Skip to main content

4111. ಈ_ವರ್ಷ_2026_ಲಿಂಗನಮಕ್ಕಿ_ಆಣೆಕಟ್ಟು_ತುಂಬುತ್ತಾ


ಈ_ವರ್ಷ_ಲಿಂಗನಮಕ್ಕಿ_ಆಣೆಕಟ್ಟು_ತುಂಬುತ್ತಾ? ...

  ಮಲೆನಾಡಿನಲ್ಲಿ ಮುಂಗಾರು ಮಳೆ ಕೊರತೆ ಆಗಿದೆ ಆದರೆ ಜೋಗ್ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರು ನಿರಾಶೆ ಪಡಬೇಕಾಗಿಲ್ಲ ಯಾಕೆಂದರೆ ಜೋಗ್ ಜಲಪಾತ ಸುತ್ತಲಿನ ಪ್ರದೇಶದಲ್ಲಿ ಆಗುತ್ತಿರುವ ಮಳೆಯಿಂದ ಜೋಗ್ ಜಲಪಾತ ನೋಡಲು ಸುಂದರವಾಗಿ ಕಾಣುತ್ತದೆ.

 2025 ಮತ್ತು 2024ರ ಆಗಸ್ಟ್ ತಿಂಗಳ 1 ನೇ ತಾರೀಖಿನಲ್ಲಿನ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 1810 ಅಡಿ ತಲುಪಿತ್ತು.

  ನಿನ್ನೆ ಬೆಳಿಗ್ಗೆ 8 am  31-ಜುಲೈ-2026 ಕ್ಕೆ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 1776 ಅಡಿ ತಲುಪಿತ್ತು ಇದು ಜಲಾಶಯದ 31.30 % ಮಾತ್ರ ನೀರು ಸಂಗ್ರಹ ಆಗಿದೆ.
 ( 31 - ಜುಲೈ-2026 ರ ಬೆಳಗಿನ ಮಾಹಿತಿಯ ಪ್ರಕಾರ).

  ಕಳೆದ ವರ್ಷ ಇದೇ ದಿನಕ್ಕೆ ಡ್ಯಾಮಿನಲ್ಲಿ 1811 ಅಡಿ ನೀರು ಸಂಗ್ರಹವಾಗಿತ್ತು ಅವತ್ತು ಡ್ಯಾಮ್ ಶೇಕಡಾ 83.12% ಭರ್ತಿ ಆಗಿತ್ತು.

  ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಅಂಬುತೀರ್ಥದಲ್ಲಿ ಹುಟ್ಟಿ, ಸಾಗರ ತಾಲೂಕಿನ ಲಿಂಗನಮಕ್ಕಿ ಆಣೆಕಟ್ಟಿನಲ್ಲಿ ಸಂಗ್ರಹವಾಗಿ, ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ಜೋಗ್ ಜಲಪಾತವಾಗಿ ಧುಮುಕಿ, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಅರಬಿ ಸಮುದ್ರ ಸೇರುತ್ತದೆ ಶರಾವತಿ ನದಿ.

  1815 ಆಡಿದಾಟಿದ ಮೇಲೆ ಒಳಹರಿವು ಲೆಕ್ಕಾಚಾರ ಮಾಡಿ ಡ್ಯಾಮಿನ ಕ್ರಸ್ಟ್ ಗೇಟ್ ಗಳನ್ನು ತೆರೆದು ನೀರು ಹೊರಬಿಡುತ್ತಾರೆ ಆಗ ಶರಾವತಿ ಕಣಿವೆಯಲ್ಲಿ ಪ್ರವಾಹ ಉಂಟಾಗುತ್ತದೆ.

  2024ರ ಆಗಸ್ಟ್ ಒಂದಕ್ಕೆ ಲಿಂಗನಮಕ್ಕಿ ಡ್ಯಾಮಿನ ಕ್ರೆಸ್ಟ್ ಗೇಟುಗಳನ್ನು ತೆರೆದು ಸುಮಾರು 15,000 ಕ್ಯೂಸೆಕ್ಸ್ ನೀರುಗಳನ್ನು ಹೊರ ಬಿಡಲಾಗಿತ್ತು.

