Skip to main content

Blog 3580. ಬಚ್ಚಾಚಾರ್

#ನನ್ನ_ಜೀವಮಾನದ_ವಿಶೇಷ_ಘಟನೆ

#ತನ್ನ_ತಂದೆಯ_ಪೋಟೋ_ಇಲ್ಲ_ಎಂಬ_ಕೊರಗಿನಲ್ಲಿದ್ದ_ಮಗಳಿಗೆ

#ಮೂವತ್ತೈದು_ವರ್ಷದ_ನಂತರ_ತಂದೆ_ಫೋಟೋ_ಸಿಕ್ಕಾಗ..

#ಈ_ಘಟನೆ_ನನಗೂ_ಅವರಿಗೂ_ವಿಶೇಷವಾಯಿತು

#ಅವರ_ಜೀವಿತಾವದಿಯಲ್ಲಿ_ನಿರೀಕ್ಷೆಯೇ_ಮಾಡದ

#ಅವರ_ತಂದೆ_ಪೋಟೋ_ನೋಡಿದಾಗ


#photo #memories #Anandapuram #yadehalli #gowthamapura #vishwakarma #Acharya #carpentar 

  1984ರಲ್ಲಿ(41 ವರ್ಷದ ಹಿಂದೆ) ನಾನು ಖರೀದಿಸಿದ್ದ ನಿಕಾನ್ ಕ್ಯಾಮೆರಾದಲ್ಲಿ ಬ್ಲಾಕ್ & ವೈಟ್ ಪೋಟೋದಲ್ಲಿ ನಾನು ಲಲಿತಕ್ಕನ ತಂದೆ ಬಚ್ಚಾಚಾರ್ ಫೋಟೋ ಒಂದು ತೆಗೆದಿದ್ದೆ.
 
  ನಮ್ಮ ಮನೆ ಪಕ್ಕದ ರಾಮಾಚಾರರ ಕುಲುಮೆಯ ಕ್ಯಾಪ್ಟನ್ ಬಚ್ಚಾಚಾರ್.

  ಅವರ ಮಗಳು ಲಲಿತಮ್ಮನಿಗೆ  ಸುಮಾರು 35 ವರ್ಷದ ನಂತರ  ಅವರ ತಂದೆಯ ಪೋಟೋ ನೋಡಿದಾಗ...

  ಅವರ ಉದ್ಘಾರ "ತನ್ನ ತಂದೆ ಪೋಟೋ ತನ್ನ ಜೀವಮಾನದಲ್ಲೇ ನೋಡುತ್ತೇನೆ ಅಂದು ಕೊಂಡಿರಲಿಲ್ಲ"...

  35 ವರ್ಷದ ಹಿಂದೆ ಮೃತರಾದ ಅವರ ಒಂದೇ ಒಂದು ಪೋಟೋ ಇರಲಿಲ್ಲ.... ಅಂತ ಸುಮಾರು ಅನೇಕ ವಷ೯ದ ನಂತರ 2020 ರಲ್ಲಿ ನನ್ನ ಕಛೇರಿಗೆ ಬಂದಿದ್ದ ಗೌತಮಪುರದ ಲಲಿತಕ್ಕ ಕಣ್ಣೀರಾಗಿದ್ದಳು.

   ಇವರ ತಂದೆ ಬಚ್ಚಾಚಾರ್ ತಾಯಿ ಪದ್ದಮ್ಮ ಕುಂದಾಪುರ ಮೂಲದವರು.

   ಈ ಬಚ್ಚಾಚಾರ್ ರನ್ನು ನಮ್ಮ ಪಕ್ಕದ ಮನೆಯ ರಾಮಾಚಾರ್ ತಮ್ಮ ಕುಲುಮೆ ಕೆಲಸಕ್ಕೆ ಕರೆತಂದಿದ್ದು.
   
   ನನ್ನ ಕಥಾ ಸಂಕಲನ #ಬಿಲಾಲಿ_ಬಿಲ್ಲಿ_ಅಭ್ಯಂಜನ ದಲ್ಲಿ ಬರುವ ಒಂದು ಕಥೆಯಾದ #ಮಂಜ_ಬ್ರಹ್ಮ_ರಾಕ್ಷಸನಾದರೆ... ಕಥೆಯಲ್ಲಿ ಬಚ್ಚಾಚಾರ್ ಮತ್ತು ಆ ಕಾಲದ ಕುಲಿಮೆ ನನ್ನ ಕಣ್ಣಲ್ಲಿ ಗ್ರಹಿಸಿದ ವರ್ಣನೆ ದಾಖಲಿಸಿದ್ದೇನೆ.

