Skip to main content

Blog 3575.ಕಸ್ತೂರಿ ರಂಗನ್ ವರದಿಯಲ್ಲಿ ಸಾಗರ ತಾಲ್ಲೂಕು

#ಕಸ್ತೂರಿ_ರಂಗನ್_ವರದಿ

#ಈ_ವರದಿಯಲ್ಲಿ_ಸೇರಲ್ಪಟ್ಟ

#ಶಿವಮೊಗ್ಗ_ಜಿಲ್ಲೆಯ_ಸಾಗರ_ತಾಲ್ಲೂಕಿನ_ಗ್ರಾಮಗಳು 

#ಕಸ್ತೂರಿ_ರಂಗನ್_ವರದಿಯಲ್ಲಿ_ಅತಿಹೆಚ್ಚು_ಪ್ರದೇಶ_ಸೇರಿದ_ತಾಲ್ಲೂಕು

#ಪಶ್ಚಿಮ_ಘಟ್ಟದ_ಶೇಕಡಾ_60_ಭಾಗ_ಕರ್ನಾಟಕದಲ್ಲಿದೆ


#westernghats #malenadu #shivamogga #Hosanagara #kasturiranganreport #Gadgillreport

   ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆಯ ಉದ್ದೇಶದಿಂದ, ಅದರ ಬಗೆಗೆ ಪರಿಸರ ತಜ್ಞ ಮಾದವ ಗಾಡ್ಗಿಲ್‍ರ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರ ಒಂದು ಸಮಿತಿ ರಚಿಸಿ ಅವರನ್ನು ಈ ವಿಷಯದಲ್ಲಿ ಒಂದು ವರದಿ ಕೊಡಲು ಕೆಂದ್ರ ಸರ್ಕಾರ ನೇಮಿಸಿತು. 

   ಗಾಡ್ಗಿಳ್ ಅವರು ದಿನಾಂಕ - 31- ಆಗಸ್ಟ್- 2011ರಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿದರು.

  ಈ ವರದಿಯಲ್ಲಿ ಶೇ 94-97% ಪಶ್ಚಿಮ ಘಟ್ಟಗಳ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಪರಿಗಣಿಸಬೇಕೆಂದೂ ಮತ್ತು ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಳ್ಳವಾಗ ಅದು ಅಲ್ಲಿಯ ಪರಿಸರವನ್ನು ಜೀವ ವೈವಿಧ್ಯತೆಯ ಕ್ರಮವನ್ನು ಕೆಡಿಸದಿರುವ ಷರತ್ತಿನ ಮೇಲೆ ಅನುಮತಿ ನೀಡಬೆಕೆಂದು ಶಿಪಾರಸು ಮಾಡಿತು.

  ಈ ಭಾಗದಲ್ಲಿ ಬಹಳಷ್ಟು ತೋಟಗಳೂ, ವಸತಿ ಪ್ರದೇಶಗಳೂ, ಕೃಷಿ ಪ್ರದೇಶವೂ ಸೇರಿತ್ತು. 

   ಇದರಲ್ಲಿ ಆ ಪ್ರದೇಶದ ಮುಕ್ಕಾಲು ಭಾಗವನ್ನು ನಿರ್ಬಂಧಿತ ಪರಿಸರ ಸೂಕ್ಷ್ಮ ಪ್ರದೇಶವೆಂದು ಪರಿಗಣಿಸಲಾಗಿತ್ತು.

   ಆ ಕಮಿಟಿಯ ಆ ಪ್ರದೇಶದಲ್ಲಿ ಯಾವುದೇ ದೊಡ್ಡ ಹೊಸ ಅಣೆಕಟ್ಟುಗಳನ್ನು ಕಟ್ಟುಬಾರದು, ಈ ಪ್ರದೇಶ ವಿಶೇಷ ರಕ್ಷಣೆ ಮತ್ತು ಅದರ ಭೂಲಕ್ಷಣ, ವನ್ಯಜೀವಿಗಳ ಕಾಳಜಿ, ಫಲವತ್ತಾದ ಭೂಮಿಯನ್ನು ಉಳಿಸುವ ಅಗತ್ಯವಿದೆ. 

