Skip to main content

4006. ಮೆಕ್ಕಾ ಯಾತ್ರೆ / ಹಜ್ ಯಾತ್ರೆ 2026

ಹಜ್_ಯಾತ್ರೆ (ಭಾಗ-1)

  ಇಸ್ಲಾಂ ಧರ್ಮದಲ್ಲಿ ಹಜ್ ಯಾತ್ರೆ ವಾರ್ಷಿಕ ತೀರ್ಥಯಾತ್ರೆಯಾಗಿದೆ. 

   2026ರ ( ಹಿಜರ ಶಕೆ 1447 AH)  ಸೌದಿ ಅರೇಬಿಯಾದಲ್ಲಿ ಚಂದ್ರನ ವೀಕ್ಷಣೆಗೆ ಒಳಪಟ್ಟುಮೇ ತಿಂಗಳ ದಿನಾಂಕ 25-30 ರ ಪ್ರಮುಖ ದಿನಗಳನ್ನು ನಿರೀಕ್ಷಿಸಲಾಗಿದೆ.

  ಹಜ್ ಮೆಕ್ಕಾ ಯಾತ್ರೆಯಲ್ಲಿ ಭಾರತದಿಂದ ಎಷ್ಟು ಇಸ್ಲಾಂ ಧರ್ಮದ ಅನುಯಾಯಿಗಳು ಭಾಗವಹಿಸುತ್ತಾರೆ?...

  ಇದಕ್ಕೆ ಮಾನದಂಡ ಏನು?... ಇತ್ಯಾದಿ ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರದ ಮೂಲಕ ಮಾಹಿತಿ ನೀಡುವ ಸರಣಿ ಲೇಖನ ಓದಿ.

     ಈ ವರ್ಷ 2026ರ ಹಜ್ ಯಾತ್ರೆಗೆ ಅಲ್ಲಿನ ಸೌದಿ ಅರೇಬಿಯಾ ಸರ್ಕಾರ ಮತ್ತು ಭಾರತ ಸರ್ಕಾರಗಳ ಒಪ್ಪಂದದಂತೆ ನಿಗದಿ ಪಡಿಸಿದ ಒಂದು ಲಕ್ಷದ ಎಪ್ಪತ್ತೈದು ಸಾವಿರದ ಇಪ್ಪತ್ತೈದು ಇಸ್ಲಾಂ ಧರ್ಮಿಯ ಯಾತ್ರಿಗಳು ಮಾತ್ರ ಭಾರತದಿಂದ ಹಜ್ ಯಾತ್ರೆ ಮಾಡಲು ಸಾಧ್ಯವಿದೆ.

  ಸೌದಿ ಅರೇಬಿಯಾ ಜೊತೆಗಿನ ಹೊಸ ದ್ವಿಪಕ್ಷೀಯ ಒಪ್ಪಂದದ ಅಡಿಯಲ್ಲಿ ಭಾರತವು 2026 ಕ್ಕೆ 175,025 ಹಜ್ ಯಾತ್ರೆಗೆ ಅವಕಾಶಗಳನ್ನು ಪಡೆದುಕೊಂಡಿದೆ, ಕಳೆದ ವರ್ಷ 2025ರಲ್ಲೂ ಇಷ್ಟೇ ಸಂಖ್ಯೆಯ ಯಾತ್ರಿಗಳು ಅವಕಾಶ ಕಲ್ಪಿಸಲಾಗಿತ್ತು.

  ಭಾರತ ದೇಶ ವಿಶ್ವದ ಎರಡನೆ ಅತಿ ಹೆಚ್ಚು ಹಜ್ ಯಾತ್ರಿಗಳು ಭಾಗವಹಿಸಲು ಅವಕಾಶ ಪಡೆದ ದೇಶವಾಗಿದೆ.

