Skip to main content

#Blog 3573.ಬಾರಾಪಂಥ್ ಯಾತ್ರೆ ಭಾಗ - 1

#ಭಾಗ_1_ಉತ್ತರ_ಭಾರತದ_ನಾಥ_ಪಂಥದವರ_ಜೊತೆ_ನನ್ನ_ಸತ್ಸಂಗಗಳು.

#ಹಿಂದಿನ_ಬಾರಾಪಂತ್_ಯಾತ್ರೆ_ನೇತೃತ್ವವಹಿಸಿದ್ದ

#ಮಹಾಂತರಾದ_ಶ್ರೀಯೋಗಿ_ನಿರ್ಮಲಾನಂದ್_ಜೀ

#ಯಾರಿಗೂ_ಸಂದರ್ಶನ_ನೀಡದವರು_ನನಗೆ_ನೀಡಿದ್ದರು.

#ಇದು_ನನ್ನ_ಜೀವನದ_ಒಂದು_ಪವಾಡ_ಎಂದು_ಭಾವಿಸಿದ್ದೇನೆ.

#ಕಾಲಬೈರವನ_ಅನುಗ್ರಹ_ಎಂದು_ಕೊಂಡಿದ್ದೇನೆ

#ಉತ್ತರ_ಭಾರತದ_ನಾಥ_ಪಂಥದ_ಜೊತೆ_ವಿಚಿತ್ರ_ವಿಚಿತ್ರ_ಮತ್ತು_ವಿಶೇಷ_ಸತ್ಸಂಗದ_ಈ_ಲೇಖನ_ಸರಣಿ

#ಇವತ್ತಿನಿಂದ...


#Nathapantha #Gorakpura #Mahantharu
#YogiAditynathjogi #YogiNirmalanandaji
#Peeryogisomanathji #Barapanth #Jondi
#Myexperience #withNathapanth #Nasilk #Trayambakesh #Kumbamela #Mangalore 
#Kadribetta #Halawarimutt #Jogi #Balegar #Kunubi

  ಪ್ರತಿ 12 ವರ್ಷಕ್ಕೆ ನಾಸಿಕ್ ತ್ರಯಂಬಕೇಶ್ವರದ ಕುಂಭ ಮೇಳದ ಮರುದಿನ  ಪಶ್ಚಿಮ ಘಟ್ಟದ ಮಧ್ಯದಲ್ಲಿ ಬರಿಗಾಲಿನಲ್ಲಿ ನಡೆದು ಮಂಗಳೂರಿನ ಕದ್ರಿ ಬೆಟ್ಟ ತಲುಪುವ
ಭಾರಾ ಪಂತ್ ಯಾತ್ರೆ.

  ಸಾಗರದ ಗಣಪತಿ ದೇವಸ್ಥಾನದಿಂದ ಹೊರಟು ಹೊಸನಗರ ತಾಲೂಕಿನ ಆಲಗೇರಿಮಂಡ್ರಿ ಎಂಬ ಹಳ್ಳಿಗೆ ತಲುಪುವ ಮೊದಲು ಹೆಬ್ಬೈಲು ಎಂಬಲ್ಲಿ ಚಿಕ್ಕ ಗುಡಿಯಲ್ಲಿ ಪಾತ್ರ ದೇವತೆ, ತಮ್ಮ ಅನುಯಾಯಿ ಶ್ವಾನಗಳು ಮತ್ತು ಆರು ನೂರಕ್ಕೂ ಹೆಚ್ಚಿನ ಸಾದು ಸಂತರ ಈ ಯಾತ್ರೆಯ ಸರ್ವಾಧ್ಯಕ್ಷರಾದ ಮಹಾಂತರಾದ ಶ್ರೀ ಯೋಗಿ ನಿರ್ಮಲಾನಂದಜೀ ಅವರ ಸಂದಶ೯ನ ಮಾಡಿದಾಗ.

   ನಾನು ನನ್ನಣ್ಣ ನಾಗರಾಜ್, ಅಣ್ಣನ ಮಗ ಅನುದೀಶ್ ಮತ್ತು ಹೊಸನಗರದ ಕಂದಾಯ ಇಲಾಖೆ ಅಧಿಕಾರಿ ಮೋಹನ್ ಕುಮಾರ್  ಚಿತ್ರದಲ್ಲಿದ್ದಾರೆ.

    ನಾಸಿಕ್ ನಿಂದ ಇಲ್ಲಿವರೆಗೆ ಯಾವುದೇ ಪತ್ರಕರ್ತರಿಗೆ ಸಂದರ್ಶನ ನೀಡದ #ಮಹಾಂತರಾದ_ನಿಮಲಾನಂದ_ಜೀ ಅವರಿಗೆ ನಾನು ಶಿವಮೊಗ್ಗದ #ಶೃಂಗೇಶರ #ಜನ_ಹೋರಾಟ  ಪತ್ರಿಕೆಗೆ ಸಂದರ್ಶನ ಮಾಡಲು ಅನುಮತಿ ಕೇಳಿದಾಗ ದಾರಾಳವಾಗಿ ಮಾಡಿ ಎಂದು ಪ್ರೋತ್ಸಾಹದ ನುಡಿ ಹೇಳಿದ್ದರು.

   ಇದು ಹೇಗೆ ಸಾಧ್ಯ? ಇದೇ #ಟೆಲಿಪತಿ ಅಥವ ಮೂರನೇ ಇಂದ್ರಿಯಗಳ ಜಾಗೃತಿ ಇರುವವರಿಗೆ ಎದುರಿನ ವ್ಯಕ್ತಿ ಅಂದಾಜಿಸುವ ಪರಿ ಎನ್ನುತ್ತಾರೆ ನಾಥ ಪಂಥದ ಅನುಯಾಯಿಗಳು.

   ಇವತ್ತಿನಿಂದ ನಿರಂತರವಾಗಿ 2028 ರಲ್ಲಿ ಸಾಗರ ತಾಲೂಕಿನ ಮೂಲಕ ಹಾದು ಹೋಗುವ ಬಾರಾಪಂಥ ಯಾತ್ರೆ ಸಾಗಿ ಹೋಗುವ ತನಕ ಈ ಬಗ್ಗೆ ಸರಣಿ ಲೇಖನ ಪ್ರಕಟಿಸಲು ತೀರ್ಮಾನಿಸಿದ್ದೇನೆ.

   ಈ ಲೇಖನಗಳನ್ನ ಓದಿ ಮತ್ತು ಆಸಕ್ತಿ ಇರುವವರಿಗೆ ಶೇರ್ ಮಾಡಲು ವಿನಂತಿ.

   ಇವತ್ತು ಸಂಜೆಯ ವಿವರವಾದ ಲೇಖನದ ಎರಡನೆ ಭಾಗ ನೋಡಿ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...