Skip to main content

4064. ಬಿಎಸ್ಸಿ ಅಲೈಡ್ ಹೆಲ್ತ್ ಕೇರ್ ಕೋರ್ಸ್ ಮಾಹಿತಿ

NEET_ಪರೀಕ್ಷೆಯೇ_ಜೀವನದ_ಅಂತಿಮ_ಸಾದನೆ_ಆಗಬೇಕಿಲ್ಲ.

ಪ್ರತಿ ವರ್ಷ ಸುಮಾರು 22ರಿಂದ 24 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾರತದಲ್ಲಿ NEET-UG ಪರೀಕ್ಷೆಗೆ ನೋಂದಾಯಿಸಿಕೊಳ್ಳುತ್ತಾರೆ.

 ಇವರಲ್ಲಿ ಪರೀಕ್ಷೆ ಬರೆದು ಅರ್ಹತೆ  ಪಡೆಯುವವರ ಸಂಖ್ಯೆ ಸುಮಾರು 11 ರಿಂದ 13 ಲಕ್ಷದಷ್ಟಿರುತ್ತದೆ.

   ಆದರೆ ಅರ್ಹತೆ ಪಡೆದವರೆಲ್ಲರಿಗೂ ವೈದ್ಯಕೀಯ ಸೀಟು ಸಿಗುವುದಿಲ್ಲ,ಭಾರತದಲ್ಲಿ ಲಭ್ಯವಿರುವ ವೈದ್ಯಕೀಯ ಸೀಟುಗಳ ಸಂಖ್ಯೆ ಸೀಮಿತವಾಗಿರುವುದರಿಂದ 
ಪ್ರತಿ ವರ್ಷ ಅಂದಾಜು 1.2 ರಿಂದ 1.3 ಲಕ್ಷ ವಿದ್ಯಾರ್ಥಿಗಳು ಮಾತ್ರ MBBS ಕೋರ್ಸ್‌ಗೆ ಪ್ರವೇಶ ಪಡೆದು ವೈದ್ಯರಾಗುವತ್ತ ಹೆಜ್ಜೆಯಿಡುತ್ತಾರೆ.

  ನೀಟ್ ಉತ್ತೀರ್ಣರಾಗದಿದ್ದರೆ ಬೇರೆ ವೈದ್ಯಕೀಯ ಕ್ಷೇತ್ರದ ಅವಕಾಶಗಳು ಇಲ್ಲವೆ?...

   ಖಂಡಿತಾ ಇದೆ ಮುಂದಿನ ದಿನಗಳಲ್ಲಿ ಹೆಚ್ಚು ವೇತನ ಸಿಗುವ ವೈದ್ಯಕೀಯ ಶಿಕ್ಷಣ ಮಾಡಲು ವಿವರಗಳು ಇಲ್ಲಿದೆ.

  ಇಂದಿನ ಆಧುನಿಕ ವೈದ್ಯಕೀಯ ಜಗತ್ತಿನಲ್ಲಿ ಕೇವಲ ಎಂಬಿಬಿಎಸ್ MBBS ವೈದ್ಯರಷ್ಟೇ ಮುಖ್ಯವಲ್ಲ ರೋಗನಿರ್ಣಯ ಮತ್ತು ಚಿಕಿತ್ಸೆಯಲ್ಲಿ ಈ ತಾಂತ್ರಿಕ ತಜ್ಞರ ಪಾತ್ರವೂ ಅಷ್ಟೇ ದೊಡ್ಡದಿದೆ.

  ನೀಟ್ NEET  ಪಾಸು ಮಾಡದಿದ್ದರೂ ಆರೋಗ್ಯ ಕ್ಷೇತ್ರದಲ್ಲಿ ಬಿ.ಎಸ್ಸಿ ಅಲೈಡ್ ಹೆಲ್ತ್ ಸೈನ್ಸ್ Allied Health Science ಕೋರ್ಸ್‌ಗಳನ್ನು ಮಾಡುವ ಮೂಲಕ ಅತ್ಯುತ್ತಮ ವೇತನ ಹಾಗೂ ಗೌರವಾನ್ವಿತ ವೃತ್ತಿಜೀವನವನ್ನು ರೂಪಿಸಿಕೊಳ್ಳಬಹುದು.