  ವಿಶ್ವದ ಅತಿ ಹೆಚ್ಚು ಹಜ್ ಯಾತ್ರಿಗಳ ಅವಕಾಶ ಪಡೆಯುವ ದೇಶ ಇಂಡೋನೇಷಿಯ, ಅಲ್ಲಿಂದ ಪ್ರತಿ ವರ್ಷ ಹಜ್ ಯಾತ್ರೆಗೆ ಸೌದಿ ಅರೇಬಿಯಾದ ಜೊತೆ ಮಾಡಿಕೊಂಡಿರುವ ಒಪ್ಪಂದ ಪ್ರಕಾರ ಎರೆಡು ಲಕ್ಷದ ಇಪ್ಪತ್ತು ಸಾವಿರ ಯಾತ್ರಾರ್ಥಿಗಳಿಗೆ ಹಜ್ ಯಾತ್ರೆ ಅವಕಾಶ ಪಡೆದಿದೆ.

   ಮೆಕ್ಕಾದಲ್ಲಿನ ಹಜ್ ಯಾತ್ರೆಯ ಕಡ್ಡಾಯ ಧಾರ್ಮಿಕ ವಿಧಿವಿಧಾನಗಳು ಕೇವಲ 5 ರಿಂದ 6 ದಿನಗಳವರೆಗೆ (ಧು ಅಲ್-ಹಿಜ್ಜಾದ 8 ರಿಂದ 13ನೇ ದಿನ) ನಡೆಯುತ್ತವೆ.

 ಆದರೆ ಭಾರತದಿಂದ ತೆರಳುವ ಯಾತ್ರಿಕರು ಪ್ರಯಾಣ ಮತ್ತು ಇತರ ಇಸ್ಲಾಮಿಕ್ ಪದ್ಧತಿಗಳಿಗಾಗಿ ಒಟ್ಟಾರೆಯಾಗಿ 30 ರಿಂದ 40 ದಿನಗಳ ಕಾಲ ಸೌದಿ ಅರೇಬಿಯಾದಲ್ಲಿ ಕಳೆಯುತ್ತಾರೆ.

   ಈ ವರ್ಷ ವಿಶ್ವದಾದ್ಯಂತ 2026ರ ಹಜ್ ಯಾತ್ರೆಯಲ್ಲಿ ಸುಮಾರು 2.5 ಮಿಲಿಯನ್ ಅಂದರೆ 25 ಲಕ್ಷ ಹಜ್ ಯಾತ್ರಿಗಳು ಹಜ್ ನಿರ್ವಹಿಸುತ್ತಿದ್ದಾರೆ.

 ಸೌದಿ ಅರೇಬಿಯಾ ಕ್ರಮೇಣ ಹಜ್ ಯಾತ್ರಿಗಳ ಸಂಖ್ಯೆಯನ್ನು 5 ಮಿಲಿಯನ್ ಅಂದರೆ 50 ಲಕ್ಷ ಜನರಿಗೆ ಹೆಚ್ಚಿಸಲು ಉದ್ದೇಶಿಸಿದೆ ಆದರೆ ಅದು ಕಾರ್ಯಸಾಧ್ಯವಾಗಲು ಮೆಕ್ಕಾದಲ್ಲಿ ಹೆಚ್ಚಿನ ಮೂಲಸೌಕರ್ಯ ಅಭಿವೃದ್ಧಿ ಮಾಡಬೇಕಾಗಿದೆ.

  ಸೌದಿ ಅರೇಬಿಯಾದ ಇಸ್ಲಾಮಿಕ್ ಸಹಕಾರ ಸಂಘಟನೆಯ (OIC) ನಿಯಮದ ಪ್ರಕಾರ ಪ್ರತಿ ದೇಶದ ಮುಸ್ಲಿಂ ಜನಸಂಖ್ಯೆಗೆ ಅನುಗುಣವಾಗಿ ಒಂದು ಸಾವಿರ (1,000) ಮುಸ್ಲಿಮರಿದ್ದರೆ ಅಲ್ಲಿ ಒಬ್ಬರಿಗೆ ಮಾತ್ರ ಹಜ್ ಯಾತ್ರೆಗೆ ಅನುಮತಿ ನೀಡಲಾಗುತ್ತದೆ.

