ಶತಮಾನಗಳ_ಹಿಂದಿನ_ಶಾಸನಗಳಲ್ಲಿ_ಅಡಿಕೆ.
ಸಾವಿರ ವರ್ಷಗಳ ಹಿಂದೆ ಅಡಿಕೆ ಪ್ರಮುಖ ಬೆಳೆ ಆಗಿತ್ತು ಮತ್ತು ಅಡಿಕೆಗೆ ತೆರಿಗೆ - ಸುಂಕಗಳನ್ನ ವಿದಿಸಲಾಗಿತ್ತೆಂಬ ಶಾಸನಗಳು ಅಡಿಕೆ ಬಗ್ಗೆ ಹೆಚ್ಚಿನ ಬೆಳಕು ಚೆಲ್ಲಿದೆ.
ಹತ್ತನೆ ಶತಮಾನದಲ್ಲಿ ಈಗಿನ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಕಪ್ಪನಹಳ್ಳಿ ಮತ್ತು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ನ್ಯಾಮತಿಯ ಅಡಿಕೆಗೆ ಹೆಚ್ಚು ಬೇಡಿಕೆ ಇತ್ತು.
ಮತ್ತು ಹನ್ನೆರಡನೆ ಶತಮಾನದಲ್ಲಿ ಶಾಸನಗಳಲ್ಲಿ ಅಡಿಕೆ ಉಲ್ಲೇಖಗಳ ಸಂಗ್ರಹಿಸಿ ಬರೆದಿದ್ದಾರೆ ಶಿವಮೊಗ್ಗ ಜಿಲ್ಲೆಯ ಇತಿಹಾಸ
ಸಂಶೋದಕರಾದ ರಮೇಶ್ ಹಿರೇಜಂಬೂರ್.
ಇತ್ತೀಚಿಗೆ ನಮ್ಮ ಊರಿನ ಸಮೀಪದ ಇರುವಕ್ಕಿಯ ನೂತನ ಶಿವಪ್ಪ ನಾಯಕ ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿಗಳು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅಡಿಕೆಗೆ ದೇಶದಾದ್ಯಂತ ಬೇಡಿಕೆ ಇರುವುದು ಅಂಕಿಅಂಶಗಳ ಮಾಹಿತಿ ಪ್ರಕಾರ ಸಂಗ್ರಹಿಸಿದ್ದಾರೆ
ಇದು ಪತ್ರಿಕೆಗಳಲ್ಲಿ ದೊಡ್ಡ ಸುದ್ದಿ ಆಗಿದೆ.
ಶಿರಾಳಕೊಪ್ಪದ ರಮೇಶ್ ಹಿರೇಜಂಬೂರ್ ನಮ್ಮ ಜಿಲ್ಲೆಯ ಇತಿಹಾಸ ಸಂಶೋದಕರು ಅವರು ಕದಂಬರ ತಾಳಗುಂದದ ಶಾಸನಗಳ ಸಂಶೋದನೆಗಾಗಿ ಹೆಚ್ಚು ಶ್ರಮಪಟ್ಟಿದ್ದಾರೆ.
ಅವರು 10ನೇ ಶತಮಾನದಲ್ಲಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಕಪ್ಪನಳ್ಳಿ ಊರಿನ ಅಡಿಕೆ ಮತ್ತು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ನ್ಯಾಮತಿ ಅಡಿಕೆಗೆ ಹೆಚ್ಚು ಬೇಡಿಕೆ ಇತ್ತೆಂಬ ಐತಿಹಾಸಿಕ ದಾಖಲೆ ನಮ್ಮ ಜಿಲ್ಲೆಯ ಇತಿಹಾಸ ಸಂಶೋಧಕರಾದ ರಮೇಶ್ ಹಿರೇಜಂಬೂರ್ ಎರೆಡು ವರ್ಷದ ಹಿಂದೆ ಪೇಸ್ ಬುಕ್ ನಲ್ಲಿ ಪ್ರಕಟಿಸಿದ್ದರು ಆ ಲೇಖನ ಇಲ್ಲಿ ಮಾಹಿತಿಗಾಗಿ ಇನ್ನೊಮ್ಮೆ ಓದಿ.
12ನೇ ಶತಮಾನದ ಶಾಸನದಲ್ಲಿ #ಗೋಟುಅಡಿಕೆಯ ಉಲ್ಲೇಖ (ಲೇ:#ರಮೇಶ್_ಹಿರೇಜಂಬೂರ್).
ಅಡಿಕೆ ಕೃಷಿ ಈಗ ವಾಣಿಜ್ಯ ಬೆಳೆಯಾಗಿ ರೈತರ ವರವಾಗಿ ಪರಿಣಮಿಸಿದೆ.
