Skip to main content

Blog 3589.ಆರಗ ಜ್ಞಾನೇಂದ್ರ

ಆರಗ ಜ್ಞಾನೇಂದ್ರ ಮಾಜಿ ಶಾಸಕರು ತೀಥ೯ ಹಳ್ಳಿ, ಗೋವು ಪಾಲಕ  ಹಳ್ಳಿ ಹುಡುಗನ ಯಶೋಗಾಥೆ

  
  ನಾನು ಆಗ ಶಿವಮೊಗ್ಗ ಜಿ.ಪಂ.ಸದಸ್ಯ ನಮ್ಮ ಊರಿನ ವಾಹನ ಒಂದು ಆರಗದಲ್ಲಿನ ಶಾಲಾ ವಿದ್ಯಾಥಿ೯ನಿಗೆ ಡಿಕ್ಕಿ ಹೊಡೆದು ಆಕೆ ತೀಥ೯ಳ್ಳಿ ಆಸ್ಪತ್ರೆ ಸೇರಿಸಲಾಗಿತ್ತು, ಆಗ ಆರಗ ಜ್ಞಾನೇ೦ದ್ರ ಶಾಸಕರು ಬಿ.ಜೆ.ಪಿ. ಪಕ್ಷದಿಂದ.
  ನಮ್ಮ ಊರಿನ ವಾಹನ ಮಾಲಿಕರು ಮುಸ್ಲಿಂ, ಚಾಲಕರು ಮುಸ್ಲಿಂ ಅವರಿಗೆಲ್ಲ ಅವತ್ತು ಜೀವ ಭಯ.
   ಬೆಳಿಗ್ಗೆ ನನ್ನ ಕರೆದುಕೊಂಡು ಆರಗದ ಶಾಸಕರ ಮನೆಗೆ ಕರೆದೊಯ್ದರು, ಅಲ್ಲಿ ಶಾಸಕರಾದ ಜ್ಞಾನೇಂದ್ರ ಬೆಳಿಗ್ಗಿನ ಉಪಹಾರಕ್ಕೆ ನಮ್ಮನ್ನ ಕರೆದರು.        
     ಮುಸ್ಲಿಂ ವಾಹನ ಮಾಲಿಕರಿಗೆ ತೊಂದರೆ ಆಗದಂತೆ ತಮ್ಮ ಊರಿನ ಬಡ ವಿದ್ಯಾಥಿ೯ನಿಗೆ ಅನುಕೂಲವನ್ನೂ ಮಾಡಿದರು, ಇವತ್ತಿಗೂ ಆ ವಾಹನ ಮಾಲಿಕರು ಮತ್ತು ಚಾಲಕರು ಇವರನ್ನ ನೆನಪಿಸಿ ಕೊಳ್ಳುತ್ತಾರೆ.
    ಇದೇ ಸಂದಭ೯ದಲ್ಲಿ ಸಂದಶ೯ನವಲ್ಲದ ಆದರೆ ಸಂದಶ೯ನದಂತೆ ನಮ್ಮಿಬ್ಬರ ನಡುವೆ ನಡೆದ ಸಂಬಾಷಣೆ ಬಹಳ ವಷ೯ದ ಹಿಂದೆ, ಶಿವಮೊಗ್ಗದ ಜನ ಹೋರಾಟ ಪತ್ರಿಕೆಯ ಕಾಲಂನಲ್ಲಿ ಬರೆದದ್ದು ಇಲ್ಲಿ ಪ್ರನ: ಉಲ್ಲೇಖಿಸಿದ್ದೇನೆ.
   ಇವರ ಬಾಲ್ಯದಲ್ಲಿ ಇವರ ಜೀವನ ಅತ್ಯಂತ ಬಡತನದ್ದು, 7ನೇ ತರಗತಿಯಲ್ಲಿ ಅತ್ಯುತ್ತಮ ದಜೆ೯ಯಲ್ಲಿ ಉತ್ತೀಣ೯ ರಾಗುತ್ತಾರೆ ಆದರೆ ಬಡತನ ಮುಂದಿನ ವಿದ್ಯಾಭ್ಯಾಸಕ್ಕೆ ಅನುವು ನೀಡುವುದಿಲ್ಲ, ಇವರ ತಂದೆ ಊರವರ ಗೋವುಗಳ ಕಾವಲಿಗೆ ಇವರನ್ನ ನೇಮಿಸುತ್ತಾರೆ.
     ಬಾಲಕ ಜ್ಞಾನೇಂದ್ರನಿಗೆ ಒಂದು ಖಾಕಿ ಚೆಡ್ಡಿ ಮಾತ್ರ ಉಡುಗೆ. ಬರೀ ಮೈಯಲ್ಲಿ ಯ ಬಾಲಕನಿಗೆ ಗೋಣಿ ಚೀಲವೇ ಕಂಬಳಿ, ಬೆಳಿಗ್ಗೆ ಗೋವುಗಳೂಂದಿಗೆ ಹೋದರೆ ಸೂಯಾ೯ಸ್ತ ಸಮಯಕ್ಕೆ ಹಳ್ಳಿಗೆ ವಾಪಾಸು ಬರುವಾಗ ಮುಂದಿನ ಜೀವನದ ಬಗ್ಗೆ ಯೋಚಿಸಲು ಸಮಯವಾದರೂ ಎಲ್ಲಿ.