   ಈ ಪ್ರದೇಶದಲ್ಲಿ ಕೆಲವು ಐತಿಹಾಸಿಕ ಮೌಲ್ಯಗಳು ಸಹ ಇವೆ ಇತ್ಯಾದಿ ಕಾರಣಗಳನ್ನು ಕೊಟ್ಟಿತ್ತು.

     ಆದರೆ ಅದರ ಅನೂಷ್ಟಾನಕ್ಕೆ ತಡೆ ಮಾಡಿ ಪಶ್ಚಿಮ ಘಟ್ಟಗಳ ಪರಿಸರ ಸಂರಕ್ಷಣೆಗಾಗಿ ಇನ್ನೊಂದು ಸಮಿತಿ ಡಾ. ಕಸ್ತೂರಿ ರಂಗನ್ ಅವರ ಅಧ್ಯಕ್ಷತೆಯಲ್ಲಿ #ಕಸ್ತೂರಿ_ರಂಗನ್ ಸಮಿತಿ ಕೇಂದ್ರ ಸರ್ಕಾರ ರಚಿಸಿತು.

    2013ರಲ್ಲಿ ಕಸ್ತೂರಿ ರಂಗನ್ ಸಮಿತಿ ವರದಿಯನ್ನು ಸಲ್ಲಿಸಿತು ಇದರಲ್ಲಿ ಪಶ್ಚಿಮ ಘಟ್ಟದ ಶೇ. 37ರಷ್ಟು ಭಾಗವನ್ನು (ಸುಮಾರು 59,949 ಚ.ಕಿ.ಮೀ.) ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸಲು ಶಿಫಾರಸು ಮಾಡಿದೆ.

    ಅಲ್ಲಿ ಗಣಿಗಾರಿಕೆ ಮತ್ತು ಕೆಲವು ಕೈಗಾರಿಕೆಗಳನ್ನು ನಿಷೇಧಿಸಲು ಪ್ರಸ್ತಾಪಿಸಿದೆ ಆದರೆ ಕರ್ನಾಟಕ ಸೇರಿದಂತೆ ರಾಜ್ಯ ಸರ್ಕಾರಗಳು ಈ ವರದಿಯನ್ನು ಸಂಪೂರ್ಣವಾಗಿ ಒಪ್ಪದೆ ವಿರೋಧಿಸಿವೆ.

   ಈ ವರದಿಯು ಅಭಿವೃದ್ಧಿ ಹಾಗೂ ಪರಿಸರ ರಕ್ಷಣೆಯ ನಡುವೆ ಸಮತೋಲನ ಸಾಧಿಸುವ ಉದ್ದೇಶ ಹೊಂದಿದ್ದರೂ ರೈತರು ಮತ್ತು ಸ್ಥಳೀಯರ ವಿರೋಧದಿಂದಾಗಿ ಜಾರಿಯಾಗಿಲ್ಲ.

#ಸಾಗರ_ತಾಲೂಕ್_ನಲ್ಲಿ_ಕಸ್ತೂರಿ_ರಂಗನ್_ವರದಿಯಲ್ಲಿ_ಸೇರಿದ_ಪಶ್ಚಿಮ_ಘಟ್ಟದ_ಊರುಗಳು_ನೋಡಿ

   ಗುತ್ತನಹಳ್ಳಿ, ತಲಗಳಲೆ, ಕರ್ಲಿಕೊಪ್ಪ, ಹಲವಗೋಡು, ಜಂಬನಿ, ತಲವಾಟ, ಬಿಲ್ಲಿಸಿರಿ, ಮಡಸೂರು, ಕಾನುತೋಟ.

    ಬಿದರೂರು, ಹಿರೇಮನೆ, ಬೆಳಂದೂರು, ಲವಿಗೆರೆ, ಕೆರೋಡಿ, ಬಿಲ್ಲೇಮನೆ, ಮಲ್ಲ, ಬರಾಪುರ, ಉರುಳಗಲ್ಲು, ಕುಡಿಗೆರೆ, ಹೊನ್ನೇಮರಡು, ನೆಡವಳ್ಳಿ, ಬ್ರಾಹ್ಮಣಹಕ್ಕಲು, ಕಾನೂರು, ನರಗೋಡು.