ಇತಿಹಾಸ ಪುಟಗಳಲ್ಲಿ ಸಾವಿರಾರು ವರುಷಗಳಿಂದ ಈ ಭಾಗದಲ್ಲಿ ಅಡಿಕೆ ಮರಗಳ ಉಲ್ಲೇಖವಿದೆ.
#ಪೊನ್ನನ_ಶಾಂತಿನಾಥ_ಪುರಾಣದಲ್ಲಿಯೂ ಅಡಿಕೆಯ ಉಲ್ಲೇಖವಿದೆ ಅದರಲ್ಲೂ ನೆಲವತ್ತಿ ಮತ್ತು ಕಪ್ಪರ ಹಳ್ಳಿಯ ಅಡಿಕೆ ಉತ್ತಮ ಗುಣದ ಅಡಿಕೆ ಎಂದು ಉಲ್ಲೇಖಿಸಿದ್ದಾನೆ.
ಈ ನೆಲವತ್ತಿ ಮತ್ತು ಕಪ್ಪರ ಹಳ್ಳಿಯ ಅಡಿಕೆಗಳು 10 ನೇ ಶತಮಾನದಲ್ಲಿ ನಾಡಲ್ಲಿ ಹೆಚ್ಚು ಬೇಡಿಕೆ ಇದ್ದ ಅಡಿಕೆಯಾಗಿದ್ದವು.
ಈಗಿನ ಹೊನ್ನಾಳಿ ತಾಲೂಕಿನ #ನ್ಯಾಮತಿ ಮತ್ತು ಶಿಕಾರಿಪುರ ತಾಲೂಕಿನ #ಕಪ್ಪನಹಳ್ಳಿಗಳೇ ನೆಲವತ್ತಿ ಮತ್ತು ಕಪ್ಪರಹಳ್ಳಿಗಳು ಎಂದು ಅಲ್ಲಿನ ಶಾಸನಗಳಿಂದ ಸ್ಪಷ್ಟವಾಗುತ್ತದೆ.
ಅಂದರೆ ಹತ್ತನೇ ಶತಮಾನದ ವೇಳೆಗೆ ಈ ಭಾಗದಲ್ಲಿ ಅಡಿಕೆಯ ಕೃಷಿ ಜೋರಾಗಿತ್ತು ಮತ್ತು ಅದರ ಮಾರಕಟ್ಟೆಯೂ ವಿಶಾಲವಾಗಿತ್ತು ಎನ್ನಬಹುದು.
#ತಾಳಗುಂದದ 12ನೇ ಶತಮಾನದ ಶಾಸನದಲ್ಲಿಯೂ ಅಡಿಕೆ ತೋಟದ ಉಲ್ಲೇಖವಿದೆ.
ಕ್ರಿ.ಶ. 1203ರಲ್ಲಿ ಬಂದಳಿಕೆಯ ಶಾಸನವೊಂದರಲ್ಲಿ ಶಾಂತಿನಾಥ ದೇವರಿಗೆ 500 ಅಡಿಕೆಮರವುಳ್ಳ ತೋಟವನ್ನು ದಾನ ಮಾಡಿದ ಉಲ್ಲೇಖವಿದೆ.
#ಬಳ್ಳಿಗಾವಿಯ ಕ್ರಿಶ 1156ರ ಅವಧಿಯ ಶಾಸನವೊಂದರಲ್ಲಿ ಶ್ರೀ ಕೇದಾರೇಶ್ವರ ದೇವರ ತೋಟದಲ್ಲಿ ಬೆಳೆಯುವ ಗೋಟು ಅಡಿಕೆಯ ಮೇಲಿನ ಕಂದಾಯವನ್ನು ದೇವರ ಆರಾಧನೆಗಾಗಿ ದಾನವಾಗಿ ನೀಡಲಾಗಿದೆ.
ಇಲ್ಲಿ ಗೋಟು ಅಡಿಕೆಯ ಮೇಲೆ ಅಂದೇ tax ಹಾಕುತ್ತಿದ್ದುದು ವಿಶೇಷ.
ಅದರಲ್ಲೂ ದೇವಾಲಯದ ತೋಟದ ಅಡಿಕೆಯಾದರೂ ಸಹ ಅದಕ್ಕೆ ಕಂದಾಯ ಕಟ್ಟಬೇಕಾಗಿತ್ತು.
ಇದು ಮಲೆನಾಡಿನ ಅಡಿಕೆಯ ಬಗ್ಗೆ ಉಪಯುಕ್ತ ಮಾಹಿತಿ ಆಗಿದೆ.
#arecanut #SUPARI #horticulture #Shivamogga
#shikaripura #kappanalli #balligave #talagunda
Comments
Post a Comment