Skip to main content

Blog 3586. ವಿಂಗ್ ಕಮಾಂಡರ್ ಮಂಜುನಾಥ್

#ಮೊದಲ_ವರ್ಷದ_ಸ್ಮರಣೆ

#ವಾಯುದಳದಲ್ಲಿ_ತರಬೇತಿ_ನೀಡುವಾಗ

#ಪ್ಯಾರಾಚೂಟ್_ತೆರೆಯದ_ದುರಂತದಲ್ಲಿ_ವೀರಮರಣ_ಹೊಂದಿದ.

#ನಮ್ಮ_ಹೆಮ್ಮೆಯ_ಇಂಡಿಯನ್_ಏರ್ಫೋರ್ಸ್_ತರಬೇತಿದಾರ_ಮಂಜುನಾಥ್

#ಶಿವಮೊಗ್ಗ_ಜಿಲ್ಲೆಯ_ಹೊಸನಗರ_ತಾಲ್ಲೂಕಿನ_ಪಟಗುಪ್ಪ_ಸಮೀಪದ_ಸಂಕೂರಿನವರು

#ಈ_ದಂಪತಿಗಳ_ವಿವಾಹ_2019ರಲ್ಲಿ_ನಮ್ಮ_ಕಲ್ಯಾಣ_ಮಂಟಪದಲ್ಲೇ_ನೆರವೇರಿತ್ತು.


#Airforce #India #Manjunath #Shivamogga #Hosanagara
#sankuru #Assam
#agraairforce #juniorwarrantofficer #indianairforce #shivamogga #hosanagara #manjunathgs #parachutes 

    ಭಾರತೀಯ ವಾಯುದಳದ ತರಬೇತಿ ಅಧಿಕಾರಿ ಆಗಿದ್ದ #ಮಂಜುನಾಥ್ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪಟಗುಪ್ಪೆ ಎಂಬ ಊರಿನ ಸಮೀಪದ ಸಂಕೂರು ಎಂಬ ಹಳ್ಳಿಯವರು.

   ಇವರ ಪರಿಚಯ ನನಗೆ 2019ರ ಪ್ರಾರಂಭದಲ್ಲಿ ಆಯಿತು ಆಗ ಅವರು ತಮ್ಮ ಜೊತೆ ಏರ್ಪೋರ್ಸನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಧಿಕಾರಿ ಅಸ್ಸಾಂ ಮೂಲದ #ಕಲ್ಪಿತಾ ಎಂಬ ಯುವತಿ ಜೊತೆ ಪ್ರೇಮ ವಿವಾಹದ ತಯಾರಿ ನಡೆಸಿದ್ದರು.

   ಇವರ ಪತ್ನಿ ಶ್ರೀಮತಿ ಕಲ್ಪಿತಾ ಕೂಡ ಭಾರತೀಯ ಏರ್ಪೋರ್ಸ್ ಟ್ರೈನಿಂಗ್ ಅಧಿಕಾರಿ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

   ಇವರ ಬಾವಿ ಪತ್ನಿ ತಂದೆ ತಾಯಿಯನ್ನ ಇವರ ಕುಟುಂಬದ ಪರಿಚಯ ಮಾಡಿಸಲು ಮತ್ತು ವಿವಾಹದ ಮಾತುಕಥೆಗಾಗಿ ಕರೆತಂದಿದ್ದಾಗ ಕೆಲವು ದಿನ ನಮ್ಮ ಹೊಂಬುಜ ರೆಸಿಡೆನ್ಸಿ ಲಾಡ್ಜ್ ನಲ್ಲಿ ಉಳಿಸಿದ್ದರು.

    ಇವರ ಪತ್ನಿಯ ತಂದೆ ತಾಯಿ ಪಶ್ಚಿಮ ಬಂಗಾಳದ ಬೆಂಗಾಲಿ ಭಾಷೆಯ ಸಿನಿಮಾ ಮತ್ತು ನಾಟಕ ಕ್ಷೇತ್ರದಲ್ಲಿ ಹೆಸರು ಮಾಡಿದವರಂತ ನನ್ನ ಮಲ್ಲಿಕಾ ವೆಜ್ ನ ಬೆಂಗಾಲಿ ಅಡುಗೆ ಕಾರ್ಮಿಕರು ಇವರನ್ನ ಗುರುತು ಹಿಡಿದಿದ್ದರು.