    ಚನ್ನಶೆಟ್ಟಿಕೊಪ್ಪ, ನೀಚಡಿ, ಹಿರೆಬೆಳಗುಂಜಿ, ಬಳ್ಳಿಗೆರೆ, ಎಲವರಚಿ, ಸಂಪಳ್ಳಿ, ಶಿರಗೊಪ್ಪೆ.

   ಕನಪಗಾರು, ಮಡವಳ್ಳಿ, ಬಾನುಮನೆ, ಅರಳಗೊಡು, ಎಲಗಳಲೆ, ನಿತ್ಲಿ ಹಳೇ ತೋಟ, ಅರವಾಡೆ.

   ಹಾರೋಗೊಪ್ಪ, ಚಿಕ್ಕಬಲಗುಂಜಿ, ಹೆಣ್ಣಗೆರೆ, ಬನದಕೊಪ್ಪ, ಗೌತಮಪುರ, ಹಿರಹಕ್ರ, ಬದಲಕೊಪ್ಪ, ಕಪ್ಟೆಮನೆ, ಉಳ್ಳೂರು.

   ಕೆಸವಿನಮನೆ, ಕೊಪ್ಪರಿಗೆ, ಹೊಲಕೋಡು, ಪುರದಸರ, ಕಸ್ಪಾಡಿ, ಹೋಟಲಸರ, ನಾಗವಳ್ಳಿ, ಕೊಪ್ಪನಗದ್ದೆ, ಚೆನ್ನಶೆಟ್ಟಿಕೊಪ್ಪ, ಹುಳಿಹಿತ್ಲು, ನೆದರವಳ್ಳಿ, ನಾದವಳ್ಳಿ, ದನಂದೂರು, ಚಿಕ್ಕಮತ್ತೂರು, ಮತ್ತಿಕೊಪ್ಪ, ಚಿಪ್ಲಿ, ನಡವಟ್ಟಲಿ, ಬ್ರಾಹ್ಮಣಚಿರತ್ತೆ, ಹಾರಗೊಪ್ಪ, ನರಸೀಪುರ.

   ಬಾನುಕುಳಿ, ಮುಂಬಾಳು, ಕಾನೂರು ಇನಾಂ, ನಂದೀತಾಳೆ, ಮಳಲಿ, ಹೊಂಗೋಡು, ಜಂಬೇಕೊಪ್ಪ, ಹೊಸಗುಂದ.

    ಚನ್ನಗೊಂದ, ಬಲಿಗೆ, ಮಾವಿನಸರ, ಕಾನೂರುಮನೆ, ಮುಂಡಿಗೆಸರ, ತಂಗಲವಾಡಿ, ಚೆನ್ನಿಗತೋಟ, ಗುಡಿಹಿತ್ತಲು, ಕಲ್ಲೂರು, ತುಮರಿ, ತಂಗಳ, ಅಂಬಾರಗೋಡ್ಲು, ಹೆಬ್ಬಸೆ.

 ಗಿಳಾಲಗುಂಡಿ, ಬಳ್ಳಿಬಲು, ಬಲಗೋಡು, ಹೆಬ್ಬರಿಗೆ, ಚಂದರವಳ್ಳಿ, ಕುರುವರಿ, ಕೆರೆಹಿತ್ಲು, ಬೇಸೂರು.

   ಹೆಬ್ಬೋಡಿ, ತುಮರಿಕೊಪ್ಪ, ಕಪ್ಟೆಮನೆ, ನೆಗತ್ತು, ಅರಬಳ್ಳಿ, ಲಕ್ಕವಳ್ಳಿ, ಸಾತಲಲು, ಗೀಜಗ, ಇಂದುವಳ್ಳಿ, ಕಟ್ಟಿನಕರು.

 ಗಂಟಿನಕೊಪ್ಪ, ಕುದರೂರು, ಬೊಬ್ಬಿಗೆ, ಕೋಳೂರು, ಕನ್ನಿಗೆ, ಮಾಳೂರು, ಕೊಂಡನವಳ್ಳಿ, ಬರುವೆ, ಅಡಗಳಲೆ, ಕರಾನಿ, ತಲಗೋಡು, ಶಂಕಣ್ಣ ಶಾನಭೋಗ, ಮರಾಠಿ, ವಳೂರು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...