   ಹೀಗಿದ್ದಾಗ ಒಂದು ದಿನ ಗೋವುಗಳ ಮೇವಿನ ನಲಿದಾಟದ ಮಧ್ಯ ಬಾಲಕ ಜ್ಞಾನೇಂದ್ರ ತನ್ನದೇ ಗೋಪಾಲಕ ವೃತ್ತಿಯ ಬಾಲ್ಯದಾಟದಲ್ಲಿ ಮೈಮರೆತಿದ್ದಾಗ, ಅವರ ಶಾಲಾ ಶಿಕ್ಷಕರು ದಿಡೀರ್ ಪ್ರತ್ಯಕ್ಷರಾದಗ ಜ್ಞಾನೇಂದ್ರ ಬೆದರುತ್ತಾರೆ. ಆದರೆ ಎಲ್ಲಾ ಸನ್ನಿವೇಶ ಅರಿತೇ ಬಂದ ಆ ದೈವ ಸ್ವರೂಪದ ಶಿಕ್ಷಕ ತಕ್ಷಣ ತನ್ನ ಜೊತೆ ಬರಲು ಆಜ್ಞಾಪಿಸುತ್ತಾರೆ.
     ಉಭಯ ಸಂಕಟದಲ್ಲಿ ಬಾಲಕ ಸಿಕ್ಕಿ ಬೀಳುತ್ತಾನೆ. ತಾನು ಜವಾಬ್ದಾರಿ ವಹಿಸಿದ ಕೆಲಸ ಬಿಟ್ಟು ಹೋದರೆ? ಗೋವುಗಳ ಪಾಡೇನು? ಇದರ ಜವಾಬ್ದಾರಿ ನೀಡಿದ ತಂದೆಗೆ ಉತ್ತರ? ಈ ಎಲ್ಲಾ ಪ್ರಶ್ನೆಗೆ ಪರಿಹಾರವಾಗಿ ಶಿಕ್ಷಕರು ನಿನ್ನ ತಂದೆಗೆ ಹೇಳಿಯೇ ಬಂದಿದ್ದೇನೆ ಬಾ ಅಂತ ಸೀದಾ ಆರಗದ ಅಕ್ಕಿ ಗಿರಣಿ ಮಾಲಿಕರಾದ ದಾನಿ ಶ್ರೀ ನಾಗರಾಜ ರಾಯರ ಹತ್ತಿರ (ನನ್ನ ನೆನಪು ಸರಿ ಇದ್ದರೆ ಈ ಹೆಸರು ಸರಿ) ಕರೆದೊಯ್ಯತ್ತಾರೆ.
  ಅಲ್ಲಿ ಶಿಕ್ಷಕರು ವಿನಂತಿಸುತ್ತಾರೆ ಈ ಬಾಲಕ ಪ್ರತಿಭಾವಂತ ಬಡತನದಿಂದ ಈತನ ತಂದೆ ದನ ಕಾಯಲು ಬಿಟ್ಟಿದ್ದಾರೆ ಆದರೆ ನೀವು ಈತನನ್ನ ಓದಿಸಿದರೆ ಮುಂದೆ ಈತ ಉತ್ತಮ ವ್ಯಕ್ತಿ ಆಗಿ ಸಮಾಜದ ಒಳಿತಿಗೆ ಕಾರಣನಾಗುತ್ತಾನೆ ಅಂದಾಗ, ಅವರು ಜ್ಞಾನೇಂದ್ರರನ್ನ ದತ್ತು ಪಡೆದಂತೆ ಅವರ ಮನೆಯಲ್ಲೇ ವಿದ್ಯಾಭ್ಯಾಸ ಮಾಡಿಸುತ್ತಾರೆ.
  ಮುಂದೆ ವಿದ್ಯಾವಂತರಾಗಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ, ಶಾಸಕರಾದ ಆರಗ ಜ್ಞಾನೇ೦ದ್ರರ ಮನೆಯಲ್ಲಿ ದೊಡ್ಡ ಪೋಟೋ ಒಂದು ನಿತ್ಯ ಅವರಿಂದ ಪೂಜಿಸುತ್ತಿರುವುದು, ಅವರನ್ನ ಸಾಕಿ ಸಲುಹಿದ ಆರಗದ ಅಕ್ಕಿ ಗಿರಣಿ ಮಾಲಿಕರಾದ ಬ್ರಾಹಮಣ ನಾಗರಾಜ ರಾಯರದ್ದು.
  ಜೀವನದಲ್ಲಿ ಉಪಕಾರ ಮಾಡಿದವರನ್ನ ಮರೆಯದೆ ಸದಾ ಸ್ಮರಿಸುವ, ಆರಗ ಎಂಬ ಹಳ್ಳಿಯಲ್ಲಿ ವಾಸ ಆಗಿರುವ ಮಾಜಿ ಶಾಸಕ ಜ್ಞಾನೇ೦ದ್ರ ಈ ಬಾರಿ ತೀಥ೯ ಹಳ್ಳಿ ಕ್ಷೇತ್ರದಿಂದ ಬಿಜೆಪಿ ಪಕ್ಷದಿಂದ ಸ್ಪದಿ೯ಸುತ್ತಿದ್ದಾರೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...