   ಅದು 1815 ಅಡಿ ತಲುಪುವ ಮುಂಚೆಯೇ ಬಿಡಲಾಗಿತ್ತು ಕಾರಣ ನಗರ ಹೊಸನಗರ ಭಾಗದಲ್ಲಿ ಭಾರಿ ಮಳೆ ಆಗುತ್ತಿದ್ದು ಚಕ್ರಾ ಮತ್ತು ವರಾಹಿ ಆಣೆಕಟ್ಟುಗಳು ತುಂಬಿ ಅಲ್ಲಿನ ನೀರು ಲಿಂಗನಮಕ್ಕಿ ಜಲಾಶಯಕ್ಕೆ ಒಳಹರಿವು ಐವತ್ತು ಸಾವಿರ ಕ್ಯೂಸೆಕ್ಸ್ ಗಿಂತ ಹೆಚ್ಚು ಉಂಟು ಮಾಡಿತು.

  ಅದೇ ರೀತಿ ಕಳೆದ ವರ್ಷ 2025 ರ ಆಗಸ್ಟ್ 1 ನೇ ತಾರೀಖು ಕೂಡ ಮಲೆನಾಡಿನಲ್ಲಿ ಭರಪೂರ ಮಳೆ ಆಗಿತ್ತು.

    ಜೋಗ ಜಲಪಾತ ಅತಿ ಹೆಚ್ಚು ನೀರುಗಳಿಂದ ರುದ್ರ ರಮಣೀಯ ದೃಶ್ಯ ಸೃಷ್ಟಿ ಮಾಡಿತ್ತು ಮತ್ತು ಪ್ರವಾಸಿಗಳು ಈ ದೃಶ್ಯ ಕಣ್ಣು ತುಂಬಿ ಕೊಳ್ಳಲು ಅಸಂಖ್ಯ ಸಂಖ್ಯೆಯಲ್ಲಿ ಆಗಮಿಸಿದ್ದರು ಆಗ ಜಲಪಾತದ ಮೇಲೆ ದಾಖಲೆ ಸಂಖ್ಯೆಯಲ್ಲಿ ಡ್ರೋನ್ ಗಳು ಹಾರಾಡಿ ಜಲಪಾತದ  ಚಿತ್ರಿಕರಣವಾಗಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

   ಈ ವರ್ಷ ಮಲೆನಾಡಿನಲ್ಲಿ ಮುಂಗಾರು ಮಳೆ ಕೊರತೆ ಉಂಟಾಗಿದೆ,ಲಿಂಗನಮಕ್ಕಿ ಜಲಾಶಯದ ನೀರಿನ ಸಂಗ್ರಹ ಮಟ್ಟ ತುಂಬಾ ಕಡಿಮೆ ಇದೆ ಶೇಕಡಾ 30% ಭಾಗ ಕೂಡ ಭರ್ತಿ ಆಗಿಲ್ಲ ಹೀಗಾದರೆ ಈ ವರ್ಷ ಲಿಂಗನಮಕ್ಕಿ ಆಣೆ ಕಟ್ಟು ತುಂಬುವ ಭರವಸೆ ಇಲ್ಲವಾಗಿದೆ.

   ಜೋಗ್ ಜಲಪಾತ ನೋಡಲು ಬರುವ ಪ್ರವಾಸಿಗರಿಗೆ ಆಗಾಗ್ಗೆ ಜಲಪಾತದ ಸುತ್ತಲಿನ ಪ್ರದೇಶದಲ್ಲಿ ಬೀಳುತ್ತಿರುವ ಮಳೆಯಿಂದ ನಿರಾಶೆ ಮೂಡಿಸಿಲ್ಲ, ಜೋಗ್ ಜಲಪಾತ ಮೈ ತುಂಬಿ ಹರಿಯುತ್ತಿದೆ ಇದು ಮಲೆನಾಡಿಗೆ ಜೋಗ್ ಫಾಲ್ಸ್ ಪ್ರವಾಸಕ್ಕೆ ಸೂಕ್ತ ಸಮಯ ಆಗಿದೆ.

#jogfalls #linganamakki #electric #powercorporation #mansoon #westernghats #sharavathiriver

 

  
   .

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...