Skip to main content

4163.ವಿಶ್ವ_ಜೇನುನೊಣ_ದಿನ_ಮೇ_20.ಭಾಗ_5_ಕುಂದಾಪುರ_ಕನ್ನಡಿಗ_ರಾಜ್ಯಸಭಾ_ಸದಸ್ಯರಾಗಿದ್ದ ಅನಿಲ್_ಪ್ರಸಾದ್_ಹೆಗ್ಡೆ_ಸಂದರ್ಶನ.


ವಿಶ್ವ_ಜೇನುನೊಣ_ದಿನ_ಮೇ_20.
ಭಾಗ_5_ಕುಂದಾಪುರ_ಕನ್ನಡಿಗ_ರಾಜ್ಯಸಭಾ_ಸದಸ್ಯರಾಗಿದ್ದ ಅನಿಲ್_ಪ್ರಸಾದ್_ಹೆಗ್ಡೆ_ಸಂದರ್ಶನ.

  ದೇಶಿ ಬೀಜ - ಜೇನು ಸಂರಕ್ಷಣೆ ಬಗ್ಗೆ ವಿಶ್ವ ಮಟ್ಟದಲ್ಲಿ ಭಾರತ ದೇಶದ ಗಟ್ಟಿ ಧ್ವನಿಯಾಗಿರುವ ಜಾರ್ಜ್ ಪರ್ನಾಂಡಿಸರ ಶಿಷ್ಯ ಹೋರಾಟಗಾರ ಕುಂದಾಪುರದ ಕನ್ನಡಿಗ, ಬಿಹಾರದಿಂದ ರಾಜ್ಯ ಸಭಾ ಸದಸ್ಯರಾಗಿದ್ದ ಅನಿಲ್ ಪ್ರಸಾದ್ ಹೆಗ್ಡೆ ಸಂದರ್ಶನ ನೋಡಿ.

 ಈ ವರ್ಷ ಸ್ಲೋವೇನಿಯಾದಲ್ಲಿ ನಡೆದ ಜೇನು ಕೃಷಿಯ ಪಯೋನೀರ್ #ಆ0ಟೆನ್_ಜೊನ್ಸಾ ಅವರ 292ನೇ ಹುಟ್ಟು ಹಬ್ಬದಲ್ಲಿ ಅನಿಲ್ ಹೆಗ್ಡೆ ಬಾಗಿಯಾಗಿದ್ದರು.

  ಈ ಪೋಸ್ಟ್ ನಿಮ್ಮ ಪರಿಚಿತ ಜೇನು ಕೃಷಿಕರಿಗೆ ತಲುಪಿಸಲು ಶೇರ್ ಮಾಡಬೇಕಾಗಿ ವಿನಂತಿ.

  ಆಂಟನ್ ಜಾನ್ಸಾ ಅವರ 292ನೇ #ಜನ್ಮದಿನ ಹಾಗೂ ವಿಶ್ವ ಜೇನು ದಿನದ  ಪ್ರಮುಖ ಕಾರ್ಯಕ್ರಮಗಳು ಸ್ಲೋವೇನಿಯಾದಲ್ಲಿ ನಡೆದವು.

 ಸ್ಲೋವೇನಿಯಾ ಸರ್ಕಾರದ ಕೃಷಿ ಸಚಿವಾಲಯ, ವಿಶ್ವಸಂಸ್ಥೆಯ ಎಫ್‌ಎಒ (FAO) ಮತ್ತು ಅಪಿಯಾಮಾಂಡಿಯಾ (APIMONDIA) ಸಂಯುಕ್ತವಾಗಿ ಆಯೋಜಿಸಿದ್ದ "3ನೇ ಸುಸ್ಥಿರ ಜೇನುಸಾಕಣೆ ಮತ್ತು ಪರಾಗಸ್ಪರ್ಶ ಅಂತರರಾಷ್ಟ್ರೀಯ ವೇದಿಕೆ" (3rd International Forum) ಮೇ 20–21, 2026 ರಂದು ಸ್ಲೋವೇನಿಯಾದ ಮಾರಿಬೋರ್ ನಗರದಲ್ಲಿ ನಡೆಯಿತು.  

