Skip to main content

4178.ಕಾಡಿನ_ಕತೆಗಾರ_ವಿಸ್ಮಯಗಳ_ನಾಯಕತೇಜಸ್ವಿಗೆ_88ರ_ನಮನ!.


ಕಾಡಿನ_ಕತೆಗಾರ_ವಿಸ್ಮಯಗಳ_ನಾಯಕ
ತೇಜಸ್ವಿಗೆ_88ರ_ನಮನ!.
 
  ​ಇವತ್ತು ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ 88ನೇ ಹುಟ್ಟುಹಬ್ಬ (ಸೆಪ್ಟೆಂಬರ್ -8_1938). 

  ಕನ್ನಡ ಸಾಹಿತ್ಯ ಲೋಕದಲ್ಲಿ ಓದುಗರನ್ನು ಪುಸ್ತಕದ ಕಪಾಟುಗಳಿಂದ ಹೊರತಂದು, ಕಾಡು-ಮೇಡು ಅಲೆಯುವಂತೆ ಮಾಡಿದ ಅಪರೂಪದ ಮಾಂತ್ರಿಕ ಅವರು.

  ​ತೇಜಸ್ವಿ ಕೇವಲ ಸಾಹಿತಿಯಾಗಿರಲಿಲ್ಲ ಅವರು ಪರಿಸರಪ್ರೇಮಿ, ಛಾಯಾಗ್ರಾಹಕ, ಚಿತ್ರಕಾರ, ಬೇಟೆಗಾರ, ಎಲ್ಲಕ್ಕಿಂತ ಹೆಚ್ಚಾಗಿ ಮನುಷ್ಯ ಮತ್ತು ಪ್ರಕೃತಿಯ ನಡುವಿನ ಕೊಂಡಿಯಾಗಿದ್ದವರು.

   ನಮ್ಮ ಕಾಲದ ಯುವಪಡೆಗೆ ಓದುವ ಹುಚ್ಚು ಹತ್ತಿಸಿದ್ದೇ ಅವರ ಬರಹಗಳು.

 ​#ತೇಜಸ್ವಿ_ಜಗತ್ತು_ನಮಗೆ_ಕಲಿಸಿದ್ದೇನು?..
  
  ​ವಿಸ್ಮಯ ಲೋಕದ ಅನಾವರಣ ‘#ಕರ್ವಾಲೋ’ ಹಿಡಿದು ಹಾರುವ ಓತಿಯನ್ನು ಹುಡುಕಿದ ಬಗೆಯಾಗಲಿ, ‘#ಜುಗಾರಿ_ಕ್ರಾಸ್’ ಮೂಲಕ ಮಲೆನಾಡಿನ ಕರಾಳ ಮುಖ ಹಾಗೂ ಸಾಹಸವನ್ನು ಪರಿಚಯಿಸಿದ್ದಾಗಲಿ ಇಂದಿಗೂ ಮೈನವಿರೇಳಿಸುತ್ತದೆ.

#​ಕಿರಗೂರಿನ ಗಯ್ಯಾಳಿಗಳು ಗ್ರಾಮೀಣ ಬದುಕಿನ ಜೀವಂತಿಕೆ, ಅಲ್ಲಿನ ಗಟ್ಟಿತನ ಮತ್ತು ವ್ಯಂಗ್ಯವನ್ನು ಅವರಷ್ಟು ಸಹಜವಾಗಿ ಕಟ್ಟಿಕ್ಕೊಟ್ಟವರು ವಿರಳ.

​ಪರಿಸರದ ಒಡನಾಟ ‘#ಮಿಲೇನಿಯಮ್_ಸರಣಿ’ ಪುಸ್ತಕಗಳ ಮೂಲಕ ವಿಜ್ಞಾನ, ಖಗೋಳ ಮತ್ತು ಪ್ರಾಣಿ-ಪಕ್ಷಿಗಳ ಲೋಕವನ್ನು ಸಾಮಾನ್ಯರಿಗೂ ಅರ್ಥವಾಗುವಂತೆ ಬರೆದದ್ದು ಅವರ ಹೆಗ್ಗಳಿಕೆ.

  ಈ ಸರಣಿಯಲ್ಲಿ ಕನೆತ್ ಅಂಡರ್ಸನ್ ಅವರು ಬರೆದ ನರಭಕ್ಷಕ ಹುಲಿ ಶಿಕಾರಿಯ ಕನ್ನಡ ಅನುವಾದ ಮೈನವಿರೇಳುಸುವಂತೆ ಬಾವಾನುವಾದ ಮಾಡಿದ್ದಾರೆ ಅದರಲ್ಲಿ ನಮ್ಮೂರ ಸಮೀಪದ #ಬೆಳಂದೂರಿನ_ನರಭಕ್ಷಕ_ಪುಸ್ತಕ ಕೂಡ.

  ಕವಿಶೈಲ ಉದ್ಘಾಟನೆ ದಿನ ಕುಪ್ಪಳ್ಳಿಯಲ್ಲಿ ಅಕಸ್ಮಿಕವಾಗಿ ಅವರು ನನ್ನ ಪಕ್ಕದಲ್ಲಿ ಬಂದು ಕುಳಿತಾಗ ಪರಿಚಯ ಮಾತು ಕಥೆ ಜೊತೆಗೆ ಈ ಪುಸ್ತಕದ ಬಗ್ಗೆ ಮಾತಾಡಿದ್ದೆ ಅದೇ ನನ್ನ ಅವರ ಮೊದಲ ಮತ್ತು ಕೊನೆಯ ಬೇಟೆ.

​ಸರಳ ಬದುಕು ಅವರದ್ದು, ರಾಷ್ಟ್ರಕವಿ ಕುವೆಂಪು ಅವರ ಮಗನಾಗಿದ್ದರೂ ಆ ಹಮ್ಮು-ಬಿಮ್ಮುಗಳಾವುದೂ ಇಲ್ಲದೆ ಮೂಡಿಗೆರೆಯ ಕಾಫಿ ತೋಟದಲ್ಲಿ ಮಣ್ಣಿನ ಮಗನಾಗಿ ಬದುಕಿದ ನಿಜವಾದ 'ಅವಧೂತ'.

  ​ತೇಜಸ್ವಿ ತೀರಿಕೊಂಡು ವರ್ಷಗಳೇ ಕಳೆದರೂ ಅವರ ವಿಚಾರಗಳು, ಪರಿಸರ ಕಾಳಜಿ ಮತ್ತು ಬರಹಗಳು ಇಂದಿಗೂ ಹಚ್ಚಹಸಿರು.

   ಮರ-ಗಿಡ, ಹಕ್ಕಿ-ಪಿಕ್ಕಿ, ಕ್ರಿಮಿ-ಕೀಟಗಳಲ್ಲೂ ದೈವತ್ವ ಕಂಡ ಆ ಮಹಾನ್ ಜೀವಕ್ಕೆ ಹುಟ್ಟುಹಬ್ಬದ ಆದರದ ನಮನಗಳು.

 ​ನಿಮ್ಮ ನೆಚ್ಚಿನ ತೇಜಸ್ವಿ ಕೃತಿ ಯಾವುದು? ಕಮೆಂಟ್‌ನಲ್ಲಿ ಹಂಚಿಕೊಳ್ಳಿ!..

​#PoornachandraTejaswi #Tejaswi88 #KannadaLiterature #Karvalo #JugariCross #KPPoornachandraTejaswi #ಕನ್ನಡ

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...