Skip to main content

4031. ಧಾರ್ಮಿಕ ಪ್ರವಾಸೋದ್ಯಮದ ಸರ್ಕ್ಯೂಟ್ ಮಾಡಬಹುದು


ಸರ್ಕಾರ_ಈ_ಧಾರ್ಮಿಕ_ಯಾತ್ರೆಯ
#ಪ್ರವಾಸೋದ್ಯಮದ_ಸರ್ಕ್ಯೂಟ್_ಮಾಡಬಹುದಾ? ..

 ಶಿವಮೊಗ್ಗ ಮತ್ತು ಹಾವೇರಿ ಜಿಲ್ಲೆಯ ಈ ಮೂರು ಆಂಜನೇಯರ ಶಕ್ತಿ ಪೀಠಗಳ ದರ್ಶನ ಯಾತ್ರೆ ಅಧಿಕಮಾಸದಲ್ಲಿ ನಡೆಯುತ್ತದೆ ಗೊತ್ತಾ? ....

  #ಹಾವೇರಿ_ಜಿಲ್ಲೆಯ #ಹಿರೇಕೆರೂರು ತಾಲೂಕಿನ #ಸಾತೇನಹಳ್ಳಿಯ_ಶಾಂತೇಶ, ಹಾವೇರಿ ಜಿಲ್ಲೆಯ #ಬ್ಯಾಡಗಿ ತಾಲ್ಲೂಕಿನ #ಕದರಮುಂಡಲಗಿಯ_ಕಾಂತೇಶ ಹಾಗೂ #ಶಿವಮೊಗ್ಗಜಿಲ್ಲೆಯ #ಶಿಕಾರಿಪುರದ_ಭ್ರಾಂತೇಶ ಆಂಜನೇಯ ಸ್ವಾಮಿಗಳನ್ನು ಶ್ರಾವಣ ಹಾಗೂ ಅಧಿಕ ಮಾಸದಲ್ಲಿ ಒಂದೇ ದಿನ ಸೂರ್ಯೋದಯದಿಂದ ಸೂರ್ಯಾಸ್ತದ ಒಳಗೆ
ದರ್ಶನ ಪಡೆದರೆ #ಕಾಶಿಯಾತ್ರೆಯಷ್ಟೇ ಪುಣ್ಯ ಪ್ರಾಪ್ತಿಯಾಗುತ್ತದೆ ಎನ್ನುವ ಪ್ರತೀತಿ ಇದೆ. 

 ಈ ವರ್ಷ ಇಲ್ಲಿಗೆ ಆಗಮಿಸಿದ ಭಕ್ತರ ಸಂಖ್ಯೆ ಹಿಂದಿನ ಎಲ್ಲಾ ದಾಖಲೆಗಳನ್ನ ಮುರಿದಿದೆ ಮುಂದಿನ ವರ್ಷಗಳಲ್ಲಿ ಇನ್ನೂ ಹೆಚ್ಚು ಹೆಚ್ಚಾಗಲಿದೆ ಆದ್ದರಿಂದ ಸರ್ಕಾರಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಸುಲಭ ದೇವರ ದರ್ಶನದ ವ್ಯವಸ್ಥೆಗೆ ಮುಂದಾಗಬೇಕು.

  ಹಿಂದೂ ಪಂಚಾಂಗದಲ್ಲಿ ಅಧಿಕ ಮಾಸ ಈ ವರ್ಷ ಮೇ 17 ಭಾನುವಾರದಿಂದ ಪ್ರಾರಂಭವಾಗಿ ಜೂನ್ 15 ಸೋಮವಾರಕ್ಕೆ ಕೊನೆಗೊಳ್ಳುತ್ತದೆ.

  ಈ ವರ್ಷದ ಈ ಯಾತ್ರೆ ಮಾಡುವವರಿಗೆ ಮುಂದಿನ ಶನಿವಾರ ದಿನಾಂಕ 13 - ಜೂನ್ -2026 ಈ ಸಾಲಿನ ಅಧಿಕ ಮಾಸದ ಕೊನೆಯ ಪವಿತ್ರ ಶನಿವಾರ ಆಗಿದೆ ಇದು ಸಾಧ್ಯವಾಗದಿದ್ದರೆ #ಮುಂದಿನ_ಅಧಿಕ_ಮಾಸಕ್ಕೆ_ಮೂರು_ವರ್ಷ_ಕಾಯಬೇಕು.

  ಅಧಿಕ ಮಾಸದಲ್ಲಿಯೇ  ಶಾಂತೇಶ, ಕಾಂತೇಶ, ಭ್ರಾಂತೇಶ ಮಹಿಮೆ ಅಪಾರ.

