ಭಾಗ_ಎರಡು #ಸಂಸದರಾದ_ಮಾಜಿ_ಮುಖ್ಯಮಂತ್ರಿ_ಬಂಗಾರಪ್ಪನವರನ್ನೇ_ಬಿಟ್ಟು_ಹೋದ #ಹೊಳೆಬಾಗಿಲು_ಲಾಂಚ್_ಸಿಬ್ಬಂದಿಗಳು. #sharavathirivet #sagar #govtofkarnataka #govtofindia #ambargodlu #kalasavalli #siganduru #cablebridge #SBangarappa #shivamogga #parlimentmember 1996ರಲ್ಲಿ ಬಂಗಾರಪ್ಪನವರು ಮಾಜಿ ಮುಖ್ಯಮಂತ್ರಿಗಳು ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡಿದರು. ಆಗ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶಾಸಕರಾದ ಕಾಗೋಡು ತಿಮ್ಮಪ್ಪನವರ ಲಕ್ಷ್ಮಣ ರೇಖೆ ದಾಟಲು ಸಾಧ್ಯವಿರಲಿಲ್ಲ. ಅವರೆಲ್ಲ ಚುನಾವಣೆಯಲ್ಲಿ ಬಂಗಾರಪ್ಪನವರಿಗೆ ವಿರುದ್ಧವಾಗಿ ಕಾಂಗ್ರೇಸ್ ಅಭ್ಯರ್ಥಿ ಕೆ.ಜಿ. ಶಿವಪ್ಪನವರ ಪರವಾಗಿ ಕೆಲಸ ಮಾಡಿದ್ದರು. ಸಾಗರ ತಾಲೂಕಿನಲ್ಲಿ ಹರುನಾಥರಾವ್, ಮೊಹಮ್ಮದ್ ಕೊಯಾ, ಮೊಹಮದ್ ಖಾಸಿಂ,ಕಾಗೋಡು ಹೋರಾಟದ ನೇತಾರಗಣಪತಿಯಪ್ಪ ಮತ್ತು ಅನೇಕರ ಜೊತೆ ನಾನು ಸೇರಿ ಬಂಗಾರಪ್ಪನವರ ಗೆಲುವಿಗೆ ಕಟಿಬದ್ಧರಾಗಿ ಚುನಾವಣೆ ಮಾಡಿದೆವು ಚುನಾವಣೆಯಲ್ಲಿ ಬಂಗಾರಪ್ಪನವರು ಗೆಲ್ಲುತ್ತಾರೆ ಸಾಗರ ತಾಲೂಕಿನಲ್ಲಿ ಅವರಿಗೆ ಲೀಡ್ ಬರುತ್ತದೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಬಂಗಾರಪ್ಪನವರಿಗೆ ವಿರುದ್ಧ ಆಗಿದ್ದರೂ ಮತದಾರರು ಬಂಗಾರಪ್ಪನವರ ಕೈ ಬಿಡಲಿಲ್ಲ. ಸಂಸದರಾಗಿ ಆಯ್ಕೆ ಆದ ಬಂಗಾ...