Skip to main content

Blog number 3561. ಕೆಂಜಿಗಾಪುರದ ಶ್ರೀವೀರಭದ್ರೇಶ್ವರ ರಥೋತ್ಸವ

#ನಮ್ಮೂರ_ಕೆಂಜಿಗಾಪುರದ_ಶ್ರೀವೀರಭದ್ರಸ್ವಾಮಿ_ದೇವರ_ಜಾತ್ರೆ_ರಥೋತ್ಸವ.

#ಆನಂದಪುರಂ_ಸಮೀಪದ_ಕೆಂಜಿಗಾಪುರದಲ್ಲಿ

#ಪ್ರತಿವರ್ಷ_ಹೋಳಿಹುಣ್ಣಿಮೆ_ದಿನ_ರಥೋತ್ಸವ_ಆಚರಣೆ

#ವಿಜಯನಗರದ_ಅರಸು_ಪ್ರೌಡ_ಪ್ರತಾಪ_ರಾಯ_ಆರು_ಶತಮಾನದ_ಹಿಂದೆ_ನಿರ್ಮಿಸಿದ_ದಾಖಲೆಯಿದೆ

#ಪ್ರೌಡ_ಪ್ರತಾಪರಿಗೆ_ಗಜ_ಬೇ0ಟೆಗಾರ_ಎಂಬ_ಬಿರುದು_ಇತ್ತು.
#shivamogga #sagar #ananandapuram #Yadehalli #kenjigapura #veerabadreshwara #temple

    ಇದೇ ಬರುವ ಮಾರ್ಚ್ 2 ರಿಂದ 4ನೇ ತಾರೀಖಿನ ತನಕ ಆನಂದಪುರಂ ಸಮೀಪದ ಯಡೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಂಜಿಗಾಪುರದ ಇತಿಹಾಸ ಪ್ರಸಿದ್ಧ ಶ್ರೀವೀರಭದ್ರೇಶ್ವರ ದೇವರ ಜಾತ್ರೆ ಮತ್ತು ರಥೋತ್ಸವ ನಡೆಯಲಿದೆ.

    ದಿನಾಂಕ 3 - ಮಾರ್ಚ್ ಹೋಳಿ ಹುಣ್ಣಿಮೆ ದಿನ ರಥೋತ್ಸವ ನಡೆಯುತ್ತದೆ.

   ಈ ಶಿಲಾಮಯ ದೇವಾಲಯವು ನಿರ್ಮಾಣವಾಗಿ ಆರು ಶತಮಾನಗಳಾಗಿದೆ.

    ವಿಜಯನಗರದ ಅರಸು #ಪ್ರೌಡ_ಪ್ರತಾಪರಾಯ ಆ ಕಾಲದಲ್ಲಿ ಮಲೆನಾಡಿನ ಈ ಪ್ರದೇಶದಲ್ಲಿನ ಅರಣ್ಯದಲ್ಲಿನ ಕಾಡಾನೆಗಳನ್ನು ಹಿಡಿದು ಪಳಗಿಸಿ ಅದನ್ನು ತನ್ನ ಸೈನ್ಯದಲ್ಲಿ ಬಳಸುತ್ತಿದ್ದಂತ ಸಾಹಸಿ.

    ಆದ್ದರಿಂದ ರಾಜ ಪ್ರೌಢ ಪ್ರತಾಪ ರಾಯರಿಗೆ #ಗಜ_ಬೇಂಟೆಗಾರ ಎಂಬ ಬಿರುದು ಇತ್ತು.

   ಆರುನೂರು ವರ್ಷಗಳ ಹಿಂದೆ ಈ ಪ್ರದೇಶ ದೊಡ್ಡ ಜನ ವಸತಿ ಪ್ರದೇಶ ಆಗಿದ್ದಿರಬೇಕು.

   ಕೆಂಜಿಗಾಪುರದ ಶ್ರೀವೀರಭದ್ರೇಶ್ವರ ದೇವಾಲಯ ನಿರ್ಮಾಣವಾಗಿ ಇಲ್ಲಿನ ಶಾಸನಗಳ ಪ್ರಕಾರ 607 ವರ್ಷಗಳಾಗಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರಂ ಹೋಬಳಿಯ ಚಿಕ್ಕ ಗ್ರಾಮ  ಕೆಂಜಿಗಾಪುರ ಈಗ ಯಡೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟಿದೆ.

  ಈ ದೇವಾಲಯ ಸರ್ಕಾರದ ಮುಜರಾಯಿ ಇಲಾಖೆಗೆ ಸೇರಿದೆ.

   ಪ್ರತಿ ವರ್ಷ ಹೋಳಿ ಹುಣ್ಣಿಮೆಯಂದು ಶ್ರೀವೀರಭದ್ರ ದೇವರ ರಥೋತ್ಸವ ನೆರವೇರುತ್ತದೆ ಅದರ ಹಿಂದಿನ ದಿನ ಹೂವಿನ ಪಲ್ಲಕ್ಕಿ ಉತ್ಸವ ನಡೆಯುತ್ತದೆ.

   #ಇದೇ_03 _ಮಾರ್ಚ್_2026_ಮಂಗಳವಾರ ಹೋಳಿ ಹುಣ್ಣಿಮೆ ದಿನ ಕೆಂಜಿಗಾಪುರದ ಶ್ರೀವೀರಭದ್ರೇಶ್ವರ ದೇವರ #ರಥೋತ್ಸವ ನಡೆಯಲಿದೆ.

  ಈ ದೇವಾಲಯ ವಿಜಯನಗರ ಸಾಮ್ರಾಜ್ಯದ ಅರಸು ಪ್ರೌಡ ಪ್ರತಾಪ ರಾಯ 1419 ರಲ್ಲಿ ನಿರ್ಮಿಸಿದ ಶಾಸನದ ಉಲ್ಲೇಖವಿದೆ.

    ಬಹುಶಃ 2002 ರವರೆಗೆ ವೀರಭದ್ರ ದೇವರ ರಥ ಯಡೇಹಳ್ಳಿ ವೃತ್ತದ ತನಕ ಬರುತ್ತಿತ್ತು.

       1975ರ ತನಕ ಈ ರಥ ರಾಜ ಬೀದಿ ಉತ್ಸವ ಆನಂದಪುರಂನ ಸಂತೆ ಮಾರ್ಕೆಟ್ ತನಕ ನಡೆಯುತ್ತಿತ್ತು.

  ನಂತರ ಇದು ಯಡೇಹಳ್ಳಿ ವೃತ್ತಕ್ಕೆ ಸೀಮಿತವಾಗಿದ್ದು ಈಗ ಅದೂ ಬದಲಾಗಿ ದೇವಾಲಯದಿಂದ ಯಡೇಹಳ್ಳಿ ಪ್ರವಾಸಿ ಮುಂದಿರದ ಹಿಂಬಾಗದಲ್ಲಿರುವ ಗಡಿಕಲ್ಲಿನ ತನಕ ಮಾತ್ರ ರಥೋತ್ಸವ ನಡೆಯುತ್ತದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...