Skip to main content

4019 ಕೆಳದಿ ಗುಂಡಾ ಜೋಯಿಸರ ಪತ್ರಗಳು

ಕೆಳದಿ_ಗುಂಡಾ_ಜೋಯಿಸರ_ಸ್ಮರಣೆ_ಭಾಗ_1.

#ನನ್ನ_ಮತ್ತು_ಅವರ_ನಡುವೆ_1995_ರಿಂದ_2020ರವರೆಗೆ_ಪತ್ರ_ಸಂಪರ್ಕ_ಇತ್ತು.

#ಮೊದಲ_ಅಂಚೆ_ಕಾರ್ಡ್_ದಿನಾಂಕ_29_ಡಿಸೆಂಬರ್_1995

#ಕೊನೆಯ_ಪತ್ರ_22_ನವೆಂಬರ್_2020

#ಏನೇನು_ನಾವಿಬ್ಬರು_ಚರ್ಚಿಸಿದ್ದೆವು_ಅದೆಲ್ಲ_ನೆನಪಿನ_ದಾಖಲೆ

#ಚಂಪಕ_ಸರಸ್ಸುವಿನ_ವಿಚಾರ

#ಬೆಸ್ತರ_ರಾಣಿ_ಚಂಪಕ

#ಕೆ_ಎನ್_ಗಣೇಶಯ್ಯರ_ಬಳ್ಳಿಕಾಳ_ಬೆಳ್ಳಿ_ಕಾದಂಬರಿಯಲ್ಲಿ_ಕೆಳದಿ_ಗುಂಡಾಜೋಯಿಸರ_ಹೆಸರು
#ಖಳ_ನಾಯಕರಾಗಿ_ಬಿಂಬಿಸಿದ_ಬಗ್ಗೆ

#ಕೆಳದಿ_ಮ್ಯೂಸಿಯಂ_ಸ್ಥಾಪನೆಗೆ_ಸಹಕರಿಸಿದವರ_ಹೆಸರಲ್ಲಿ_S_R_ರಾವ್_ಉಚ್ಚರಿಸದ_ಬಗ್ಗೆ

#ವಿದ್ಯಾರಣ್ಯರ_ಹೆಸರಲ್ಲಿ_ನಕಲಿ_ತಾಮ್ರಪತ್ರದ_ಬಗ್ಗೆ_ಹೀಗೆ_ನೂರಾರು_ವಿಷಯ

   ಕೆಳದಿ ಗುಂಡಾ ಜೋಯಿಸರು ಅಪ್ರತಿಮ ಇತಿಹಾಸ ಸಂಶೋಧಕರು ಅವರು ಕೆಳದಿ ಸಾಮ್ರಾಜ್ಯದ ಇತಿಹಾಸ ಸಂಸ್ಕೃತಿ ಮುಂದಿನ ತಲೆಮಾರಿಗೆ ಪ್ರಸರಿಸಲು ತುಂಬಾ ಶ್ರಮ ವಹಿಸಿದ್ದಾರೆ.
  ಅವರಿಂದಲೇ ಕೆಳದಿ ಮ್ಯೂಸಿಯಂ ಸ್ಥಾಪನೆ ಆಯಿತು ಅವರು ತಮ್ಮ 92ನೆ ವಯಸ್ಸಿನಲ್ಲೂ ಆನಂದಪುರಂನಲ್ಲಿ ಕೆಳದಿ ರಾಜ ವೆಂಕಟಪ್ಪ ನಾಯಕ ತನ್ನ ಬೆಸ್ತರ ರಾಣಿ ಚಂಪಾಕಾಳಿಗಾಗಿ ನಿರ್ಮಿಸಿದ ಸ್ಮಾರಕ #ಚಂಪಕ_ಸರಸ್ಸು ಸಂದರ್ಶಿಸಿದ್ದರು.
   2020ರಲ್ಲಿ ನಾನು ಬರೆದ ಕಾದಂಬರಿ #ಬೆಸ್ತರ_ರಾಣಿ_ಚಂಪಕ ಓದಿ 90ನೇ ವಯಸ್ಸಿನಲ್ಲಿ ಪತ್ರಿಸಿ " ಬೆಸ್ತರ ರಾಣಿ ಚಂಪಕಾ ಕೃತಿಯನ್ನು ಕೆಳದಿ ಇತಿಹಾಸದ ಅಭಿಮಾನಿಯಾಗಿ ಕುತೂಹಲಾಸಕ್ತಿಯಿಂದ ಅವಲೋಕಿಸಿದೆನು ಸೊಗಸಾಗಿ ನಿರೂಪಿಸಿದ್ದೀರಿ ಅಭಿನಂದನೆಗಳು" ಎಂದು ಬರೆದಿದ್ದಾರೆ.
  ಇನ್ನೊಂದು ಪತ್ರದಲ್ಲಿ " ಕಿರಿಯ ಬಸವಪ್ಪ ನಾಯಕನ ಕುರಿತ  #ಸೇವಂತಿಕಾ_ಪರಿಣಯ (ಕೇರಳ) ನಿಮ್ಮ ಕೃತಿ ನೆನಪಿಸುತ್ತದೆ" ಎಂದು ಬರೆದಿದ್ದಾರೆ.
  1995ರಲ್ಲಿ ನಾನು ಆನಂದಪುರಂ ಜಿಲ್ಲಾ ಪಂಚಾಯತ್ ಸದಸ್ಯನಾಗಿದ್ದಾಗ ಗುಂಡಾಜೋಯಿಸರಿಗೆ 64 ರ ಪ್ರಾಯ ಆಗಲೂ ಅವರು ಬರೆದ ಅಂಚೆ ಕಾರ್ಡಗಳು ನಮ್ಮ ಊರಿನ ಕೆಳದಿ ರಾಜ ವೆಂಕಟಪ್ಪ ನಾಯಕರು ನಿರ್ಮಿಸಿದ ಸ್ಮಾರಕ ಚಂಪಕ ಸರಸ್ಸು ದುರಸ್ತಿಗೆ ಕಾರಣವಾಯಿತು ಅವರ ಪ್ರೇರಣೆಯೇ ನನಗೆ ಬೆಸ್ತರ ರಾಣಿ ಚಂಪಕಾ ಕಾದಂಬರಿ ಬರೆಯಲು ಕಾರಣವಾಯಿತು.
(ನಾಳೆ ಭಾಗ 2 ರಲ್ಲಿ ಮುಂದಿನ ಸ್ಮರಣೆ)

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...