  ಯಾವ ಕೋರ್ಸ್‌ಗಳಿಗೆ ಆರಂಭದಲ್ಲಿ ಹೆಚ್ಚಿನ ಬೇಡಿಕೆ ಮತ್ತು ವೇತನವಿದೆ? ಎಂದು ತಿಳಿದುಕೊಳ್ಳುವ ಆಸಕ್ತಿ ಇದ್ದರೆ ಈ ಲೇಖನ ಪೂರ್ಣ ಓದಿ...

#​ಬಿ_ಎಸ್ಸಿ_ಎಟಿ_ಮತ್ತು_ಒಟಿ (Anaesthesia & OT): ಶಸ್ತ್ರಚಿಕಿತ್ಸೆಗಳು ನಿರಂತರವಾಗಿ ನಡೆಯುವುದರಿಂದ ಇವರಿಗೆ ಬೇಡಿಕೆ ಸದಾ ಇರುತ್ತದೆ.

#​ಬಿ_ಎಸ್ಸಿ_ಬಿಎಂಐಟಿ (Medical Imaging - CT/MRI): ದೊಡ್ಡ ಡಯಾಗ್ನೋಸ್ಟಿಕ್ ಸೆಂಟರ್‌ಗಳಲ್ಲಿ ಸ್ಕ್ಯಾನಿಂಗ್ ತಜ್ಞರಿಗೆ ಉತ್ತಮ ಸಂಬಳ ಸಿಗುತ್ತದೆ.

#​ಬಿ_ಎಸ್ಸಿ_ಕಾರ್ಡಿಯಾಕ್_ಕೇರ್ (Cardiac Care): ಹೃದಯ ಸಂಬಂಧಿ ಆಸ್ಪತ್ರೆಗಳಲ್ಲಿ ಕ್ಯಾಥ್ ಲ್ಯಾಬ್ ತಜ್ಞರಿಗೆ ಉತ್ತಮ ಗೌರವ ಮತ್ತು ವೇತನವಿರುತ್ತದೆ.

#ಬಿ_ಎಸ್ಪಿ_ಆಪ್ಟೋಮೆಟ್ರಿ (BSC Optometry)

    ಈ ಮೇಲಿನ ಕೋರ್ಸ್ ಮುಗಿಸಿ ಕೆಲಸಕ್ಕೆ ಸೇರಿದಾಗ ಆರಂಭದಲ್ಲಿ ನಿಮ್ಮ ಸಾಮರ್ಥ್ಯ ಮತ್ತು ಆಸ್ಪತ್ರೆಯ ಆಧಾರದ ಮೇಲೆ ತಿಂಗಳಿಗೆ ₹15,000 ರಿಂದ ₹30,000 ವರೆಗೆ ಸಂಬಳ ಸಿಗಬಹುದು.

   ​ಅನುಭವದ ನಂತರ  2 ರಿಂದ 5 ವರ್ಷಗಳು ನೀವು ಕೆಲಸದಲ್ಲಿ ನಿಪುಣರಾದಂತೆ ವಿಶೇಷವಾಗಿ CT/MRI ಸ್ಕ್ಯಾನ್ ಮಾಡುವುದು, ಕ್ಯಾಥ್ ಲ್ಯಾಬ್ ನಿರ್ವಹಣೆ ಅಥವಾ ಆಪರೇಷನ್ ಥಿಯೇಟರ್ ನಿರ್ವಹಣೆ ನಿಮ್ಮ ಸಂಬಳ ತಿಂಗಳಿಗೆ ₹40,000 ರಿಂದ ₹70,000 ಅಥವಾ ಅದಕ್ಕಿಂತ ಹೆಚ್ಚು ಆಗಬಹುದು.

​  ಹೆಚ್ಚು ವೇತನ ಪಡೆಯಲು ಇರುವ ಪ್ರಮುಖ ಮಾರ್ಗಗಳು
​ನೀವು ಈ ಕ್ಷೇತ್ರದಲ್ಲಿ ಗರಿಷ್ಠ ವೇತನ ಗಳಿಸಬೇಕೆಂದರೆ ಈ ಕೆಳಗಿನ ವಿಷಯಗಳ ಕಡೆ ಗಮನ ಹರಿಸಬೇಕು.