 ​ ಆಂಟನ್ ಜಾನ್ಸಾ ಅವರ ಜನ್ಮಸ್ಥಳವಾದ ಬ್ರೆಜ್ನಿಕಾದಲ್ಲಿರುವ ಐತಿಹಾಸಿಕ ಜೇನುಗೂಡಿನ ತಾಣದಲ್ಲಿ  ಸಾಂಪ್ರದಾಯಿಕ ಕಾರ್ಯಕ್ರಮಗಳು ಮತ್ತು ಸ್ಮರಣಾರ್ಥ ಉತ್ಸವಗಳು ಜರುಗಿದವು.  

  ಭಾರತ, ಈಜಿಪ್ಟ್, ಪೆರು, ಟಾಂಜಾನಿಯಾ, ನೇಪಾಳ, ಸೌದಿ ಅರೇಬಿಯಾ, ಜರ್ಮನಿ, ಇಟಲಿ, ಗ್ರೀಸ್, ಅರ್ಜೆಂಟೀನಾ, ಬ್ರಿಟನ್, ಹಂಗೇರಿ ಸೇರಿದಂತೆ ವಿಶ್ವದ ಹತ್ತಾರು ದೇಶಗಳ ಪ್ರತಿನಿಧಿಗಳು ಇದರಲ್ಲಿ ಭಾಗವಹಿಸಿದ್ದರು. 
 
​ ಅಂತರರಾಷ್ಟ್ರೀಯ ಮಟ್ಟದ ವಿಜ್ಞಾನಿಗಳು, ಸಂಶೋಧಕರು, ಸರ್ಕಾರಿ ಅಧಿಕಾರಿಗಳು ಹಾಗೂ ತಜ್ಞರನ್ನೊಳಗೊಂಡ ನೂರಾರು ಜಾಗತಿಕ ಗಣ್ಯರು ವೇದಿಕೆಯಲ್ಲಿ ಪಾಲ್ಗೊಂಡರೆ, ಸ್ಥಳೀಯವಾಗಿ ಸ್ಲೋವೇನಿಯಾದಾದ್ಯಂತ ಆಯೋಜಿಸಲಾದ ಪ್ರದರ್ಶನಗಳು ಹಾಗೂ ಕಾರ್ಯಕ್ರಮಗಳಲ್ಲಿ ಸಾವಿರಾರು ಜೇನು ಕೃಷಿಕರು, ಸಾರ್ವಜನಿಕರು ಮತ್ತು ಪ್ರವಾಸಿಗರು ಪಾಲ್ಗೊಂಡಿದ್ದರು.  

  ವಿಶ್ವ ಜೇನುನೊಣ ದಿನ (World Bee Day) ವನ್ನು ಪ್ರತಿವರ್ಷ ಮೇ 20 ರಂದು ಜಾಗತಿಕವಾಗಿ ಆಚರಿಸಲಾಗುತ್ತದೆ.  

 ​ಪರಿಸರ ವ್ಯವಸ್ಥೆ, ಕೃಷಿ ಮತ್ತು ಆಹಾರ ಭದ್ರತೆಯಲ್ಲಿ ಜೇನುನೊಣಗಳು ಹಾಗೂ ಇತರ ಪರಾಗಸ್ಪರ್ಶಕಗಳ (Pollinators) ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ವಿಶ್ವಸಂಸ್ಥೆಯು ಈ ದಿನವನ್ನು ಮೀಸಲಿಟ್ಟಿದೆ.  

​  ಆಧುನಿಕ ಜೇನುಸಾಕಣೆ ತಂತ್ರಜ್ಞಾನದ ಪ್ರವರ್ತಕರಾದ ಸ್ಲೊವೇನಿಯಾದ ಆಂಟನ್ ಜಾನ್ಸಾ ಅವರ ಜನ್ಮದಿನದ (ಮೇ 20, 1734) ಸವಿನೆನಪಿಗಾಗಿ ಈ ದಿನವನ್ನು ಆಯ್ಕೆ ಮಾಡಲಾಗಿದೆ.  

