Skip to main content

Blog 3581. ಪ್ರೋ ನಂಜುಂಡ ಸ್ವಾಮಿ

#ಮಹಾನ್_ರೈತ_ನಾಯಕ

#ಪ್ರೋಪೆಸರ್_ನಂಜುಂಡಸ್ವಾಮಿ

#ರೈತರ_ಹಕ್ಕುಗಳಿಗಾಗಿ_ಪ್ರತಿಪಾದಿಸಿದವರು.

#ಕರ್ನಾಟಕ_ರಾಜ್ಯ_ರೈತ_ಸಂಘ_ಸಂಸ್ಧಾಪಕರು

#ಇವತ್ತು_ಅವರ_90ನೇ_ಹುಟ್ಟು_ಹಬ್ಬದ_ಸ್ಮರಣೆ


#professor #nanjundaswamy #raithasanga
#KRRS #gandian #Karnataka 

    ಪೋಪೆಸರ್ ನಂಜುಂಡ ಸ್ವಾಮಿ ಎಂದೇ ಜನ ಕರೆಯುವ ಮಹಾನ್ ರೈತ ನಾಯಕ ಎಂ. ಡಿ. ನಂಜುಂಡ ಸ್ವಾಮಿ ಅವರ ಪೂರ್ಣ ಹೆಸರು ಮಹಾಂತ ದೇವರು ನಂಜುಂಡಸ್ವಾಮಿ,

   13 - ಫೆಬ್ರವರಿ - 1936 ಅವರ ಜನ್ಮ ದಿನ,ಇವತ್ತು 13 -ಡೆಬ್ರುವರಿ- 2026 ಅವರ 90ನೇ ಜನ್ಮ ದಿನ.

       ರೈತ ನಾಯಕ ಪ್ರೋಪೆಸರ್ ನಂಜುಂಡಸ್ವಾಮಿ ಗಾಂಧಿವಾದಿ ನಾಯಕರು, ಭಾರತದ ಪ್ರಮುಖ ರೈತ ನಾಯಕರು.

     ಅಸಾಧಾರಣ ಬುದ್ಧಿಮತ್ತೆಯವಿದ್ವಾಂಸರಾಗಿದ್ದ ಪ್ರೋಪೆಸರ್ ನಂಜುಂಡಸ್ವಾಮಿ ಭಾರತದ ಪ್ರಮುಖ ಸಾಮಾಜಿಕ ಹೋರಾಟಗಾರರು.

    ಅವರು ರೈತರ ಹಕ್ಕುಗಳಿಗಾಗಿ ಪ್ರತಿಪಾದಿಸಿದರು ಮತ್ತು ರಾಜ್ಯದಲ್ಲಿ ಬಲಿಷ್ಟ ರೈತ ಸಂಘಟನೆಯನ್ನ ಮುನ್ನಡೆಸಿದ್ದರು.

    ಅವರು 1980 ರಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ (KRRS) ಸಂಸ್ಥಾಪಕ ತ್ರಿಮೂರ್ತಿಗಳಾದ #ರುದ್ರಪ್ಪನವರು, #ಸುಂದರೇಶ್ ಮತ್ತು  #ಪ್ರೋಪೆಸರ್_ಎಂ_ಡಿ_ನಂಜುಂಡಸ್ವಾಮಿ ಪ್ರಮುಖರು.

 ಅವರು ಜಾಗತೀಕರಣ ವಿರೋಧಿ ಪ್ರಚಾರದ ಪ್ರಮುಖ ನಾಯಕರಾಗಿದ್ದರು.

    3- ಫೆಬ್ರವರಿ - 2004 ರಂದು ತಮ್ಮ 68ನೇ ವಯಸಿನಲ್ಲಿ  ಇಹಲೋಕ ತ್ಯಜಿಸಿದ್ದಾರೆ ಅವರ ಕರ್ನಾಟಕ ರಾಜ್ಯದ ರೈತ ಹೋರಾಟಗಳು ಇತಿಹಾಸ ಅವರ ನಂತರ ಈವರೆಗೆ ಇನ್ನೊಬ್ಬ ಅವರಂತ ಸಮರ್ಥ ರೈತ ನಾಯಕ ಇನ್ನೂಬ್ಬರು ಹುಟ್ಟಿ ಬಂದಿಲ್ಲ.

     1999 ರಲ್ಲಿ ನಮ್ಮ ಮನೆಗೆ ರೈತ ನಾಯಕ  ಪ್ರೋಪೆಸರ್ ನಂಜುಂಡ ಸ್ವಾಮಿ ಅವರು ಬಂದಾಗ ಅವರ ಕಟ್ಟಾ ಅಭಿಮಾನಿ ಮತ್ತು ಅವರ ಜೈಲ್ ಭರೋ ಕರೆಯ ಮೇರೆಗೆ ಜೈಲಿಗೆ ಹೋಗಿದ್ದ #ನನ್ನ_ತಂದೆ_ಕೃಷ್ಣಪ್ಪ ಮತ್ತು ನಾನು ಅವರ ಜೊತೆ ತೆಗೆದುಕೊಂಡ ನೆನಪಿನ ಚಿತ್ರ.

     ನಮ್ಮ ತಂದೆ ಅವರಿಗೆ ಹಾರ ಹಾಕಿದ್ದರು ಆಗ ಪ್ರೋಪೆಸರ್  "ನಾನು ಯಾವಾಗಲೂ ಹಾರ ಹಾಕಿಸಿಕೊಳ್ಳುವುದಿಲ್ಲ ಆದರೆ ನಿಮ್ಮ ತಂದೆಯ ಪ್ರೀತಿಗಾಗಿ ಸ್ವೀಕರಿಸುತ್ತೇನೆ" ಎಂದಿದ್ದರು.

     ನಮ್ಮ ಆತಿಥ್ಯದ ಕಾಫಿ ಸ್ವೀಕರಿಸಿ ಸಿಗರೇಟು ಸೇದಿದ್ದರು ಅವರ ಜೊತೆ ರೈತ ನಾಯಕರಾದ #ಕೋಡಿಹಳ್ಳಿ_ಚಂದ್ರಶೇಖರ್ ಮತ್ತು ರೈತ ಹೋರಾಟ ವಾರಪತ್ರಿಕೆ ಸಂಪಾದಕರಾದ #ವಸಂತ್_ಕುಮಾರ್ ಬಂದಿದ್ದರು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...