Skip to main content

Blog number. 3558. ಕುಗ್ವೆ ವಸಂತ್ ಹಾಡುಗಾರ

#ಕುಗ್ವೆ_ವಸಂತ್_ದಂಪತಿಗಳಿಗೆ

#ನಲವತ್ತೈದನೇ_ವಿವಾಹ_ವಾರ್ಷಿಕೋತ್ಸವದ

#ಶುಭ_ಹಾರೈಕೆಗಳು

#ಎಂಬತ್ತರ_ದಶಕದಲ್ಲಿ_ಹವ್ಯಕ_ಬ್ರಾಹ್ಮಣ_ಯುವಕ

#ಮತ್ತು_ದೀವರ_ಕನ್ಯೆ_ಮದುವೆ_ವಿಶೇಷ_ಘಟನೆ_ಆಗಿತ್ತು.

#ಹೋರಾಟದ_ಹಾಡುಗಳ_ಹಾಡುವ_ವಸಂತ್_ಶ್ರಮಜೀವಿ


#ಕುಗ್ವೆ #Kugve #Sagar #Havyaka #Brahmin #Divaru #Dalithasangarshasamithi 
#DSS #BKrishnappa

    ಕುಗ್ವೆ ವಸಂತ್ ಕವಿ ಸಿದ್ದಲಿಂಗಯ್ಯನವರ ಹೋರಾಟದ ಹಾಡು ಹಾಡಲು ನಿಂತರೆ ನೆರೆದವರು ಬಾವಪರವಶರಾಗದೆ ಇರಲು ಸಾಧ್ಯವೇ ಇಲ್ಲ ಅಂತಹ ದ್ವನಿ ಅವರದ್ದು.

   80 ರ ದಶಕದಲ್ಲಿ #ರುದ್ರಪ್ಪ, #ತೀನಾ_ಶ್ರೀನಿವಾಸ್.#ಶಿವಾನಂದಕುಗ್ವೆ, #ಎಸ್ಎಸ್_ನಾಗರಾಜ, #ರಿಕ್ಷಾಮೋಹನ್, #ಪೆಡ್ರಿಕ್,#ಮಂಡಗಳಲೆನಾರಾಯಣ್, #ಅದರಂತೆವಿಶ್ವನಾಥ್ ಮತ್ತು ಅನೇಕ ಉತ್ಸಾಹಿ ಯುವಕರು ಕ್ರಾಂತಿಕಾರಿ ಬದಲಾವಣೆಗಳನ್ನು ಮಾಡಲು ಮುಂದಾಗಿದ್ದರು.

   ಆಗ #ಬಿ_ಕೃಷ್ಣಪ್ಪರ #ದಲಿತ_ಸಂಘರ್ಷ_ಸಮಿತಿ ಇವರೆಲ್ಲರಿಗೂ ಜಂಪಿಂಗ್ ಬೋರ್ಡ್ ಆಯಿತು ಇವರೆಲ್ಲರ ಜೊತೆ ನನ್ನಂತವರೂ ಸೇರಿಕೊಂಡೆವು.

    ಸಾಗರದ AC ಕಛೇರಿ ಎದರು #ಬಗರ್_ಹುಕುಂ ಹಕ್ಕುಪತ್ರ ಒತ್ತಾಯಿಸಿ 1984ರಲ್ಲಿ  43 ದಿನಗಳ ನಿರಂತರ ದರಣಿ ಸತ್ಯಾಗ್ರಹ ಮತ್ತು ಆನಂದಪುರಂ ನಲ್ಲಿ ನಡೆದ #ರೈತ_ಬಂದು_ಗ್ರಾಮೋದ್ಯೋಗದ ಕಾರ್ಮಿಕರ ಹೋರಾಟಗಳು ಮುಖ್ಯವಾಗಿತ್ತು.

    ಆ ಕಾಲದಲ್ಲೇ ಹೋರಾಟಗಳ ಆಯಾಸದ ಮಧ್ಯೆ ಶಕ್ತಿ ನೀಡುತ್ತಿದ್ದದ್ದು ಕುಗ್ವೆ ವಸಂತರು ಹಾಡುತ್ತಿದ್ದ #ಕವಿಸಿದ್ದಲಿಂಗಯ್ಯನವರ ಹೋರಾಟದ ಹಾಡುಗಳು.

   ಎಲ್ಲಿಗೆ ಬಂತು ಯಾರಿಗೆ ಬಂತು 47ರ ಸ್ವಾತಂತ್ರ್ಯದ ಹಾಡಿಗೆ ನಾವೆಲ್ಲ ಕೋರಸ್ ಹಾಡುಗಾರರು.

   #ಹವ್ಯಕಬ್ರಾಹ್ಮಣರ ಈ ಪ್ರತಿಭಾವಂತ ಯುವಕ ಕುಗ್ವೆಯ #ದೀವರ ಕನ್ಯೆಯ ಪ್ರೇಮ ವಿವಾಹ 80 ದಶಕದಲ್ಲಿ ದೊಡ್ಡ ಸಂಚಲನ ಉಂಟು ಮಾಡಿದ ಅಂತರ್ಜಾತಿ ವಿವಾಹ ಆಗಿತ್ತು.

    ವಸಂತ್ ಪುತ್ರ ಸುಭಾಶ್ಚಂದ್ರ ಭಾರತೀಯ ಸೇನೆಯಲ್ಲಿ ಸೇವೆ ಮಾಡಿ ಬಂದಿದ್ದಾರೆ, ಸೈನ್ಯದಲ್ಲಿದ್ದಾಗ ದೀರ್ಘಕಾಲದ ಹಿಮಪಾತದಲ್ಲಿನ ದುರಂತದಲ್ಲಿ ಇವರು ಬದುಕಿ ಬಂದ ಸಾಹಸಿ, ಇವರ ಜೊತೆಯವರು ಜೀವತ್ಯಾಗ ಮಾಡಿದ ದುರಂತ ಅದು.

     ಸಾಮಾಜಿಕ ನ್ಯಾಯಕ್ಕಾಗಿ,ಶ್ರಮಿಕರ ಹಕ್ಕಿಗಾಗಿ ಈ ವಯಸ್ಸಿನಲ್ಲೂ, ಇವತ್ತಿಗೂ ಕುಗ್ವೆ ವಸಂತರು ಕ್ರಿಯಾಶೀಲರಾಗಿರುವುದು ವಿಶೇಷ.

  ಅನುಮಾನವೇ ಇಲ್ಲ, ಜೀವದ ಕೊನೆ ಉಸಿರಿನ ತನಕ ಅವರು ಹಾಡುತ್ತಾರೆ, ನಾನು ಅವರ ವಿಶೇಷ ದ್ವನಿಗೆ 1983ರಿಂದ ಅವರ ಅಭಿಮಾನಿ.

 ಅವರಿಗೆ ಮತ್ತು ಅವರ ಕುಟುಂಬಕ್ಕೆ ದೇವರು ಆಯುರಾರೋಗ್ಯ ಆಯಸ್ಸು ಐಶ್ವರ್ಯ ದಯಪಾಲಿಸಲಿ ಎಂದು ಹಾರೈಸುತ್ತೇನೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...