​  ಸ್ಲೊವೇನಿಯಾ ಸರ್ಕಾರದ ಪ್ರಸ್ತಾಪದ ಮೇರೆಗೆ ವಿಶ್ವಸಂಸ್ಥೆಯು (UN) ಡಿಸೆಂಬರ್ 2017 ರಲ್ಲಿ ಇದನ್ನು ಅಂಗೀಕರಿಸಿ, ಮೇ 20, 2018 ರಂದು ಮೊದಲ ಬಾರಿಗೆ ವಿಶ್ವ ಜೇನು ದಿನವನ್ನು ಆಚರಿಸಲಾಯಿತು.  

​ ನಾವು ಸೇವಿಸುವ ಹಣ್ಣುಗಳು, ತರಕಾರಿಗಳು, ಬೀಜಗಳು ಮತ್ತು ಪ್ರಮುಖ ಆಹಾರ ಬೆಳೆಗಳಲ್ಲಿ ಸುಮಾರು 75% ಕ್ಕಿಂತ ಹೆಚ್ಚು ಭಾಗವು ಉತ್ತಮ ಇಳುವರಿ ಪಡೆಯಲು ಪರಾಗಸ್ಪರ್ಶಕಗಳನ್ನು ಅವಲಂಬಿಸಿವೆ.  

​ ಕಾಡುಗಳು, ಸಸ್ಯವರ್ಗ ಮತ್ತು ಇಡೀ ಪರಿಸರ ಸಮತೋಲನವನ್ನು ಕಾಪಾಡುವಲ್ಲಿ ಜೇನುನೊಣಗಳ ಪಾತ್ರ ಅಪಾರ.  

​ ಜೇನುತುಪ್ಪ, ಮೇಣ, ರಾಯಲ್ ಜೆಲ್ಲಿ ಮುಂತಾದ ಉಪಯುಕ್ತ ಉತ್ಪನ್ನಗಳನ್ನು ನೀಡುವ ಮೂಲಕ ಗ್ರಾಮೀಣ ಆರ್ಥಿಕತೆ ಮತ್ತು ಔಷಧ ಕ್ಷೇತ್ರಕ್ಕೆ ಕೊಡುಗೆ ನೀಡುತ್ತವೆ.

  ​#ಕೀಟನಾಶಕಗಳ ಅತಿಯಾದ ಬಳಕೆ, ಹವಾಮಾನ ಬದಲಾವಣೆ ಮತ್ತು ಆವಾಸಸ್ಥಾನಗಳ ನಾಶದಿಂದಾಗಿ ಜೇನುನೊಣಗಳ ಸಂಖ್ಯೆ ಕ್ಷೀಣಿಸುತ್ತಿದೆ.

​ಕೃಷಿಯಲ್ಲಿ ರಸಾಯನಿಕ ಕೀಟನಾಶಕಗಳ ಬದಲಿಗೆ ಜೈವಿಕ ವಿಧಾನಗಳನ್ನು ಬಳಸುವುದು, ​ಮನೆ ಹಾಗೂ ತೋಟಗಳಲ್ಲಿ ಹೂವಿನ ಗಿಡಗಳನ್ನು ಬೆಳೆಸುವುದರ ಮೂಲಕ ​ಜೇನುಸಾಕಣೆಯನ್ನು ಪ್ರೋತ್ಸಾಹಿಸುವ ಕೆಲಸ ಆಗಬೇಕು.

  ಈ ಬಗ್ಗೆ ನಿಮ್ಮ ಅಭಿಪ್ರಾಯ ಇಲ್ಲಿ ದಾಖಲಿಸಿ.

#HoneyBee #worldhoneybday #antonjonsa
#parlimentmember #anilhegde #patna #orissa 
#kundapura #kannadiga #georgefernandis

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...