನಾಶ ಮಾಡುತ್ತಿವೆ, ಈ ಕಾಡಾನೆಗಳನ್ನು ಅರಣ್ಯ ಪ್ರದೇಶಗಳ ಕಡೆಗೆ ಹಿಮ್ಮೆಟಿಸಲು ಇಲಾಖಾ ವತಿಯಿಂದ ಕ್ರಮ ಕೈಗೊಳ್ಳಲಾಗುತ್ತಿರುತ್ತದೆ ಎಂದು ತಿಳಿಸಿದರು.

ಪ್ರತಿನಿತ್ಯ ಕಾಡಾನೆಗಳಿರುವ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳೀಯ ಸಾರ್ವಜನಿಕರುನ್ನು ಸಂಪರ್ಕಿಸಿ ಆನೆಗಳ ಚಲನ-ವಲನಗಳ ಮಾಹಿತಿಯನ್ನು ನೀಡಿ ಎಚ್ಚರಿಕೆಯಿಂದ ಇರುವಂತೆ ಧ್ವನಿವರ್ಧಕದ ಮೂಲಕ ತಿಳಿಸಲಾಗುತ್ತಿದೆ. 

  ಆನೆ ಕಾರ್ಯ ಪಡೆ(ETF), ಕ್ಷಿಪ್ರ ಸ್ಪಂದನ ತಂಡ(RRT) ಮತ್ತು ಹಿಮ್ಮೆಟ್ಟಿಸುವ ಶಿಬಿರ ತಂಡದ (ADC) ಸಿಬ್ಬಂದಿಗಳೊಂದಿಗೆ ರಾತ್ರಿ ಗಸ್ತು ಕಾರ್ಯ ಕೈಗೊಂಡು ಸ್ಥಳೀಯ ಸಾರ್ವಜನಿಕರನ್ನು ಎಚ್ಚರಿಸುವ ಕ್ರಮ ಕೈಗೊಂಡಿವೆ ಎಂದರು.

  ಕಾಡಾನೆಗಳು ಸಂಚರಿಸುವ ಪ್ರದೇಶಗಳಲ್ಲಿ ಡಿಜಿಟಲ್ ಸೂಚನಾ ಫಲಕಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಮಾಹಿತಿಯನ್ನು ರವಾನಿಸಲಾಗುತ್ತಿರುತ್ತದೆ.

  ಆಕಾಶವಾಣಿ ಮುಖಾಂತರ ಹಾಗೂ ವಾಟ್ಸಾಪ್ ಗ್ರೂಪ್ ಗಳ ಮುಖಾಂತರ ಕಾಡಾನೆಗಳ ಚಲನ-ಚಲನ ಸಂದೇಶಗಳನ್ನು ರವಾನಿಸಲಾಗುತ್ತಿರುತ್ತದೆ, ಇಲಾಖಾ ವಾಹನಗಳಲ್ಲಿ ಪ್ರತಿನಿತ್ಯ ಕಾಡಾನೆಗಳಿರುವ ಸ್ಥಳಗಳಲ್ಲಿ ಗಸ್ತು ಮಾಡಿ ಧ್ವನಿವರ್ಧಕಗಳ ಮುಖಾಂತರ ಸಾರ್ವಜನಿಕರಿಗೆ ಹಾಗೂ ಗ್ರಾಮಸ್ಥರಿಗೆ ಮಾಹಿತಿಯನ್ನು ನೀಡಲಾಗುತ್ತಿದೆ ಎಂದೂ ವಿವರಿಸಿದರು.

  ವನ್ಯಪ್ರಾಣಿಗಳ ದಾಳಿಯಿಂದ ಮೃತಪಟ್ಟ ಕುಟುಂಬದ ಹತ್ತಿರದ ಬಂಧುಗಳಿಗೆ ಈ ಹಿಂದೆ ರೂ.7.50 ಲಕ್ಷ ರೂ. ಪರಿಹಾರ ನೀಡಲಾಗುತ್ತಿತ್ತು. 

   ಈಗ ರೂ.15.00 ಲಕ್ಷ ರೂ. ದಯಾತ್ಮಕ ಪರಿಹಾರ ನೀಡಲಾಗುತ್ತಿದೆ. 

    ಜೊತೆಗೆ ಮಾಹೆಯಾನ ರೂ.4000.00 ರಂತೆ 5 ವರ್ಷಗಳ ಅವಧಿಗೆ ಮಾಸಾಶನ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದೂ ತಿಳಿಸಿದರು.

  ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರಂ ಹೋಬಳಿಯ ಗಿಳಾಲಗುಂಡಿ ಸಮೀಪದ ಕೊಲ್ಲಿಬಚ್ಚಲು ನೀರಾವರಿ ಡ್ಯಾಮ್ ಪ್ರದೇಶದಿಂದ ಅಂಬ್ಲಿಗೋಳ ನೀರಾವರಿ ಆಣೆಕಟ್ಟಿನ ತನಕ ಹೊಸ ಆನೆ ಕಾರಿಡಾರ್ ಪ್ರಾರಂಭ ಆಗಿ ಈ ವರ್ಷ ಅದು ಸೊರಬ ತಾಲ್ಲೂಕಿನ ತನಕ ವಿಸ್ತಾರವಾಗಿದೆ.

    ಕಳೆದ ವರ್ಷದಲ್ಲಿ ಅರಣ್ಯ ಸಚಿವರು ಚಳಿಗಾಲದ ಅಧಿವೇಶನದಲ್ಲಿ ಈ ಉತ್ತರ ನೀಡಿದ್ದು ದಾಖಲೆ ಆಗಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...