Skip to main content

4191.ಮಂಜುನಾಥ_ಗೌಡರು_ಅಧ್ಯಕ್ಷರು ಮಲೆನಾಡು_ಪ್ರದೇಶಾಭಿವೃದ್ಧಿ_ಮಂಡಳಿ Malnad_Area_Development_Board_MADB


ಮಂಜುನಾಥ_ಗೌಡರು_ಅಧ್ಯಕ್ಷರು ಮಲೆನಾಡು_ಪ್ರದೇಶಾಭಿವೃದ್ಧಿ_ಮಂಡಳಿ 
Malnad_Area_Development_Board_MADB.

  ನಮ್ಮ ಜಿಲ್ಲೆಯವರೇ ಆದ ಆರ್. ಎಂ. ಮಂಜುನಾಥ ಗೌಡರು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿದ್ದಾರೆ ಇದು ಕ್ಯಾಬಿನೆಟ್ ಸಚಿವ ಸ್ಥಾನಮಾನದ ಹುದ್ದೆ.

  ಇವರು ಕಸ್ತೂರಿ ರಂಗನ್ ವರದಿ ಮಾರ್ಪಾಡಿಗೆ ರಾಜ್ಯ ಸರ್ಕಾರ ಮತ್ತು ಮಲೆನಾಡಿನ ಜನರ ಮಧ್ಯೆ ಕೊಂಡಿ ಆಗಿ ಕೀ ರೋಲ್ ಕೆಲಸ ಮಾಡಬಹುದಾಗಿದೆ.

   ಇವರ ಅಧಿಕಾರ ವ್ಯಾಪ್ತಿ ರಾಜ್ಯದ 13 ಜಿಲ್ಲೆಗಳು ಮತ್ತು 66 ವಿಧಾನಸಭಾ ಕ್ಷೇತ್ರಗಳು ಬರುತ್ತದೆ ಇದು ಸಣ್ಣ ಕ್ಷೇತ್ರವಲ್ಲ, ರಾಜ್ಯದಲ್ಲಿ ಹಾದು ಹೋಗಿರುವ ಪಶ್ಚಿಮ ಘಟ್ಟದ ಪೂರ್ತಿ ಪ್ರದೇಶ ಇವರ ವ್ಯಾಪ್ತಿಯಿಲ್ಲಿದೆ.

   ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ (Malnad Area Development Board - MADB) ಮಲೆನಾಡಿನ 13 ಜಿಲ್ಲೆಗಳ ಸಮಗ್ರ ಹಾಗೂ ಸಮತೋಲಿತ ಅಭಿವೃದ್ಧಿಗಾಗಿ ಸ್ಥಾಪನೆಯಾಗಿರುವ ಶಾಸನಬದ್ಧ ಸಂಸ್ಥೆಯಾಗಿದೆ. 

  ಕಸ್ತೂರಿ ರಂಗನ್ ವರದಿಯಂತಹ ಸೂಕ್ಷ್ಮ ಹಾಗೂ ಗಂಭೀರ ವಿಷಯದಲ್ಲಿ ಮಂಡಳಿಯು ಕೇವಲ ರಸ್ತೆ-ಸೇತುವೆ ನಿರ್ಮಾಣಕ್ಕೆ ಸೀಮಿತವಾಗದೆ ಸರ್ಕಾರ ಮತ್ತು ಜನರ ನಡುವೆ ಪ್ರಮುಖ ಕೊಂಡಿಯಾಗಿ ಈ ಕೆಳಗಿನ ಜವಾಬ್ದಾರಿಗಳನ್ನು ವಹಿಸಬಹುದಾಗಿದೆ.

​ಮಂಡಳಿ ವಹಿಸಬಹುದಾದ ಪ್ರಮುಖ ಜವಾಬ್ದಾರಿಗಳು  
​ವಾಸ್ತವಾಂಶದ ಸಮೀಕ್ಷೆ, ಉಪಗ್ರಹ ಆಧಾರಿತ ಸಮೀಕ್ಷೆಯಲ್ಲಿ ಕೃಷಿ ಭೂಮಿ ಮತ್ತು ಜನವಸತಿ ಪ್ರದೇಶಗಳನ್ನು 'ಪರಿಸರ ಸೂಕ್ಷ್ಮ ವಲಯ' ಎಂದು ತಪ್ಪಾಗಿ ಗುರುತಿಸಿರುವ ಬಗ್ಗೆ ತಜ್ಞರ ಸಮಿತಿ ರಚಿಸಿ, ನೈಜ ಗಡಿಗಳನ್ನು ಗುರುತಿಸುವ ವರದಿಯನ್ನು ತಯಾರಿಸಿ ಸರ್ಕಾರಕ್ಕೆ ಸಲ್ಲಿಸಬಹುದು.  

 ​ಪಂಚಾಯಿತಿ ಮಟ್ಟದ ಜಾಗೃತಿ ಅಭಿಯಾನ, ಮಲೆನಾಡಿನ ಪ್ರತಿ ತಾಲೂಕು ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯಾಗಾರ ನಡೆಸಿ, ವರದಿಯಿಂದ ಯಾವ ಚಟುವಟಿಕೆಗಳಿಗೆ ನಿಷೇಧವಿದೆ ಮತ್ತು ಯಾವುವುಗಳಿಗೆ ರಿಯಾಯಿತಿ ಇದೆ ಎಂಬುದರ ಬಗ್ಗೆ ರೈತರಿಗೆ ನಿಖರ ಮಾಹಿತಿ ನೀಡಿ ಗೊಂದಲ ನಿವಾರಿಸುವ ಕೆಲಸ ಮಾಡಬೇಕು.