   ನಾವುಗಳು ಕರ್ನಾಟಕದ  ಪುರಾಣ ಪ್ರಸಿದ್ಧ ಈ ಆಂಜನೇಯರ ಮೂರು ಶಕ್ತಿ ಪೀಠಗಳ ದರ್ಶನದ ಯಾತ್ರೆ ನಿನ್ನೆ ಅಧಿಕ ಮಾಸದ ಶನಿವಾರದಂದು ದಿನಾಂಕ 6- ಜೂನ್ - 2026ರಂದು ನಮ್ಮ ಊರು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರಂನಿಂದ ಬೆಳಿಗ್ಗೆ 10 ಕ್ಕೆ ಹೊರಟು ಮೂರು ಅಂಜನೇಯ ಶಕ್ತಿ ಪೀಠ ದರ್ಶನ ಯಾತ್ರೆ ಪೂರೈಸಿ ಸಂಜೆ 4ಕ್ಕೆ ಮನೆ ತಲುಪಿದೆವು

     ಈ ಆಂಜನೇಯರಿಗೆ ಅಪಾರ ಭಕ್ತರ ಸಮೂಹವಿದೆ ನಮ್ಮ ರಾಜ್ಯ ಮಾತ್ರವಲ್ಲ ಪಕ್ಕದ ರಾಜ್ಯಗಳಿಂದಲೂ ಬರುತ್ತಾರೆ ಈ ವರ್ಷ ಇಲ್ಲಿಗೆ ದರ್ಶನಕ್ಕೆ ಬರುತ್ತಿರುವ ಭಕ್ತರ ಸಂಖ್ಯೆ ಹಿಂದಿನ ಎಲ್ಲಾ ದಾಖಲೆ ಮುರಿದಿದೆ, ಮುಂದಿನ ಶನಿವಾರ ಇನ್ನೂ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆಯಿದೆ.

  ಶಿಕಾರಿಪುರದಿಂದ ಸುಮಾರು 60 ಕಿ.ಮೀ ದೂರದಲ್ಲಿ ಕದರಮಂಡಲಗಿ ಮತ್ತು ಅಲ್ಲಿಂದ 26 ಕಿ.ಮೀ ದೂರದಲ್ಲಿ ಸಾತೇನಹಳ್ಳಿ ಇರುವುದರಿಂದ ಒಂದೇ ದಿನ ಈ ಮೂರೂ ಕ್ಷೇತ್ರಗಳನ್ನು ವಾಹನದಲ್ಲಿ ಭೇಟಿ ಮಾಡುವುದು ಸುಲಭ.

  ಹಿಂದಿನ ಕಾಲದಲ್ಲಿ ಈ ಮೂರು ಕ್ಷೇತ್ರವನ್ನ ಕಾಲು ನಡಿಗೆಯಲ್ಲಿ ಒಳದಾರಿಯಲ್ಲಿ ಸುಮಾರು 45 ಕಿಲೋ ಮೀಟರ್ ನಡೆದು ಮಾಡುತ್ತಿದ್ದರಂತೆ.

 ದಕ್ಷಿಣ ಭಾರತದ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಹುಚ್ಚರಾಯ ಸ್ವಾಮಿ / ಬ್ರಾಂತೇಶ ಎಂದು ಕರೆಯುವ ಆಂಜನೇಯ ಸ್ವಾಮಿ, ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಕದರಮುಂಡರಗಿಯ ಆಂಜನೇಯ ಕಾಂತೇಶ ಮತ್ತು
ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಸಾತೇನಳ್ಳಿಯ ಆಂಜನೇಯ ಶಾಂತೇಶರನ್ನು ಅಧಿಕ ಮಾಸದ ತಿಂಗಳಲ್ಲಿ ಸೂರ್ಯೋದಯದ ನಂತರ ಪ್ರಾರಂಬಿಸಿ ಸೂರ್ಯಾಸ್ತದ ಒಳಗೆ ದರ್ಶನ ಯಾತ್ರೆ ಮಾಡಿದರೆ ಕಾಶಿ ಯಾತ್ರೆಯಷ್ಟೇ ಪುಣ್ಯ ಪ್ರಾಪ್ತಿ ಎಂಬ ನಂಬಿಕೆ ಆಸ್ತಿಕರಲ್ಲಿದೆ.

  #ಕಾಂತೇಶ_ಕದರಮಂಡಲಗಿ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕದರಮಂಡಲಗಿಯಲ್ಲಿ ನೆಲೆಸಿದ್ದಾನೆ,ವಿಗ್ರಹದ ಕಣ್ಣುಗಳಲ್ಲಿ ಸಾಲಿಗ್ರಾಮವಿದ್ದು, ಕಾಂತಿಯುತವಾಗಿರುವುದರಿಂದ 'ಕಾಂತೇಶ' ಎಂದು ಕರೆಯಲಾಗುತ್ತದೆ ಇಲ್ಲಿ ಕನಕದಾಸರು ದೇವರ ಆರಾದಿಸಿದ ಇತಿಹಾಸ ಇದೆ.

