Skip to main content

Blog number 3576. ಡಾಕ್ಟರ್ ಪ್ರೀತಮ್

#ತೇಜಸ್ವಿ_ಕಟ್ಟಾ_ಅಭಿಮಾನಿ_ಈ_ವೈದ್ಯರು.

#ಕನ್ನಡ_ಸಾಹಿತ್ಯ_ಓದುವ_ಮತ್ತು_ಬರೆಯುವ_ಅಪರೂಪದ_ವೈದ್ಯರು

#ಈಗಾಗಲೇ_ಡಯಾಬಿಟೀಸ್_ಬಗ್ಗೆ_ಮೂರು_ಪುಸ್ತಕ_ಪ್ರಕಟಿಸಿರುವ

#ಡಾಕ್ಟರ್_ಪ್ರೀತಮ್_ಪೂರ್ಣಚಂದ್ರ_ತೇಜಸ್ವಿ_ಅಭಿಮಾನಿ


#Mudigere #Niruthara #PurnachandraTejaswi #DrPreetham #Kannada books #Diabetesreveseltips #Shivamogga

   ಕನ್ನಡ ಸಾಹಿತ್ಯ ಓದುವ ಮತ್ತು ಕನ್ನಡದಲ್ಲಿ ಬರೆಯುವ ವೈದ್ಯರ ಸಂಖ್ಯೆ ತುಂಬಾ ಕಡಿಮೆ ಮತ್ತು ಅಪರೂಪದಲ್ಲಿ ಅಪರೂಪ.

   ಡಾಕ್ಟರ್ ಪ್ರೀತಮ್ ಶಿವಮೊಗ್ಗ ಕನ್ನಡ ಸಾಹಿತ್ಯದ ಅಭಿಮಾನಿಗಳು, ನಿರಂತರ ಓದು ಅವರ ಹವ್ಯಾಸ, ಇವರು ಎರೆಡು ಪುಸ್ತಕ ಡಯಾಬಿಟೀಸ್ ಬಗ್ಗೆ ಕನ್ನಡದಲ್ಲಿ ಪ್ರಕಟಿಸಿದ್ದಾರೆ ಹಾಗೂ ಒಂದು ಪುಸ್ತಕ ಇಂಗ್ಲೀಷ್ ನಲ್ಲಿ ಪ್ರಕಟಿಸಿದ್ದಾರೆ.

   ಡಯಾಬಿಟಿಸ್ ರಿವರ್ಸಲ್ ಯಶಸ್ವಿ ತರಬೇತಿ ಮತ್ತು ಚಿಕಿತ್ಸೆಯಿಂದ ಕರ್ನಾಟಕ ರಾಜ್ಯ ಮಾತ್ರವಲ್ಲ ಬೇರೆ ರಾಜ್ಯಗಳಲ್ಲಿ ಮತ್ತು ವಿದೇಶಗಳಲ್ಲೂ ಇವರಿಂದ ಚಿಕಿತ್ಸೆ ಪಡೆದು ಡಯಾಬಿಟೀಸ್ ರಿವರ್ಸಲ್ ಮಾಡಿಕೊಂಡವರಿದ್ದಾರೆ.

   ಇವರು ಈಗಾಗಲೇ ಮೂರು ಪುಸ್ತಕಗಳನ್ನ ಡಯಾಬಿಟೀಸ್ ಬಗ್ಗೆ ಬರೆದು ಪ್ರಕಟಿಸಿ ವೈದ್ಯಕೀಯ ಸಾಹಿತ್ಯ ಲೋಕದ ಜನಪ್ರಿಯ ವೈದ್ಯರಾಗಿದ್ದಾರೆ.

   ಇವರ ಮೂರನೆ ಪುಸ್ತಕ #ಡಯಾಬಿಟೀಸ್_ರಿವರ್ಸಲ್_ಟಿಪ್ಸ್ ಪುಸ್ತಕದ ಮುಖಪುಟಕ್ಕೆ ಮೂಡಿಗೆರೆಯ ಪೂರ್ಣಚಂದ್ರ ತೇಜಸ್ವಿ ಅವರ ಮನೆ #ನಿರುತ್ತರ ಅಚ್ಟಿಸಿದ್ದಾರೆ.

    ಪೂರ್ಣಚಂದ್ರ ತೇಜಸ್ವಿ ಅವರ ಮತ್ತು ಕುವೆಂಪು ಅವರ ಎಲ್ಲಾ ಸಾಹಿತ್ಯಗಳನ್ನ ಇವರು ಓದಿದ್ದಾರೆ.

    ತೇಜಸ್ವಿ ಬಗ್ಗೆ ಇವರಿಗೆ ಇರುವ ಅಭಿಮಾನ ಮಾತ್ರ ವಿಶೇಷ, ಇವರು ಡಯಾಬಿಟೀಸ್ ರಿವರ್ಸಲ್ ಜನ ಜಾಗೃತೆಗಾಗಿ ವಾಟ್ಸಪ್ ಗ್ರೂಪ್ ಅಭಿಯಾನ ಪ್ರಾರಂಭಿಸಿದ್ದಾರೆ ಅದಕ್ಕೆ ಇವರು  #ತೇಜಸ್ಟಿ_ಡಯಾಬಿಟೀಸ್_ಎಜುಕೇಶನ್_ಗ್ರೂಪ್ ಅಂತ ನಾಮಕರಣ ಮಾಡಿದ್ದಾರೆ.

     ಮೂಡಿಗೆರೆಯ ಪೂರ್ಣಚಂದ್ರ ತೇಜಸ್ವಿ ಅವರ ಮನೆ ನಿರುತ್ತರದಲ್ಲಿದ್ದ ತೇಜಸ್ವಿ ಅವರ ವಾಹನ ಸ್ಕೂಟರ್ ಮೇಲೆ ಡಾಕ್ಟರ್ ಪ್ರೀತಮ್ ಕುಳಿತ ಫೋಟೋ ತುಂಬಾ ವೈರಲ್ ಆಗಿತ್ತು.

    ನಾಡಿನಾದ್ಯಂತ ಪೂರ್ಣಚಂದ್ರ ತೇಜಸ್ವಿ ಅವರ ಅಭಿಮಾನಿಗಳಿದ್ದಾರೆ ಆದರೆ ಡಯಾಬಿಟೀಸ್ ತಜ್ಞ ವೈದ್ಯರಾದ ಶಿವಮೊಗ್ಗದ ಡಾಕ್ಟರ್ ಪ್ರೀತಮ್ ಅಷ್ಟು ಅಭಿಮಾನಿ ನಾನು ನೋಡಿಲ್ಲ.

    ಪ್ರತಿ ವಿಚಾರದಲ್ಲೂ ಪ್ರಯೋಗ ಮಾಡಿ ನೋಡಿ ಬರೆಯುವ ಡಾಕ್ಟರ್ ಪ್ರೀತಮ್ ವಿಶೇಷ ವ್ಯಕ್ತಿ ಆಗಿದ್ದಾರೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...