  ​ಜೀವನಾಧಾರ ಮತ್ತು ಪರಿಸರ ಸಮತೋಲನದ ವರದಿ ತಯಾರಿಸಿ, ಪರಿಸರಕ್ಕೆ ಹಾನಿಯಾಗದಂತೆ ಮಲೆನಾಡಿಗರ ಕೃಷಿ, ತೋಟಗಾರಿಕೆ ಮತ್ತು ಸಾಂಪ್ರದಾಯಿಕ ಅರಣ್ಯ ಹಕ್ಕುಗಳನ್ನು ಕಾಪಾಡಿಕೊಳ್ಳಲು ರಾಜ್ಯ ಸರ್ಕಾರಕ್ಕೆ ಪರ್ಯಾಯ ನೀತಿ ಚೌಕಟ್ಟನ್ನು (Policy Recommendations) ಶಿಫಾರಸು ಮಾಡಬೇಕು.  

​ಸರ್ಕಾರಕ್ಕೆ ಅಧಿಕೃತ ಅಹವಾಲು ಸಲ್ಲಿಕೆ ಮಾಡಿ ಮಲೆನಾಡು ವ್ಯಾಪ್ತಿಯ ಶಾಸಕರು, ಸಂಸದರು ಮತ್ತು ಸಾರ್ವಜನಿಕ ಮುಖಂಡರ ಸಭೆ ಕರೆದು ಜನರ ಆತಂಕ ಹಾಗೂ ಬೇಡಿಕೆಗಳ ಸಮಗ್ರ ದಾಖಲೆಯನ್ನು ಸಿದ್ಧಪಡಿಸಿ ಸಚಿವ ಸಂಪುಟಕ್ಕೆ ಅಧಿಕೃತವಾಗಿ ಸಲ್ಲಿಸಬಹುದು.  

  ಇದರ ಪ್ರಧಾನ ಕಚೇರಿ ಶಿವಮೊಗ್ಗದಲ್ಲಿದೆ ಇದರ
​ಕಾರ್ಯವ್ಯಾಪ್ತಿ 
​ಮಂಡಳಿಯು ರಾಜ್ಯದ ಪಶ್ಚಿಮ ಘಟ್ಟದ ತಪ್ಪಲು ಮತ್ತು ಮಲೆನಾಡು ವ್ಯಾಪ್ತಿಗೆ ಒಳಪಡುವ ಒಟ್ಟು 13 ಜಿಲ್ಲೆಗಳ 66ಕ್ಕೂ ಹೆಚ್ಚು ತಾಲೂಕುಗಳನ್ನು ಒಳಗೊಂಡಿದೆ.

#ಶಿವಮೊಗ್ಗ
#ಚಿಕ್ಕಮಗಳೂರು
#ಕೊಡಗು
#ಉತ್ತರ_ಕನ್ನಡ
#ದಕ್ಷಿಣ_ಕನ್ನಡ
#ಉಡುಪಿ
#ಹಾಸನ
#ಬೆಳಗಾವಿ (ಭಾಗಶಃ ಮಲೆನಾಡು ತಾಲೂಕುಗಳು)
#ಧಾರವಾಡ (ಭಾಗಶಃ)
#ಹಾವೇರಿ (ಭಾಗಶಃ)
#ಚಾಮರಾಜನಗರ (ಭಾಗಶಃ)
#ಮೈಸೂರು (ಭಾಗಶಃ)
#ದಾವಣಗೆರೆ (ಚನ್ನಗಿರಿ ಮುಂತಾದ ಭಾಗಶಃ ತಾಲೂಕುಗಳು).

​  ​ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯು ಕೇವಲ ಕಾಂಕ್ರೀಟ್ ಕಾಮಗಾರಿಗಳಿಗೆ ಸೀಮಿತವಾಗದೆ, ಮಲೆನಾಡಿನ ಸೂಕ್ಷ್ಮ ಪರಿಸರವನ್ನು ರಕ್ಷಿಸುತ್ತಲೇ ಜನರ ಮೂಲಭೂತ ಹಕ್ಕುಗಳು ಮತ್ತು ಅಭಿವೃದ್ಧಿಯನ್ನು ಸಮತೋಲನದಲ್ಲಿಡುವ ಪ್ರಮುಖ ಆಡಳಿತಾತ್ಮಕ ವೇದಿಕೆಯಾಗಿದೆ ಇದನ್ನು ಆರ್. ಎಂ. ಮಂಜುನಾಥ ಗೌಡರು ಸರಿಯಾಗಿ ಬಳಸಿಕೊಂಡರೆ ಶಿವಮೊಗ್ಗ ಜಿಲ್ಲೆಯಿಂದ ಸಮರ್ಥ ನಾಯಕತ್ವ ಅವರಿಗೆ ದೊರೆಯಲಿದೆ.

#manjunathgowda #dcc #madb #chairmen #kasturiranganreport #westernghats

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...