  #ಭ್ರಾಂತೇಶ_ಶಿಕಾರಿಪುರ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿದೆ ಈ ಮೂರ್ತಿಯ ನೆತ್ತಿಯ ಮೇಲೆ ಸಾಲಿಗ್ರಾಮವಿದೆ ಈ ದೇವರಿಗೆ ಬ್ರಿಟೀಷರ ಮತ್ತು ಮರಾಠರ  ವಿರುದ್ದ ಹೋರಾಡಿದ ದೊಂಡಿಯಾ ವಾಘ್ ತನ್ನ ಖಡ್ಗ ಸಮರ್ಪಿಸಿದ್ದಾರೆ.

  #ಶಾಂತೇಶ_ಸಾತೇನಹಳ್ಳಿ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಸಾತೇನಹಳ್ಳಿಯಲ್ಲಿದೆ, ಈ ಮೂರ್ತಿಯ ಪಾದದಲ್ಲಿ ಸಾಲಿಗ್ರಾಮವಿದೆ.

  ಕಾಂತೇಶನ ಕಣ್ಣಲ್ಲಿ, ಭ್ರಾಂತೇಶನ ನೆತ್ತಿಯಲ್ಲಿ ಮತ್ತು ಶಾಂತೇಶನ ಪಾದದಲ್ಲಿ ಅತೀ ಶ್ರೇಷ್ಠವಾದ ಸಾಲಿಗ್ರಾಮ ಸ್ಥಾಪಿಸಲಾಗಿದ್ದು, ಒಂದೇ ದಿನ ಈ ಮೂವರು ದೇವರ ದರ್ಶನ ಪಡೆದರೆ ಇಷ್ಟಾರ್ಥ ಈಡೇರುತ್ತದೆ ಎಂಬ ಪ್ರತೀತಿ ಇದೆ.

   ದರ್ಶನ ಮಾಡುವಾಗ ಈ ಸಾಲಿಗ್ರಾಮಗಳನ್ನೂ ಭಕ್ತರು ಕಣ್ತುಂಬಿಕೊಳ್ಳುವುದು ಮಹತ್ವದ್ದು.

  ಈ ಮೂರು ಊರುಗಳ ದೇವಾಲಯದಲ್ಲಿನ ಹನುಮನ ಮೂರ್ತಿಗಳನ್ನು ಸಹಸ್ರಾರು ವರ್ಷಗಳ ಹಿಂದೆಯೇ #ದೂರ್ವಾಸ, #ವಶಿಷ್ಠ ಮತ್ತು #ವ್ಯಾಸಮುನಿಗಳು ಪ್ರತಿಷ್ಠಾಪಿಸಿದ್ದಾರೆ ಎಂಬ ಪ್ರತೀತಿ ಕೂಡ ಇದೆ. 

   ಈ ಮೂವರು ಹನುಮಂತ ದೇವರುಗಳು ಅಧಿಕ ಮಾಸ ಅಥವಾ ಶ್ರಾವಣ ಮಾಸದಲ್ಲಿ ಹೆಚ್ಚಿನ ಭಕ್ತರನ್ನು ಆಕರ್ಷಿಸುತ್ತಾರೆ ಅಂತಹ ದಿನಗಳಲ್ಲಿ ಇಪ್ಪತ್ತು ಸಾವಿರಕ್ಕೂ ಹೆಚ್ಚಿನ ಭಕ್ತರು ಆಗಮಿಸುತ್ತಾರೆ.

   ಈ ಕ್ಷೇತ್ರಗಳಿಗೆ ಭೇಟಿ ನೀಡುವುದರಿಂದ ಶನಿ ಕಾಟದಂತಹ ಸಮಸ್ಯೆಗಳು ಪರಿಹಾರವಾಗುತ್ತವೆ ಎಂಬ ನಂಬಿಕೆ ಇದೆ.

    ಶಾಂತೇಶ, ಕಾಂತೇಶ, ಭ್ರಾಂತೇಶ ಮಹಿಮೆ ಅಪಾರ,ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಸಾತೇನಹಳ್ಳಿಯ ಶಾಂತೇಶ, ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಕದರಮುಂಡಲಗಿಯ ಕಾಂತೇಶ ಹಾಗೂ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಭ್ರಾಂತೇಶ ಆಂಜನೇಯ ಸ್ವಾಮಿಗಳನ್ನು ಶ್ರಾವಣ ಹಾಗೂ ಅಧಿಕ ಮಾಸದಲ್ಲಿ ಒಂದೇ ದಿನ ದರ್ಶನ ಪಡೆದರೆ ಕಾಶಿ ಫಲಯಾತ್ರೆ ಪ್ರಾಪ್ತಿಯಾಗುತ್ತದೆ ಎನ್ನುವ ಪ್ರತೀತಿ ಇದೆ. 

  ಹೀಗಾಗಿ ಈ ಆಂಜನೇಯರಿಗೆ ಅಪಾರ ಭಕ್ತಸಮೂಹವಿದೆ.

#KashiYatre #kanthesha #branthesha #Shantesha #shikaripura #kadaramundaragi
#satenahalli #haveri #Maruthi #anjaneya

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...