Skip to main content

3554. ದಕ್ಷಿಣದಿಂದ ಉತ್ತರಕ್ಕೆ ಆನೆ ಸಂಚಾರ

#ಆನೆ_ಕಾರಿಡಾರ್

#ದಕ್ಷಿಣದಿಂದ_ಉತ್ತರಕ್ಕೆ_ಕಾಡಾನೆ_ಸಂಚಾರ_ಏಕೆ?

#ಈ_ಕಾಡಾನೆಗಳ_ಉತ್ತರ_ಪ್ರಯಣ_ಬಹಳ_ಮುಖ್ಯ_ಎನ್ನುತ್ತಾರೆ

#ಆನೆಗಳ_ತಜ್ಞರಾದ_ಅಶ್ವಿನ್_ಭಟ್


#Elephantcorridor #Bhadrawildlife #Kaliwildlife #westernghats

    ಇವರು ಅಶ್ವಿನ್ ಭಟ್ ಹಾಸನದ ನೇಚರ್ ಕನ್ಸರ್ವೇಷನ್ ಪೌಂಡೇಶನ್ ನಲ್ಲಿ ಕಾಡಾನೆಗಳ ಬಗ್ಗೆ ಕೆಲಸ ಮಾಡಿದ್ದಾರೆ.

    ಈಗ ಪ್ರಾಜೆಕ್ಟ್ ಅಸಿಸ್ಟೆಂಟ್ ಆಗಿ Environmental Management and Policy Research Institute ಸಂಶೋಧನಾ ಕೆಲಸದಲ್ಲಿದ್ದಾರೆ.

  ದಕ್ಷಿಣದಿಂದ ಉತ್ತರಕ್ಕೆ ಕಾಡಾನೆಗಳ ಸಂಚಾರದಲ್ಲಿ ಕಳೆದ ಮೂರು ವರ್ಷದಿಂದ ನಮ್ಮೂರಿನ ಮೂಲಕ ಸಂಚರಿಸುವ ಕಾಡಾನೆ ಬಗ್ಗೆ ನಾನು ಬರೆಯುತ್ತಿರುವ ಪೇಸ್ ಬುಕ್ ಲೇಖನಕ್ಕೆ ಅವರು ಪ್ರತಿಕ್ರಿಯಿಸಿದ್ದಾರೆ.

  ಇಂತಹ ಉಪಯುಕ್ತ ಮಾಹಿತಿ ಆನೆ ಕಾರಿಡಾರ್ ಪ್ರವೇಶದಲ್ಲಿ ವಾಸಿಸುವವರಿಗೆ ಮತ್ತು ಈ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಉಪಯುಕ್ತ ಮಾಹಿತಿ ಆಗಿದೆ ಒಮ್ಮೆ ಈ ಕೆಳಗಿನ ಲೇಖನ ಓದಿ.

#ಅಶ್ವಿನ್_ಭಟ್_ಅವರ_ಪ್ರತಿಕ್ರಿಯೆ.....

  ಅವು ಬೇರೆ ಹಿಂಡು ಸೇರಲೆಂದೇ ದೂರದಿಂದ ಕ್ರಮಿಸಿ ಬಂದಿರುವ ಸಾಧ್ಯತೆ ಹೆಚ್ಚಿದೆ.

   ಉತ್ತರ ಕನ್ನಡದಲ್ಲಿರುವ ಸಣ್ಣ ಆನೆ ಗುಂಪು ದಕ್ಷಿಣದ ಬೇರೆ ಸಮೂಹಗಳಿಂದ ದಶಕಗಳಿಂದ ಸರಿಯಾದ ಸಂಪರ್ಕವಿಲ್ಲದೆ ಸೊರಗುತ್ತಿದೆ.

    ಅವುಗಳ ಸಂಖ್ಯೆ ಹಾಗೂ genetic connectivity ಈ ಎರಡೂ ಅಂಶಗಳಿಂದ ನೋಡುವುದಾದರೆ ಈ ಎರಡೂ ಆನೆಗಳ ಉತ್ತರದ ಪಯಣ ಬಹಳ ಮುಖ್ಯವಾಗಿರುತ್ತದೆ. 

   ಇವುಗಳಿಗೆ ಏನೂ ತೊಂದರೆ ಕೊಡದೆ ಬಿಟ್ಟರೂ ಇವು ಮರೆಯಾಗುತ್ತಿರುವ ಉತ್ತರ ದಕ್ಷಿಣ ಆನೆ ಕಾರಿಡಾರ್ ಅನ್ನು ಹುಡುಕಿ ಉತ್ತರ ಕನ್ನಡದ ಆನೆ ಗುಂಪನ್ನು ಸೇರಬಹುದು.

  #ಸೊರಬ_ತಾಲ್ಲೂಕಿನಲ್ಲಿರುವ_ಎರೆಡು_ಕಾಡಾನೆ_ಅಪ್_ಡೇಟ್

    ನಿನ್ನೆ ಸಂಜೆ 11- ಡಿಸೆಂಬರ್ - 2005ರ ಗುರುವಾರ #ಬರಗಿ ಕಾಡಿನಿಂದ ಹೊರ ಹೊರಟ ಎರೆಡು ಕಾಡಾನೆಗಳು ಹೊಳೆನಕೊಪ್ಪದ ರೈತರ ಕಬ್ಬಿನ ಗದ್ದೆ ನುಗ್ಗಿ ಹೊರಬಂದ ಮಾಹಿತಿ ಇದೆ.

    ಹೊಳೆನಕೊಪ್ಪ, ಭದ್ರಾಪುರ ಮೂಲಕ ಮೊರೆಕಾನ್ ಕಡೆ ಅವುಗಳನ್ನು ಓಡಿಸಲು ಅರಣ್ಯ ಇಲಾಖೆಯ ಸಿಬ್ಬಂದಿಗಳು ಮೂರೂ ದಿಕ್ಕಿನಲ್ಲೂ ಪಟಾಕಿ ಸಿಡಿಸುತ್ತಿದ್ದಾರೆ ಎಂಬ ಸುದ್ದಿ ಸ್ಥಳಿಯರು ತಿಳಿಸಿದ್ದಾರೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...