    ಇದೆಲ್ಲಾ ನನಗೆ ಗೊತ್ತಾಗಿದ್ದು ಅವಾಗ ನನ್ನ ಮಲಿಕಾವೆಜ್ ನಲ್ಲಿ ಪಶ್ಚಿಮ ಬಂಗಾಳದ ಕಲ್ಕತ್ತಾದ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದರು ಅವರಿಂದ ಇವರ ಪರಿಚಯ ಆಯಿತು.

   ಇವರ ಕೋರಿಕೆ ಮೇರೆಗೆ ನಮ್ಮಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಲ್ಕತ್ತಾದ #ಚಂಚಲ್_ಚಟರ್ಜಿ ಎಂಬ ಯುವಕನನ್ನ ಇವರಿಗೆ  ಸಹಕರಿಸಲು ವ್ಯವಸ್ಥೆ ಮಾಡಿದ್ದೆ.

   ಮಂಜುನಾಥ್ ತನ್ನ ಬಾವಿ ಪತ್ನಿ, ಮಾವ ಮತ್ತು ಅತ್ತೆ ಇವರನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ಇವರ ಪರಿಚಯಗಳನ್ನ ಮಾಡಿಸಿ 2019 ರಲ್ಲಿ ವಿವಾಹ ದಿನಾಂಕ ನಿಗದಿ ಮಾಡಿಸಿದ್ದರು. 

    ಆಗಲೇ ಮಂಜುನಾಥ ಜೊತೆ ನನಗೆ ಹೆಚ್ಚು ಸಂಪರ್ಕ ಸಾಧ್ಯವಾಯಿತು ಅವರ ನಿತ್ಯದ ವಿಮಾನದಲ್ಲಿನ ತರಬೇತಿ ಕೆಲಸ ಇತ್ಯಾದಿ ತಿಳಿಸಿದ್ದರು.

  ಇವರ ಸಹೋದರಿ ಮತ್ತು ಭಾವ ನಮ್ಮ ಆನಂದಪುರಂ ನಿವಾಸಿಗಳಾಗಿದ್ದಾರೆ.

    ಆನಂದಪುರಂನ ರೈಲ್ವೆ ನಿಲ್ದಾಣದ ರಸ್ತೆಯ ಮಣಿಕಂಠ ಇಂಡಸ್ಟ್ರೀಸ್ ಮಾಲಿಕ ಕೇಶವ ಅವರು ಮಂಜುನಾಥ್ ಸಹೋದರಿ ಪತಿ (ಇವರ ಬಾವ) ನಮ್ಮೂರಲ್ಲಿ ಪಿಠೋಪಕರಣ ಇತ್ಯಾದಿ ತಯಾರಿಸುವ ಇಂಡಸ್ಟಿ  ಮಾಡಿಕೊಂಡು ಪ್ರಸಿದ್ಧರಾಗಿದ್ದಾರೆ.

   ನಂತರ ಕೆಲ ತಿಂಗಳಲ್ಲೇ ಇವರ ವಿವಾಹ ಕಾರ್ಯಕ್ರಮ ನಮ್ಮ #ಕೃಷ್ಣಸರಸ_ಕಲ್ಯಾಣ_ಮಂಟಪದಲ್ಲಿ ಜರುಗಿತು ನೂತನ ದಂಪತಿಗಳು ರೈಲಿನಲ್ಲಿ ಬೆಂಗಳೂರಿಗೆ ಹೋಗುವಾಗ ಅವರನ್ನ ಆನಂದಪುರಂ ರೈಲು ನಿಲ್ದಾಣಕ್ಕೆ ಬೀಳ್ಕೊಡಲು ನಮ್ಮ ಕಲ್ಕತ್ತಾದ ಬೆಂಗಾಲಿ ಸಿಬ್ಬಂದಿಗಳು ಕೂಡ ಜೊತೆಗೆ ಹೋಗಿದ್ದರು.

    ಕಳೆದ ವರ್ಷ 10 -ಪೆಬ್ರವರಿ-2026ರಂದು ಬಂದ ಬರಸಿಡಿಲಿನಂತ ಈ ಸುದ್ದಿ ಕೇಳಿ ಇದು ಇವರಾಗದಿರಲಿ ಎಂದು ಒಳ ಮನಸ್ಸು ಹೇಳುತ್ತಿತ್ತು.