​   ಸಣ್ಣ ಕ್ಲಿನಿಕ್‌ಗಳಿಗಿಂತ ಮಣಿಪಾಲ್, ಫಾರ್ಟಿಸ್, ನಾರಾಯಣ ಹೆಲ್ತ್, ಅಪೋಲೋದಂತಹ ದೊಡ್ಡ ಆಸ್ಪತ್ರೆಗಳಲ್ಲಿ ವೇತನ ಮತ್ತು ಸೌಲಭ್ಯಗಳು ಹೆಚ್ಚಿರುತ್ತವೆ.

​ ವಿಶೇಷವಾಗಿ ಬಿ.ಎಸ್ಸಿ ಆಪ್ಟೋಮೆಟ್ರಿ ಮಾಡಿದರೆ, ನೀವೇ ಸ್ವಂತವಾಗಿ ಕಣ್ಣಿನ ತಪಾಸಣೆ ಮತ್ತು ಕನ್ನಡಕದ ಶೋರೂಮ್ Optical Shop ತೆರೆಯುವ ಮೂಲಕ ಆಸ್ಪತ್ರೆಯ ಸಂಬಳಕ್ಕಿಂತ ಮೂರು-ನಾಲ್ಕು ಪಟ್ಟು ಹೆಚ್ಚು ಸಂಪಾದಿಸಬಹುದು.

​ ಕೋರ್ಸ್‌ಗಳಿಗೆ ಗಲ್ಫ್ ದೇಶಗಳು ದುಬೈ, ಕತಾರ್, ಸೌದಿ ಯುರೋಪ್, ಯುಕೆ ಮತ್ತು ಕೆನಡಾಗಳಲ್ಲಿ ಭಾರಿ ಬೇಡಿಕೆಯಿದೆ.

 ಅಲ್ಲಿ ಭಾರತಕ್ಕಿಂತ 3 ರಿಂದ 5 ಪಟ್ಟು ಹೆಚ್ಚು ವೇತನ ತಿಂಗಳಿಗೆ ₹1.5 ಲಕ್ಷದಿಂದ ₹3 ಲಕ್ಷಕ್ಕೂ ಹೆಚ್ಚು ಸಿಗುತ್ತದೆ. 

  ಆದರೆ ಕೆಲವು ದೇಶಗಳಿಗೆ ಹೋಗಲು ಅಲ್ಲಿನ ಅರ್ಹತಾ ಪರೀಕ್ಷೆಗಳನ್ನು ಉದಾಹರಣೆಗೆ DHA, HAAD, Prometric ಪಾಸ್ ಮಾಡಬೇಕಾಗುತ್ತದೆ.

​  ಬಿ.ಎಸ್ಸಿ ನಂತರ ಈ ಕೋರ್ಸ್ ನಲ್ಲಿ ಎಂ.ಎಸ್ಸಿ ಮಾಡುವುದರಿಂದ ನೀವು ಕಾಲೇಜುಗಳಲ್ಲಿ ಪ್ರೊಫೆಸರ್ ಆಗಬಹುದು ಅಥವಾ ಆಸ್ಪತ್ರೆಗಳಲ್ಲಿ ವಿಭಾಗದ ಮುಖ್ಯಸ್ಥರಾಗಿ(Chief Technologist ಭಾರಿ ವೇತನ ಪಡೆಯಬಹುದು.

​ ಈ ಕ್ಷೇತ್ರದಲ್ಲಿ ನಿಮ್ಮ ಪ್ರಾಯೋಗಿಕ ಕೌಶಲ್ಯ Practical Skill ಅತ್ಯಂತ ಮುಖ್ಯ. 

  ನೀವು ಯಂತ್ರಗಳನ್ನು ಎಷ್ಟು ನಿಖರವಾಗಿ ನಿರ್ವಹಿಸುತ್ತೀರಿ ಮತ್ತು ಒತ್ತಡದ ಸಂದರ್ಭಗಳನ್ನು ಹೇಗೆ ನಿಭಾಯಿಸುತ್ತೀರಿ ಎಂಬುದರ ಆಧಾರದ ಮೇಲೆ ನಿಮ್ಮ ಸಂಬಳ ನಿರ್ಧಾರವಾಗುತ್ತದೆ.

  ಈ ಕೋರ್ಸ್ ಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕಾಮೆಂಟ್ ಬಾಕ್ಸ್ ನಲ್ಲಿರುವ ಲಿಂಕ್ ಕ್ಲಿಕ್ ಮಾಡಿ.

#neet #ug #mbbs #alliedhealthcareers #healthcare #hospitalityindustry  #abroadjobs 
#bscnursing #doctorjobs

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...