  1984ರಲ್ಲಿ(42 ವರ್ಷದ ಹಿಂದೆ) ನಾನು ಖರೀದಿಸಿದ್ದ ನಿಕಾನ್ ಕ್ಯಾಮೆರಾದಲ್ಲಿ ಬ್ಲಾಕ್ & ವೈಟ್ ಪೋಟೋದಲ್ಲಿ ನಾನು ಬಚ್ಚಾಚಾರ್ ಫೋಟೋ ಒಂದು ತೆಗೆದಿದ್ದೆ ಅದು ಬಚ್ಚಾಚಾರ್ ಜೊತೆ ನನ್ನಣ್ಣ #ನಾಗರಾಜ್ ಮತ್ತು ಗೆಳೆಯ #ಅಮ್ಜಾದ್ ಜೊತೆ
 
    ಅವರ ಮಗಳು ತಂದೆಯ ಪೋಟೋ ಇಲ್ಲ ಅಂತ ರೋದಿಸಿದಾಗ ಬಚ್ಚಾಚಾರ್ ಪೋಟೋ ನೆನಪಾಗಿ ಮಗನಿಗೆ ಹೇಳಿ ಎಡಿಟ್ ಮಾಡಿಸಿ ನಮ್ಮದೇ ಪ್ರಿಂಟರ್ ನಲ್ಲಿ ಪ್ರಿಂಟ್ ತೆಗೆದು ನನ್ನಣ್ಣನ ಮಗನಿಗೆ ಆನಂದಪುರOಗೆ ಕಳಿಸಿ ಪೋಟೋ ಪ್ರೇಂ ಹಾಕಿಸಿ ತರಿಸಿ ಲಲಿತಕ್ಕನಿಗೆ ನೀಡಿದಾಗ ಅವರ ಮುಖದಲ್ಲಿ ವ್ಯಕ್ತವಾದ ಸಂತೋಷಕ್ಕೆ ಬೆಲೆ ಕಟ್ಟಲಾಗಲಿಲ್ಲ.

   ಈ ಸಂದರ್ಭದಲ್ಲಿ ಲಲಿತಕ್ಕ ತಾನು ತನ್ನ ಜೀವಮಾನದಲ್ಲೂ ನಿರೀಕ್ಷಿಸದ ತಂದೆಯ ಪೋಟೋದ ಬೆಲೆ ಲಕ್ಷ ರೂಪಾಯಿ ಕೊಟ್ಟರೂ ಕಡಿಮೆ ಅಂದರು.
 
   ಇವರ ತಾಯಿಗೆ ತೀವ್ರ ಅನಾರೋಗ್ಯವಾಗಿದ್ದಾಗ ನನ್ನ ತಾಯಿ ನಮ್ಮ ಮನೆಯಲ್ಲೇ ಎರೆಡು ತಿಂಗಳು ಇಟ್ಟುಕೊಂಡು ಸಲಹಿದ್ದು...ನಮ್ಮ ತಂದೆ ಚಿಕಿತ್ಸೆ ನೀಡಿದ್ದು... ಆಗ ನನ್ನ ದೊಡ್ಡಕ್ಕ ಜಲಜಕ್ಕನ ಕೈ ಬಳೆಗಳ ದೊಡ್ಡ ಪೆಟ್ಟಿಗೆಯ ಸಂಗ್ರಹ..., ಪ್ರತಿ ವರ್ಷ ದೀಪಾವಳಿಯಲ್ಲಿ ಲಲಿತಕ್ಕ ತನ್ನ ತಂದೆ ಬಚ್ಚಾಚಾರ್ ಗೆ ಪಿತೃ ತರ್ಪಣದ ಎಡೆ ತಪ್ಪದೆ ಇಡುವುದು... ಎಲ್ಲಾ ನೆನಪಿಸಿಕೊಂಡರು.
 
  ಗೌತಮಪುರದಲ್ಲಿ ಇವರು ನೆಲೆನಿಲ್ಲಲು ಕಾರಣರಾದ #ಕೊಗ್ಗಾಚಾರ್.... ಹಾಲಿ ಗೌತಮಪುರದ ಜನತಾ ಕಾಲೋನಿಯಲ್ಲಿ ಜಾಗ ಮತ್ತು ಮನೆ ಮಂಜೂರಿ ಮಾಡಿಸಿಕೊಟ್ಟ ಸ್ಥಳಿಯ ಮುಖಂಡರಾದ #ಕಲ್ಲಪ್ಪರನ್ನು ಸ್ಮರಿಸಿದರು

   ಬಚ್ಚಾಚಾರ್ ಪೋಟೋ, ಅವರ ಉಲ್ಲೇಖಗಳು ಇರುವ ನನ್ನ ಕಥಾ ಸಂಕಲನ, ಒಂದು ಸಾವಿರ ರೂಪಾಯಿ ಉಡುಗೊರೆಯೊಂದಿಗೆ ನೀಡಿ ಊಟ ಮಾಡಿಸಿ ಬೀಳ್ಕೊಡಿಗೆ ಮಾಡಿದೆ.

 ಅವರ ಮುಖದಲ್ಲಿ-ಕಣ್ಣಿನಲ್ಲಿ ಅಲೌಕಿಕವಾದ ತೃಪ್ತಿಯ ಪ್ರತಿಫಲನವಿತ್ತು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...