   ಆದರೆ ನಂತರ ಬಂದ ಸುದ್ದಿ ಹೊಸನಗರ ತಾಲೂಕು ಪಟಗುಪ್ಪ ಊರ ಹತ್ತಿರದ ಸಂಕೂರು ಗ್ರಾಮದವರು, 2019ರಲ್ಲಿ ಅಸ್ಸಾಂ ಮೂಲದ ಯುವತಿ ಜೊತೆ ವಿವಾಹ ಆಗಿತು ಅನ್ನುವ ಮಾಹಿತಿಯಿಂದ ನನಗೆ ಇದೇ ಮಂಜುನಾಥ್ ಎಂಬುದು ಖಾತ್ರಿ ಆಯ್ತು.

  ದಂಪತಿಗಳು ತಮ್ಮ ಮಗುವಿನ ನಿರೀಕ್ಷೆಯಲ್ಲಿದ್ದಾಗಲೇ ಮಂಜುನಾಥ್ ಉತ್ತರಪ್ರದೇಶ ರಾಜ್ಯದ ಆಗ್ರಾದ ಭಾರತೀಯ ಸೇನೆಯ ವೈಮಾನಿಕ ತರಬೇತಿಯ ಪ್ಯಾರಾಶ್ಯೂಟ್ ಜಂಪಿಂಗ್ ತರಬೇತಿ ನೀಡುವಾಗ ತರಬೇತಿ ಪಡೆಯುತ್ತಿದ್ದ 11 ಯೋದರು ಯಶಸ್ವಿ ಆಗಿ ಪ್ಯಾರಾಶ್ಯೂಟ್ ನಲ್ಲಿ ಲ್ಯಾಂಡಿಂಗ್ ಆದರು.

   ಆದರೆ ಇಂಡಿಯಿನ್ ಏರ್ ಫೋರ್ಸ್ ನ ತರಬೇತುದಾರ ಜ್ಯೂನಿಯರ್ ವಾರೆಂಟ್ ಆಫೀಸರ್ #ಮಂಜುನಾಥರ ಪ್ಯಾರಾಶ್ಯೂಟ್ ತೆರೆದುಕೊಳ್ಳದೇ ಅವರು ನೇರವಾಗಿ ಭೂಮಿಗೆ 1800 ಅಡಿಯಿಂದ ಅಪ್ಪಳಿಸಿ ಇಹ ಲೋಕ ತ್ಯಜಿಸಿದ್ದಾರೆ.

      ಇದೊಂದು ದುರಂತ ಇವರ ಹುಟ್ಟೂರಿನಲ್ಲಿ  ಅವರ ಅಂತ್ಯಸಂಸ್ಕಾರ ನಡೆಯಿತು, ಜಿಲ್ಲಾ ಆಡಳಿತ ಅಂತಿಮ ಗೌರವಗಳನ್ನು ಸಮರ್ಪಿಸಿದೆ.

    ಜಿಲ್ಲೆಯ ಜನ ಕಂಬನಿ ಮಿಡಿದಿದ್ದಾರೆ,ಮಂಜುನಾಥ್ ಆತ್ಮಕ್ಕೆ ಶಾಂತಿ ಲಭಿಸಲಿ, ಸ್ವರ್ಗ ಪ್ರಾಪ್ತಿಯಾಗಲಿ ಈ ಕುಟುಂಬಕ್ಕೆ ಇವರ ಅಕಾಲಿಕ ಅಗಲಿಕೆ ತಡೆಯುವ ಶಕ್ತಿ ನೀಡಲಿ ಎಂದು ನಮ್ಮ ಪುರ ದೈವ ಶ್ರೀವರಸಿದ್ದಿ ವಿನಾಯಕ ಸ್ವಾಮಿ ದೇವರಲ್ಲಿ ಪ್ರಾರ್ಥಿಸಿದ್ದೆ.

    ಇವತ್ತು ಮಂಜುನಾಥರ ಮೊದಲ ವರ್ಷದ ಪುಣ್ಯತಿಥಿ ಸ್ಮರಣೆ ದಿನ ಇದೆಲ್ಲ ಪುನಃ ನೆನಪಾಯಿತು.

   ಮಂಜುನಾಥರ ಕುಟುಂಬದವರು ಅವರ ಅಂತ್ಯಕ್ರಿಯೆ ನಡೆಸಿದ ಸ್ಥಳದಲ್ಲಿ ಅವರ ಸ್ಮರಣಾರ್ಥವಾಗಿ ಸ್ಮಾರಕ ಕೂಡ ನಿರ್ಮಿಸಿದ್ದಾರೆ.

    ಅವರ ಕುಟುಂಬದ ಈ ಕೆಲಸಕ್ಕೆ ಅಭಿನಂದನೆ ಸಲ್ಲಿಸುತ್ತೇನೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...