  ಸೌದಿ ಸರ್ಕಾರವು ಈ ಕೋಟಾವನ್ನು ನಿರ್ಧರಿಸುವಾಗ ಆಯಾ ದೇಶದ ಒಟ್ಟು ಮುಸ್ಲಿಂ ಜನಸಂಖ್ಯೆಯನ್ನು ಪರಿಗಣನೆಗೆ ತೆಗೆದುಕೊಳ್ಳುತ್ತದೆ. 

  ಉದಾಹರಣೆಗೆ ಸುಮಾರು 20 ಕೋಟಿ ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ಭಾರತಕ್ಕೆ ಸೌದಿ ಅರೇಬಿಯಾ ಸರ್ಕಾರವು ಸುಮಾರು 1,75,025 ಯಾತ್ರಿಕರ ಕೋಟಾವನ್ನು ನಿಗದಿಪಡಿಸಿದೆ.

  ಮುಸ್ಲಿಂ ಧರ್ಮಿಯರ ಹಜ್ ಯಾತ್ರೆ ವಾರ್ಷಿಕ ತೀರ್ಥಯಾತ್ರೆಯಾಗಿದೆ. 

   2026ರ ( ಹಿಜರ ಶಕೆ 1447 AH)  ಸೌದಿ ಅರೇಬಿಯಾದಲ್ಲಿ ಚಂದ್ರನ ವೀಕ್ಷಣೆಗೆ ಒಳಪಟ್ಟುಮೇ ತಿಂಗಳ ದಿನಾಂಕ 25-30 ರ ಪ್ರಮುಖ ದಿನಗಳನ್ನು ನಿರೀಕ್ಷಿಸಲಾಗಿದೆ.

   ಇಸ್ಲಾಂ ಧರ್ಮದ ಹಿಜರಿ ಶಕೆಯ ಚಂದ್ರಮಾನದ ಕ್ಯಾಲೆಂಡರ್ ಇಂಗ್ಲೀಷ್ ಗ್ರೆಗೋರಿಯನ್ ಕ್ಯಾಲೆಂಡರ್ ಗಿಂತ 11 ದಿನಗಳು ಕಡಿಮೆ ಇರುವುದರಿಂದ ಹಜ್‌ನ ಗ್ರೆಗೋರಿಯನ್ ಕ್ಯಾಲೆಂಡರ್ ದಿನಾಂಕವು ಪ್ರತಿ ವರ್ಷ ಬದಲಾಗುತ್ತದೆ ಮತ್ತು ಕಾಲಾನಂತರದಲ್ಲಿ ತೀರ್ಥಯಾತ್ರೆ ಎಲ್ಲಾ ತಿಂಗಳುಗಳು ಮತ್ತು ಋತುಗಳಲ್ಲಿ ಬರುತ್ತದೆ. 

   ಹಜ್ ಯಾತ್ರೆಯ ನನ್ನ ಈ ಲೇಖನ ಸರಣಿಯಲ್ಲಿ ಹಜ್ ಯಾತ್ರೆ ಇತಿಹಾಸ - ದುರಂತಗಳು - ಧಾರ್ಮಿಕ ಕ್ರಮಗಳ ವಿವರಗಳು ವಿಶೇಷವಾಗಿ ಮುಸ್ಲೀಮೇತರರು ತಿಳಿಯುವಂತೆ ಬರೆಯಲಾಗುತ್ತದೆ.  

 ಈ ಲೇಖನ ಸರಣಿ ದೀರ್ಘವಾಗಿರುವುದರಿಂದ ಅದನ್ನು ಕೆಲವು ಭಾಗಗಳಾಗಿ ವಿಂಗಡಿಸಿ ಪ್ರಕಟಿಸಲಾಗುತ್ತದೆ ಭಾಗ -2 ಮುಂದಿನ ದಿನದಲ್ಲಿ ನಿರೀಕ್ಷಿಸಿ.

#hujj #mecca #madina #UAENews #islam 
#indonesia #indian #muslim #hijari #grogeriancalender #moon

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...